Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಮಾತಿನಂತೆ ಸಾರಿಗೆ ನೌಕರರ ಏಳು ಬೇಡಿಕೆಗಳ ಈಡೇರಿಸಿದ ಸರ್ಕಾರ: ಸಾರಿಗೆ ನೌಕರರ ತಕರಾರೇನು?

ಮುಷ್ಕರ ಮುಗಿದು ಸುಮಾರು 85 ದಿನಗಳು ಕಳೆದಿದೆ. ಸಾರಿಗೆ ಸಚಿವರು ಮತ್ತು ಆಡಳಿತ ಮಂಡಳಿ ಏಳು ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದೆ. ತಾವು ಈಡೇರಿಸಿರುವುದಾಗಿ ಹೇಳುತ್ತಿರುವ ಏಳು ಭರವಸೆಗಳು ನಮ್ಮೊಂದಿಗೆ ಚರ್ಚೆ ಮಾಡದೆ ಏಕಾಏಕಿ ನಿರ್ಧಾರ ಮಾಡಿ ಸರ್ಕಾರ ಜಾರಿಗೆ ತಂದಿದೆ.

ಕೊಟ್ಟ ಮಾತಿನಂತೆ ಸಾರಿಗೆ ನೌಕರರ ಏಳು ಬೇಡಿಕೆಗಳ ಈಡೇರಿಸಿದ ಸರ್ಕಾರ: ಸಾರಿಗೆ ನೌಕರರ ತಕರಾರೇನು?
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
Follow us
sandhya thejappa
| Updated By: ಸಾಧು ಶ್ರೀನಾಥ್​

Updated on: Mar 13, 2021 | 1:42 PM

ಬೆಂಗಳೂರು: ಸಾರಿಗೆ ನೌಕರರು ತಮ್ಮ ಒಂಬತ್ತು ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಸ್ಪಂದಿಸಿದ್ದ ರಾಜ್ಯ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಮಾತಿನಂತೆ ಇದೀಗ 7 ಬೇಡಿಕೆಯನ್ನು ಸರ್ಕಾರ ಈಡೇರಿಸಿದ್ದರೂ ಸಾರಿಗೆ ಸಿಬ್ಬಂದಿ ಚಕಾರವೆತ್ತಿದ್ದಾರೆ. ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಮುನ್ನ ಸಾರಿಗೆ ನೌಕರರ ಜೊತೆ ಚರ್ಚಿಸಬೇಕು ಎಂದೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸರ್ಕಾರಕ್ಕೆ ಮನವಿ ಪತ್ರ ನೀಡಿದೆ.

ಪತ್ರದಲ್ಲಿ ಏನಿದೆ? ಮುಷ್ಕರ ಮುಗಿದು ಸುಮಾರು 85 ದಿನಗಳು ಕಳೆದಿವೆ. ಸಾರಿಗೆ ಸಚಿವರು ಮತ್ತು ಆಡಳಿತ ಮಂಡಳಿ ಏಳು ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದೆ. ತಾವು ಈಡೇರಿಸಿರುವುದಾಗಿ ಹೇಳುತ್ತಿರುವ ಏಳು ಭರವಸೆಗಳ ಬಗ್ಗೆ ನಮ್ಮೊಂದಿಗೆ ಚರ್ಚೆ ಮಾಡದೆ ಏಕಾಏಕಿ ನಿರ್ಧಾರ ಮಾಡಿ ಸರ್ಕಾರ ಜಾರಿಗೆ ತಂದಿದೆ. ಆ ಏಳು ಭರವಸೆಗಳು ನಾವು ಕೇಳಿದ ರೀತಿಯಲ್ಲಿ ಇಲ್ಲದೇ ಕೇವಲ ಹಳೆಯ ಸುತ್ತೋಲೆ ಮತ್ತು ಹಳೆಯ ಪದ್ಧತಿಗಳಲ್ಲಿ ಅಲ್ಪಸ್ವಲ್ಪ ಬದಲಾವಣೆ ಮಾಡಿ ಹೊಸ ಪದ್ಧತಿಯೆಂದು ಬಿಂಬಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ತಿಳಿಯುತ್ತಿಲ್ಲ. ಹೀಗಾಗಿ ಸರ್ಕಾರ ಬೇಡಿಕೆ ಈಡೇರಿಕೆಗೂ ಮುನ್ನ ಸಾರಿಗೆ ನೌಕರರ ಜೊತೆ ಚರ್ಚೆ ನಡೆಸಲಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.

