AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

6 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ: 8 ತಿಂಗಳಲ್ಲಿ 51 ಪ್ರಶಸ್ತಿಗಳ ಗರಿಮೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ವರ್ಲ್ಡ್ ಮ್ಯಾನುಫ್ಯಾಕ್ಚರಿಂಗ್ ಕಾಂಗ್ರೆಸ್ ಹಾಗೂ ವರ್ಲ್ಡ್ ಮಾರ್ಕೆಟಿಂಗ್ ಕಾಂಗ್ರೆಸ್ 5 ಪ್ರಶಸ್ತಿಗಳು ಹಾಗೂ ನಿಗಮ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಅವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿರುತ್ತದೆ. ಇಂದು ಮುಂಬೈನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗಿದೆ.

6 ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ: 8 ತಿಂಗಳಲ್ಲಿ 51 ಪ್ರಶಸ್ತಿಗಳ ಗರಿಮೆ
ಪ್ರಶಸ್ತಿ ಸ್ವೀಕರಿಸಿದ ಗಣ್ಯರು
ಗಂಗಾಧರ​ ಬ. ಸಾಬೋಜಿ
|

Updated on:Feb 18, 2024 | 6:38 PM

Share

ಮುಂಬೈ, ಫೆಬ್ರವರಿ 18: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಕ್ಕೆ ವರ್ಲ್ಡ್ ಮ್ಯಾನುಫ್ಯಾಕ್ಚರಿಂಗ್ ಕಾಂಗ್ರೆಸ್ (World Manufacturing Congress) ಹಾಗೂ ವರ್ಲ್ಡ್ ಮಾರ್ಕೆಟಿಂಗ್ ಕಾಂಗ್ರೆಸ್ (World Marketing Congress) 5 ಪ್ರಶಸ್ತಿಗಳು ಹಾಗೂ ನಿಗಮ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿರುತ್ತದೆ. ಇಂದು ಮುಂಬೈನಲ್ಲಿ ಆಯೋಜಿಸಲಾಗಿದ್ದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಯುನೈಟೆಡ್ ಸ್ಟೇಟ್ಸ್​​ನ ನಿನಾ ಇ ಉಡರ್ಡ ಅಸೋಸಿಯೇಟ್ಸ್​ ಅಧ್ಯಕ್ಷರು ಹಾಗೂ ಮುಖ್ಯಸ್ಥರು ಮಿಸ್. ನಿನಾ ಇ ಉಡರ್ಡ ಹಾಗೂ ದುಬೈನ ಓಝೋನ್ ಗ್ರೂಪ್​ ಮಾಲೀಕರು ಮತ್ತು ಸಂಸ್ಥಾಪಕರಾದ ಡಾ. ಓವಿಲಿಯಾ ಫೆರ್ನಾಂಡಿಸ್​ ಅವರು ನಿಗಮಕ್ಕೆ ಪ್ರಶಸ್ತಿಗಳನ್ನು ಪ್ರದಾನ ಮಾಡಿದ್ದಾರೆ.

ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್ ಅವರಿಗೆ ವಿಶ್ವ ಮಾರ್ಕೆಟಿಂಗ್ ಉತ್ಕೃಷ್ಟತೆಗಾಗಿ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿಯನ್ನು ಪ್ರದಾನ ಮಾಡಲಾಗಿದೆ.

ಇದನ್ನೂ ಓದಿ: ಕೆಎಸ್​ಆರ್​ಟಿಸಿಯ ಶಕ್ತಿ ಯೋಜನೆಗೆ ಒಲಿದು ಬಂದ SKOCH ರಾಷ್ಟ್ರೀಯ ಪ್ರಶಸ್ತಿ; ಕಾರ್ಮಿಕ ಕಲ್ಯಾಣಕ್ಕೂ ಪ್ರಶಸ್ತಿ

ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಲತಾ ಟಿ.ಎಸ್, ವಿಭಾಗೀಯ ತಾಂತ್ರಿಕ ಅಭಿಯಂತರರು ಹೆಚ್​​ಎಸ್​ ಸತೀಶ್, ವಿಭಾಗೀಯ ತಾಂತ್ರಿಕ ಶಿಲ್ಪಿ ಸೌಮ್ಯ ಸಿ ಹಾಗೂ ಸಹಾಯಕ ಆಡಳಿತಾಧಿಕಾರಿ ಶಿಬಾ.ಎಸ್​ ಅವರು ನಿಗಮದ ಪರವಾಗಿ ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

