AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bharat Gaurav Train: ಕಾಶಿ ಬಹಳ ದೂರವಿಲ್ಲ, ಶ್ರಾವಣದ ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ ‘ಭಾರತ್‌ ಗೌರವ್‌’ ರೈಲು: ಜೊಲ್ಲೆ

ಶ್ರಾವಣ ಮಾಸದ ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ ಭಾರತ್‌ ಗೌರವ್‌ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ

Bharat Gaurav Train: ಕಾಶಿ ಬಹಳ ದೂರವಿಲ್ಲ, ಶ್ರಾವಣದ ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ 'ಭಾರತ್‌ ಗೌರವ್‌' ರೈಲು: ಜೊಲ್ಲೆ
Shashikala Jolle
TV9 Web
| Edited By: |

Updated on:Jul 11, 2022 | 4:42 PM

Share

ಬೆಂಗಳೂರು: ಶ್ರಾವಣ ಮಾಸದ ಕೊನೆಯ ವಾರದಲ್ಲಿ ಕರ್ನಾಟಕದಿಂದ ಕಾಶಿಗೆ ಭಾರತ್‌ ಗೌರವ್‌ ರೈಲು ಯೋಜನೆ ಪ್ರಾರಂಭವಾಗಲಿದೆ ಎಂದು ಮಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವೆ ಶಶಿಕಲಾ ಜೊಲ್ಲೆ ತಿಳಿಸಿದ್ದಾರೆ. ನಗರದ ಬೈಯ್ಯಪ್ಪನಹಳ್ಳಿಯಲ್ಲಿರುವ ಸರ್‌ ಎಂ ವಿಶ್ವೇಶ್ವರಯ್ಯ ರೈಲು ನಿಲ್ದಾಣದಲ್ಲಿ ಕಾಶಿ ಯಾತ್ರೆಗೆ ಕಾಯ್ದಿರಿಸಲಾಗಿರುವ ರೈಲಿನ ಪರಿಶಿಲನೆ ಹಾಗೂ ರೈಲ್ವೇ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಬಳಿಕ ಈ ವಿಷಯ ತಿಳಿಸಿದರು.

ಜೀವನದಲ್ಲಿ ಒಮ್ಮೆಯಾದರೂ ಕಾಶಿ ಯಾತ್ರೆಯನ್ನು ಕೈಗೊಳ್ಳಬೇಕು ಎನ್ನುವುದು ಬಹುಪಾಲು ಹಿಂದುಗಳ ಆಸೆಯಾಗಿರುತ್ತದೆ. ಇದರನ್ನು ಪೂರೈಸುವ ನಿಟ್ಟಿನಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು ಎನ್ನುವುದು ನನ್ನ ಆಶಯವಾಗಿತ್ತು. ಇದಕ್ಕೆ ಬೆನ್ನೆಲುಬಾಗಿ ಸನ್ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಿಂತು ಎಲ್ಲಾ ರೀತಿಯ ಸಹಕಾರ ನೀಡಿದ್ದಕ್ಕಾಗಿ ಅಭಿನಂದನೆಯನ್ನು ತಿಳಿಸಿದರು.

ಕಾಶಿಯಾತ್ರೆಗೆ ಯಾತ್ರಾರ್ಥಿಗಳನ್ನು ಕೊಂಡೊಯ್ಯುವ ಭಾರತ್‌ ಗೌರವ್‌ ರೈಲನ್ನು ಸಿದ್ದಪಡಿಸಲು ಅನುಮತಿ ನೀಡಿದ್ದು, ಶ್ರಾವಣ ಮಾಸದ ಕೊನೆಯ ವಾರದಲ್ಲಿ ಯಾತ್ರೆ ಪ್ರಾರಂಭವಾಗಲಿದೆ. ಈ ಮೂಲಕ ಭಾರತ್‌ ಗೌರವ್‌ ರೈಲು ಸೇವೆಯನ್ನು ಒದಗಿಸುತ್ತಿರುವ ದೇಶದ ಮೊದಲ ರಾಜ್ಯ ಹಾಗೂ ಇಲಾಖೆ ಎನ್ನುವ ಹೆಗ್ಗಳಿಕೆ ನಾವು ಪಾತ್ರರಾಗಲಿದ್ದೇವೆ.

ಪುಣ್ಯ ಕ್ಷೇತ್ರಗಳಿಗೆ ಕಡಿಮೆ ಖರ್ಚಿನಲ್ಲಿ ಪ್ರವಾಸ ಕೈಗೊಳ್ಳಲು ಅನುಕೂಲವಾಗುವಂತೆ ಪ್ಯಾಕೇಜುಗಳನ್ನು ರೂಪಿಸುವ ನಿಟ್ಟಿನಲ್ಲಿ ಮುಜರಾಯಿ ಇಲಾಖೆ ಮಹತ್ವದ ಹೆಜ್ಜೆಯನ್ನು ಇಟ್ಟಿದೆ. ಭಾರತ್‌ ಗೌರವ್‌ ರೈಲು ಯೋಜನೆಯ ಅಡಿಯಲ್ಲಿ ರಾಜ್ಯ ಮುಜರಾಯಿ ಇಲಾಖೆಯ ವತಿಯಿಂದ ರೈಲನ್ನು ಬಾಡಿಗೆಗೆ ಪಡೆದು ಕಾಶಿಗೆ ಓಡಿಸಲು ಎಲ್ಲಾ ರೀತಿಯ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ.

