
ಬೆಂಗಳೂರು, ಏಪ್ರಿಲ್ 03: ಕರ್ನಾಟದಲ್ಲಿ ಬೇಸಿಗೆ (Summer) ಆರಂಭಕ್ಕೂ ಮುನ್ನವೇ ಬಿಸಿಲು ಜನರು ತಲೆ ಸುಡುತ್ತಿದೆ. ಹೆಚ್ಚುತ್ತಿರುವ ಬಿಸಿಲಿಗೆ ಜನರು ಹೈರಾಣಾಗಿದ್ದಾರೆ. ಈ ಮಧ್ಯೆ ಬೇಸಿಗೆ ರಜೆ ಕೂಡ ಆರಂಭವಾಗಿದೆ. ಹೀಗಾಗಿ ಫ್ಯಾಮಿಲಿ ಸಮೇತ ಬೇಸಿಗೆ ರಜೆ ಕಳೆಯಲು ಜನರು ಬೇರೆ ಬೇರೆ ಸ್ಥಳಗಳಿಗೆ ತೆರಳುತ್ತಾರೆ. ಈ ಹಿನ್ನೆಲೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿರ್ವಹಿಸಲು, ರೈಲ್ವೆ ಮಂಡಳಿ ಬೇಸಿಗೆ ಅವಧಿಯಲ್ಲಿ ವಿಶೇಷ ರೈಲುಗಳ (Special Trains) ಓಡಾಟಕ್ಕೆ ಅನುಮೋದನೆ ನೀಡಿದೆ.
ಈ ರೈಲುಗಳು ಹಾಸನ, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ಹೊಸಪೇಟೆ ಜಂಕ್ಷನ್, ಕೊಪ್ಪಳ, ಗದಗ, ಎಸ್ಎಸ್ಎಸ್ ಹುಬಳ್ಳಿ, ಧಾರವಾಡ, ಲೋಂಡಾ, ಬೆಳಗಾವಿ, ಗೋಕಾಕ್ ರಸ್ತೆ, ಘಟಪ್ರಭಾ, ರಾಯಬಾಗ, ಕುಡಚಿ, ಮಿರಜ್, ಸಾಂಗಲಿ, ಪುಣೆ, ಲೋನಾವಾಲಾ, ಕಲ್ಯಾಣ್, ವಸಾಯಿ ರೋಡ್, ಸೂರತ್, ವಡೋದರಾ, ರತ್ಲಾಂ, ಮಂದಸೋರ್, ನಿಮಾಚ್, ಚಿತ್ತೌರ್ಗಢ್, ಭಿಲ್ವಾರಾ, ಬಿಜೈನಗರ, ನಾಸಿರಾಬಾದ್ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ರೈಲುಗಳು ತುಮಕೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹಾವೇರಿ, ಎಸ್ಎಸ್ಎಸ್ ಹುಬ್ಬಳಿ, ಧಾರವಾಡ, ಬೆಳಗಾವಿ, ಗೋಕಾಕ್ ರಸ್ತೆ, ಘಟಪ್ರಭಾ, ರಾಯಬಾಗ, ಕುಡಚಿ, ಮಿರಜ್, ಸಾಂಗಲಿ, ಕರಡ್, ಸತಾರಾ, ಪುಣೆ, ಲೋನಾವಾಲಾ, ಕಲ್ಯಾಣ್, ವಸಾಯಿ ರೋಡ್, ಸೂರತ್, ವಡೋದರಾ, ಸಬರಮತಿ, ಮಹೇಸಾನಾ, ಭಿಲಿ, ರಾಣಿವಾರ, ಮಾರ್ವಾರ್, ಬಿನ್ಮಲ್ ಮೊದ್ರನ್, ಜಲೋರ್, ಮೊಕಲ್ಪರ್, ಸಂಧಾರಿ ಜಂಕ್ಷನ್, ಲುನಿ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ರೈಲು ಒಟ್ಟು 21 ಬೋಗಿಗಳನ್ನು ಹೊಂದಿದ್ದು, ಇದರಲ್ಲಿ 19 ಎಸಿ ಕೋಚ್ಗಳು ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಗಾರ್ಡ್ ಕೋಚ್ಗಳು ಒಳಗೊಂಡಿರುತ್ತವೆ.
ಇದನ್ನೂ ಓದಿ: ಆದಾಯದಲ್ಲಿ ಮೈಲಿಗಲ್ಲು ಸಾಧಿಸಿದ ನೈಋತ್ಯ ರೈಲ್ವೆ: ಹುಬ್ಬಳ್ಳಿ, ಮೈಸೂರು ವಿಭಾಗದಿಂದ ಭಾರೀ ಕೊಡುಗೆ
ಪ್ರತಿ ನಿಲ್ದಾಣದಲ್ಲಿ ವಿವರವಾದ ಆಗಮನ ಮತ್ತು ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ಬೆಟ್ www.enquiry.indianrail.gov.in ಪರಿಶೀಲಿಸಿ, NTES ಅಪ್ಲಿಕೇಶನ್ ಬಳಸಿ ಅಥವಾ 139 ಸಹಾಯವಾಣಿಗೆ ಕರೆ ಮಾಡಲು ವಿನಂತಿಸಲಾಗಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.
Published On - 10:25 am, Thu, 3 April 25