AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೋಟೆಲ್‌, ಮೆಡಿಕಲ್‌ ಸ್ಟೋರ್‌ಗಳಲ್ಲಿ ಇನ್ಮುಂದೆ QR ಕೋಡ್, ಸ್ಕ್ಯಾನ್ ಮಾಡಿ ದೂರು ನೀಡಬಹುದು: ಖಾದರ್ ಘೋಷಣೆ

ಹೋಟೆಲ್‌, ಮೆಡಿಕಲ್‌ ಸ್ಟೋರ್‌ ಸೇರಿದಂತೆ ಸಾರ್ವಜನಿಕರು ಸೇವೆ ಪಡೆಯುವ ಸ್ಥಳಗಳಲ್ಲಿ QR ಕೋಡ್ ಅಳವಡಿಸಿ, ಅದರ ಮೂಲಕ ನೇರವಾಗಿ ದೂರು ಸಲ್ಲಿಸುವ ವ್ಯವಸ್ಥೆ ಜಾರಿಗೆ ತರಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಆರೋಗ್ಯ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ. ಕರ್ನಾಟಕದಲ್ಲಿ ಇದೇ ಮೊದಲ ಬಾರಿಗೆ ಈ ರೀತಿಯ ಪ್ರಯತ್ನ ಮಾಡಲಾಗುತ್ತಿದೆ ಎಂದಿದ್ದಾರೆ.

ಹೋಟೆಲ್‌, ಮೆಡಿಕಲ್‌ ಸ್ಟೋರ್‌ಗಳಲ್ಲಿ ಇನ್ಮುಂದೆ QR ಕೋಡ್, ಸ್ಕ್ಯಾನ್ ಮಾಡಿ ದೂರು ನೀಡಬಹುದು: ಖಾದರ್ ಘೋಷಣೆ
ಯುಟಿ ಖಾದರ್ Image Credit source: tv9
ವಿನಯ್​ ಕಾಶಪ್ಪನವರ್​
| Edited By: |

Updated on: Aug 17, 2026 | 10:55 AM

Share

ಮುಖ್ಯಾಂಶಗಳು

  • ಹೋಟೆಲ್‌, ಮೆಡಿಕಲ್‌ ಸ್ಟೋರ್‌ಗಳಲ್ಲಿ ಇನ್ಮುಂದೆ QR ಕೋಡ್
  • ಸ್ಕ್ಯಾನ್ ಮಾಡಿ ಸಾರ್ವಜನಿಕರು ನೇರ ದೂರು ನೀಡಬಹುದು
  • ಪಿಜಿ, ಕ್ಯಾಂಟೀನ್‌ಗಳಲ್ಲೂ ತಪಾಸಣೆ ಮುಂದುವರಿಯಲಿದೆ ಎಂದ ಖಾದರ್

ಬೆಂಗಳೂರು, ಆಗಸ್ಟ್ 17: ಹೋಟೆಲ್‌, ಮೆಡಿಕಲ್‌ ಸ್ಟೋರ್‌ ಸೇರಿದಂತೆ ಸಾರ್ವಜನಿಕರು ಭೇಟಿ ನೀಡುವ ಸ್ಥಳಗಳಲ್ಲಿ ಇನ್ಮುಂದೆ QR ಕೋಡ್ ಅಳವಡಿಸಲಾಗುವುದು ಎಂದು ಆರೋಗ್ಯ ಸಚಿವ ಯುಟಿ ಖಾದರ್ (UT Khader) ಮಹತ್ವದ ಘೋಷಣೆ ಮಾಡಿದ್ದಾರೆ. QR ಕೋಡ್ ಸ್ಕ್ಯಾನ್ ಮಾಡುವ ಮೂಲಕ ಆಹಾರ ಗುಣಮಟ್ಟ, ಸೇವೆ ಅಥವಾ ಇತರ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ದೂರು ಸಲ್ಲಿಸಬಹುದಾಗಿದೆ ಎಂದು ಅವರು ತಿಳಿಸಿದ್ದಾರೆ. ಆಹಾರ ಇಲಾಖೆ ನಡೆಸಿದ ಕಾರ್ಯಾಚರಣೆಗಳ ಕುರಿತು ಬೆಂಗಳೂರಿನಲ್ಲಿ (Bengaluru) ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಸಾರ್ವಜನಿಕರ ದೂರುಗಳನ್ನು ತ್ವರಿತವಾಗಿ ಅಧಿಕಾರಿಗಳ ಗಮನಕ್ಕೆ ತರುವ ಉದ್ದೇಶದಿಂದ ಈ ವ್ಯವಸ್ಥೆ ರೂಪಿಸಲಾಗುತ್ತಿದೆ ಎಂದರು. ಕರ್ನಾಟಕದಲ್ಲಿ ಮೊದಲ ಬಾರಿಗೆ ಈ ರೀತಿಯ ವ್ಯವಸ್ಥೆ ಜಾರಿಗೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಿದರು.

