AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KSEEB Result 2022: ಶೇ. 90.29 ಫಲಿತಾಂಶದೊಂದಿಗೆ ವಿದ್ಯಾರ್ಥಿನಿಯರೇ ಮೇಲುಗೈ

KSEEB Result 2022: 2021-22ನೇ ಸಾಲಿನ ಎಸ್​ಎಸ್​ಎಲ್​ಸಿ(SSLC) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶವನ್ನು ಘೋಷಿಸಿದ್ದಾರೆ.

KSEEB Result 2022: ಶೇ. 90.29 ಫಲಿತಾಂಶದೊಂದಿಗೆ ವಿದ್ಯಾರ್ಥಿನಿಯರೇ ಮೇಲುಗೈ
Karnataka SSLC Exam Result 2022
TV9 Web
| Edited By: |

Updated on:May 19, 2022 | 1:44 PM

Share

2021-22ನೇ ಸಾಲಿನ ಎಸ್​ಎಸ್​ಎಲ್​ಸಿ(SSLC) ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದೆ. ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶವನ್ನು ಘೋಷಿಸಿದ್ದಾರೆ.ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ.85.63 ರಷ್ಟು ಫಲಿತಾಂಶ ಬಂದಿದೆ. ವಾಡಿಕೆಯಂತೆ ಈ ಬಾರಿಯೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದು, ಶೇಕಡಾ 90.29ರಷ್ಟು ವಿದ್ಯಾರ್ಥಿನಿಯರು ಉತ್ತೀರ್ಣರಾಗಿದ್ದಾರೆ.

ಶೇ. 81.03 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದರೆ ಶೇ.90.29 ವಿದ್ಯಾರ್ಥಿನಿಯರು ಪಾಸ್‌ ಆಗಿದ್ದಾರೆ. 145 ವಿದ್ಯಾರ್ಥಿಗಳು 625 ಅಂಕ ಪಡೆದಿರುವುದು ವಿಶೇಷ.625ಕ್ಕೆ 625 ಅಂಕಗಳನ್ನು 125 ಮಕ್ಕಳು ಗಳಿಸಿದ್ದಾರೆ. ಈ ಬಾರಿ ಕಳೆದ ವರ್ಷಕ್ಕಿಂತ ಹೆಚ್ಚು ಫಲಿತಾಂಶ ವಿದ್ಯಾರ್ಥಿಗಳಿಗೆ ಸಿಕ್ಕಿದೆ ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ.

8,20,900 ವಿದ್ಯಾರ್ಥಿಗಳು ಈ ವರ್ಷ ಪರೀಕ್ಷೆಗೆ ನೋಂದಾಯಿಸಿಕೊಂಡಿದ್ದರು. ನಗರಕ್ಕಿಂತ ಗ್ರಾಮೀಣ ಮಕ್ಕಳೇ ಮೇಲುಗೈ ಸಾಧಿಸಿದ್ದಾರೆ. ಎಂದಿನಂತೆ ಗ್ರಾಮೀಣ ವಿದ್ಯಾರ್ಥಿಗಳೇ ಉತ್ತಮ ಸಾಧನೆ ಮಾಡಿದ್ದಾರೆ. ನಗರ ಭಾಗದಲ್ಲಿ ಶೇ.86.64 ಫಲಿತಾಂಶ ದಾಖಲಾದರೆ ಗ್ರಾಮೀಣ ಭಾಗದಲ್ಲಿ ಶೇ.91.32 ರಷ್ಟು ಫಲಿತಾಂಶ ಪ್ರಕಟವಾಗಿದೆ.

ಗ್ರೇಡ್ ಮಾದರಿ: ಇಲ್ಲಿಯವರೆಗೆ ಎಸ್ ಎಸ್ ಎಲ್ ಸಿಯಲ್ಲಿ ಮೊದಲ, ದ್ವಿತೀಯ ಮತ್ತು ತೃತೀಯ ಜಿಲ್ಲೆಗಳೆಂದು ಫಲಿತಾಂಶ ನೀಡಲಾಗುತ್ತಿತ್ತು. ಆದರೆ ಈ ಬಾರಿ ಪ್ರೌಢ ಶಿಕ್ಷಣ ಇಲಾಖೆ ಗ್ರೇಡ್ ಮಾದರಿಯಲ್ಲಿ ಫಲಿತಾಂಶ ನೀಡಿದೆ.

