AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

SSLC Exams 2021: ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದುಪಡಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ವರದಿ

Karnataka State Board Exams 2021: ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬೇಕಾ? ಬೇಡವಾ? ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಏರ್ಪಡಿಸಿದ ಸಮೀಕ್ಷೆಯಲ್ಲಿ ಪರೀಕ್ಷೆ ಬೇಡವೆಂಬ ಅಭಿಪ್ರಾಯಕ್ಕೆ ಪುಷ್ಠಿ ಸಿಕ್ಕಿದೆ. ಈ ಕಾರಣದಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸುವಂತೆ ವರದಿ ಸಲ್ಲಿಸಲಾಗಿದೆ.

SSLC Exams 2021: ಎಸ್​ಎಸ್​ಎಲ್​ಸಿ ಪರೀಕ್ಷೆ ರದ್ದುಪಡಿಸುವಂತೆ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ವರದಿ
ಸಾಂಕೇತಿಕ ಚಿತ್ರ
TV9 Web
| Updated By: Skanda|

Updated on:Jun 04, 2021 | 8:49 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆಯ ಸಂಕಷ್ಟ ಹಾಗೂ ಮೂರನೇ ಅಲೆ ಬರಬಹುದೆನ್ನುವ ಭೀತಿಯ ನಡುವೆ ರಾಜ್ಯ ಶಿಕ್ಷಣ ಇಲಾಖೆ ಎಸ್​ಎಸ್​ಎಲ್​ಸಿ, ದ್ವಿತೀಯ ಪಿಯುಸಿ ಪರೀಕ್ಷೆ ನಡೆಸಬೇಕೋ, ಬೇಡವೋ ಎಂಬ ಗೊಂದಲಕ್ಕೆ ಬಿದ್ದಿದೆ. ಇಂತಹ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸರಿಯಲ್ಲ ಎಂದು ತಜ್ಞರಾದಿಯಾಗಿ ಹಲವರು ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದು, ಸಿಬಿಎಸ್​ಇ 12ನೇ ತರಗತಿ ಪರೀಕ್ಷೆ ರದ್ದುಪಡಿಸಿದ ಕೇಂದ್ರ ಸರ್ಕಾರದ ನಡೆಯನ್ನೇ ಅನುಸರಿಸುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡುತ್ತಿದ್ದಾರೆ. ಇದೀಗ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದಲೂ ವರದಿ ಸಲ್ಲಿಕೆಯಾಗಿದ್ದು, ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸಬೇಕೆಂದು ಆಗ್ರಹಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಸಬೇಕಾ? ಬೇಡವಾ? ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಏರ್ಪಡಿಸಿದ ಸಮೀಕ್ಷೆಯಲ್ಲಿ ಪರೀಕ್ಷೆ ಬೇಡವೆಂಬ ಅಭಿಪ್ರಾಯಕ್ಕೆ ಪುಷ್ಠಿ ಸಿಕ್ಕಿದೆ. ಈ ಕಾರಣದಿಂದಾಗಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ರದ್ದುಗೊಳಿಸುವಂತೆ ವರದಿ ಸಲ್ಲಿಸಲಾಗಿದ್ದು, ಸಿಬಿಎಸ್​ಇ ಮಾದರಿಯಲ್ಲಿ ಪರ್ಯಾಯ ವ್ಯವಸ್ಥೆ ಸಿದ್ಧಪಡಿಸುವಂತೆ ಶಿಫಾರಸು ಮಾಡಲಾಗಿದೆ. ಈ ಅಧ್ಯಯನದ ವರದಿಯನ್ನು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರಿಗೆ ಸಲ್ಲಿಸಲಾಗಿದ್ದು, ಇಂದು ನಡೆಯಲಿರುವ ಸುದ್ದಿಗೋಷ್ಠಿಯಲ್ಲಿ ಸಚಿವರು ಯಾವ ನಿರ್ಧಾರಕ್ಕೆ ಬರಲಿದ್ದಾರೆಂದು ತಿಳಿಯಲಿದೆ.

ಕೊರೊನಾ ಎರಡನೇ ಅಲೆ ಸಂಕಷ್ಟ ಕಾಲದಲ್ಲಿ ಪರೀಕ್ಷೆ ಆಯೋಜಿಸುವುದು ಶಿಕ್ಷಣ ಇಲಾಖೆ ಪಾಲಿಗೆ ನಿಜಕ್ಕೂ ಸವಾಲಿನ ವಿಷಯವಾಗಿದ್ದು, ಮೊದಲ ಅಲೆಗಿಂತಲೂ ಈಗಿನ ಪರಿಸ್ಥಿತಿ ಶೋಚನೀಯವಾಗಿದೆ ಎಂದು ಸೋಂಕಿಗೆ ಸಂಬಂಧಿಸಿದ ಅಂಕಿ ಅಂಶಗಳು ತಿಳಿಸಿವೆ. ಮೊದಲ ಅಲೆ ವೇಳೆಯಲ್ಲಿ ರಾಜ್ಯದಲ್ಲಿ ಮಾರ್ಚ್​ನಿಂದ ಸೆಪ್ಟೆಂಬರ್ ತನಕ 19,378 ಮಕ್ಕಳಿಗೆ ಕೊರೊನಾ ಸೋಂಕು ತಗುಲಿತ್ತು. ಆದರೆ ಎರಡನೇ ಅಲೆಯಲ್ಲಿ ಬೆಂಗಳೂರು ಒಂದರಲ್ಲೇ ಮಾರ್ಚ್ 1 ರಿಂದ ಮೇ 6 ರ ವರೆಗೆ 10 ವರ್ಷದೊಳಗಿನ 19,401 ಮಕ್ಕಳಿಗೆ ಸೋಂಕು ದೃಢಪಟ್ಟಿದೆ.

