AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್ಆರ್​​​ಟಿಸಿ

ಈ ಮೊದಲು ನಷ್ಟದಲ್ಲಿ ಓಡುತ್ತಿದ್ದ ಕೆಎಸ್ಆರ್​ಟಿಸಿ ಬಸ್​​ಗಳ ಸ್ಥಿತಿ ಈಗೀಗ ಸುಧಾರಿಸಿದ್ದು, ಮಾನವ ಅಭಿವೃದ್ಧಿ ಸಂಬಂಧಿಸಿದ ಹಲವು ಕಾರ್ಯಗಳನ್ನು ನಿಗಮವು ಕೈಗೊಳ್ಳುತ್ತಿವೆ. ಇದರ ಫಲವಾಗಿ 2023 ಫೆಬ್ರವರಿಯಲ್ಲಿ ರಾಷ್ಟ್ರ ಮಟ್ಟದ ಪಿಎಸ್​​ಯು (PSU) ಪ್ರಶಸ್ತಿ ಕೂಡ ಸಂಸ್ಥೆಗೆ ದೊರೆತಿತ್ತು.

ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿ ಮುಡಿಗೇರಿಸಿಕೊಂಡ ಕೆಎಸ್ಆರ್​​​ಟಿಸಿ
TV9 Web
| Edited By: |

Updated on:Aug 18, 2023 | 11:52 AM

Share

ಬೆಂಗಳೂರು, ಆಗಸ್ಟ್ 17: 2023ನೇ ಸಾಲಿನ ಏಷ್ಯಾದ ಅತ್ಯುತ್ತಮ ಉದ್ಯೋಗದಾತ ಬ್ರ್ಯಾಂಡ್ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು (KSRTC) ಪಡೆದುಕೊಂಡಿದೆ. ವರ್ಲ್ಡ್ ಸಟ್ಟೈನಬಿಲಿಟಿ ಕಾಂಗ್ರೆಸ್ (World Suatainability Congress) ನೀಡುವ 14ನೇ ಆವೃತ್ತಿಯ 18ನೇ ಪ್ರಶಸ್ತಿಯನ್ನು ಕೆಎಸ್ಆರ್​​ಟಿಸಿ ಸ್ವೀಕರಿಸಿದೆ. ಮಾನವ ಸಂಪನ್ಮೂಲ ಉಪಕ್ರಮಗಳ ಅನುಷ್ಠಾನ ವರ್ಗದಲ್ಲಿ ಪ್ರಶಸ್ತಿ ಲಭಿಸಿದ್ದು, ವರ್ಲ್ಡ್ ಸಟ್ಟೈನಬಿಲಿಟಿ ಕಾಂಗ್ರೆಸ್ ಆಯೋಜಿಸಿದ ಕಾರ್ಯಕ್ರಮದಲ್ಲಿ ಗುರುವಾರ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

ನಿಗಮದ ಪರವಾಗಿ ಮುಖ್ಯ ಲೆಕ್ಕಾಧಿಕಾರಿ ಡಾ. ಲತಾ ಟಿ.ಎಸ್​​ ಅವರು ಪ್ರಶಸ್ತಿ ಸ್ವೀಕರಿಸಿದರು. ಹಳೆ ಬಸ್ಸುಗಳ ನವೀಕರಣ, ಹೊಸ ಬಸ್​ಗಳ ಖರೀದಿ, 13 ಸಾವಿರ ಸಿಬ್ಬಂದಿ ನೇಮಕದಂತಹ ನಿರ್ಧಾರದಿಂದ ಇದು ಸಾಧ್ಯವಾಗಿದ್ದು, ಮುಂಬರುವ ದಿನಗಳಲ್ಲಿ ಇನ್ನೂ ಹೆಚ್ಚಿನ ಗುಣಮಟ್ಟದ ಸೇವೆಯನ್ನು ನೀಡಲು ಸಹಕಾರಿಯಾಗಿದೆ ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಈ ಮೊದಲು ನಷ್ಟದಲ್ಲಿ ಓಡುತ್ತಿದ್ದ ಕೆಎಸ್ಆರ್​ಟಿಸಿ ಬಸ್​​ಗಳ ಸ್ಥಿತಿ ಈಗೀಗ ಸುಧಾರಿಸಿದ್ದು, ಮಾನವ ಅಭಿವೃದ್ಧಿ ಸಂಬಂಧಿಸಿದ ಹಲವು ಕಾರ್ಯಗಳನ್ನು ನಿಗಮವು ಕೈಗೊಳ್ಳುತ್ತಿವೆ. ಇದರ ಫಲವಾಗಿ 2023 ಫೆಬ್ರವರಿಯಲ್ಲಿ ರಾಷ್ಟ್ರ ಮಟ್ಟದ ಪಿಎಸ್​​ಯು (PSU) ಪ್ರಶಸ್ತಿ ಸಂಸ್ಥೆಗೆ ದೊರೆತಿತ್ತು.