ರೈಲನ್ನು ಮಾರ್ಪಾಡಿಸುವ ಹಾಗೂ ಇನ್ನಿತರೆ ಅಗ್ಯ ಕ್ರಮಗಳ ಬಗ್ಗೆ ವಿಸ್ತ್ರುತವಾಗಿ ರೈಲ್ವೇ ಅಧಿಕಾರಿಗಳೊಂದಿಗೆ ಚರ್ಚಿಸಿದ್ದೇವೆ. ರಿಯಾಯಿತಿ ದರದಲ್ಲಿ 7 ದಿನಗಳ ಪ್ರವಾಸ ಕಾರ್ಯಕ್ರಮ ಏರ್ಪಡಿಸಲಾಗಿದೆ. ಇದಕ್ಕಾಗಿ ಈಗಾಗಲೇ 1 ಕೋಟಿ ರೂಪಾಯಿಗಳ ಭೌತಿಕ ಬ್ಯಾಂಕ್‌ ಗ್ಯಾರಂಟಿಯನ್ನು ನೀಡಿ ರೈಲನ್ನು ಬಾಡಿಗೆಗೆ ತಗೆದುಕೊಳ್ಳಲಾಗಿದೆ ಎಂದು ಹೇಳಿದರು.

ರೈಲಿನ ವಿನ್ಯಾಸದ ಬಗ್ಗೆ: ಬೆಂಗಳೂರು-ವಾರಾಣಸಿ-ಅಯೋಧ್ಯೆ-ಪ್ರಯಾಗರಾಜ್‌-ಬೆಂಗಳೂರು ಮಾರ್ಗದಲ್ಲಿ ರೈಲು 7 ದಿನಗಳಲಿ 4161 ಕಿಲೋಮೀಟರ್‌ಗಳಷ್ಟು ದಾರಿ ಕ್ರಮಿಸಲಿದೆ.

14 ಬೋಗಿಗಳನ್ನು ಈ ರೈಲು ಒಳಗೊಂಡಿರಲಿದ್ದು, 11 ಬೋಗಿಗಳನ್ನು ಪ್ರಯಾಣಿಕರ ಪ್ರವಾಸಕ್ಕೆ ಅಣಿ ಮಾಡಲಾಗುತ್ತಿದೆ. 3 ಟಯರ್‌ ಎಸಿಯ ವ್ಯವಸ್ಥೆ ಇರಲಿದೆ. ಒಂದು ಬೋಗಿಯನ್ನು ದೇವಸ್ಥಾನವಾಗಿ ಪರಿವರ್ತಿಸಿ ಯಾತ್ರಾರ್ಥಿಗಳ ಭಜನೆಗೆ ಅವಕಾಶ ನೀಡಲಾಗುವುದು. ಅಲ್ಲದೇ, ನಮ್ಮ ರಾಜ್ಯದ ಪ್ರಮುಖ ದೇವಸ್ಥಾನಗಳ ಬ್ರಾಂಡಿಂಗ್‌ ಮಾಡುವ ಉದ್ದೇಶದಿಂದ 11 ಬೋಗಿಗಳ ಮೇಲೆ ರಾಜ್ಯದ ಪ್ರಮುಖ 11 ದೇವಸ್ಥಾನಗಳ ಮಾಹಿತಿಯನ್ನು ಅಳವಡಿಸಲಾಗುವುದು.

ಆಹಾರ, ನೀರು, ವಸತಿ, ಸ್ಥಳೀಯ ಸಾರಿಗೆ ಮತ್ತು ಇತರೆ ಮೂಲಭೂತ ಸೌಕರ್ಯಗಳಿಗೆ ರೈಲ್ವೇಯ ಅಧೀನ ಸಂಸ್ಥೆಯ ಜೊತೆ ಐಆರ್‌ಸಿಟಿಸಿ ಜೊತೆಗೆ ಒಪ್ಪಂದ ಮಾಡಿಕೊಳ್ಳಲಾಗುವುದು. 7 ದಿನಗಳ ಪ್ರವಾಸಕ್ಕೆ ಅಂದಾಜು 15 ಸಾವಿರ ರೂಪಾಯಿ ವೆಚ್ಚವಾಗಲಿದ್ದು, ಇದರಲ್ಲಿ 5 ಸಾವಿರ ರೂಗಳನ್ನು ಸಹಾಯಧನವನ್ನಾಗಿ ನೀಡಲಾಗುವುದು ಎಂದು ಸಚಿವರು ತಿಳಿಸಿದರು.

ಬೆಂಗಳೂರಿನಿಂದ ಪುಣ್ಯಕ್ಷೇತ್ರಗಳಾದ ವಾರಾಣಸಿ, ಅಯೋಧ್ಯಾ, ಪ್ರಯಾಗರಾಜ್‌ ಮತ್ತು ಕಾಶಿಗೆ ಯಾತ್ರಾರ್ಥಿಗಳನ್ನು ರೈಲು ಕರೆದೊಯ್ಯಲಿದೆ. ಈ ಸಂಧರ್ಭದಲ್ಲಿ ಮುಜರಾಯಿ ಇಲಾಖೆಯ ಆಯುಕ್ತರಾದ ರೋಹಿಣಿ ಸಿಂಧೂರಿ, ಸೌತ್‌ ವೆಸ್ಟರ್ನ್‌ ರೈಲ್ವೇಯ ಚೀಪ್‌ ಕಮರ್ಷಿಯಲ್‌ ಮ್ಯಾನೇಜರ್‌ ಡಾ ಅನೂಪ್‌ ದಯಾನಂದ್‌ ಇದ್ದರು.

Published On - 4:41 pm, Mon, 11 July 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?