AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Budget 2021 ಮಾರ್ಚ್​ 4ರಿಂದ ಬಜೆಟ್​ ಅಧಿವೇಶನ ಆರಂಭ; ಮಾರ್ಚ್​​ 8ರಂದು ಕರ್ನಾಟಕ ಬಜೆಟ್​ ಮಂಡನೆ

ಕರ್ನಾಟಕ ಬಜೆಟ್​ 2021: ಮಾರ್ಚ್​​ 8ರಂದು ರಾಜ್ಯ ಬಜೆಟ್​ ಮಂಡನೆ ಆಗಲಿದೆ. ಮಾರ್ಚ್​ 4ರಿಂದ ಬಜೆಟ್​ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ​ ದಿನಾಂಕ ನಿಗದಿ ಮಾಡಲಾಯಿತು ಎಂದು ಸಂಪುಟ ಸಭೆ ಬಳಿಕ ಸಚಿವ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ.

Karnataka Budget 2021 ಮಾರ್ಚ್​ 4ರಿಂದ ಬಜೆಟ್​ ಅಧಿವೇಶನ ಆರಂಭ; ಮಾರ್ಚ್​​ 8ರಂದು ಕರ್ನಾಟಕ ಬಜೆಟ್​ ಮಂಡನೆ
ಬಸವರಾಜ ಬೊಮ್ಮಾಯಿ
KUSHAL V
|

Updated on:Feb 18, 2021 | 10:54 PM

Share

ಬೆಂಗಳೂರು: ಮಾರ್ಚ್​​ 8ರಂದು ರಾಜ್ಯ ಬಜೆಟ್​ ಮಂಡನೆ ಆಗಲಿದೆ. ಮಾರ್ಚ್​ 4ರಿಂದ ಬಜೆಟ್​ ಅಧಿವೇಶನ ಆರಂಭವಾಗಲಿದೆ. ಸಂಪುಟ ಸಭೆಯಲ್ಲಿ ಬಜೆಟ್ ಮಂಡನೆ​ ದಿನಾಂಕ ನಿಗದಿ ಮಾಡಲಾಯಿತು ಎಂದು ಸಂಪುಟ ಸಭೆ ಬಳಿಕ ಸಚಿವ ಬಸವರಾಜ​ ಬೊಮ್ಮಾಯಿ ಹೇಳಿದ್ದಾರೆ. Karnataka Budget 2021

ಚಾಮರಾಜನಗರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಅನುದಾನ ಇನ್ನು, ಇದೇ ವೇಳೆ ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳ ಬಗ್ಗೆ ಮಾತನಾಡಿದ ಸಚಿವ ಚಾಮರಾಜನಗರದಲ್ಲಿ ಕೃಷಿ ಕಾಲೇಜು ಆರಂಭಕ್ಕೆ ಅನುದಾನ ನೀಡಲಾಗಿದೆ. ಕೃಷಿ ಕಾಲೇಜು ಆರಂಭಿಸಲು 35.92 ಕೋಟಿ ಅನುದಾನ ನೀಡಲಾಗಿದೆ ಎಂದು ಸಂಪುಟ ಸಭೆ ಬಳಿಕ ಬಸವರಾಜ ಬೊಮ್ಮಾಯಿ ಹೇಳಿದರು.

ಕೈಗಾರಿಕಾ ಅಭಿವೃದ್ಧಿಗೆ ಭೂಮಿ ನೀಡುವವರಿಗೆ ಪರಿಹಾರ ಕೈಗಾರಿಕಾ ಅಭಿವೃದ್ಧಿಗೆ ಭೂಮಿ ನೀಡುವವರಿಗೆ ಪರಿಹಾರ ನೀಡಲಾಗುವುದು. ಪರಿಹಾರವಾಗಿ ಶೇ.45ರಷ್ಟು ಭೂಮಿ ನೀಡಲು ತೀರ್ಮಾನ ಕೈಗೊಳ್ಳಲಾಗಿದೆ. ಈ ಹಿಂದೆ ಶೇ.40ರಷ್ಟು ಭೂಮಿ ಪರಿಹಾರವಾಗಿ ನೀಡುತ್ತಿದ್ದರು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು.

‘ಮೀಸಲಾತಿ ಕುರಿತು.. ಮುಂದಿನ ಸಂಪುಟ ಸಭೆಯಲ್ಲಿ ಸಿಎಂ ಚರ್ಚೆ ಮಾಡುತ್ತಾರೆ’ ಮೀಸಲಾತಿ ಕುರಿತು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ಆಗಿದೆ ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದರು. ಈಗಿನ ಸ್ಥಿತಿಗತಿ, ಬೇರೆ ಸಮುದಾಯದವರು ಸಲ್ಲಿಸಿದ ಬೇಡಿಕೆ ಮತ್ತು ಮನವಿ ಕುರಿತು ಇಂದು ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಈ ಕುರಿತು ಎಲ್ಲಾ ಸಚಿವರ ಸಲಹೆಗಳನ್ನೂ ಸಿಎಂ ಯಡಿಯೂರಪ್ಪ ಆಲಿಸಿದ್ದಾರೆ. ಈ ಸಂಬಂಧ ಕಾನೂನು ತಜ್ಞರು, ಆಯೋಗದ ವರದಿಗಳು ಹಾಗೂ ಕೋರ್ಟ್​​ ತೀರ್ಪು ಇತ್ಯಾದಿ ಬಗ್ಗೆ ತಜ್ಞರ ಜೊತೆಗೆ ಚರ್ಚಿಸಿ ಮುಂದಿನ ಸಂಪುಟ ಸಭೆಯಲ್ಲಿ ಸಿಎಂ ಚರ್ಚೆ ಮಾಡುತ್ತಾರೆ ಎಂದು ಸಂಪುಟ ಸಭೆ ಬಳಿಕ ಬಸವರಾಜ ಬೊಮ್ಮಾಯಿ ಹೇಳಿದರು.

ಕುರುಬ ಸಮುದಾಯಕ್ಕೆ ST ಮೀಸಲಾತಿಗೆ ಹೋರಾಟದ ಬಗ್ಗೆ ಸಚಿವ ಶ್ರೀರಾಮುಲು ಪರಿಷತ್​ನಲ್ಲಿ ಉತ್ತರಿಸಿದ್ದಾರೆ. ಕುರುಬ ಸಮುದಾಯದ ಕುಲಶಾಸ್ತ್ರೀಯ ಅಧ್ಯಯನ ಆಗ್ತಿದೆ. 5-6 ಜಿಲ್ಲೆಗಳಲ್ಲಿ ಕುಲಶಾಸ್ತ್ರೀಯ ಅಧ್ಯಯನ ನಡೆಯುತ್ತಿದೆ. ವರದಿ ಬಂದ ಬಳಿಕ ಕ್ರಮ ಎಂದು ರಾಮುಲು ಹೇಳಿದ್ದಾರೆ ಎಂದು ಸಭೆ ಬಳಿಕ ಬಸವರಾಜ ಬೊಮ್ಮಾಯಿ ಹೇಳಿದರು.

Published On - 8:04 pm, Thu, 18 February 21

Follow Us
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
11 ಎಸೆತಗಳಲ್ಲಿ ಸಿಎಸ್​ಕೆಗೆ ಭಯ ಹುಟ್ಟಿಸಿದ ಪ್ರಿಯಾಂಶ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