ಅಂದರೆ ಕಳೆದ ಬಾರಿ ಮಾರ್ಚ್​ನಿಂದ ಸೆಪ್ಟೆಂಬರ್​ ಅವಧಿಯಲ್ಲಿ ಇಡೀ ರಾಜ್ಯದಲ್ಲಿ ಕಂಡುಬಂದ ಸೋಂಕಿತ ಮಕ್ಕಳ ಪ್ರಮಾಣಕ್ಕಿಂತಲೂ ಹೆಚ್ಚು ಮಕ್ಕಳು ಈ ಬಾರಿ ಮಾರ್ಚ್​ನಿಂದ ಮೇ ತಿಂಗಳ ಒಳಗೆ ಬೆಂಗಳೂರಿನಲ್ಲಿ ಪತ್ತೆಯಾಗಿದ್ದಾರೆ. ಮೂರನೇ ಅಲೆ ಮಕ್ಕಳಿಗೆ ಮಾರಕ ಎಂಬ ಊಹೆಯ ನಡುವೆ ಎರಡನೇ ಅಲೆಯಲ್ಲೇ ಈ ಮಟ್ಟಿಗಿನ ಅವಾಂತರ ಆಗಿರುವುದು ಚಿಂತೆಗೆ ಕಾರಣವಾಗಿದೆ. ಅಲ್ಲದೇ, ಸೋಂಕಿಗೆ ಒಳಗಾದ ಶೇ.3 ರಿಂದ ಶೇ.5 ರಷ್ಟು ಮಕ್ಕಳಿಗೆ ತೀವ್ರ ರೋಗಲಕ್ಷಣ ಗೋಚರವಾಗುತ್ತಿದೆ. ಬೆಂಗಳೂರು ನಗರದಲ್ಲಿ ಮೊದಲ ಅಲೆಯಲ್ಲಿ 22 ಮಕ್ಕಳು ಸಾವಿಗೀಡಾಗಿದ್ದರೆ ಎರಡನೇ ಅಲೆಯಲ್ಲಿ ಈಗಾಗಲೇ 25ಕ್ಕೂ ಹೆಚ್ಚು ಮಕ್ಕಳು ಮೃತಪಟ್ಟಿದ್ದಾರೆ. ಜತೆಗೆ ರಾಜ್ಯದಲ್ಲಿ 600ಕ್ಕೂ ಹೆಚ್ಚು ಶಿಕ್ಷಕರು ಕೊರೊನಾ ಸೋಂಕಿನಿಂದ ಜೀವ ಕಳೆದುಕೊಂಡಿದ್ದು, ಸುರಕ್ಷಿತವಾಗಿ ಪರೀಕ್ಷೆ ಆಯೋಜಿಸುವುದು ರಾಜ್ಯ ಶಿಕ್ಷಣ ಇಲಾಖೆ ಪಾಲಿಗೆ ಸವಾಲಿನ ವಿಷಯವಾಗಿದೆ.

ಇದನ್ನೂ ಓದಿ: SSLC Exams 2021: ಎಸ್​ಎಸ್​ಎಲ್​ಸಿ ಪರೀಕ್ಷೆ ಬೇಕೆ ಬೇಡವೇ? ವಿದ್ಯಾರ್ಥಿ, ಪಾಲಕರು ಮತ್ತು ಶಿಕ್ಷಕರ ಸಮೀಕ್ಷೆ ನಡೆಸಿದ ಶಿಕ್ಷಣ ಇಲಾಖೆ 

ರಾಜ್ಯದಲ್ಲಿ ಎಸ್​ಎಸ್​ಎಲ್​ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ ರದ್ದುಪಡಿಸಿ: ಸರ್ಕಾರಕ್ಕೆ ಶಿಕ್ಷಣ ತಜ್ಞ ಡಾ.ನಿರಂಜನಾರಾಧ್ಯ ಸಲಹೆ

Published On - 8:48 am, Fri, 4 June 21

ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕ್ರಾಂತಿವೀರ ದಂಥ ಬಿರುದುಗಳೆಲ್ಲ ನನಗೆ ಬೇಡ ಎಂದು ನಗುತ್ತಾ ಹೇಳಿದ ರಾಜಣ್ಣ
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್
ಕರ್ನಾಟಕದ ಎಲ್ಲ ಸಂಸದರಿಗೆ ಇದು ಸ್ವಾಭಿಮಾನದ ಪ್ರಶ್ನೆ: ಶಿವಕುಮಾರ್