AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ; ವರುಣಾರ್ಭಟಕ್ಕೆ ಹೈರಾಣಾದ ರಾಜ್ಯದ ಜನರು

Karnataka Weather Today: ಪೂರ್ವ-ಮಧ್ಯ ಅರೇಬಿಯನ್​ ಸಾಗರದಲ್ಲಿ ವಾಯುಭಾರ ಕುಸಿತದಿಂದಾಗಿ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಅದರ ನೆರೆಹೊರೆಯ ಪ್ರದೇಶಗಳ ಮೇಲೆ ಗಾಳಿಯ ಪರಿಚಲನೆ ಆಗಲಿದೆ. ಈ ಕಾರಣದಿಂದ ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ.

Karnataka Rain: ಕರ್ನಾಟಕದಲ್ಲಿ ಇನ್ನೂ 3 ದಿನ ಮಳೆ; ವರುಣಾರ್ಭಟಕ್ಕೆ ಹೈರಾಣಾದ ರಾಜ್ಯದ ಜನರು
ಪ್ರಾ,ತಿನಿಧಿಕ ಚಿತ್ರ
TV9 Web
| Edited By: |

Updated on: Nov 21, 2021 | 6:35 AM

Share

Bengaluru Rain: ಬೆಂಗಳೂರಿನಲ್ಲಿ ನವೆಂಬರ್ 23 (ಮಂಗಳವಾರ)ರ ಬೆಳಗ್ಗೆಯವರೆಗೂ ಮಳೆ ಬೀಳಲಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ. ಹಾಗೇ, ಇದರ ಹೊರತಾಗಿ ರಾಜ್ಯದ ದಕ್ಷಿಣ ಒಳನಾಡು ಪ್ರದೇಶಗಳು, ಉತ್ತರ ಒಳನಾಡು ಪ್ರದೇಶಗಳು, ಮಲೆನಾಡು, ಕರಾವಳಿ ತೀರಗಳಲ್ಲಿ ನವೆಂಬರ್​ 21 (ಇಂದು)ರವರೆಗೂ ಮಳೆ ಮುಂದುವರಿಯಲಿದೆ.  ನಿನ್ನೆ ಶನಿವಾರ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಬಳ್ಳಾರಿ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಶಿವಮೊಗ್ಗ ಮತ್ತು ರಾಮನಗರಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿತ್ತು.  ಅದರಲ್ಲಿ ಚಿತ್ರದುರ್ಗ, ದಾವಣಗೆರೆ, ಹಾಸನ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಬಳ್ಳಾರಿ ಜಿಲ್ಲೆಗಳಲ್ಲಿ ಇಂದು ಬೆಳಗ್ಗೆಯವರೆಗೂ ಯೆಲ್ಲೋ ಅಲರ್ಟ್ ಮುಂದುವರಿಯಲಿದೆ ಎಂದು ಐಎಂಡಿ ತಿಳಿಸಿದೆ.  

ಹಾಗೇ, ಇಂದು ಮಧ್ಯಾಹ್ನದವರೆಗೂ ದಕ್ಷಿಣ ಒಳನಾಡು ಪ್ರದೇಶಗಳಾದ ತುಮಕೂರು, ಚಿತ್ರದುರ್ಗ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆ ಮುಂದುವರಿಯಲಿದ್ದು, ಕೆಲವೆಡೆ ಭಾರಿ ಮಳೆ ಸುರಿಯಲಿದೆ. ಇನ್ನೂ ಕೆಲವು ಜಿಲ್ಲೆಗಳಲ್ಲಿ ಸಣ್ಣಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ. ಹಾಸನ, ಕೊಡಗು, ಉತ್ತರ ಕನ್ನಡ, ಕರಾವಳಿ ಜಿಲ್ಲೆಗಳಲ್ಲೂ ಅಲ್ಲಲ್ಲಿ ಸಣ್ಣ, ಮಧ್ಯಮ ಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ. ದಕ್ಷಿಣ ಕರಾವಳಿ ಪ್ರದೇಶಗಳಲ್ಲಿ ಗಾಳಿಯ ವೇಗ ಪ್ರತಿ ಗಂಟೆಗೆ 40-50 ಕಿಮೀ ಇರಲಿದ್ದು, ಅದು 60ಕಿಮೀ ವರೆಗೂ ತಲುಪುವ ಸಾಧ್ಯತೆ ಇದೆ. ಹೀಗಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸಲಹೆ ನೀಡಲಾಗಿದೆ.