ನಿಗಮಕ್ಕೆ ಈ ಕೆಳಕಂಡ ವರ್ಗಗಳಲ್ಲಿ ಪ್ರಶಸ್ತಿ ಲಭಿಸಿದೆ

  1. ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ. ಇ.ವಿ.ಪವರ್ ಪ್ಲಸ್​​
  2. ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ: ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮ
  3. ವರ್ಷದ ವ್ಯಾವಹಾರಿಕ ನಾಯಕತ್ವ ಪ್ರಶಸ್ತಿ: ಅತ್ಯುತ್ತಮ ವಿನೂತನ ಉಪಕ್ರಮಸಂಸ್ಥೆ
  4. ಜಾಗತಿಕ ಮಾನವ ಸಂಪನ್ಮೂಲ ಉತ್ಕೃಷ್ಟತೆ ಪ್ರಶಸ್ತಿ: ಕಾರ್ಮಿಕರೊಂದಿಗೆ ಉತ್ತಮ ಭಾಂದವ್ಯ ಹೊಂದಿರುವ ಸಂಸ್ಥೆ
  5. ಜಾಗತಿಕ ಅತ್ಯುತ್ತಮ ಉದ್ಯೋಗದಾತ ಬ್ರಾಂಡ್ ಪ್ರಶಸ್ತಿ: ಜಾಗತಿಕ ಮಾನವ ಸಂಪನ್ಮೂಲ ಉಪಕ್ರಮ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 6:34 pm, Sun, 18 February 24

Follow Us
Gangadhar Saboji
Gangadhar Saboji

ಬಾಗಲಕೋಟೆ ಜಿಲ್ಲೆಯ ರಬಕವಿ-ಬನಹಟ್ಟಿ ತಾಲೂಕಿನ ರಬಕವಿ ನನ್ನೂರು. ಡಿಗ್ರಿ ಬಳಿಕ ಮನಸ್ಸು ವಾಲಿದ್ದು ಮಾಧ್ಯಮ ಕ್ಷೇತ್ರದ ಕಡೆ. ಹಾಗಾಗಿ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಂಎ ಪತ್ರಿಕೋದ್ಯಮ ಪದವಿ ಮಾಡಿದೆ. ಆ ಸಂದರ್ಭದಲ್ಲಿಯೇ ಲೋಕಲ್ ಚಾನೆಲ್​ನಲ್ಲಿ ಸುದ್ದಿ ಬರವಣಿಗೆ, ಆ್ಯಂಕರಿಂಗ್​, ವೈಯಿಸ್​ ಓವರ್​, ಎಡಿಟಿಂಗ್​ ಕಲಿಕೆ. ಬಳಿಕ ಟಿವಿ6 ಸುದ್ದಿ ವಾಹಿನಿಯಲ್ಲಿ ಇಂಟರ್ನ್‌ಶಿಪ್. ನಂತರ ದಾವಣಗೆರೆ ವಿಶ್ವವಿದ್ಯಾಲಯದಲ್ಲಿ ಬೋಧನಾ ಸಹಾಯಕನಾಗಿ ನನ್ನ ಜ್ಞಾನವನ್ನು ಇತತರಿಗೆ ಹಂಚುವ ಕೆಲಸ. ಇದೀಗ ‘ಉತ್ತಮ ಸಮಾಜಕ್ಕಾಗಿ’ ನನ್ನ ಕಾಯಕ. ಓದು, ಬರವಣಿಗೆ, ಸಿನಿಮಾ ನನ್ನ ಆಸಕ್ತಿ.

Read More
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕಾಣೆಯಾದ ಹುಡುಗಿಯನ್ನು ಹುಡುಕಲು ಗಾಡಿಯಲ್ಲಿ ಡೀಸೆಲ್ ಇಲ್ಲ ಎಂದ ಪೊಲೀಸ್
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
ಕೈದಿಗಳಿಗೆ ಅಲೋಕ್ ಕುಮಾರ್ ಬಿಗ್ ಶಾಕ್: ಜೈಲುಗಳಲ್ಲಿ ಭಾರಿ ಬದಲಾವಣೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
3 ದಿನಗಳಿಂದ ವಿದ್ಯುತ್​​ ಕಡಿತ: ಹೆಸ್ಕಾಂ ವಿರುದ್ಧ ಸಾರ್ವಜನಿಕರ ಪ್ರತಿಭಟನೆ
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಹಿರಿಯೂರು ಉಪಚುನಾವಣೆ ಮೇಲೆ ಜೆಡಿಎಸ್​​ ಕಣ್ಣು: ದಳಪತಿಗಳ ಲೆಕ್ಕಾಚಾರವೇನು?
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಗುರು ಸಂಚಾರದಿಂದ ಮಿಥುನ ರಾಶಿಯವರಿಗೆ ಆರ್ಥಿಕ ವೃದ್ಧಿ ಮತ್ತು ಶುಭ ಯೋಗ ಶುರು
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ಪ್ರವಾಸಿಗರ ಕ್ಯಾಮೆರಾಗೆ ಬಿಂದಾಸ್ ಪೋಸ್ ನೀಡಿದ ಜೋಡಿ ಹುಲಿಗಳು!
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವಸ್ತುಗಳನ್ನು ಮನೆಗೆ ಕೊಡಲು ಬಂದ ಡೆಲಿವರಿ ಬಾಯ್ ಮಾಡಿದ್ದೇನು ನೋಡಿ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ವನ್ಯಜೀವಿ ಛಾಯಾಗ್ರಾಹಕಿಯಾದ ಸೋನಲ್ ಮೊಂತೆರೋ
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!
ಸಂಜೆಯಾದರೆ ರಸ್ತೆಗಿಳಿಯುವ ಈ ಒಂಟಿ ಸಲಗಕ್ಕೆ ವಾಹನಗಳೇ ಟಾರ್ಗೆಟ್!