AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ಶೇ 21 ರಷ್ಟು ಮುಂಗಾರು ಮಳೆ ಕೊರತೆ: ಪ್ರಮುಖ ಡ್ಯಾಂಗಳಲ್ಲಿ ತಳ ಸೇರಿದ ನೀರು

ಕರ್ನಾಟಕದಲ್ಲಿ ಜೂನ್ 1ರಿಂದ ಈವರೆಗೆ ಶೇಕಡಾ 21ರಷ್ಟು ಮುಂಗಾರು ಮಳೆ ಕೊರತೆ ದಾಖಲಾಗಿದ್ದು, ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ತೀವ್ರ ಆತಂಕ ಎದುರಾಗಿದೆ. ಮಳೆಯ ಅಭಾವ ಮತ್ತು ಗರಿಷ್ಠ ತಾಪಮಾನದ ಹಿನ್ನೆಲೆಯಲ್ಲಿ ರಾಜ್ಯದ 14 ಪ್ರಮುಖ ಜಲಾಶಯಗಳಲ್ಲಿನ ನೀರಿನ ಮಟ್ಟ ಶೇ 23ಕ್ಕೆ ಕುಸಿದಿದೆ.

ಕರ್ನಾಟಕದಲ್ಲಿ ಶೇ 21 ರಷ್ಟು ಮುಂಗಾರು ಮಳೆ ಕೊರತೆ: ಪ್ರಮುಖ ಡ್ಯಾಂಗಳಲ್ಲಿ ತಳ ಸೇರಿದ ನೀರು
ಬೆಂಗಳೂರಿನಲ್ಲಿ ಭಾನುವಾರ ಸುರಿದ ಮಳೆImage Credit source: tv9
ಗಣಪತಿ ಶರ್ಮಾ
|

Updated on: Jun 16, 2026 | 7:34 AM

Share

ಬೆಂಗಳೂರು, ಜೂನ್ 16: ರಾಜ್ಯದಲ್ಲಿ ಈ ವರ್ಷ ಮುಂಗಾರು (Monsoon Rain) ಆರಂಭದಲ್ಲೇ ಆತಂಕ ಮೂಡಿಸಿದೆ. ಜೂನ್ 1 ರಿಂದ ಜೂನ್ 15 ರವರೆಗಿನ ಅವಧಿಯಲ್ಲಿ ಕರ್ನಾಟಕ ಒಟ್ಟಾರೆ ಶೇಕಡಾ 21 ರಷ್ಟು ಮಳೆ ಕೊರತೆಯನ್ನು ಎದುರಿಸಿದೆ. ಅದರಲ್ಲೂ ವಿಶೇಷವಾಗಿ, ಹೆಚ್ಚು ಮಳೆಯಾಗುವ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಲ್ಲಿ ಕ್ರಮವಾಗಿ ಶೇ 41 ಮತ್ತು ಶೇ 36 ರಷ್ಟು ಮಳೆ ಅಭಾವ ಸೃಷ್ಟಿಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮುಖ್ಯಾಂಶಗಳು

  • ಕರಾವಳಿ, ಮಲೆನಾಡಿನಲ್ಲಿ ತೀವ್ರ ಮಳೆ ಕೊರತೆ
  • ಬರಿದಾಗುತ್ತಿರುವ ಪ್ರಮುಖ ಡ್ಯಾಂಗಳು
  • ಕುಡಿಯುವ ನೀರಿಗೆ ಮೊದಲ ಆದ್ಯತೆ ಎಂದ ಸರ್ಕಾರ

ಜೂನ್ 4 ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಿತ್ತಾದರೂ, ಜೂನ್ 15 ರವರೆಗೆ ದಾಖಲಾಗಬೇಕಿದ್ದ 85.5 ಮಿಮೀ ವಾಡಿಕೆ ಮಳೆಯ ಬದಲಿಗೆ ಕೇವಲ 67 ಮಿಮೀ ಮಳೆಯಾಗಿದೆ. ಎಲ್ ನಿನೋ ಪರಿಣಾಮದಿಂದಾಗಿ ಈ ಬಾರಿ ಮುಂಗಾರು ಮಾರುತಗಳು ಅತ್ಯಂತ ದುರ್ಬಲವಾಗಿವೆ ಎಂದು ಬೆಂಗಳೂರು ಹವಾಮಾನ ಕೇಂದ್ರದ ಮುಖ್ಯಸ್ಥ ಎನ್. ಪುವಿಯರಸನ್ ತಿಳಿಸಿದ್ದಾರೆ.

ಸದ್ಯಕ್ಕೆ ಅರಬ್ಬಿ ಸಮುದ್ರದಲ್ಲಿ ಯಾವುದೇ ವಾಯುಭಾರ ಕುಸಿತದ ಮುನ್ಸೂಚನೆ ಇಲ್ಲದಿರುವುದರಿಂದ ಕರಾವಳಿ ತೀರ ಒಣಹವೆಯಿಂದ ಕೂಡಿದೆ. ಇದರ ಜೊತೆಗೆ ರಾಜ್ಯದ ಶೇ 82 ರಷ್ಟು ಭಾಗದಲ್ಲಿ 30 ರಿಂದ 36 ಡಿಗ್ರಿ ಸೆಲ್ಶಿಯಸ್ ತಾಪಮಾನವಿದ್ದರೆ, ಕಲಬುರಗಿ, ಕೊಪ್ಪಳ, ಬಳ್ಳಾರಿ, ಬೆಳಗಾವಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಶಿಯಸ್​ನಿಂದ 40.5 ಡಿಗ್ರಿ ಸೆಲ್ಶಿಯಸ್ ವರೆಗೆ ದಾಖಲಾಗುತ್ತಿದ್ದು, ಬೇಸಿಗೆಯ ವಾತಾವರಣ ಮುಂದುವರಿದಿದೆ.

ಜಲಾಶಯಗಳು ಖಾಲಿ ಖಾಲಿ

Krs Dam Backwater

ಕೆಆರ್​ಎಸ್ ಡ್ಯಾಂ ಬ್ಯಾಕ್​ವಾಟರ್ ಪ್ರದೇಶದಲ್ಲಿ ನೀರು ಕಡಿಮೆಯಾಗಿರುವುದು

ಮಳೆಯ ಕೊರತೆ ಮತ್ತು ತೀವ್ರ ಶಾಖದಿಂದಾಗಿ ರಾಜ್ಯದ 14 ಪ್ರಮುಖ ಜಲಾಶಯಗಳ ನೀರು ವೇಗವಾಗಿ ಖಾಲಿಯಾಗುತ್ತಿದೆ. ಒಟ್ಟು 896 ಟಿಎಂಸಿ ಸಂಗ್ರಹ ಸಾಮರ್ಥ್ಯದ ಈ ಜಲಾಶಯಗಳಲ್ಲಿ ಪ್ರಸ್ತುತ ಕೇವಲ 206 ಟಿಎಂಸಿ (ಶೇ. 23) ನೀರು ಮಾತ್ರ ಉಳಿದಿದೆ. ಕಾವೇರಿ ಕೊಳ್ಳದ 4 ಜಲಾಶಯಗಳಲ್ಲಿ ಕೇವಲ 34 ಟಿಎಂಸಿ ನೀರಿದ್ದರೆ (ಕಳೆದ ವರ್ಷ 77 ಟಿಎಂಸಿ ಇತ್ತು), ಕೃಷ್ಣಾ ಕೊಳ್ಳದ 6 ಜಲಾಶಯಗಳಲ್ಲಿ ಒಟ್ಟು 423 ಟಿಎಂಸಿ ಸಂಗ್ರಹ ಸಾಮರ್ಥ್ಯ ಇದ್ದು, ಕೇವಲ 94 ಟಿಎಂಸಿ ನೀರಿದೆ.

ಇದನ್ನೂ ಓದಿ: ಕರ್ನಾಟಕ ಸೇರಿ ದೇಶಾದ್ಯಂತ ಮುಂಗಾರು ಕೊರತೆ: 200 ಜಿಲ್ಲೆಗಳಲ್ಲಿ ಮಳೆಯ ತೀವ್ರ ಅಭಾವ

ಜಲಾಶಯಗಳಿಗೆ ನೀರಿನ ಒಳಹರಿವು ಗಣನೀಯವಾಗಿ ಕಡಿಮೆಯಾಗಿದೆ. ಸದ್ಯಕ್ಕೆ ಲಭ್ಯವಿರುವ ನೀರನ್ನು ಕುಡಿಯುವ ಉದ್ದೇಶಕ್ಕೆ ಮಾತ್ರ ಮೀಸಲಿಡಲು ಆದ್ಯತೆ ನೀಡಲಾಗುವುದು. ಜುಲೈ ಮೊದಲ ವಾರದಲ್ಲಿ ಜಲಾಶಯಗಳ ಮಟ್ಟವನ್ನು ಪರಿಶೀಲಿಸಿ ಬರ ಪರಿಸ್ಥಿತಿಯ ಘೋಷಣೆಯ ಬಗ್ಗೆ ಸರ್ಕಾರ ಅಂತಿಮ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಇಲಾಖೆ (ವಿಪತ್ತು ನಿರ್ವಹಣೆ ವಿಭಾಗ) ಕಮಿಷನರ್ ಮನೋಜ್ ಕುಮಾರ್ ಮೀನಾ ಮಾಹಿತಿ ನೀಡಿದ್ದಾರೆ. ಕೃಷಿ ಸೇರಿದಂತೆ ಎಲ್ಲಾ ಇಲಾಖೆಗಳಿಗೆ ಮುನ್ನೆಚ್ಚರಿಕೆ ತುರ್ತು ಯೋಜನೆಗಳನ್ನು ಪಾಲಿಸಲು ಸೂಚಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಗಣಪತಿ ಶರ್ಮಾ
ಗಣಪತಿ ಶರ್ಮಾ

ಕೇರಳದ ಕಾಸರಗೋಡು ಮೂಲದ ಕನ್ನಡಿಗ, ಪ್ರಸ್ತುತ ಬೆಂಗಳೂರಿನಲ್ಲಿ ವಾಸ. 14 ವರ್ಷಗಳಿಂದ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದು, ವರದಿಗಾರಿಕೆ ಅನುಭವದ ಜತೆಗೆ ಬರವಣಿಗೆ, ಅನುವಾದದಲ್ಲಿ ಆಸಕ್ತಿ ಮತ್ತು ಪರಿಣತಿ. ಪ್ರಚಲಿತ ವಿದ್ಯಮಾನಗಳು, ರಾಜ್ಯ-ರಾಷ್ಟ್ರ ರಾಜಕೀಯ, ಉದ್ಯಮ, ವೈಯಕ್ತಿಕ ಹಣಕಾಸು ವಿಚಾರಗಳ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ, ಒಲವು. ವಿಜಯ ಕರ್ನಾಟಕ, ಸಮಯ ನ್ಯೂಸ್ ಟಿವಿ, ವಿಜಯವಾಣಿ, ಪ್ರಜಾವಾಣಿ ಪತ್ರಿಕೆಗಳು ಹಾಗೂ ಡಿಜಿಟಲ್ ಮೀಡಿಯಾದಲ್ಲಿ ಕೆಲಸ ಮಾಡಿದ ಅನುಭವ. 2022 ರಿಂದ ಟಿವಿ9 ಕನ್ನಡ ಡಿಜಿಟಲ್​ನಲ್ಲಿ ಕಾರ್ಯನಿರ್ವಹಣೆ.

Read More
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಈ ರಾಶಿಯವರಿಗಿಂದು ಹಣದ ವಿಷಯದಲ್ಲಿ ಆತುರದ ನಿರ್ಧಾರ ಬೇಡ
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ಗರುಡ ಪುರಾಣದ ಪ್ರಕಾರ ಊಟ ಎಲ್ಲಿ ಮಾಡಬೇಕು, ಎಲ್ಲಿ ಮಾಡಬಾರದು? ಫಲಗಳೇನು?
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ದೀದಿ ಕೋಟೆಯನ್ನು ಬಿಜೆಪಿ ಛಿದ್ರಗೊಳಿಸಿದ್ದು ಹೇಗೆ? ಪ್ರಲ್ಹಾದ್ ಜೋಶಿ ಮಾಹಿತಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮಮತಾ ಬ್ಯಾನರ್ಜಿ ಮನೆ ಹೊರಗೆ ಟಿಎಂಸಿ ಶಾಸಕ ಕುನಾಲ್ ಘೋಷ್ ಮೇಲೆ ಮೊಟ್ಟೆ ದಾಳಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಮೋದಿ ಅಧಿಕಾರ ಸಾಕು ಅಂದಿದ್ರು; ಅಚ್ಚರಿಯ ಸಂಗತಿ ಬಿಚ್ಚಿಟ್ಟ ಪ್ರಲ್ಹಾದ್ ಜೋಶಿ
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
ಕಾಕ್ರೋಜ್‌ ಪಾರ್ಟಿ ಸಂಸ್ಥಾಪಕನಿಗೆ ಕಪಾಳಮೋಕ್ಷ: ವಿಡಿಯೋ ವೈರಲ್‌
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
RSS ವಿವರಣೆ ಕೇಳಿದ ಪ್ರಿಯಾಂಕ್ ಖರ್ಗೆಗೆ ತೇಜಸ್ವಿ ಸೂರ್ಯ ಖಡಕ್ ಉತ್ತರ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ಜಮೀರ್‌ಗೆ ಸಚಿವ ಸ್ಥಾನ ನೀಡಬೇಕೆಂದು ಪಟ್ಟು: ಪಾದರಾಯನಪುರದಲ್ಲಿ ಹೈಡ್ರಾಮಾ
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ತಾಯಿಯಿಂದ ಬೇರ್ಪಟ್ಟು ಗ್ರಾಮಕ್ಕೆ ಬಂದ ಮರಿಯಾನೆ: ಆಹಾರ ನೀಡಿದ ಗ್ರಾಮಸ್ಥರು!
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್
ಅನಾರೋಗ್ಯ ಹಿನ್ನೆಲೆ ಆಸ್ಪತ್ರೆಗೆ ದಾಖಲಾದ ಶಾಸಕ ಇಕ್ಬಾಲ್ ಹುಸೇನ್