AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಯಲ್ ಎಸ್ಟೇಟ್​ಗೆ ತುಸು ಅನುಕೂಲ: ಮುದ್ರಾಂಕ ಶುಲ್ಕ ಕಡಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ

₹ 45 ಲಕ್ಷಕ್ಕಿಂತಲೂ ಕಡಿಮೆ ಮೌಲ್ಯದ ಮನೆ ನೋಂದಣಿ ವೇಳೆ ಮುದ್ರಾಂಶ ಶುಲ್ಕವನ್ನು ಶೇ 5ರ ಬದಲಿಗೆ ಶೇ 3ಕ್ಕೆ ಇಳಿಸುವ ವಿಚಾರವನ್ನು ವಿಧೇಯಕದ ಮೂಲಕ ಕಂದಾಯ ಸಚಿವ ಆರ್.ಅಶೋಕ್ ಪ್ರಸ್ತಾಪಿಸಿದರು.

ರಿಯಲ್ ಎಸ್ಟೇಟ್​ಗೆ ತುಸು ಅನುಕೂಲ: ಮುದ್ರಾಂಕ ಶುಲ್ಕ ಕಡಿತ ತಿದ್ದುಪಡಿ ವಿಧೇಯಕಕ್ಕೆ ವಿಧಾನಸಭೆ ಅಂಗೀಕಾರ
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on: Sep 20, 2021 | 7:15 PM

Share

ಬೆಂಗಳೂರು: ಮುದ್ರಾಂಕ ಶುಲ್ಕ ಕಡಿತಕ್ಕೆ ಅವಕಾಶ ನೀಡುವ ತಿದ್ದುಪಡಿ ವಿಧೇಯಕಕ್ಕೆ ಸೋಮವಾರ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. ₹ 45 ಲಕ್ಷಕ್ಕಿಂತಲೂ ಕಡಿಮೆ ಮೌಲ್ಯದ ಮನೆ ನೋಂದಣಿ ವೇಳೆ ಮುದ್ರಾಂಶ ಶುಲ್ಕವನ್ನು ಶೇ 5ರ ಬದಲಿಗೆ ಶೇ 3ಕ್ಕೆ ಇಳಿಸುವ ವಿಚಾರವನ್ನು ವಿಧೇಯಕದ ಮೂಲಕ ಕಂದಾಯ ಸಚಿವ ಆರ್.ಅಶೋಕ್ ಪ್ರಸ್ತಾಪಿಸಿದರು. ಕಳೆದ ಬಜೆಟ್ ಭಾಷಣದಲ್ಲಿಯೇ ಈ ವಿಚಾರವನ್ನು ಹಣಕಾಸು ಸಚಿವರೂ ಆಗಿದ್ದ ಬಿ.ಎಸ್.ಯಡಿಯೂರಪ್ಪ ನಮೂದಿಸಿದ್ದರು.

ಈ ವೇಳೆ ನಿವೇಶನ ಖರೀದಿಗೂ ಮುದ್ರಾಂಕ ಶುಲ್ಕ ವಿನಾಯ್ತಿ ನೀಡುವಂತೆ ಸದಸ್ಯರು ಸಲಹೆ ಮಾಡಿದರು. ವಿಧೇಯಕದ ಬಗ್ಗೆ ಮಾತನಾಡಿದ ಶಾಸಕ ಸಾ.ರಾ.ಮಹೇಶ್, ‘ಬಿಲ್ಡರ್​ಗಳಿಗೆ ಸಹಾಯ ಮಾಡಲೆಂದು ವಿಧೇಯಕ ಮಂಡಿಸಿದ್ದೀರಿ, ನಿಜಕ್ಕೂ ಬಡವರಿಗೆ ಸಹಾಯ ಮಾಡುವ ಉದ್ದೇಶ ನಿಮ್ಮದಾಗಿದ್ದರೆ ನಿವೇಶನಗಳಿಗೂ ರಿಯಾಯಿತಿ ನೀಡಿ’ ಎಂದರು.