ಸರ್ಕಾರ ಡಿಸೆಂಬರ್​ನಲ್ಲಿ ನಮ್ಮ 9 ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. 9 ರಲ್ಲಿ 7 ಬೇಡಿಕೆಗಳನ್ನ ಈಡೇರಿಸಿದ್ದೇವೆ ಅಂತ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆರನೇ ವೇತನ ಆಯೋಗ ಜಾರಿಗೆ ತರುವುದು ಮತ್ತು ತರಬೇತಿಯನ್ನ 2 ವರ್ಷದಿಂದ 1 ವರ್ಷಕ್ಕೆ ಇಳಿಸುವುದು ಸೇರಿದಂತೆ ಒಟ್ಟು ಎರಡು ಬೇಡಿಕೆಗಳನ್ನ ಬಿಟ್ಟು ಇನ್ನೆಲ್ಲ ಬೇಡಿಕೆ ಈಡೇರಿಸಿದ್ದೇವೆ ಅಂತಿದ್ದಾರೆ. ಆದರೆ ಆ ಏಳು ಬೇಡಿಕೆ ಈಡೇರಿಕೆಯಲ್ಲೂ ನ್ಯೂನ್ಯತೆ ಇದೆ. ಎನ್ಎಎಂಸಿ ಪೂರ್ಣ ರದ್ದು ಮಾಡಬೇಕು. ಹೊರ ರಾಜ್ಯಗಳಲ್ಲಿ ಇರುವಂತೆ ಟಿಕೆಟ್ ಪಡೆಯದೆ ಇದ್ದರೆ ಗ್ರಾಹಕರನ್ನೆ ನೇರ ಹೊಣೆಗಾರರನ್ನಾಗಿ ಮಾಡಬೇಕು. ಆರನೇ ವೇತನ ಆಯೊಗವನ್ನ ಕೂಡಲೇ ಜಾರಿಗೆ ತರಬೇಕು ಎಂದು ಸಾರಿಗೆ ಇಲಾಖೆಗೆ 5 ಪುಟದ ಮನವಿಯನ್ನ ಸಲ್ಲಿಸುತ್ತಿದ್ದೇವೆ. ಅದರಂತೆ ಸರ್ಕಾರ ಬೇಡಿಕೆಗಳನ್ನ ಈಡೇರಿಸಿದರೆ ನೌಕರರಿಗೆ ಅನುಕೂಲವಾಗುತ್ತದೆ ಎಂದು ಸಾರಿಗೆ ನೌಕರರ ಕೂಟದ ಜಂಟಿ ಕಾರ್ಯದರ್ಶಿ ಆನಂದ್ ತಿಳಿಸಿದ್ದಾರೆ.

ಇದನ್ನೂ ಓದಿ

ಬಜೆಟ್​ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ಹಿನ್ನೆಲೆ; ಮತ್ತೆ ಮುಷ್ಕರಕ್ಕೆ ಮುಂದಾಗ್ತಾರಾ ಸಾರಿಗೆ ನೌಕರರು?

ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ಫೆಬ್ರವರಿಯಲ್ಲಿ ಮತ್ತೆ ಇಳಿಕೆ; 2020ರ ಸೆಪ್ಟೆಂಬರ್ ನಂತರ ಕನಿಷ್ಠ ಪ್ರಮಾಣಕ್ಕೆ

‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
‘ನಾನು ಇಲ್ಲಿಯವನು, ಬೆಂಗಳೂರು ಹೃದಯದಲ್ಲಿದೆ’; ಕನ್ನಡಿಗ ಕೆಎಲ್ ರಾಹುಲ್
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹಾಟ್​ ಏರ್​ ಬಲೂನ್ ರೈಡ್ ಮಾಡುವಾಗ ಹಗ್ಗ ತುಂಡಾಗಿ ವ್ಯಕ್ತಿ ಸಾವು
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಹೋಮಕ್ಕೆ ತುಪ್ಪ ಹಾಗೂ ಧಾನ್ಯಗಳ ಹವಿಸ್ಸು ಕೊಡುವುದರ ಹಿಂದಿನ ರಹಸ್ಯ ತಿಳಿಯಿರಿ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
ಈ ರಾಶಿಯವರು ಇಂದು ಉತ್ತಮ ಭವಿಷ್ಯದ ಕನಸುಗಳನ್ನು ಕಟ್ಟಿಕೊಳ್ಳುವ ಸಮಯ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
‘ವಿದ್ಯಾಪತಿ’ ಸಿನಿಮಾ ನೋಡಿ ನಾಗಭೂಷಣ ಬಗ್ಗೆ ಮನಸಾರೆ ಮಾತಾಡಿದ ತಾರಾ
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಸಾಧಾರಣ ಮೊತ್ತ ಗಳಿಸಿದ ಆರ್​ಸಿಬಿ, ಬೌಲರ್​ಗಳ ಮೇಲೆ ಹೆಚ್ಚಿನ ನಿರೀಕ್ಷೆ!
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಇನ್ಮುಂದೆ 108 ಆಂಬ್ಯುಲೆನ್ಸ್ ಸೇವೆ ಖಾಸಗಿಯಿಂದ ಸರ್ಕಾರದ ಕಂಟ್ರೋಲ್​ಗೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಬಿಹಾರದಲ್ಲಿ ಸಿಡಿಲು ಬಡಿದು 25 ಜನ ಸಾವು; ನಿತೀಶ್ ಕುಮಾರ್ ಪರಿಹಾರ ಘೋಷಣೆ
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ಎಲೆಕ್ಟ್ರಾನಿಕ್ ಸಿಟಿ ಫ್ಲೈಓವರ್​ ಮೇಲೆ ಸರಣಿ ಅಪಘಾತ: ಫುಲ್ ಟ್ರಾಫಿಕ್ ಜಾಮ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್
ವಾಮನ ನೋಡಲು ದರ್ಶನ್ ಜತೆ ವಿಜಯಲಕ್ಷ್ಮಿ ಬರಲಿಲ್ಲ ಯಾಕೆ? ಉತ್ತರಿಸಿದ ಧನ್ವೀರ್