AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್

ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
shruti hegde
|

Updated on:May 05, 2021 | 3:20 PM

Share

ಬೆಂಗಳೂರು: ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತಂತೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​, ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಬೇಸಿಗೆ ರಜೆಯ ಕುರಿತಾಗಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ  ಬಗ್ಗೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​,  ಪ್ರಾಥಮಿಕ ಶಾಲೆಗಳಿಗೆ ಜೂನ್ 14ರವರೆಗೂ ಹಾಗೂ ಪ್ರೌಢ ಶಾಲೆಗಳಿಗೆ ಮೇ 31ರವರೆಗೂ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರೌಢ ಶಾಲೆಯ ಶಿಕ್ಷಕರು ರಜೆಯ ಅವಧಿಯಲ್ಲಿ ಎಸ್​ಎಸ್​ಎಲ್​ಸಿ ಮಕ್ಕಳ ಪರೀಕ್ಷಾ ಸಿದ್ಧತೆ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳ ಜತೆ ದೂರವಾಣಿ ಸಂಪರ್ಕದಲ್ಲಿರಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಕೆ ಬಗ್ಗೆ ಪ್ರೇರೇಪಿಸಬೇಕು. ಜೂನ್ 1ರಿಂದ 14ರವರೆಗೆ SSLC ವಿದ್ಯಾರ್ಥಿಗಳಿಗೆ ಪುನರ್​ಮನನ ತರಗತಿ ಆರಂಭವಾಗುತ್ತದೆ. ಇನ್ನು ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಪ್ರಾರಂಭವಾಗುತ್ತದೆ. ಈ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಪಾಯಕಾರಿ ಮಟ್ಟಕ್ಕೆ ವಾಯುಮಾಲಿನ್ಯ; ನೇಪಾಳದಲ್ಲಿ ಶಾಲೆಗಳಿಗೆ ರಜೆ ಘೋಷಣೆ

Published On - 2:45 pm, Wed, 5 May 21

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