ಮೈಸೂರು: ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿದ ಕರ್ನಾಟಕ ರಾಜ್ಯ ಮುಕ್ತ ವಿವಿ

ಕರ್ನಾಟಕ ರಾಜ್ಯಾದ್ಯಂತ ಕಾವೇರಿ ನೀರಿಗಾಗಿ ಹೋರಾಟ ಮುಂದುವರಿದಿದ್ದು, ನಾಳೆ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಷ್ಕರಗಳು ನಡೆಯಲಿವೆ. ಹೀಗಾಗಿ ಸೆ.26, 28, 29ರಂದು ನಿಗದಿಯಾಗಿದ್ದ ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು ಮುಂದೂಡಿಕೆ ಮಾಡಿದೆ.

ಮೈಸೂರು: ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿದ ಕರ್ನಾಟಕ ರಾಜ್ಯ ಮುಕ್ತ ವಿವಿ
ಪದವಿ, ಸ್ನಾತಕೋತ್ತರ ಪರೀಕ್ಷೆ ಮುಂದೂಡಿದ ಕರ್ನಾಟಕ ರಾಜ್ಯ ಮುಕ್ತ ವಿವಿ (ಸಾಂದರ್ಭಿಕ ಚಿತ್ರ)
Edited By: Rakesh Nayak Manchi

Updated on: Sep 25, 2023 | 10:49 PM

ಮೈಸೂರು, ಸೆ.25: ಕರ್ನಾಟಕ ರಾಜ್ಯಾದ್ಯಂತ ಕಾವೇರಿ ನೀರಿಗಾಗಿ ಹೋರಾಟ (Cauvery Protest) ಮುಂದುವರಿದಿದ್ದು, ನಾಳೆ ಬೆಂಗಳೂರು ಬಂದ್​ಗೆ ಕರೆ ನೀಡಲಾಗಿದೆ. ಅಷ್ಟೇ ಅಲ್ಲದೆ, ಮೈಸೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಮುಷ್ಕರಗಳು ನಡೆಯಲಿವೆ. ಹೀಗಾಗಿ ಪದವಿ, ಸ್ನಾತಕೋತ್ತರ ಪರೀಕ್ಷೆಗಳನ್ನು ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯವು (KSOU) ಮುಂದೂಡಿಕೆ ಮಾಡಿದೆ.

ಕಾವೇರಿ ನೀರಿನ ವಿಚಾರವಾಗಿ ರಾಜ್ಯಾದ್ಯಂತ ಮುಷ್ಕರ ಹಿನ್ನೆಲೆ ಸೆ.26, 28, 29ರಂದು ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಕೆಎಸ್​ಒಯು ಕುಲಸಚಿವ ಕೆ.ಬಿ.ಪ್ರವೀಣ್ ಆದೇಶ ಹೊರಡಿಸಿದ್ದಾರೆ.

ಸೈಕಾಲಜಿ, ಹಿಂದಿ, ಎಂಎ ಪತ್ರಿಕೋದ್ಯಮ, ರಾಜಕೀಯ ಶಾಸ್ತ್ರ, ವಾಣಿಜ್ಯ ಶಾಸ್ತ್ರ, ಇತಿಹಾಸ ವಿಷಯ ಸೇರಿದಂತೆ ನಿಗದಿಯಾಗಿದ್ದ ಪರೀಕ್ಷೆಗಳನ್ನು ಮುಂದೂಡಿಕೆ ಮಾಡಿ ಆದೇಶಿಸಲಾಗಿದೆ.

ಇದನ್ನೂ ಓದಿ: ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಬೆಂಗಳೂರು ಬಂದ್ ಹಿನ್ನೆಲೆ ನಾಳೆ ನಡೆಯಬೇಕಿದ್ದ ಕಾನೂನು ವಿಶ್ವವಿದ್ಯಾನಿಲಯದ ಪರೀಕ್ಷೆಗಳು ಕೂಡ ಮುಂದೂಡಿಕೆಯಾಗಿವೆ. ನಾಳಿನ ಎಲ್ಲಾ ಪರೀಕ್ಷೆಗಳನ್ನು ಅಕ್ಟೋಬರ್ 8ಕ್ಕೆ ಮುಂದೂಡಿಕೆ ಮಾಡಿ ವಿವಿ ಮೌಲ್ಯಮಾಪನ ಕುಲಸಚಿವರು ಆದೇಶ ಹೊರಡಿಸಿದ್ದಾರೆ. ಉಳಿದ ಪರೀಕ್ಷೆಗಳು ಯಥಾ ರೀತಿ ನಡೆಯಲಿವೆ.

ಬೆಂಗಳೂರು ಬಂದ್ ಹಿನ್ನೆಲೆಯಲ್ಲಿ ಸಾರಿಗೆ ಸಂಚಾರಕ್ಕೂ ಅಡಚಣೆ ಉಂಟಾಗಲಿದೆ. ಇದರಿಂದಾಗಿ ವಿದ್ಯಾರ್ಥಿಗಳಿಗೆ ಅನಾನುಕೂಲವಾಗಲಿದೆ. ಇದನ್ನು ತಪ್ಪಿಸಲು ಪರೀಕ್ಷೆಗಳನ್ನು ಮುಂದೂಡಿಕೆ ಮಾಡಲಾಗಿದೆ. ಕಾನೂನು ವಿಶ್ವವಿದ್ಯಾಲಯ ಕುಲಪತಿಗಳ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪರೀಕ್ಷೆ ಮುಂದೂಡಿಕೆಗೆ ನಿರ್ಧಾರ ಮಾಡಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Ram

ರಾಮ್ ಮೈಸೂರು ಪತ್ರಕರ್ತನಾಗಿ 20 ವರ್ಷದ ಅನುಭವ. ಕಳೆದ 14 ವರ್ಷಗಳಿಂದ ಟಿವಿ9 ಕನ್ನಡದ ಮೈಸೂರು ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ನಿರ್ವಹಣೆ. ರಾಜ್ಯದ ವಿಧಾನಸಭಾ ಲೋಕಸಭಾ ಚುನಾವಣೆಯ ವಿಶೇಷ ವರದಿ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳ ಉಪಚುನಾವಣಾ ವರದಿ, ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ರಾಹುಲ್ ಗಾಂಧಿ ಸ್ಪರ್ಧೆ ಮಾಡಿದ್ದ ಚುನಾವಣಾ ವರದಿ ಸೇರಿದಂತೆ ಹಲವು ಚುನಾವಣೆಯ ವರದಿಯ ಅನುಭವ. ಮುಂಬೈ ಮಹಾಮಳೆಯ ಕವರೇಜ್, ಕೊಡಗು ಜಿಲ್ಲೆಯ ಗುಡ್ಡ ಕುಸಿತ, ಸೇರಿದಂತೆ ಹಲವು ಸ್ಟಿಂಗ್ ಕಾರ್ಯಾಚರಣೆ, ಸಾಮಾಜಿಕ‌ ಸಮಸ್ಯೆ ಹಾಗೂ ಮಾನವೀಯ ಕಳಕಳಿಯುಳ್ಳ ವರದಿ ಮಾಡಿದ ಅನುಭವ.

Read More
Follow Us