20 ಶಾಲೆಗಳು ಶೂನ್ಯ ಫಲಿತಾಂಶ ಪಡೆದರೆ, 3,920 ಶಾಲೆಗಳು ಶೇ.100 ರಷ್ಟು ಫಲಿತಾಂಶ ದಾಖಲಿಸಿದೆ. ರ‍್ಯಾಂಕ್‌ ಪದ್ದತಿ ಕೈ ಬಿಟ್ಟ ಇಲಾಖೆ ಈ ಬಾರಿ ಗ್ರೇಡ್ ವ್ಯವಸ್ಥೆಯಲ್ಲಿ ಫಲಿತಾಂಶ ಘೋಷಣೆ ಮಾಡಿದೆ. ಬೆಂಗಳೂರು ದಕ್ಷಿಣ ಮತ್ತು ಯಾದಗಿರಿ ಜಿಲ್ಲೆಗೆ ಬಿ ಗ್ರೇಡ್ ಸಿಕ್ಕಿದರೆ ಉಳಿದ ಎಲ್ಲಾ ಜಿಲ್ಲೆಗಳಿಗೆ ಎ ಗ್ರೇಡ್ ಸಿಕ್ಕಿದೆ.

ರಾಜ್ಯಕ್ಕೆ ಸಂಬಂಧಿಸಿದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Thu, 19 May 22

ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಸಚಿವ ಜಮೀರ್ 2ನೇ ಟಿಪ್ಪು ಸುಲ್ತಾನ್ ಎಂದ ಪ್ರಮೋದ್ ಮುತಾಲಿಕ್
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಬ್ಯಾನರ್​​ ಗಲಾಟೆ ವೇಳೆ ಫೈರಿಂಗ್​: ಸ್ಫೋಟಕ ಸಾಕ್ಷಿಕೊಟ್ಟ ಶ್ರೀರಾಮುಲು
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಗುಂಡೇಟಿಗೆ ಕಾಂಗ್ರೆಸ್ ಕಾರ್ಯಕರ್ತ ಸಾವು: ಸಿಎಂ ಫಸ್ಟ್ ರಿಯಾಕ್ಷನ್
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಬೈಕ್‌ನಲ್ಲಿ ಬಂದು ಕ್ಷಣಾರ್ಧದಲ್ಲಿ ಮೊಬೈಲ್ ಕಿತ್ತು ಪರಾರಿ!
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಗಣಿದಣಿಗೆ ಭರತ್​​ ರೆಡ್ಡಿ ಓಪನ್​ ಚಾಲೆಂಜ್​​: 'ಕೈ​​' ಶಾಸಕ ಹೇಳಿದ್ದೇನು?
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ಸೋನಲ್-ತರುಣ್ ಗೃಹಪ್ರವೇಶ; ಇಲ್ಲಿದೆ ಸುಂದರ ವಿಡಿಯೋ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ವೇಗವಾಗಿ ಬಂದು ಟೋಲ್ ಬೂತ್​ಗೆ ಗುದ್ದಿದ ಬಸ್, ಭೀಕರ ದೃಶ್ಯ ಸಿಸಿಟಿವಿಲಿ ಸೆರೆ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಜನಾರ್ದನ ರೆಡ್ಡಿ ಮನೆ ಮುಂದಿನ ಸಂಘರ್ಷದ ಭೀಕರತೆ ಬಿಚ್ಚಿಟ್ಟ ವಿಡಿಯೋ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಮೋಸದಿಂದ ಕೊನೆಯ ಕ್ಯಾಪ್ಟನ್ ಆದ್ರಾ ಧನುಷ್? ಬಿಗ್ ಬಾಸ್ ಪ್ರಶ್ನೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ
ಗಿಲ್ಲಿ ನಟ ಬರೆದು ಹಾಡಿದ ರ್ಯಾಪ್ ಸಾಂಗ್ ಪೂರ್ಣ ವಿಡಿಯೋ ಇಲ್ಲಿದೆ