ಹೋಟೆಲ್‌ ಮಾತ್ರವಲ್ಲ, ಪಿಜಿ-ಬಸ್‌ ನಿಲ್ದಾಣದಲ್ಲೂ ತಪಾಸಣೆ

ಬೆಂಗಳೂರಿನ ಹೋಟೆಲ್‌ಗಳ ಮೇಲಿನ ದಾಳಿ ಮುಂದುವರಿಯಲಿದೆ. ಇದರ ಜೊತೆಗೆ ಖಾಸಗಿ ಹಾಸ್ಟೆಲ್‌, ಪಿಜಿ, ಬಸ್‌ ನಿಲ್ದಾಣ, ಮದುವೆ ಮನೆ, ರೈಲ್ವೆ ಕ್ಯಾಂಟೀನ್‌ ಹಾಗೂ ವಿಮಾನಗಳಲ್ಲಿ ನೀಡುವ ಆಹಾರವನ್ನೂ ಪರಿಶೀಲಿಸಲಾಗುವುದು ಎಂದು ಖಾದರ್ ಹೇಳಿದ್ದಾರೆ. ಪಿಜಿಗಳಲ್ಲಿ ಕಳಪೆ ಗುಣಮಟ್ಟದ ಆಹಾರ ನೀಡುತ್ತಿರುವುದು ಪತ್ತೆಯಾದರೆ ಯಾವುದೇ ಕಾರಣಕ್ಕೂ ಕ್ಷಮಿಸುವುದಿಲ್ಲ ಎಂದು ಸಚಿವರು ಎಚ್ಚರಿಕೆ ನೀಡಿದ್ದಾರೆ.

60ಕ್ಕೂ ಹೆಚ್ಚು ಸ್ಟಾರ್ ಹೋಟೆಲ್‌ಗಳ ಪರಿಶೀಲನೆ

ಬೆಂಗಳೂರು ನಗರ ವ್ಯಾಪ್ತಿಯಲ್ಲಿ 60ಕ್ಕೂ ಹೆಚ್ಚು 3-ಸ್ಟಾರ್ ಮತ್ತು 5-ಸ್ಟಾರ್ ಹೋಟೆಲ್‌ಗಳು, 8 ಗೋಡೌನ್‌ಗಳು ಹಾಗೂ 4 ಎಂಟರ್‌ಪ್ರೈಸ್‌ ರೆಸ್ಟೋರೆಂಟ್‌ಗಳ ಮೇಲೆ ಪರಿಶೀಲನೆ ನಡೆಸಲಾಗಿದೆ. ಆಹಾರ ಸುರಕ್ಷತಾ ಮತ್ತು ಆರೋಗ್ಯ ಸುರಕ್ಷತಾ ಅಧಿಕಾರಿಗಳ ನೇತೃತ್ವದಲ್ಲಿ 30 ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ. ಹೋಟೆಲ್‌ಗಳಲ್ಲಿ ಆಹಾರ ಸುರಕ್ಷತಾ ನಿಯಮ ಪಾಲನೆ, ಆಹಾರ ಸಂಗ್ರಹಣೆ ಹಾಗೂ ಗುಣಮಟ್ಟವನ್ನು ಅಧಿಕಾರಿಗಳು ಪರಿಶೀಲಿಸಿದ್ದಾರೆ.

ನೂರಾರು ಕೆಜಿ ಆಹಾರ ಪದಾರ್ಥ ವಶ

ತಪಾಸಣೆ ವೇಳೆ ಅವಧಿ ಮೀರಿದ, ತಪ್ಪು ಲೇಬಲ್ ಹೊಂದಿರುವ ಹಾಗೂ ಅಸಮರ್ಪಕವಾಗಿ ಸಂಗ್ರಹಿಸಿದ್ದ ಹಲವು ಆಹಾರ ಪದಾರ್ಥಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂಬ ಬಗ್ಗೆಯೂ ಸಚಿವರು ಮಾಹಿತಿ ನೀಡಿದರು.

ದಾಳಿ ವೇಳೆ ಏನೇನು ವಶ? ಖಾದರ್ ಕೊಟ್ಟ ಮಾಹಿತಿ ಇಲ್ಲಿದೆ

  • ಮಟನ್/ಚಿಕನ್: 378 ಕೆಜಿ – ತಪ್ಪು ಲೇಬಲ್, ಎಕ್ಸ್‌ಪೈರಿ ದಿನಾಂಕ ಇಲ್ಲ
  • ಮಟನ್/ಚಿಕನ್: 51 ಕೆಜಿ – ಅವಧಿ ಮೀರಿದ
  • ಮೀನು: 203 ಕೆಜಿ – ಅತಿಯಾದ ಅವಧಿ ಮೀರಿದ
  • ಸಸ್ಯಾಹಾರಿ ಆಹಾರ: 200 ಕೆಜಿ – ಮಾಂಸಾಹಾರದೊಂದಿಗೆ ಸಂಗ್ರಹಣೆ
  • ತರಕಾರಿ: 76 ಕೆಜಿ – ಕೊಳೆತ/ಫಂಗಸ್
  • ಹಾಲು/ಮೊಸರು: 45 ಲೀಟರ್ – ಅವಧಿ ಮೀರಿದ
  • ಬೇಕರಿ ಉತ್ಪನ್ನ: 12 ಕೆಜಿ – ಅವಧಿ ಮೀರಿದ
  • ಧಾನ್ಯಗಳು ಮತ್ತು ಇತರೆ: 67 ಕೆಜಿ – ತಪ್ಪು ಲೇಬಲ್/ಅವಧಿ ಮೀರಿದ
  • ಬಳಸಿದ ಅಡುಗೆ ಎಣ್ಣೆ: 49 ಲೀಟರ್ – ನಿಯಮಬಾಹಿರ ಬಳಕೆ
  • ಹಾಲು, ಮೊಟ್ಟೆ ಮೇಯೊನೇಸ್‌ ಮಾದರಿ ಸಂಗ್ರಹ

