AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ

ಗಡಿನಾಡು ಚಾಮರಾಜನಗರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮೊಳಗಿತು. ನಡುರಸ್ತೆಯಲ್ಲಿ ಘಂಟೆ ಬಾರಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಚಾಮರಾಜನಗರದಲ್ಲಿ ಸಚಿವ ಕೆ.ವೆಂಕಟೇಶ್​​ ನೇತೃತ್ವದಲ್ಲಿ ಜನತಾ ದರ್ಶನ ನಡೀತಿತ್ತು. ಆದರೆ, ಸಚಿವರ ಭೇಟಿಗಾಗಿ ರೈತರು ಖಾಲಿ ಮಡಿಕೆ ಹಿಡಿದು ಬಂದ್ರು. ಇದಕ್ಕೆ ಪೊಲೀಸರು ಅಡ್ಡಿಪಡಿಸಿದಾಗ ವಾಗ್ವಾದ ನಡೀತು.

ರಾಜ್ಯದ ಹಲವೆಡೆ ಧಗಧಗಿಸಿದ ಕಾವೇರಿ ಕಿಚ್ಚು; ಎಲ್ಲೆಲ್ಲಿ ಏನೇನಾಯ್ತು? ಇಲ್ಲಿದೆ ವಿವರ
ಮೈಸೂರಿನಲ್ಲಿ ಸಚಿವ ಮಹದೇವಪ್ಪ ಕಾರಿಗೆ ಪ್ರತಿಭಟನಾ ನಿರತರಿಂದ ಮುತ್ತಿಗೆ
TV9 Web
| Edited By: |

Updated on: Sep 25, 2023 | 8:28 PM

Share

ಬೆಂಗಳೂರು, ಸೆಪ್ಟೆಂಬರ್ 25: ತಮಿಳುನಾಡಿಗೆ ಕಾವೇರಿ ನೀರು (Cauvery Water) ಬಿಡುವುದನ್ನು ವಿರೋಧಿಸಿ ಸೋಮವಾರವೂ ರಾಜ್ಯದಾದ್ಯಂತ ಪ್ರತಿಭಟನೆಗಳು (Protest) ನಡೆದಿವೆ. ಮಂಡ್ಯ, ಮೈಸೂರು, ಬೆಂಗಳೂರು ಸೇರಿ ಹಲವು ಕಡೆಗಳಲ್ಲಿ ಪ್ರತಿಭಟನೆಗಳು ನಡೆದಿವೆ. ಮೈಸೂರಿನಲ್ಲಿ ಸಚಿವ ಮಹದೇವಪ್ಪ ಕಾರಿಗೆ ಮುತ್ತಿಗೆ ಹಾಕಿ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಂಗಳವಾರವೂ ಧರಣಿ ಮುಂದುವರಿಯಲಿದ್ದು, ಬೆಂಗಳೂರಿನಲ್ಲಿ ಬಂದ್ ಇರಲಿದೆ. ಶುಕ್ರವಾರ ಕರ್ನಾಟಕ ಬಂದ್​ಗೆ ಕರೆ ನೀಡಲಾಗಿದೆ.

ತಮಿಳುನಾಡಿಗೆ ಕಾವೇರಿ ನೀರು ಬಿಡುಗಡೆ ಖಂಡಿಸಿ, ರಾಜ್ಯದಲ್ಲಿ ಪ್ರತಿಭಟನೆ ಮುಂದುವರಿದಿದೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ನಡೆದ ಧರಣಿಯಲ್ಲಿ ಹಿರಿಯ ನಟಿ ಲೀಲಾವತಿ, ಪುತ್ರ ವಿನೋದ್ ರಾಜ್​​ಕುಮಾರ್ ಭಾಗವಹಿಸಿದ್ದಾರೆ.