ಹೊಸ ರೂಪ ಪಡೆದುಕೊಂಡ ಹಳೆ ಬಸ್​ಗಳು

ಕೋವಿಡ್ ಸಾಂಕ್ರಾಮಿಕದ ನಂತರ ನಷ್ಟದಲ್ಲಿ ಸಾಗುತ್ತಿದ್ದ ಕೆಎಸ್ಆರ್​ಟಿಸಿಯು ಹಳೆ ಬಸ್​​ಗಳನ್ನು ನವೀಕರಿಸಿ ರಸ್ತೆಗಿಳಿಸುವ ಯೋಜನೆಯನ್ನು ಕೈಗೊಂಡಿದೆ. ಹೊಸ ಬಸ್ ಕೊಳ್ಳುವುದರ ಜತೆಗೆ ಬದಲಾಗಿ ಹಳೆ ಬಸ್​​ಗಳನ್ನೇ ನವೀಕರಿಸಿ ಓಡಿಸುವುದರಿಂದ ಹಣ ಉಳಿತಾಯವಾಗಲಿದೆ ಎಂಬ ಯೋಚನೆಯೊಂದಿಗೆ ಈ ಕ್ರಮ ಕೈಗೊಳ್ಳಲಾಗಿದೆ. ರಾಜ್ಯದಲ್ಲಿ 10 ಲಕ್ಷ ಕಿಲೋ ಮೀಟರ್ ಸಂಚರಿಸಿದ 8,100 ಬಸ್​​​ಗಳಿದ್ದು, 1000 ಬಸ್​ಗಳನ್ನು ನವೀಕರಿಸಲಾಗುತ್ತಿದೆ. ಬಸ್​​ನಲ್ಲಿ ತುಕ್ಕು ಹಿಡಿದ ಭಾಗಗಳನ್ನು ತೆಗೆದು ಹೊಸ ಭಾಗಗಳನ್ನು ಜೋಡಿಸಿ ಬಸ್​ಗೆ ಹೊಸ ಟಚ್ ನೀಡಲಾಗುತ್ತಿದೆ.

ಇದನ್ನೂ ಓದಿ: ದ್ವಿತೀಯ ಪಿಯು 2ನೇ ಪೂರಕ ಪರೀಕ್ಷೆಯಂದು KSRTC ಬಸ್​​ನಲ್ಲಿ ವಿದ್ಯಾರ್ಥಿಗಳಿಗೆ ಉಚಿತ ಪ್ರಯಾಣಕ್ಕೆ ಅವಕಾಶ

ಶಕ್ತಿ ಯೋಜನೆಯಿಂದ ಹೆಚ್ಚಿದ ಜನಸಂಚಾರ

ರಾಜ್ಯದಲ್ಲಿ ಶಕ್ತಿ ಯೋಜನೆ ಜಾರಿಯಾದ ಹಿನ್ನಲೆಯಲ್ಲಿ ಸರ್ಕಾರಿ ಬಸ್​​ಗಳ ಬಳಕೆಯು ಹೆಚ್ಚಾಗಿದ್ದು, ಮಹಿಳೆಯರಿಗೆ ಉಚಿತ ಸೇವೆಯನ್ನು ನೀಡುವಲ್ಲಿ ಮುಂಚೂಣಿಯಲ್ಲಿದೆ. ಕೇವಲ ನಗರ ಪ್ರದೇಶಗಳಲ್ಲಿ ಮಾತ್ರವಲ್ಲದೇ ಹಲವಾರು ತೀರ್ಥ ಕ್ಷೇತ್ರಗಳಿಗೆ ತೆರಳುವ ಬಸ್​​​ಗಳಲ್ಲಿ ಸಂಚರಿಸುವ ಮಹಿಳೆಯರ ಸಂಖ್ಯೆಯಲ್ಲಿಯೂ ಹೆಚ್ಚಳವಾಗಿದೆ.

ಪರಿಸರಸ್ನೇಹಿ ಬಸ್​ಗಳು

ಕರ್ನಾಟಕ ಸಾರಿಗೆ ಸಂಸ್ಥೆಯು ಪರಿಸರಸ್ನೇಹಿ ಬಸ್​ಗಳಿಗೂ ಸಾಕಷ್ಟು ಒತ್ತು ನೀಡಿದೆ. ಈಗಾಗಲೇ ರಾಜ್ಯದ ಹಲವೆಡೆ ಬಯೋ-ಡೀಸೆಲ್ ಆಧಾರಿತ ಬಸ್​ಗಳು ಸಂಚರಿಸುತ್ತಿವೆ. ಬೆಂಗಳೂರು ಮೈಸೂರು ರಸ್ತೆಯಲ್ಲಿ ಇಲೆಕ್ಟ್ರಿಕ್ ಬಸ್​​ಗಳು ಸಂಚರಿಸುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:51 pm, Thu, 17 August 23

ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
49 ಎಸೆತಗಳಲ್ಲಿ ಸ್ಫೋಟಕ ಶತಕ ಸಿಡಿಸಿದ ಇಶಾನ್ ಕಿಶನ್
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ
ಊಟಿಯಂತಾದ ಕೋಲಾರ, ರಸ್ತೆ ಕಾಣದೇ ವಾಹನ ಸವಾರರು ಪರದಾಟ