ಹಾಲು ಕೂಡ ಕಳಪೆ!

ರಾಜ್ಯದಲ್ಲಿ 25 ಹಾಲು ಹಾಗೂ ಹಾಲಿನ ಉತ್ಪನ್ನಗಳ ಮಾದರಿಗಳನ್ನು ಸಂಗ್ರಹಿಸಿ ಪ್ರಯೋಗಾಲಯಕ್ಕೆ ಕಳುಹಿಸಲಾಗಿದ್ದು, ಈ ಪೈಕಿ ಒಂದು ಮಾದರಿ Substandard ಎಂದು ವರದಿಯಾಗಿದೆ.

ಇದನ್ನೂ ಓದಿ: ಮಸಾಲೆ ಪದಾರ್ಥಗಳಲ್ಲೂ ಕಲಬೆರಕೆ: ಕರ್ನಾಟಕದ ಮನವಿ ಮೇರೆಗೆ EtO ಬಳಕೆಗೆ ಬ್ರೇಕ್ ಹಾಕಲು ಸಮಿತಿ ರಚಿಸಿದ ಕೇಂದ್ರ

ರಾಜ್ಯಾದ್ಯಂತ 124 ಶಾಲೆ ಮತ್ತು ಕಾಲೇಜುಗಳ ಆವರಣದಲ್ಲಿರುವ ಆಹಾರ ಘಟಕಗಳನ್ನೂ ಪರಿಶೀಲಿಸಲಾಗಿದ್ದು, 53 ಆಹಾರ ಮಾದರಿಗಳನ್ನು ಸಂಗ್ರಹಿಸಲಾಗಿದೆ. ಇದರ ಜೊತೆಗೆ Egg Mayonnaiseನ 36 ಮಾದರಿಗಳನ್ನು ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಇಂದು ನಾಗಪಂಚಮಿಯ ಜೊತೆಗೆ ಸೂರ್ಯ ಸಂಕ್ರಮಣದ ವಿಶೇಷ ಪರ್ವ ದಿನ!
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ಚಿಕ್ಕಪ್ಪನ ಜೊತೆ ನಟನೆ, ನಟ ನಿರಂಜನ್ ಹೇಳಿದ್ದೇನು? ವಿಡಿಯೋ ನೋಡಿ
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ದರ್ಶನ್ ಅಭಿಮಾನಿಗಳಿಗೆ ನಗುತ್ತಲೇ ಬುದ್ಧಿವಾದ ಹೇಳಿದ ವಿಜಯಲಕ್ಷ್ಮಿ ದರ್ಶನ್
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ಬೆಂಗಳೂರಿನಲ್ಲಿ ಉತ್ತರ ಕರ್ನಾಟಕದ ಸಂಸ್ಕೃತಿಯ ಸೊಗಡು
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ವಂದೇ ಮಾತರಂಗೆ ಅವಮಾನಿಸಿದ ಆರೋಪ: ಸೋನಿಯಾ ಗಾಂಧಿ ವಿರುದ್ಧ ಕೇಸ್ ಬುಕ್!
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಮತ್ತೆ ಮುನ್ನೆಲೆಗೆ ಬಂದ ನೈಸ್ ರಸ್ತೆ ಟೋಲ್:ಸಿಡಿದೆದ್ದ ಪ್ರತಿಪಕ್ಷಗಳು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ಹಾನೂರು ಶೂಟೌಟ್ ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಹೇಳಿದ್ದಿಷ್ಟು
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ತಿಪಟೂರು​ ಶಾಸಕನಿಂದ ಪ್ರತ್ಯೇಕ ಜಿಲ್ಲೆಯ ಕೂಗು!
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮೊಳಕಾಲ್ಮೂರು ಕ್ಷೇತ್ರವನ್ನು ಆಂಧ್ರಕ್ಕೆ ಸೇರಿಸಿ: ಎನ್​.ವೈ. ಗೋಪಾಲಕೃಷ್ಣ
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!
ಮಹಿಳೆ ಜೊತೆ ಅಸಭ್ಯ ವರ್ತನೆ; ತಮ್ಮೇನಹಳ್ಳಿ ಸ್ವಾಮೀಜಿಗೆ ಜನರಿಂದ ಗೂಸಾ!