ಬೆಂಗಳೂರು ಸೇರಿ, ರಾಜ್ಯದ ಬಹುತೇಕ ಕಡೆಗಳಲ್ಲಿ ಒಂದೇ ಸಮನೆ ಮಳೆ ಮುಂದುವರಿಯುತ್ತಿದ್ದು, ಬೆಂಗಳೂರು ಮತ್ತು ಅದರ ಸುತ್ತಲಿನ ಪ್ರದೇಶಗಳಲ್ಲಿ ನವೆಂಬರ್​ 23ರವರೆಗೂ ಮಳೆಯಿಂದ ಮುಕ್ತಿಯಿಲ್ಲ. ಇನ್ನು ಅಕಾಲಿಕವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಅನೇಕ ರೀತಿಯ ಹಾನಿಯುಂಟಾಗಿದೆ. ತುಮಕೂರಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ಈಗಾಗಲೇ ಅಪಾರ ಹಾನಿಯುಂಟಾಗಿದೆ. ಕೃಷಿ ಭೂಮಿ ತೊಯ್ದು ತೊಪ್ಪೆಯಾಗಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಹಾಗೇ, ನಿನ್ನೆ ಶಿರಾ ಬಳಿಕ ಸರ್ಕಾರಿ ಬಸ್​ವೊಂದು ಸಿಕ್ಕಿಬಿದ್ದಿತ್ತು.  ರಾಜ್ಯಾದ್ಯಂತ ಜಲಾಶಯಗಳೂ ತುಂಬುತ್ತಿರುವ ಕಾರಣ, ಅಣೆಕಟ್ಟುಗಳಿಂದ ಹೆಚ್ಚಿನ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ. ಒಂದೇ ಸಮನೆ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಕರ್ನಾಟಕದ ಹಲವು ಜಿಲ್ಲೆಗಳ ನಗರಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಪೂರ್ವ-ಮಧ್ಯ ಅರೇಬಿಯನ್​ ಸಾಗರದಲ್ಲಿ ವಾಯುಭಾರ ಕುಸಿತದಿಂದಾಗಿ, ದಕ್ಷಿಣ ಒಳನಾಡು ಕರ್ನಾಟಕ ಮತ್ತು ಅದರ ನೆರೆಹೊರೆಯ ಪ್ರದೇಶಗಳ ಮೇಲೆ ಗಾಳಿಯ ಪರಿಚಲನೆ ಆಗಲಿದೆ. ಈ ಕಾರಣದಿಂದ ವ್ಯಾಪಕ ಮಳೆಯಾಗಲಿದೆ ಎಂದು ಹೇಳಲಾಗಿದೆ. ಕೇವಲ ಕರ್ನಾಟಕವಷ್ಟೇ ಅಲ್ಲದೆ, ತಮಿಳುನಾಡು, ಆಂಧ್ರಪ್ರದೇಶ, ಕೇರಳಗಳಲ್ಲೂ ಕೂಡ ಸಿಕ್ಕಾಪಟೆ ಮಳೆಯಾಗುತ್ತಿದ್ದು, ಪರಿಸ್ಥಿತಿ ಮುಂದುವರಿಯಲಿದೆ. ಇದರೊಂದಿಗೆ ಗೋವಾ, ಮಹಾರಾಷ್ಟ್ರಗಳಲ್ಲೂ ಭಾರಿ ಮಳೆಯಾಗಬಹುದು ಎಂದು ಐಎಂಡಿ ತಿಳಿಸಿದೆ.

ಇದನ್ನೂ ಓದಿ: ಮಳೆ ಸೃಷ್ಟಿಸುತ್ತಿರುವ ಅವಾಂತರಗಳು; ಶಿರಾ ಸಮೀಪ ರಸ್ತೆ ಮೇಲೆ ಹರಿಯುತ್ತಿದ್ದ ನೀರಲ್ಲಿ ಸಿಕ್ಕಿ ಹಾಕಿಕೊಂಡಿತು ಸರ್ಕಾರೀ ಬಸ್

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್