Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಗಡಿನಾಡು ಚಾಮರಾಜನಗರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮೊಳಗಿತು. ನಡುರಸ್ತೆಯಲ್ಲಿ ಘಂಟೆ ಬಾರಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಚಾಮರಾಜನಗರದಲ್ಲಿ ಸಚಿವ ಕೆ.ವೆಂಕಟೇಶ್​​ ನೇತೃತ್ವದಲ್ಲಿ ಜನತಾ ದರ್ಶನ ನಡೀತಿತ್ತು. ಆದರೆ, ಸಚಿವರ ಭೇಟಿಗಾಗಿ ರೈತರು ಖಾಲಿ ಮಡಿಕೆ ಹಿಡಿದು ಬಂದ್ರು. ಇದಕ್ಕೆ ಪೊಲೀಸರು ಅಡ್ಡಿಪಡಿಸಿದಾಗ ವಾಗ್ವಾದ ನಡೀತು.

ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ
ಮೈಸೂರಿನಲ್ಲಿ ಸಚಿವ ಮಹದೇವಪ್ಪ ಕಾರಿಗೆ ಪ್ರತಿಭಟನಾ ನಿರತರಿಂದ ಮುತ್ತಿಗೆ
Follow us
TV9 Web
| Updated By: Ganapathi Sharma

Updated on: Sep 25, 2023 | 8:28 PM

ಬೆಂಗಳೂರು, ಸೆಪ್ಟೆಂಬರ್ 25: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ಸೋಮವಾರವೂ ರಾಜ್ಯದಾದ್ಯಂತ ಪ್ರತಿಭಟನೆಗಳು (Protest) ನಡೆದಿವೆ. ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಮೈಸೂರಿನಲ್ಲಿ ಸಚಿವ ಮಹದೇವಪ್ಪ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರವೂ ಧರಣಿ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಬಂದ್ ಇರಲಿದೆ. ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ, ರಾಜ್ಯದಲ್ಲಿ ಪ್ರತಿಭಟನೆ ಮುಂದುವರಿದಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ನಡೆದ ಧರಣಿಯಲ್ಲಿ ಹಿರಿಯ ನಟಿ ಲೀಲಾವತಿ, ಪುತ್ರ ವಿನೋದ್ ರಾಜ್​​ಕುಮಾರ್ ಭಾಗವಹಿಸಿದ್ದಾರೆ.

ಹಾಸನದಲ್ಲೂ ಆಕ್ರೋಶ ಭುಗಿಲೆದ್ದಿತ್ತು. ಹೇಮಾವತಿ ಜಲಾಶಯದ ನೀರು ಬಿಡುಗಡೆ ಖಂಡಿಸಿ, ಹೋರಾಟಗಾರರು ಡ್ಯಾಂಗೆ ಮುತ್ತಿಗೆ ಹಾಕಲು ಮುಂದಾದ್ರು. ಗೇಟ್​​ ಹತ್ತಲು ಒಳನುಗ್ಗಲು ಯತ್ನಿಸಿದವ್ರನ್ನ ಪೊಲೀಸರು ತಡೆದ್ರು. ಇನ್ನು, ಜೆಡಿಎಸ್​​​ ಕಾರ್ಯಕರ್ತರು ಕೂಡ ರಸ್ತೆಗೆ ಇಳಿದಿದ್ರು. ಗೊರೂರು-ಅರಕಲಗೂಡು ರಸ್ತೆ ತಡೆದು ಆಕ್ರೋಶ ಹೊರಹಾಕಿದ್ರು. ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಗುಟುರು ಹಾಕಿದ್ರು.

ಗಡಿನಾಡು ಚಾಮರಾಜನಗರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮೊಳಗಿತು. ನಡುರಸ್ತೆಯಲ್ಲಿ ಘಂಟೆ ಬಾರಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಚಾಮರಾಜನಗರದಲ್ಲಿ ಸಚಿವ ಕೆ.ವೆಂಕಟೇಶ್​​ ನೇತೃತ್ವದಲ್ಲಿ ಜನತಾ ದರ್ಶನ ನಡೀತಿತ್ತು. ಆದರೆ, ಸಚಿವರ ಭೇಟಿಗಾಗಿ ರೈತರು ಖಾಲಿ ಮಡಿಕೆ ಹಿಡಿದು ಬಂದ್ರು. ಇದಕ್ಕೆ ಪೊಲೀಸರು ಅಡ್ಡಿಪಡಿಸಿದಾಗ ವಾಗ್ವಾದ ನಡೀತು.

ಇದನ್ನೂ ಓದಿ: ಬೆಂಗಳೂರು ಬಂದ್: ನಾಳೆ ಏನೇನು ಇರುತ್ತೆ? ಏನೇನು ಇರುವುದಿಲ್ಲ?

ಭದ್ರಾ ನೀರಿಗಾಗಿ ದಾವಣಗೆರೆ ಬಂದ್​​

ಭದ್ರಾ ಡ್ಯಾಂನಿಂದ ಕಾಲುವೆಗಳಿಗೆ ನೀರು ಸ್ಥಗಿತಮಾಡಿರೋದರ ವಿರುದ್ಧ, ದಾವಣಗೆರೆ ಬಂದ್​ಗೆ ರೈತ ಒಕ್ಕೂಟ ಕರೆ ಕೊಟ್ಟಿತ್ತು. ಬಂದ್​​ಗೆ ಕೆಲವರು ಸ್ವಯಂಪ್ರೇರಿತರಾಗಿ ಅಂಗಡಿಮುಂಗಟ್ಟು ಬಂದ್ ಮಾಡಿದ್ರು. ಮತ್ತೆ ಕೆಲವೆಡೆ ಒತ್ತಾಯಪೂರ್ವಕವಾಗಿ ಅಂಗಡಿ ಕ್ಲೋಸ್ ಮಾಡಿಸಿದ್ರು. ಸರ್ಕಾರಿ ಸಾರಿಗೆ ಬಸ್​​ಗಳನ್ನ ತಡೆದು ರೈತರು ಪ್ರತಿಭಟನೆ ನಡೆಸಿದ್ರು.

ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ಮಾರ್ಚ್​ 22ರಂದು ಅಖಂಡ ಕರ್ನಾಟಕ ಬಂದ್​ಗೆ ಕರೆ: ಯಾರೆಲ್ಲಾ ಬೆಂಬಲ?
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ವಿಶ್ವವಿಖ್ಯಾತ ಹಂಪಿ ಉತ್ಸವ ಕಳೆದ ಸಲಕ್ಕಿಂತ ಅದ್ದೂರಿಯಾಗಿದೆ: ಜಮೀರ್ ಅಹ್ಮದ್
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ
ದೇವರ ಮೇಲಿರೋ ಹೂ ಕೊಡಿ; ತುಳುವಿನಲ್ಲಿ ಮುದ್ದಾಗಿ ಕೇಳಿದ ಶಿಲ್ಪಾ ಶೆಟ್ಟಿ