ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್ಆರ್​​​ಟಿಸಿ

ಈ ಮೊದಲು ನಷ್ಟದಲ್ಲಿ ಓಡುತ್ತಿದ್ದ ಕೆಎಸ್ಆರ್​ಟಿಸಿ ಬಸ್​​ಗಳ ಸ್ಥಿತಿ ಈಗೀಗ ಸುಧಾರಿಸಿದ್ದು, ಮಾನವ ಅಭಿವೃದ್ಧಿ ಸಂಬಂಧಿಸಿದ ಹಲವು ಕಾರ್ಯಗಳನ್ನು ನಿಗಮವು ಕೈಗೊಳ್ಳುತ್ತಿವೆ. ಇದರ ಫಲವಾಗಿ 2023 ಫೆಬ್ರವರಿಯಲ್ಲಿ ರಾಷ್ಟ್ರ ಮಟ್ಟದ ಪಿಎಸ್​​ಯು (PSU) ಪ್ರಶಸ್ತಿ ಕೂಡ ಸಂಸ್ಥೆಗೆ ದೊರೆತಿತ್ತು.

ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್ಆರ್​​​ಟಿಸಿ
Follow us
| Updated By: Digi Tech Desk

Updated on:Aug 18, 2023 | 11:52 AM

ಬೆಂಗಳೂರು, ಆಗಸ್ಟ್ 17: 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಪಡೆದುಕೊಂಡಿದೆ. ವರ್ಲ್ಡ್ ಸಟ್ಟೈನಬಿಲಿಟಿ ಕಾಂಗ್ರೆಸ್ (World Suatainability Congress) ನೀಡುವ 14ನೇ ಆವೃತ್ತಿಯ 18ನೇ ಪ್ರಶಸ್ತಿಯನ್ನು ಕೆಎಸ್ಆರ್​​ಟಿಸಿ ಸ್ವೀಕರಿಸಿದೆ. ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಪ್ರಶಸ್ತಿ ಲಭಿಸಿದ್ದು, ವರ್ಲ್ಡ್ ಸಟ್ಟೈನಬಿಲಿಟಿ ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ನಿಗಮದ ಪರವಾಗಿ ಮುಖ್ಯ ಲೆಕ್ಕಾಧಿಕಾರಿ ಡಾ. ಲತಾ ಟಿ.ಎಸ್​​ ಅವರು ಪ್ರಶಸ್ತಿ ಸ್ವೀಕರಿಸಿದರು. ಹಳೆ ಬಸ್ಸುಗಳ ನವೀಕರಣ, ಹೊಸ ಬಸ್​ಗಳ ಖರೀದಿ, 13 ಸಾವಿರ ಸಿಬ್ಬಂದಿ ನೇಮಕದಂತಹ ನಿರ್ಧಾರದಿಂದ ಇದು ಸಾಧ್ಯವಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಗುಣಮಟ್ಟದ ಸೇವೆಯನ್ನು ನೀಡಲು ಸಹಕಾರಿಯಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಈ ಮೊದಲು ನಷ್ಟದಲ್ಲಿ ಓಡುತ್ತಿದ್ದ ಕೆಎಸ್ಆರ್​ಟಿಸಿ ಬಸ್​​ಗಳ ಸ್ಥಿತಿ ಈಗೀಗ ಸುಧಾರಿಸಿದ್ದು, ಮಾನವ ಅಭಿವೃದ್ಧಿ ಸಂಬಂಧಿಸಿದ ಹಲವು ಕಾರ್ಯಗಳನ್ನು ನಿಗಮವು ಕೈಗೊಳ್ಳುತ್ತಿವೆ. ಇದರ ಫಲವಾಗಿ 2023 ಫೆಬ್ರವರಿಯಲ್ಲಿ ರಾಷ್ಟ್ರ ಮಟ್ಟದ ಪಿಎಸ್​​ಯು (PSU) ಪ್ರಶಸ್ತಿ ಸಂಸ್ಥೆಗೆ ದೊರೆತಿತ್ತು.

ಹೊಸ ರೂಪ ಪಡೆದುಕೊಂಡ ಹಳೆ ಬಸ್​ಗಳು

ಕೋವಿಡ್ ಸಾಂಕ್ರಾಮಿಕದ ನಂತರ ನಷ್ಟದಲ್ಲಿ ಸಾಗುತ್ತಿದ್ದ ಕೆಎಸ್ಆರ್​ಟಿಸಿಯು ಹಳೆ ಬಸ್​​ಗಳನ್ನು ನವೀಕರಿಸಿ ರಸ್ತೆಗಿಳಿಸುವ ಯೋಜನೆಯನ್ನು ಕೈಗೊಂಡಿದೆ. ಹೊಸ ಬಸ್ ಕೊಳ್ಳುವುದರ ಜತೆಗೆ ಬದಲಾಗಿ ಹಳೆ ಬಸ್​​ಗಳನ್ನೇ ನವೀಕರಿಸಿ ಓಡಿಸುವುದರಿಂದ ಹಣ ಉಳಿತಾಯವಾಗಲಿದೆ ಎಂಬ ಯೋಚನೆಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 10 ಲಕ್ಷ ಕಿಲೋ ಮೀಟರ್ ಸಂಚರಿಸಿದ 8,100 ಬಸ್​​​ಗಳಿದ್ದು, 1000 ಬಸ್​ಗಳನ್ನು ನವೀಕರಿಸಲಾಗುತ್ತಿದೆ. ಬಸ್​​ನಲ್ಲಿ ತುಕ್ಕು ಹಿಡಿದ ಭಾಗಗಳನ್ನು ತೆಗೆದು ಹೊಸ ಭಾಗಗಳನ್ನು ಜೋಡಿಸಿ ಬಸ್​ಗೆ ಹೊಸ ಟಚ್ ನೀಡಲಾಗುತ್ತಿದೆ.

ಇದನ್ನೂ ಓದಿ: ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆಯಂದು KSRTC ಬಸ್​​ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಶಕ್ತಿ ಯೋಜನೆಯಿಂದ ಹೆಚ್ಚಿದ ಜನಸಂಚಾರ

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಸರ್ಕಾರಿ ಬಸ್​​ಗಳ ಬಳಕೆಯು ಹೆಚ್ಚಾಗಿದ್ದು, ಮಹಿಳೆಯರಿಗೆ ಉಚಿತ ಸೇವೆಯನ್ನು ನೀಡುವಲ್ಲಿ ಮುಂಚೂಣಿಯಲ್ಲಿದೆ. ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೇ ಹಲವಾರು ತೀರ್ಥ ಕ್ಷೇತ್ರಗಳಿಗೆ ತೆರಳುವ ಬಸ್​​​ಗಳಲ್ಲಿ ಸಂಚರಿಸುವ ಮಹಿಳೆಯರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ.

ಪರಿಸರಸ್ನೇಹಿ ಬಸ್​ಗಳು

ಕರ್ನಾಟಕ ಸಾರಿಗೆ ಸಂಸ್ಥೆಯು ಪರಿಸರಸ್ನೇಹಿ ಬಸ್​ಗಳಿಗೂ ಸಾಕಷ್ಟು ಒತ್ತು ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಬಯೋ-ಡೀಸೆಲ್ ಆಧಾರಿತ ಬಸ್​ಗಳು ಸಂಚರಿಸುತ್ತಿವೆ. ಬೆಂಗಳೂರು ಮೈಸೂರು ರಸ್ತೆಯಲ್ಲಿ ಇಲೆಕ್ಟ್ರಿಕ್ ಬಸ್​​ಗಳು ಸಂಚರಿಸುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Thu, 17 August 23