AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮೈಸೂರು: ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿದ ಕರ್ನಾಟಕ ರಾಜ್ಯ ಮುಕ್ತ ವಿವಿ

ಕರ್ನಾಟಕ ರಾಜ್ಯಾದ್ಯಂತ ಕಾವೇರಿ ನೀರಿಗಾಗಿ ಹೋರಾಟ ಮುಂದುವರಿದಿದ್ದು, ನಾಳೆ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಷ್ಕರಗಳು ನಡೆಯಲಿವೆ. ಹೀಗಾಗಿ ಸೆ.26, 28, 29ರಂದು ನಿಗದಿಯಾಗಿದ್ದ ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಮುಂದೂಡಿಕೆ ಮಾಡಿದೆ.

ಮೈಸೂರು: ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿದ ಕರ್ನಾಟಕ ರಾಜ್ಯ ಮುಕ್ತ ವಿವಿ
ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿದ ಕರ್ನಾಟಕ ರಾಜ್ಯ ಮುಕ್ತ ವಿವಿ (ಸಾಂದರ್ಭಿಕ ಚಿತ್ರ)
Follow us
ರಾಮ್​, ಮೈಸೂರು
| Updated By: Rakesh Nayak Manchi

Updated on: Sep 25, 2023 | 10:49 PM

ಮೈಸೂರು, ಸೆ.25: ಕರ್ನಾಟಕ ರಾಜ್ಯಾದ್ಯಂತ ಕಾವೇರಿ ನೀರಿಗಾಗಿ ಹೋರಾಟ (Cauvery Protest) ಮುಂದುವರಿದಿದ್ದು, ನಾಳೆ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಷ್ಕರಗಳು ನಡೆಯಲಿವೆ. ಹೀಗಾಗಿ ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) ಮುಂದೂಡಿಕೆ ಮಾಡಿದೆ.

ಕಾವೇರಿ ನೀರಿನ ವಿಚಾರವಾಗಿ ರಾಜ್ಯಾದ್ಯಂತ ಮುಷ್ಕರ ಹಿನ್ನೆಲೆ ಸೆ.26, 28, 29ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಕೆಎಸ್​ಒಯು ಕುಲಸಚಿವ ಕೆ.ಬಿ.ಪ್ರವೀಣ್ ಆದೇಶ ಹೊರಡಿಸಿದ್ದಾರೆ.

ಸೈಕಾಲಜಿ, ಹಿಂದಿ, ಎಂಎ ಪತ್ರಿಕೋದ್ಯಮ, ರಾಜಕೀಯ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ಇತಿಹಾಸ ವಿಷಯ ಸೇರಿದಂತೆ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ: ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಬೆಂಗಳೂರು ಬಂದ್ ಹಿನ್ನೆಲೆ ನಾಳೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಕೂಡ ಮುಂದೂಡಿಕೆಯಾಗಿವೆ. ನಾಳಿನ ಎಲ್ಲಾ ಪರೀಕ್ಷೆಗಳನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಉಳಿದ ಪರೀಕ್ಷೆಗಳು ಯಥಾ ರೀತಿ ನಡೆಯಲಿವೆ.

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರಕ್ಕೂ ಅಡಚಣೆ ಉಂಟಾಗಲಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ. ಇದನ್ನು ತಪ್ಪಿಸಲು ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಕಾನೂನು ವಿಶ್ವವಿದ್ಯಾಲಯ ಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರೀಕ್ಷೆ ಮುಂದೂಡಿಕೆಗೆ ನಿರ್ಧಾರ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ಇಡೀ ಪಂದ್ಯದ ಚಿತ್ರಣ ಬದಲಿಸಿದ ಫಾಫ್ ಡುಪ್ಲೆಸಿಸ್ ಸ್ಟನ್ನಿಂಗ್ ಕ್ಯಾಚ್
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದುರಂತಕ್ಕೀಡಾದ ವಿಮಾನದಲ್ಲಿ 1.25 ಲಕ್ಷ ಲೀಟರ್ ಇಂಧನ ತುಂಬಲಾಗಿತ್ತು
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ದ್ಯಾಮೇಶ್ ಧ್ವನಿಗೆ ಮೆಚ್ಚುಗೆ ಸೂಚಿಸಿದ ನಟಿ ರಚಿತಾ ರಾಮ್
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ವಿಮಾನ ಬಿದ್ದ ರಭಸಕ್ಕೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಹೇಗಾಗಿದೆ ನೋಡಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
ಶನಿವಾರದಂದು ಶ್ರೀ ವೆಂಕಟೇಶ್ವರನ ಆರಾಧನೆಯ ಮಹತ್ವ ತಿಳಿಯಿರಿ
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
Daily Horoscope: ಈ ರಾಶಿಯವರಿಗೆ ವೈರಾಗ್ಯದ ಭಾವನೆಗಳು ಕಾಡಬಹುದು
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಸೆಲೆಬ್ರಿಟಿಗಳಿಗೆ ‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಇಷ್ಟ ಆಯ್ತಾ?
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಗರ್ಭಾವಸ್ಥೆಯ ಹಸುವಿನ ಕೆಚ್ಚಲು ಕತ್ತರಿಸಿ ವಿಕೃತಿ ಮೆರೆದ ದುಷ್ಕರ್ಮಿಗಳು
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಇರಾನ್‌ ಮೇಲಿನ ಕ್ಷಿಪಣಿ ದಾಳಿ, ರಹಸ್ಯ ಕಾರ್ಯಾಚರಣೆಯ ವಿಡಿಯೋ ರಿಲೀಸ್
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ
ಮಗಳ ಮದುವೆಗೆಂದು ಇಟ್ಟಿದ್ದ ಚಿನ್ನಾಭರಣ ದೋಚಿದ ಖದೀಮರು, ಕಣ್ಣೀರಿಟ್ಟ ತಾಯಿ