AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನದ ಪ್ರಸಾದ: ಹೊಸ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ

ಕರ್ನಾಟಕ ಮುಜರಾಯಿ ಇಲಾಖೆ ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಆನ್‌ಲೈನ್ ಬುಕಿಂಗ್ ಮೂಲಕ ಪ್ರಸಾದವನ್ನು ಮನೆಗೆ ತಲುಪಿಸುವ ಯೋಜನೆ ಅಂಚೆ ಇಲಾಖೆ ಮತ್ತು ಖಾಸಗಿ ಕಂಪನಿಗಳ ಸಹಭಾಗಿತ್ವದೊಂದಿಗೆ ಜಾರಿಯಾಗಲಿದೆ. ಈ ಯೋಜನೆಯಿಂದ ಭಕ್ತರಿಗೆ ಅನುಕೂಲವಾಗಲಿದೆ.

ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನದ ಪ್ರಸಾದ: ಹೊಸ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ
ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನದ ಪ್ರಸಾದ: ಹೊಸ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ
Follow us
Poornima Agali Nagaraj
| Updated By: ಗಂಗಾಧರ​ ಬ. ಸಾಬೋಜಿ

Updated on: Nov 08, 2024 | 4:33 PM

ಬೆಂಗಳೂರು, ನವೆಂಬರ್​ 08: ಕರ್ನಾಟಕದ ಪ್ರತಿ ದೇವಾಲಯಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ಮುಜರಾಯಿ ಇಲಾಖೆ (Mujarai department) ಚಿಂತನೆ ನಡೆಸಿದೆ. ಆ ಮೂಲಕ ರಾಜ್ಯದ ಜನರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್​ ನೀಡಿದೆ. ಈ ಕುರಿತಾಗಿ ಮುಜುರಾಯಿ ಸಚಿವರ ಜೊತೆ ಚರ್ಚೆ ಮಾಡಿ ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದು ಟಿವಿ9 ಗೆ ಮುಜುರಾಯಿ ಇಲಾಖೆ ಆಯುಕ್ತ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಕುಳಿತೇ ಪ್ರಸಿದ್ದ ದೇವಾಲಯಗಳ ಪ್ರಸಾದ ಸ್ವೀಕರಿಸಿ

ಸದ್ಯ ಮುಜರಾಯಿ ಇಲಾಖೆ ಹೊಸ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ಜನರಿಗೆ ಸೇವೆ ನೀಡಲು ಹಲವಾರು ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಈಗಾಗಲೇ ಆನ್ ಲೈನ್ ಸೇವೆ, ಬುಕ್ಕಿಂಗ್ ಅಂತಾ ಜಾರಿ ಆಗಿದೆ. ಈಗ ಮತ್ತೊಂದು ಹೊಸ ಯೋಜನೆ ಜಾರಿಗೆ ಪ್ಲ್ಯಾನ್ ಮಾಡಲಾಗುತ್ತಿದೆ. ಇನ್ನು ಈ ಹೊಸ ಯೋಜನೆಯಿಂದ ಮನೆಯಲ್ಲೇ ಕುಳಿತು ಪ್ರಸಿದ್ದ ದೇವಾಲಯಗಳ ಪ್ರಸಾದವನ್ನ ಸ್ವೀಕರಿಬಹುದಾಗಿದೆ.

ಇದನ್ನೂ ಓದಿ: ನಾನು ನಂದಿನಿ ತಿರುಪತಿಗೆ ಹೊಂಟೀನಿ: ಮತ್ತೆ ತಿಮ್ಮಪ್ಪನ ಲಡ್ಡುವಿನಲ್ಲಿ ಕರ್ನಾಟಕ ತುಪ್ಪದ ಘಮ

ಕರ್ನಾಟಕ ರಾಜ್ಯ ವ್ಯಾಪಿ ಇರುವ ಯಾವುದೇ ದೇವಸ್ಥಾನ ಪ್ರಸಾದವನ್ನ ಆನ್​ ಲೈನ್​ಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಪ್ರಸಾದ ತಂದು ಕೊಡುವ ಯೋಜನೆ ಶೀಘ್ರವೇ ಜಾರಿಗೆ ತರಲು ಚಿಂತನೆ ನಡೆದಿದೆ. ಈ ಕುರಿತಾಗಿ ಅಂಚೆ ಇಲಾಖೆ ಮತ್ತು ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದೆ. ಪ್ರಸಾದಕ್ಕೆ ಎಷ್ಟು ದರ ಇದೆಯೋ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರವನ್ನು ನಿಗದಿ ಮಾಡಲಾಗುತ್ತಿದೆ.

ಇದನ್ನೂ ಓದಿ: ಮುಜರಾಯಿ ದೇವಸ್ಥಾನಗಳಲ್ಲಿ ಶೌಚಾಲಯದ ಸಮಸ್ಯೆ: ಶೌಚಗೃಹ ನಿರ್ಮಾಣ ಮಾಡುವಂತೆ ಅರ್ಚಕರ ಸಂಘ ಮನವಿ

ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂದು ಇತ್ತೀಚೆಗೆ ಆದೇಶ ಹೊರಡಿಸಲಾಗಿತ್ತು. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ಐಪಿಎಲ್‌ನಲ್ಲಿ 7 ಸಾವಿರ ರನ್ ಪೂರೈಸಿದ ರೋಹಿತ್
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
ನೈಜೀರಿಯಾದ ಮೊಕ್ವಾ ನಗರದಲ್ಲಿ ಡ್ಯಾಂ ಕುಸಿದು ಭಾರೀ ಪ್ರವಾಹ; 111 ಜನ ಸಾವು
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
‘ಕಮಲ್ ಹಾಸನ್​ನ ಪ್ರೀತಿಸುತ್ತೇವೆ, ಆದ್ರೆ ಅವರು ಮಾಡಿದ್ದು ತಪ್ಪು’: ವಸಿಷ್ಠ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ಶಿವಣ್ಣ ಆರೋಗ್ಯದಲ್ಲಿ ಏರುಪೇರಾಗಿದೆ, ಅವರನ್ನು ದಶಕಗಳಿಂದ ಬಲ್ಲೆ: ಸೋಮಣ್ಣ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ದುಬೈನಲ್ಲಿ ಪಾಕ್ ಕ್ರಿಕೆಟಗರಿಗೆ ಕೇರಳ ಸಮುದಾಯದವರಿಂದ ಅದ್ದೂರಿ ಸ್ವಾಗತ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ಕಮಲ್ ಹಾಸನ್​ಗೆ ಈಗಲೂ ಕಾಲ ಮಿಂಚಿಲ್ಲ, ಕ್ಷಮೆ ಯಾಚಿಸಲಿ: ನಾರಾಯಣಗೌಡ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋಮುದ್ವೇಷ ಅನ್ನೋದೇ ಇಲ್ಲ: ಮುಸ್ಲಿಂ ಯುವಕ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ಆಪರೇಷನ್ ಸಿಂಧೂರ್ ಇನ್ನೂ ಮುಗಿದಿಲ್ಲ; ಪಾಕಿಸ್ತಾನಕ್ಕೆ ಮೋದಿ ಎಚ್ಚರಿಕೆ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ನನ್ನನ್ನು ತಮಿಳರು ಕೆಣಕಬಹುದು: ವಸಿಷ್ಠ ಸಿಂಹ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ
ಪ್ರಧಾನಿ ಮೋದಿಯವರನ್ನು ಭೇಟಿಯಾದ ವೈಭವ್ ಸೂರ್ಯವಂಶಿ