ಹಾಸನದಲ್ಲೂ ಆಕ್ರೋಶ ಭುಗಿಲೆದ್ದಿತ್ತು. ಹೇಮಾವತಿ ಜಲಾಶಯದ ನೀರು ಬಿಡುಗಡೆ ಖಂಡಿಸಿ, ಹೋರಾಟಗಾರರು ಡ್ಯಾಂಗೆ ಮುತ್ತಿಗೆ ಹಾಕಲು ಮುಂದಾದ್ರು. ಗೇಟ್​​ ಹತ್ತಲು ಒಳನುಗ್ಗಲು ಯತ್ನಿಸಿದವ್ರನ್ನ ಪೊಲೀಸರು ತಡೆದ್ರು. ಇನ್ನು, ಜೆಡಿಎಸ್​​​ ಕಾರ್ಯಕರ್ತರು ಕೂಡ ರಸ್ತೆಗೆ ಇಳಿದಿದ್ರು. ಗೊರೂರು-ಅರಕಲಗೂಡು ರಸ್ತೆ ತಡೆದು ಆಕ್ರೋಶ ಹೊರಹಾಕಿದ್ರು. ಮೆರವಣಿಗೆ ಮೂಲಕ ಸರ್ಕಾರದ ವಿರುದ್ಧ ಗುಟುರು ಹಾಕಿದ್ರು.

ಗಡಿನಾಡು ಚಾಮರಾಜನಗರದಲ್ಲಿ ವಿಭಿನ್ನವಾಗಿ ಪ್ರತಿಭಟನೆ ಮೊಳಗಿತು. ನಡುರಸ್ತೆಯಲ್ಲಿ ಘಂಟೆ ಬಾರಿಸಿ ಸರ್ಕಾರದ ವಿರುದ್ಧ ಕಿಡಿಕಾರಿದ್ರು. ಚಾಮರಾಜನಗರದಲ್ಲಿ ಸಚಿವ ಕೆ.ವೆಂಕಟೇಶ್​​ ನೇತೃತ್ವದಲ್ಲಿ ಜನತಾ ದರ್ಶನ ನಡೀತಿತ್ತು. ಆದರೆ, ಸಚಿವರ ಭೇಟಿಗಾಗಿ ರೈತರು ಖಾಲಿ ಮಡಿಕೆ ಹಿಡಿದು ಬಂದ್ರು. ಇದಕ್ಕೆ ಪೊಲೀಸರು ಅಡ್ಡಿಪಡಿಸಿದಾಗ ವಾಗ್ವಾದ ನಡೀತು.

ಇದನ್ನೂ ಓದಿ: ಬೆಂಗಳೂರು ಬಂದ್: ನಾಳೆ ಏನೇನು ಇರುತ್ತೆ? ಏನೇನು ಇರುವುದಿಲ್ಲ?

ಭದ್ರಾ ನೀರಿಗಾಗಿ ದಾವಣಗೆರೆ ಬಂದ್​​

ಭದ್ರಾ ಡ್ಯಾಂನಿಂದ ಕಾಲುವೆಗಳಿಗೆ ನೀರು ಸ್ಥಗಿತಮಾಡಿರೋದರ ವಿರುದ್ಧ, ದಾವಣಗೆರೆ ಬಂದ್​ಗೆ ರೈತ ಒಕ್ಕೂಟ ಕರೆ ಕೊಟ್ಟಿತ್ತು. ಬಂದ್​​ಗೆ ಕೆಲವರು ಸ್ವಯಂಪ್ರೇರಿತರಾಗಿ ಅಂಗಡಿಮುಂಗಟ್ಟು ಬಂದ್ ಮಾಡಿದ್ರು. ಮತ್ತೆ ಕೆಲವೆಡೆ ಒತ್ತಾಯಪೂರ್ವಕವಾಗಿ ಅಂಗಡಿ ಕ್ಲೋಸ್ ಮಾಡಿಸಿದ್ರು. ಸರ್ಕಾರಿ ಸಾರಿಗೆ ಬಸ್​​ಗಳನ್ನ ತಡೆದು ರೈತರು ಪ್ರತಿಭಟನೆ ನಡೆಸಿದ್ರು.

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು