AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್

ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಸಚಿವ ಸುರೇಶ್​ ಕುಮಾರ್​ ಹೇಳಿದ್ದಾರೆ.

ರಾಜ್ಯದ ಶಾಲೆಗಳ ಬೇಸಿಗೆ ರಜಾ ಅವಧಿ ಪರಿಷ್ಕರಣೆ: ಸಚಿವ ಸುರೇಶ್​ ಕುಮಾರ್
ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್
shruti hegde
|

Updated on:May 05, 2021 | 3:20 PM

Share

ಬೆಂಗಳೂರು: ಕೊರೊನಾ ಸೋಂಕು ದೇಶದಲ್ಲಿ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದ ಶಾಲೆಗಳಿಗೆ ಬೇಸಿಗೆ ರಜೆ ಅವಧಿ ವಿಸ್ತರಿಸಲಾಗಿದೆ. ಈ ಕುರಿತಂತೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​, ಕೊವಿಡ್ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶಾಲೆಗಳನ್ನು ಮುಚ್ಚಲಾಗಿದ್ದು, ಪ್ರಸಕ್ತ ಸನ್ನಿವೇಶವನ್ನು ಗಮನದಲ್ಲಿರಿಸಿ 2020-21 ನೇ ಸಾಲಿನ ರಜಾವಧಿಯನ್ನು ಪರಿಷ್ಕರಿಸಲಾಗಿದೆ ಎಂದು ಹೇಳಿದ್ದಾರೆ.

ಬೇಸಿಗೆ ರಜೆಯ ಕುರಿತಾಗಿ ಶಿಕ್ಷಣ ಇಲಾಖೆ ಹೊರಡಿಸಿರುವ ಸುತ್ತೋಲೆ  ಬಗ್ಗೆ ಮಾತನಾಡಿದ ಸಚಿವ ಸುರೇಶ್​ ಕುಮಾರ್​,  ಪ್ರಾಥಮಿಕ ಶಾಲೆಗಳಿಗೆ ಜೂನ್ 14ರವರೆಗೂ ಹಾಗೂ ಪ್ರೌಢ ಶಾಲೆಗಳಿಗೆ ಮೇ 31ರವರೆಗೂ ಬೇಸಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಾಹಿತಿ ಹಂಚಿಕೊಂಡಿದ್ದಾರೆ.

ಪ್ರೌಢ ಶಾಲೆಯ ಶಿಕ್ಷಕರು ರಜೆಯ ಅವಧಿಯಲ್ಲಿ ಎಸ್​ಎಸ್​ಎಲ್​ಸಿ ಮಕ್ಕಳ ಪರೀಕ್ಷಾ ಸಿದ್ಧತೆ ಬಗ್ಗೆ ಗಮನ ಹರಿಸಬೇಕು. ವಿದ್ಯಾರ್ಥಿಗಳ ಜತೆ ದೂರವಾಣಿ ಸಂಪರ್ಕದಲ್ಲಿರಬೇಕು. ಶಿಕ್ಷಕರು ವಿದ್ಯಾರ್ಥಿಗಳಿಗೆ ಕಲಿಕೆ ಬಗ್ಗೆ ಪ್ರೇರೇಪಿಸಬೇಕು. ಜೂನ್ 1ರಿಂದ 14ರವರೆಗೆ SSLC ವಿದ್ಯಾರ್ಥಿಗಳಿಗೆ ಪುನರ್​ಮನನ ತರಗತಿ ಆರಂಭವಾಗುತ್ತದೆ. ಇನ್ನು ಜೂನ್ 15ರಿಂದ 8 ಮತ್ತು 9ನೇ ತರಗತಿಗಳು ಪ್ರಾರಂಭವಾಗುತ್ತದೆ. ಈ ಕುರಿತಂತೆ ರಾಜ್ಯ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಅಪಾಯಕಾರಿ ಮಟ್ಟಕ್ಕೆ ವಾಯುಮಾಲಿನ್ಯ; ನೇಪಾಳದಲ್ಲಿ ಶಾಲೆಗಳಿಗೆ ರಜೆ ಘೋಷಣೆ

Published On - 2:45 pm, Wed, 5 May 21

Follow Us
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಗ್ಯಾರಂಟಿ ಯೋಜನೆಗಳ ಬಗ್ಗೆ ಕಟ್ಟು ನಿಟ್ಟಿನ ಕ್ರಮ:ಸಿಎಂ ಕೊಟ್ಟ ಸೂಚನೆಗಳೇನು?
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಬಹು ನಿರೀಕ್ಷಿತ ‘ಕರಾವಳಿ’ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
ಗ್ಯಾರಂಟಿ ಯೋಜನೆಗಳ ಪರಿಷ್ಕರಣೆ ಬಗ್ಗೆ ಬಿಗ್​​ ಅಪ್ಡೇಟ್​ ಕೊಟ್ಟ ರೇವಣ್ಣ
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು
‘ಬಲರಾಮನ ದಿನಗಳು’ ಸಿನಿಮಾ ಬಗ್ಗೆ ಗೆಳೆಯರಾದ ವಿಜಯ್-ಬುಜ್ಜಿ ಮಾತು