AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊಟ್ಟ ಮಾತಿನಂತೆ ಸಾರಿಗೆ ನೌಕರರ ಏಳು ಬೇಡಿಕೆಗಳ ಈಡೇರಿಸಿದ ಸರ್ಕಾರ: ಸಾರಿಗೆ ನೌಕರರ ತಕರಾರೇನು?

ಮುಷ್ಕರ ಮುಗಿದು ಸುಮಾರು 85 ದಿನಗಳು ಕಳೆದಿದೆ. ಸಾರಿಗೆ ಸಚಿವರು ಮತ್ತು ಆಡಳಿತ ಮಂಡಳಿ ಏಳು ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದೆ. ತಾವು ಈಡೇರಿಸಿರುವುದಾಗಿ ಹೇಳುತ್ತಿರುವ ಏಳು ಭರವಸೆಗಳು ನಮ್ಮೊಂದಿಗೆ ಚರ್ಚೆ ಮಾಡದೆ ಏಕಾಏಕಿ ನಿರ್ಧಾರ ಮಾಡಿ ಸರ್ಕಾರ ಜಾರಿಗೆ ತಂದಿದೆ.

ಕೊಟ್ಟ ಮಾತಿನಂತೆ ಸಾರಿಗೆ ನೌಕರರ ಏಳು ಬೇಡಿಕೆಗಳ ಈಡೇರಿಸಿದ ಸರ್ಕಾರ: ಸಾರಿಗೆ ನೌಕರರ ತಕರಾರೇನು?
ಬಿಎಂಟಿಸಿ ಬಸ್ (ಸಾಂದರ್ಭಿಕ ಚಿತ್ರ)
sandhya thejappa
sandhya thejappa| Edited By: ಸಾಧು ಶ್ರೀನಾಥ್​|

Updated on: Mar 13, 2021 | 1:42 PM

Share

ಬೆಂಗಳೂರು: ಸಾರಿಗೆ ನೌಕರರು ತಮ್ಮ ಒಂಬತ್ತು ಬೇಡಿಕೆಗಳನ್ನು ಈಡೇರಿಸಬೇಕೆಂದು ಸರ್ಕಾರಕ್ಕೆ ಆಗ್ರಹಿಸಿ ಇತ್ತೀಚೆಗೆ ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಸ್ಪಂದಿಸಿದ್ದ ರಾಜ್ಯ ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. ಮಾತಿನಂತೆ ಇದೀಗ 7 ಬೇಡಿಕೆಯನ್ನು ಸರ್ಕಾರ ಈಡೇರಿಸಿದ್ದರೂ ಸಾರಿಗೆ ಸಿಬ್ಬಂದಿ ಚಕಾರವೆತ್ತಿದ್ದಾರೆ. ಸರ್ಕಾರ ಬೇಡಿಕೆಗಳನ್ನು ಈಡೇರಿಸುವ ಮುನ್ನ ಸಾರಿಗೆ ನೌಕರರ ಜೊತೆ ಚರ್ಚಿಸಬೇಕು ಎಂದೂ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ಸರ್ಕಾರಕ್ಕೆ ಮನವಿ ಪತ್ರ ನೀಡಿದೆ.

ಪತ್ರದಲ್ಲಿ ಏನಿದೆ? ಮುಷ್ಕರ ಮುಗಿದು ಸುಮಾರು 85 ದಿನಗಳು ಕಳೆದಿವೆ. ಸಾರಿಗೆ ಸಚಿವರು ಮತ್ತು ಆಡಳಿತ ಮಂಡಳಿ ಏಳು ಬೇಡಿಕೆಗಳನ್ನು ಈಡೇರಿಸುವುದಾಗಿ ಹೇಳಿದೆ. ತಾವು ಈಡೇರಿಸಿರುವುದಾಗಿ ಹೇಳುತ್ತಿರುವ ಏಳು ಭರವಸೆಗಳ ಬಗ್ಗೆ ನಮ್ಮೊಂದಿಗೆ ಚರ್ಚೆ ಮಾಡದೆ ಏಕಾಏಕಿ ನಿರ್ಧಾರ ಮಾಡಿ ಸರ್ಕಾರ ಜಾರಿಗೆ ತಂದಿದೆ. ಆ ಏಳು ಭರವಸೆಗಳು ನಾವು ಕೇಳಿದ ರೀತಿಯಲ್ಲಿ ಇಲ್ಲದೇ ಕೇವಲ ಹಳೆಯ ಸುತ್ತೋಲೆ ಮತ್ತು ಹಳೆಯ ಪದ್ಧತಿಗಳಲ್ಲಿ ಅಲ್ಪಸ್ವಲ್ಪ ಬದಲಾವಣೆ ಮಾಡಿ ಹೊಸ ಪದ್ಧತಿಯೆಂದು ಬಿಂಬಿಸುತ್ತಿರುವುದು ಎಷ್ಟರ ಮಟ್ಟಿಗೆ ಸರಿ ಎಂದು ತಿಳಿಯುತ್ತಿಲ್ಲ. ಹೀಗಾಗಿ ಸರ್ಕಾರ ಬೇಡಿಕೆ ಈಡೇರಿಕೆಗೂ ಮುನ್ನ ಸಾರಿಗೆ ನೌಕರರ ಜೊತೆ ಚರ್ಚೆ ನಡೆಸಲಿ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಕೂಟ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದೆ.