ಗೃಹ ನಿರ್ಮಾಣ ಚಟುವಟಿಕೆಗೆ ಬಳಕೆಯಾಗುವ ಎಲ್ಲ ಆಸ್ತಿಗಳ ಮುದ್ರಾಂಕ ಶುಲ್ಕಕ್ಕೆ ವಿನಾಯ್ತಿ ಕೊಡಿ ಎಂದು ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್ ಒತ್ತಾಯಿಸಿದರು. ‘ಬಡವರಿಗೆ ಸಹಾಯ ಮಾಡುವುದೇ ಉದ್ದೇಶವಾಗಿದ್ದರೆ ಮುದ್ರಾಂಕ ಮೌಲ್ಯವನ್ನು ಶೇ 3ರ ಬದಲು ಶೇ 1ಕ್ಕೆ ಇಳಿಸಿ’ ಎಂದು ಮಾಜಿ ಸ್ಪೀಕರ್ ರಮೇಶ್​ ಕುಮಾರ್ ಆಗ್ರಹಿಸಿದರು. ಕಾವೇರಿದ ಚರ್ಚೆಯ ಬಳಿಕ ಸ್ಟ್ಯಾಂಪ್ ತಿದ್ದುಪಡಿ ವಿಧೇಯಕಕ್ಕೆ ಸದನದ ಅಂಗೀಕಾರ ದೊರೆಯಿತು.

ಧಾರ್ಮಿಕ ಕೇಂದ್ರಗಳ ತೆರವಿಗೆ ಹೊಸ ನಿಯಮಾವಳಿ: ವಿಧೇಯಕ ಮಂಡನೆ ದೇಗುಲಗಳ ತೆರವು ವಿಚಾರವಾಗಿ ಇತ್ತೀಚೆಗೆ ಬಹಳಷ್ಟು ವಾದ- ವಿವಾದ ಸೃಷ್ಟಿಯಾಗಿದ್ದವು. ಈ ಬಗ್ಗೆ ವಿಧೇಯಕದ ಮೂಲಕ ಹೊಸ ನಿಯಮಾವಳಿ ರೂಪಿಸಲು ಇದೀಗ ಸರ್ಕಾರ ನಿರ್ಧಾರ ಕೈಗೊಂಡಿದೆ. ಅದರಂತೆ ಕೋರ್ಟ್​​ ತೀರ್ಪು ಇದ್ದರೂ ಸರ್ಕಾರದ ನಿಯಮಗಳಿಗೆ ಒಳಪಟ್ಟಂತೆ ಆಯಾ ಧಾರ್ಮಿಕ ಸ್ಥಳ ಇದ್ದರೆ ಅಂತಹ ಧಾರ್ಮಿಕ ಸಂಸ್ಥೆಗಳನ್ನ ತೆರವು ಮಾಡುವಂತಿಲ್ಲ ಎಂದು ಹೊಸ ನಿಯಮಾವಳಿ ರೂಪಿಸಲು ಸರ್ಕಾರ ತೀರ್ಮಾನಿಸಿದೆ.

ಸರ್ಕಾರದ ನಿಯಮಗಳಿಂದ ಹೊರಗಿದ್ದರೆ ಮಾತ್ರ ಅಂತಹ ಧಾರ್ಮಿಕ ಸ್ಥಳ ತೆರವು ಮಾಡಬಹುದು. ಅಂತಹ ಧಾರ್ಮಿಕ‌ ಸಂಸ್ಥೆಗಳ ಕಟ್ಟಡಗಳು ಮಾತ್ರ ತೆರವು ಮಾಡಬಹುದು. ವಿಧೇಯಕ ಅಂಗೀಕಾರಗೊಂಡ ಬಳಿಕ ಈ ನಿಯಮಾವಳಿ ಜಾರಿ ಆಗಲಿದೆ. ಶೀಘ್ರದಲ್ಲೇ ಸರ್ಕಾರ ನಿಯಮಾವಳಿ ರೂಪಿಸುವ ಸಾಧ್ಯತೆ ಇದೆ.

ವಿಧೇಯಕದ ಮೂಲಕ ಹೊಸ ನಿಯಾಮವಳಿ ರೂಪಿಸಲು ಸರ್ಕಾರ ನಿರ್ಧಾರ ಮಾಡಿದೆ. ನ್ಯಾಯಾಲಯದ ತೀರ್ಪು ಇದ್ದರೂ ಸರ್ಕಾರದ ನಿಯಮಗಳಿಗೆ ಒಳಪಟ್ಟಂತೆ ಇದ್ದರೆ ಆ ಧಾರ್ಮಿಕ ಸಂಸ್ಥೆಗಳನ್ನ ತೆರವು ಮಾಡುವಂತಿಲ್ಲ. ಸರ್ಕಾರದ ನಿಯಮಾವಳಿಯಿಂದ ಹೊರಗೆ ಇದ್ದರೆ ಆ ಧಾರ್ಮಿಕ‌ ಸಂಸ್ಥೆಗಳ ಕಟ್ಟಡಗಳು ಮಾತ್ರ ತೆರವು ಮಾಡಬಹುದು. ಈ ವಿಧೇಯಕ ಅಂಗೀಕಾರಗೊಂಡ ಬಳಿಕ ಶೀಘ್ರದಲ್ಲೇ ನಿಯಮಾವಳಿ ರೂಪಿಸುವ ಸಾಧ್ಯತೆ ಇದೆ.

ರಾಜ್ಯ ಸರ್ಕಾರ ನಿಯಮಾವಳಿ ರೂಪಿಸಿದ ಬಳಿಕ ಸಾರ್ವಜನಿಕ ಸ್ಥಳದಲ್ಲಿ ಯಾವುದೇ ಧಾರ್ಮಿಕ ಕಟ್ಟಡಗಳನ್ನ ಹೊಸದಾಗಿಯೂ ನಿರ್ಮಿಸಲು ಅವಕಾಶ ಇರುವುದಿಲ್ಲ. ಸರ್ಕಾರಕ್ಕೆ ಸೇರಿದ ಜಾಗದಲ್ಲಿ, ಸಾರ್ವಜನಿಕ ಸ್ಥಳಗಳಲ್ಲಿ ಮುಂದೆ ಧಾರ್ಮಿಕ ಕಟ್ಟಡಗಳ ನಿರ್ಮಾಣಕ್ಕೆ ಅವಕಾಶ ಇಲ್ಲ ಎಂದು ಹೇಳಲಾಗಿದೆ.

ಇದನ್ನೂ ಓದಿ: ಸಾರ್ವಜನಿಕ ದೇಗುಲ ತೆರವು ತಡೆಯಲು ಪ್ರತ್ಯೇಕ ವಿಧೇಯಕ ಮಂಡನೆಗೆ ಸಂಪುಟ ಸಭೆ ನಿರ್ಧಾರ

ಇದನ್ನೂ ಓದಿ: ಶಾಸಕರ ಗಮನಕ್ಕೆ ತಾರದೆ ಸಂಸದರು ಸಭೆ ಕರೆಯಬಹುದೇ? ಕಾರ್ಯವ್ಯಾಪ್ತಿ ಸ್ಪಷ್ಟಪಡಿಸಲು ಎಚ್​ಡಿಕೆ ಪ್ರಸ್ತಾಪ

(Karnataka Stamp Amendment Bill Passed in Karnataka Assembly R Ashok Proposes)

ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಫಿಲಿಪೈನ್ಸ್​ನಲ್ಲಿ ಭೂಕುಸಿತ, ಬೃಹತ್ ಕಸದ ರಾಶಿ ಮೈಮೇಲೆ ಬಿದ್ದು ಓರ್ವ ಸಾವು
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ಗಿಲ್ಲಿ ಕಂಡ್ರೆ ರಕ್ಷಿತಾಗೆ ಅದೆಷ್ಟು ಪ್ರೀತಿ ನೋಡಿ; ಈ ವಿಡಿಯೋನೆ ಸಾಕ್ಷಿ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
ರೈಲಿನ ಮೇಲೆ ಹತ್ತಿ ಪವರ್​ ಲೈನ್ ಕೆಳಗೆ ಕುಳಿತ ಯುವಕ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
S ಅಕ್ಷರದಿಂದ ಶುರುವಾಗುವ ಹೆಸರುಗಳಿಗೆ ಈ ವರ್ಷ ಅದೃಷ್ಟವೋ ಅದೃಷ್ಟ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲ ಇರಲಿದೆ
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ದಾರಿ ತಪ್ಪಿ ಊರೊಳಗೆ ಬಂದ ಜಿಂಕೆಯ ಬೆನ್ನಟ್ಟಿದ ನಾಯಿಗಳು; ಆಮೇಲೇನಾಯ್ತು?
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು