AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನದ ಪ್ರಸಾದ: ಹೊಸ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ

ಕರ್ನಾಟಕ ಮುಜರಾಯಿ ಇಲಾಖೆ ರಾಜ್ಯದ ಎಲ್ಲಾ ದೇವಾಲಯಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆಯನ್ನು ಜಾರಿಗೆ ತರಲು ಚಿಂತನೆ ನಡೆಸಿದೆ. ಆನ್‌ಲೈನ್ ಬುಕಿಂಗ್ ಮೂಲಕ ಪ್ರಸಾದವನ್ನು ಮನೆಗೆ ತಲುಪಿಸುವ ಯೋಜನೆ ಅಂಚೆ ಇಲಾಖೆ ಮತ್ತು ಖಾಸಗಿ ಕಂಪನಿಗಳ ಸಹಭಾಗಿತ್ವದೊಂದಿಗೆ ಜಾರಿಯಾಗಲಿದೆ. ಈ ಯೋಜನೆಯಿಂದ ಭಕ್ತರಿಗೆ ಅನುಕೂಲವಾಗಲಿದೆ.

ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನದ ಪ್ರಸಾದ: ಹೊಸ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ
ಮನೆ ಬಾಗಿಲಿಗೆ ಬರಲಿದೆ ದೇವಸ್ಥಾನದ ಪ್ರಸಾದ: ಹೊಸ ಯೋಜನೆ ಜಾರಿಗೆ ಮುಜರಾಯಿ ಇಲಾಖೆ ಚಿಂತನೆ
Poornima Agali Nagaraj
| Edited By: |

Updated on: Nov 08, 2024 | 4:33 PM

Share

ಬೆಂಗಳೂರು, ನವೆಂಬರ್​ 08: ಕರ್ನಾಟಕದ ಪ್ರತಿ ದೇವಾಲಯಗಳ ಪ್ರಸಾದವನ್ನು ಮನೆ ಬಾಗಿಲಿಗೆ ತಲುಪಿಸುವ ಯೋಜನೆ ಜಾರಿಗೆ ಮುಜರಾಯಿ ಇಲಾಖೆ (Mujarai department) ಚಿಂತನೆ ನಡೆಸಿದೆ. ಆ ಮೂಲಕ ರಾಜ್ಯದ ಜನರಿಗೆ ಮುಜರಾಯಿ ಇಲಾಖೆಯಿಂದ ಗುಡ್ ನ್ಯೂಸ್​ ನೀಡಿದೆ. ಈ ಕುರಿತಾಗಿ ಮುಜುರಾಯಿ ಸಚಿವರ ಜೊತೆ ಚರ್ಚೆ ಮಾಡಿ ಶೀಘ್ರದಲ್ಲೇ ಜಾರಿ ಮಾಡಲಾಗುವುದು ಎಂದು ಟಿವಿ9 ಗೆ ಮುಜುರಾಯಿ ಇಲಾಖೆ ಆಯುಕ್ತ ವೆಂಕಟೇಶ್ ಮಾಹಿತಿ ನೀಡಿದ್ದಾರೆ.

ಮನೆಯಲ್ಲಿ ಕುಳಿತೇ ಪ್ರಸಿದ್ದ ದೇವಾಲಯಗಳ ಪ್ರಸಾದ ಸ್ವೀಕರಿಸಿ

ಸದ್ಯ ಮುಜರಾಯಿ ಇಲಾಖೆ ಹೊಸ ಹೊಸ ತಂತ್ರಜ್ಞಾನವನ್ನ ಅಳವಡಿಸಿಕೊಂಡು ಜನರಿಗೆ ಸೇವೆ ನೀಡಲು ಹಲವಾರು ಪ್ಲ್ಯಾನ್ ಮಾಡಿಕೊಳ್ಳುತ್ತಿದೆ. ಈಗಾಗಲೇ ಆನ್ ಲೈನ್ ಸೇವೆ, ಬುಕ್ಕಿಂಗ್ ಅಂತಾ ಜಾರಿ ಆಗಿದೆ. ಈಗ ಮತ್ತೊಂದು ಹೊಸ ಯೋಜನೆ ಜಾರಿಗೆ ಪ್ಲ್ಯಾನ್ ಮಾಡಲಾಗುತ್ತಿದೆ. ಇನ್ನು ಈ ಹೊಸ ಯೋಜನೆಯಿಂದ ಮನೆಯಲ್ಲೇ ಕುಳಿತು ಪ್ರಸಿದ್ದ ದೇವಾಲಯಗಳ ಪ್ರಸಾದವನ್ನ ಸ್ವೀಕರಿಬಹುದಾಗಿದೆ.

ಇದನ್ನೂ ಓದಿ: ನಾನು ನಂದಿನಿ ತಿರುಪತಿಗೆ ಹೊಂಟೀನಿ: ಮತ್ತೆ ತಿಮ್ಮಪ್ಪನ ಲಡ್ಡುವಿನಲ್ಲಿ ಕರ್ನಾಟಕ ತುಪ್ಪದ ಘಮ

ಕರ್ನಾಟಕ ರಾಜ್ಯ ವ್ಯಾಪಿ ಇರುವ ಯಾವುದೇ ದೇವಸ್ಥಾನ ಪ್ರಸಾದವನ್ನ ಆನ್​ ಲೈನ್​ಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಪ್ರಸಾದ ತಂದು ಕೊಡುವ ಯೋಜನೆ ಶೀಘ್ರವೇ ಜಾರಿಗೆ ತರಲು ಚಿಂತನೆ ನಡೆದಿದೆ. ಈ ಕುರಿತಾಗಿ ಅಂಚೆ ಇಲಾಖೆ ಮತ್ತು ಖಾಸಗಿ ಕಂಪನಿಗಳ ಜೊತೆ ಮಾತುಕತೆ ನಡೆಯುತ್ತಿದೆ. ಪ್ರಸಾದಕ್ಕೆ ಎಷ್ಟು ದರ ಇದೆಯೋ ಅದರ ಜೊತೆಗೆ ಡೆಲಿವರಿ ದರ ಸೇರಿಸಿ ಮನೆ ಬಾಗಿಲಿಗೆ ಪ್ರಸಾದ ನೀಡುವ ದರವನ್ನು ನಿಗದಿ ಮಾಡಲಾಗುತ್ತಿದೆ.

ಇದನ್ನೂ ಓದಿ: ಮುಜರಾಯಿ ದೇವಸ್ಥಾನಗಳಲ್ಲಿ ಶೌಚಾಲಯದ ಸಮಸ್ಯೆ: ಶೌಚಗೃಹ ನಿರ್ಮಾಣ ಮಾಡುವಂತೆ ಅರ್ಚಕರ ಸಂಘ ಮನವಿ

ಕರ್ನಾಟಕದ ದತ್ತಿ ಇಲಾಖೆಯ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡಬೇಕು ಎಂದು ಇತ್ತೀಚೆಗೆ ಆದೇಶ ಹೊರಡಿಸಲಾಗಿತ್ತು. ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸುವಂತೆ ಸೂಚನೆ ನೀಡಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
ಪಿಡಬ್ಲ್ಯೂಡಿ ಮುಖ್ಯ ಇಂಜಿನಿಯರ್​​ಗೆ ಶಾಕ್​​ ಕೊಟ್ಟ ಲೋಕಾಯುಕ್ತ
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
RCB ಅಭಿಮಾನಿಗಳಿಗೆ ಸರ್ಕಾರದಿಂದ ಇಂದೇ ಸಿಗುತ್ತಾ ಸಿಹಿ ಸುದ್ದಿ?
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್
ರಸ್ತೆ ಮಧ್ಯೆ ಕೆಟ್ಟು ನಿಂತ ಕೆಎಸ್‌ಆರ್‌ಟಿಸಿ ಬಸ್