ಸರ್ಕಾರ ಡಿಸೆಂಬರ್​ನಲ್ಲಿ ನಮ್ಮ 9 ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿತ್ತು. 9 ರಲ್ಲಿ 7 ಬೇಡಿಕೆಗಳನ್ನ ಈಡೇರಿಸಿದ್ದೇವೆ ಅಂತ ಸರ್ಕಾರ ಸುತ್ತೋಲೆ ಹೊರಡಿಸಿದೆ. ಆರನೇ ವೇತನ ಆಯೋಗ ಜಾರಿಗೆ ತರುವುದು ಮತ್ತು ತರಬೇತಿಯನ್ನ 2 ವರ್ಷದಿಂದ 1 ವರ್ಷಕ್ಕೆ ಇಳಿಸುವುದು ಸೇರಿದಂತೆ ಒಟ್ಟು ಎರಡು ಬೇಡಿಕೆಗಳನ್ನ ಬಿಟ್ಟು ಇನ್ನೆಲ್ಲ ಬೇಡಿಕೆ ಈಡೇರಿಸಿದ್ದೇವೆ ಅಂತಿದ್ದಾರೆ. ಆದರೆ ಆ ಏಳು ಬೇಡಿಕೆ ಈಡೇರಿಕೆಯಲ್ಲೂ ನ್ಯೂನ್ಯತೆ ಇದೆ. ಎನ್ಎಎಂಸಿ ಪೂರ್ಣ ರದ್ದು ಮಾಡಬೇಕು. ಹೊರ ರಾಜ್ಯಗಳಲ್ಲಿ ಇರುವಂತೆ ಟಿಕೆಟ್ ಪಡೆಯದೆ ಇದ್ದರೆ ಗ್ರಾಹಕರನ್ನೆ ನೇರ ಹೊಣೆಗಾರರನ್ನಾಗಿ ಮಾಡಬೇಕು. ಆರನೇ ವೇತನ ಆಯೊಗವನ್ನ ಕೂಡಲೇ ಜಾರಿಗೆ ತರಬೇಕು ಎಂದು ಸಾರಿಗೆ ಇಲಾಖೆಗೆ 5 ಪುಟದ ಮನವಿಯನ್ನ ಸಲ್ಲಿಸುತ್ತಿದ್ದೇವೆ. ಅದರಂತೆ ಸರ್ಕಾರ ಬೇಡಿಕೆಗಳನ್ನ ಈಡೇರಿಸಿದರೆ ನೌಕರರಿಗೆ ಅನುಕೂಲವಾಗುತ್ತದೆ ಎಂದು ಸಾರಿಗೆ ನೌಕರರ ಕೂಟದ ಜಂಟಿ ಕಾರ್ಯದರ್ಶಿ ಆನಂದ್ ತಿಳಿಸಿದ್ದಾರೆ.

ಇದನ್ನೂ ಓದಿ

ಬಜೆಟ್​ನಲ್ಲಿ ಸಾರಿಗೆ ನೌಕರರ ಬೇಡಿಕೆಗಳಿಗೆ ಎಳ್ಳು ನೀರು ಹಿನ್ನೆಲೆ; ಮತ್ತೆ ಮುಷ್ಕರಕ್ಕೆ ಮುಂದಾಗ್ತಾರಾ ಸಾರಿಗೆ ನೌಕರರು?

ಪೆಟ್ರೋಲಿಯಂ ಉತ್ಪನ್ನಗಳ ಬೇಡಿಕೆ ಫೆಬ್ರವರಿಯಲ್ಲಿ ಮತ್ತೆ ಇಳಿಕೆ; 2020ರ ಸೆಪ್ಟೆಂಬರ್ ನಂತರ ಕನಿಷ್ಠ ಪ್ರಮಾಣಕ್ಕೆ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು