AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಗಡಿನಾಡು ಚಾಮರಾಜನಗರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮೊಳಗಿತು. ನಡುರಸ್ತೆಯಲ್ಲಿ ಘಂಟೆ ಬಾರಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಚಾಮರಾಜನಗರದಲ್ಲಿ ಸಚಿವ ಕೆ.ವೆಂಕಟೇಶ್​​ ನೇತೃತ್ವದಲ್ಲಿ ಜನತಾ ದರ್ಶನ ನಡೀತಿತ್ತು. ಆದರೆ, ಸಚಿವರ ಭೇಟಿಗಾಗಿ ರೈತರು ಖಾಲಿ ಮಡಿಕೆ ಹಿಡಿದು ಬಂದ್ರು. ಇದಕ್ಕೆ ಪೊಲೀಸರು ಅಡ್ಡಿಪಡಿಸಿದಾಗ ವಾಗ್ವಾದ ನಡೀತು.

ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ
ಮೈಸೂರಿನಲ್ಲಿ ಸಚಿವ ಮಹದೇವಪ್ಪ ಕಾರಿಗೆ ಪ್ರತಿಭಟನಾ ನಿರತರಿಂದ ಮುತ್ತಿಗೆ
TV9 Web
| Edited By: |

Updated on: Sep 25, 2023 | 8:28 PM

Share

ಬೆಂಗಳೂರು, ಸೆಪ್ಟೆಂಬರ್ 25: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ಸೋಮವಾರವೂ ರಾಜ್ಯದಾದ್ಯಂತ ಪ್ರತಿಭಟನೆಗಳು (Protest) ನಡೆದಿವೆ. ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಮೈಸೂರಿನಲ್ಲಿ ಸಚಿವ ಮಹದೇವಪ್ಪ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರವೂ ಧರಣಿ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಬಂದ್ ಇರಲಿದೆ. ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ, ರಾಜ್ಯದಲ್ಲಿ ಪ್ರತಿಭಟನೆ ಮುಂದುವರಿದಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ನಡೆದ ಧರಣಿಯಲ್ಲಿ ಹಿರಿಯ ನಟಿ ಲೀಲಾವತಿ, ಪುತ್ರ ವಿನೋದ್ ರಾಜ್​​ಕುಮಾರ್ ಭಾಗವಹಿಸಿದ್ದಾರೆ.

ಹಾಸನದಲ್ಲೂ ಆಕ್ರೋಶ ಭುಗಿಲೆದ್ದಿತ್ತು. ಹೇಮಾವತಿ ಜಲಾಶಯದ ನೀರು ಬಿಡುಗಡೆ ಖಂಡಿಸಿ, ಹೋರಾಟಗಾರರು ಡ್ಯಾಂಗೆ ಮುತ್ತಿಗೆ ಹಾಕಲು ಮುಂದಾದ್ರು. ಗೇಟ್​​ ಹತ್ತಲು ಒಳನುಗ್ಗಲು ಯತ್ನಿಸಿದವ್ರನ್ನ ಪೊಲೀಸರು ತಡೆದ್ರು. ಇನ್ನು, ಜೆಡಿಎಸ್​​​ ಕಾರ್ಯಕರ್ತರು ಕೂಡ ರಸ್ತೆಗೆ ಇಳಿದಿದ್ರು. ಗೊರೂರು-ಅರಕಲಗೂಡು ರಸ್ತೆ ತಡೆದು ಆಕ್ರೋಶ ಹೊರಹಾಕಿದ್ರು. ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಗುಟುರು ಹಾಕಿದ್ರು.

ಗಡಿನಾಡು ಚಾಮರಾಜನಗರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮೊಳಗಿತು. ನಡುರಸ್ತೆಯಲ್ಲಿ ಘಂಟೆ ಬಾರಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಚಾಮರಾಜನಗರದಲ್ಲಿ ಸಚಿವ ಕೆ.ವೆಂಕಟೇಶ್​​ ನೇತೃತ್ವದಲ್ಲಿ ಜನತಾ ದರ್ಶನ ನಡೀತಿತ್ತು. ಆದರೆ, ಸಚಿವರ ಭೇಟಿಗಾಗಿ ರೈತರು ಖಾಲಿ ಮಡಿಕೆ ಹಿಡಿದು ಬಂದ್ರು. ಇದಕ್ಕೆ ಪೊಲೀಸರು ಅಡ್ಡಿಪಡಿಸಿದಾಗ ವಾಗ್ವಾದ ನಡೀತು.

ಇದನ್ನೂ ಓದಿ: ಬೆಂಗಳೂರು ಬಂದ್: ನಾಳೆ ಏನೇನು ಇರುತ್ತೆ? ಏನೇನು ಇರುವುದಿಲ್ಲ?

ಭದ್ರಾ ನೀರಿಗಾಗಿ ದಾವಣಗೆರೆ ಬಂದ್​​

ಭದ್ರಾ ಡ್ಯಾಂನಿಂದ ಕಾಲುವೆಗಳಿಗೆ ನೀರು ಸ್ಥಗಿತಮಾಡಿರೋದರ ವಿರುದ್ಧ, ದಾವಣಗೆರೆ ಬಂದ್​ಗೆ ರೈತ ಒಕ್ಕೂಟ ಕರೆ ಕೊಟ್ಟಿತ್ತು. ಬಂದ್​​ಗೆ ಕೆಲವರು ಸ್ವಯಂಪ್ರೇರಿತರಾಗಿ ಅಂಗಡಿಮುಂಗಟ್ಟು ಬಂದ್ ಮಾಡಿದ್ರು. ಮತ್ತೆ ಕೆಲವೆಡೆ ಒತ್ತಾಯಪೂರ್ವಕವಾಗಿ ಅಂಗಡಿ ಕ್ಲೋಸ್ ಮಾಡಿಸಿದ್ರು. ಸರ್ಕಾರಿ ಸಾರಿಗೆ ಬಸ್​​ಗಳನ್ನ ತಡೆದು ರೈತರು ಪ್ರತಿಭಟನೆ ನಡೆಸಿದ್ರು.

Follow Us
Web contact
Web contact

TV9 Kannada

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?