AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್

ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
Follow us
shruti hegde
|

Updated on:May 05, 2021 | 3:20 PM

ಬೆಂಗಳೂರು: ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತಂತೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​, ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಬೇಸಿಗೆ ರಜೆಯ ಕುರಿತಾಗಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ  ಬಗ್ಗೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​,  ಪ್ರಾಥಮಿಕ ಶಾಲೆಗಳಿಗೆ ಜೂನ್ 14ರವರೆಗೂ ಹಾಗೂ ಪ್ರೌಢ ಶಾಲೆಗಳಿಗೆ ಮೇ 31ರವರೆಗೂ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರೌಢ ಶಾಲೆಯ ಶಿಕ್ಷಕರು ರಜೆಯ ಅವಧಿಯಲ್ಲಿ ಎಸ್​ಎಸ್​ಎಲ್​ಸಿ ಮಕ್ಕಳ ಪರೀಕ್ಷಾ ಸಿದ್ಧತೆ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳ ಜತೆ ದೂರವಾಣಿ ಸಂಪರ್ಕದಲ್ಲಿರಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಕೆ ಬಗ್ಗೆ ಪ್ರೇರೇಪಿಸಬೇಕು. ಜೂನ್ 1ರಿಂದ 14ರವರೆಗೆ SSLC ವಿದ್ಯಾರ್ಥಿಗಳಿಗೆ ಪುನರ್​ಮನನ ತರಗತಿ ಆರಂಭವಾಗುತ್ತದೆ. ಇನ್ನು ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಪ್ರಾರಂಭವಾಗುತ್ತದೆ. ಈ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಪಾಯಕಾರಿ ಮಟ್ಟಕ್ಕೆ ವಾಯುಮಾಲಿನ್ಯ; ನೇಪಾಳದಲ್ಲಿ ಶಾಲೆಗಳಿಗೆ ರಜೆ ಘೋಷಣೆ

Published On - 2:45 pm, Wed, 5 May 21

‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
‘ಥಗ್ ಲೈಫ್’ ರಿಲೀಸ್ ಆದರೂ ನೋಡಬೇಡಿ: ಶ್ರೀನಗರ ಕಿಟ್ಟಿ
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ಗುಡ್ಡ ಕುಸಿತ: ಮನೆಗೆ ನುಗ್ಗಿದ ನೀರು,ಮಣ್ಣು:ಮನೆಯವರ ಪ್ರಾಣ ಉಳಿಸಿತು ಮದ್ವೆ!
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ರಾಜ್ಯ ಬಿಜೆಪಿ ಶುದ್ಧೀಕರಣಯಾಗದ ಹೊರತು ವಾಪಸ್ಸು ಹೋಗಲ್ಲ: ಈಶ್ವರಪ್ಪ
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮೃತ ರೇಣುಕಾ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕ್ಲರ್ಕ್ ಆಗಿ ಕೆಲಸ ಮಾಡುತ್ತಿದ್ದರು
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಮಹಿಳೆಯ ಚಿಕಿತ್ಸೆಗೆ ಹಣ ನೀಡಿರುವ ಯುವ ರಾಜ್​ಕುಮಾರ್ ತಂಡ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಕೇವಲ ಬೆರಳೆಣಿಕೆಯಷ್ಟು ಜನ
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ವಿಮಾನ ಅಪಘಾತದ ವೇಳೆ ಹಾಸ್ಟೆಲ್​ನಿಂದ ಹಾರಿದ ವೈದ್ಯಕೀಯ ವಿದ್ಯಾರ್ಥಿಗಳು
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ರಸ್ತೆ ಪಕ್ಕದ ಕಟ್ಟೆ ಮೇಲೆ ಕುಳಿತು ಘರ್ಜಿಸಿದ ಹುಲಿ: ಅಪರೂಪದ ದೃಶ್ಯ ಇಲ್ಲಿದೆ
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಈಡಿ ಸಮನ್ಸ್ ಮತ್ತು ನೋಟೀಸುಗಳು ನಮಗೆ ಹೊಸದೇನಲ್ಲ: ಶಿವಕುಮಾರ್
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ
ಬೇರೆ ಘಟನೆ ಉಲ್ಲೇಖಿಸಿ ಸಿಎಂ ಹೊಣೆಗಾರಿಕೆ ತಪ್ಪಿಸಿಕೊಳ್ಳುತ್ತಿದ್ದಾರೆ: ರವಿ