AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,806 ಮಂದಿಗೆ ಕೊರೊನಾ ದೃಢ; 42 ಮಂದಿ ಸಾವು

ಬೆಂಗಳೂರಿನಲ್ಲಿ ಇಂದು ಒಂದೇ ದಿನ 411 ಜನರಿಗೆ ಕೊವಿಡ್ ಸೋಂಕು ತಗುಲಿರುವುದು ದೃಢವಾಗಿದೆ. ನಗರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,21,371ಕ್ಕೆ ಏರಿಕೆ ಆಗಿದೆ. 12,21,371 ಸೋಂಕಿತರ ಪೈಕಿ 11,93,213 ಜನರು ಗುಣಮುಖರಾಗಿದ್ದಾರೆ.

Karnataka Covid Update: ಕರ್ನಾಟಕದಲ್ಲಿ ಹೊಸದಾಗಿ 1,806 ಮಂದಿಗೆ ಕೊರೊನಾ ದೃಢ; 42 ಮಂದಿ ಸಾವು
ಪ್ರಾತಿನಿಧಿಕ ಚಿತ್ರ
TV9 Web
| Edited By: |

Updated on:Jul 16, 2021 | 7:19 PM

Share

ಬೆಂಗಳೂರು: ಕರ್ನಾಟಕ ರಾಜ್ಯದಲ್ಲಿ ಇಂದು (ಜುಲೈ 16) ಹೊಸದಾಗಿ 1,806 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ, ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 28,80,370ಕ್ಕೆ ಏರಿಕೆಯಾಗಿದೆ. ಕೊವಿಡ್-19 ಸೋಂಕಿತರ ಪೈಕಿ 28,12,869 ಜನ ಗುಣಮುಖರಾಗಿ ಡಿಸ್ಚಾರ್ಜ್ ಹೊಂದಿದ್ದಾರೆ. ರಾಜ್ಯದಲ್ಲಿ ಇಂದು ಕೊರೊನಾ ಸೋಂಕಿನಿಂದ 42 ಜನರ ಸಾವು ಸಂಭವಿಸಿದೆ. ತನ್ಮೂಲಕ, ಈವರೆಗೆ ಕೊರೊನಾದಿಂದ ಮೃತಪಟ್ಟವರ ಸಂಖ್ಯೆ 36,079 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ 31,399 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಈ ಬಗ್ಗೆ ಮಾಹಿತಿ ಲಭ್ಯವಾಗಿದೆ.

ಬೆಂಗಳೂರಿನಲ್ಲಿ ಇಂದು ಒಂದೇ ದಿನ 411 ಜನರಿಗೆ ಕೊವಿಡ್ ಸೋಂಕು ತಗುಲಿರುವುದು ದೃಢವಾಗಿದೆ. ನಗರದಲ್ಲಿ ಕೊರೊನಾ ಪೀಡಿತರ ಸಂಖ್ಯೆ 12,21,371ಕ್ಕೆ ಏರಿಕೆ ಆಗಿದೆ. 12,21,371 ಸೋಂಕಿತರ ಪೈಕಿ 11,93,213 ಜನರು ಗುಣಮುಖರಾಗಿದ್ದಾರೆ. ರಾಜ್ಯ ರಾಜಧಾನಿಯಲ್ಲಿ ಇಂದು ಕೊರೊನಾ ಸೋಂಕಿಗೆ 10 ಜನರು ಬಲಿಯಾಗಿದ್ದಾರೆ. ಅದರಂತೆ, ಕೊರೊನಾದಿಂದ ಈವರೆಗೆ 15,781 ಜನರ ಸಾವು ಸಂಭವಿಸಿದೆ. 12,376 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ.

ಜಿಲ್ಲಾವಾರು ಕೊರೊನಾ ಸೋಂಕಿತರ ವಿವರ ಬೆಂಗಳೂರು ನಗರ 411, ದಕ್ಷಿಣ ಕನ್ನಡ ಜಿಲ್ಲೆ 225, ಮೈಸೂರು 174, ಹಾಸನ 138, ಶಿವಮೊಗ್ಗ 110, ಉಡುಪಿ 105, ತುಮಕೂರು 94, ಚಿಕ್ಕಮಗಳೂರು 86, ಬೆಳಗಾವಿ 70, ಮಂಡ್ಯ 68, ಉತ್ತರಕನ್ನಡ 50, ಕೊಡಗು 49, ಬೆಂಗಳೂರು ಗ್ರಾಮಾಂತರ ಜಿಲ್ಲೆ 44, ಕೋಲಾರ 34, ದಾವಣಗೆರೆ 27, ಚಿಕ್ಕಬಳ್ಳಾಪುರ 22, ಚಾಮರಾಜನಗರ 17, ಚಿತ್ರದುರ್ಗ 16, ಧಾರವಾಡ 11, ಹಾವೇರಿ 10, ರಾಮನಗರ 8, ಬಾಗಲಕೋಟೆ 6, ಬಳ್ಳಾರಿ 5, ಗದಗ 5, ವಿಜಯಪುರ 5, ಯಾದಗಿರಿ 5, ಕಲಬುರಗಿ 4, ಬೀದರ್ 3, ಕೊಪ್ಪಳ 2 ಹಾಗೂ ರಾಯಚೂರು ಜಿಲ್ಲೆಯಲ್ಲಿ 2 ಕೊರೊನಾ ಪ್ರಕರಣ ವರದಿಯಾಗಿದೆ.

ಜಿಲ್ಲಾವಾರು ಕೊರೊನಾದಿಂದ ಮೃತಪಟ್ಟವರ ವಿವರ ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿಗೆ 10 ಜನರ ಬಲಿಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 10, ಮೈಸೂರಿನಲ್ಲಿ 5, ಕೋಲಾರ ಜಿಲ್ಲೆಯಲ್ಲಿ 3, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ, ಬೆಳಗಾವಿ, ಚಾಮರಾಜನಗರ ಜಿಲ್ಲೆಯಲ್ಲಿ ತಲಾ 2, ಚಿಕ್ಕಬಳ್ಳಾಪುರ, ಹಾಸನ, ಧಾರವಾಡ, ಕೊಡಗು ಜಿಲ್ಲೆಯಲ್ಲಿ, ಮಂಡ್ಯ, ಉತ್ತರ ಕನ್ನಡ ಜಿಲ್ಲೆ, ಶಿವಮೊಗ್ಗ, ತುಮಕೂರು ಜಿಲ್ಲೆಯಲ್ಲಿಂದು ತಲಾ ಒಬ್ಬರ ಸಾವು ವರದಿಯಾಗಿದೆ.

ಇದನ್ನೂ ಓದಿ: Corona third Wave: ಆಗಸ್ಟ್​ ಅಂತ್ಯಕ್ಕೆ ಕೊರೊನಾ ಮೂರನೇ ಅಲೆ ನಿಶ್ಚಿತ: ಐಸಿಎಂಆರ್​ ಹಿರಿಯ ವೈದ್ಯ

ಕೊರೊನಾ ಲಸಿಕೆ ಜೊತೆಗೆ ಮುನ್ನೆಚ್ಚರಿಕೆಯೂ ಬೇಕು: ಲವ್ ಅಗರ್ವಾಲ್

Published On - 7:17 pm, Fri, 16 July 21

ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