AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Traffic Fine Discount: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ 50ರಷ್ಟು ರಿಯಾಯಿತಿ

ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ ಕಟ್ಟಲು ಈ ಹಿಂದೆ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ಟ್ರಾಫಿಕ್ ಪೊಲೀಸರು ಇದೀಗ ಮತ್ತೆ ಡಿಸ್ಕೌಂಟ್ ನೀಡಿದ್ದಾರೆ.

Traffic Fine Discount: ಟ್ರಾಫಿಕ್ ದಂಡ ಪಾವತಿಗೆ ಮತ್ತೆ ಶೇ 50ರಷ್ಟು ರಿಯಾಯಿತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 05, 2023 | 3:23 PM

Share

ಬೆಂಗಳೂರು: ಸಂಚಾರಿ ನಿಯಮ ಉಲ್ಲಂಘಿಸಿದವರಿಗೆ ದಂಡ (Traffic Fine) ಕಟ್ಟಲು ಈ ಹಿಂದೆ ಶೇ 50ರಷ್ಟು ರಿಯಾಯಿತಿ ನೀಡಿ ಭಾರಿ ಮೊತ್ತದ ದಂಡ ಸಂಗ್ರಹಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಡಿಸ್ಕೌಂಟ್ ನೀಡಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿರುವ ವಾಹನ ಸವಾರರು ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ಕಲ್ಪಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. 2023ರ ಫೆಬ್ರವರಿ 11ರ ಒಳಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ ಪೊಲೀಸ್‌ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಲು ಈ ಹಿಂದೆ ಆದೇಶಿಸಲಾಗಿತ್ತು. ಇದೀಗ ಪೊಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ 2023ರ ಫೆಬ್ರವರಿ 11ರ ಒಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಮತ್ತೊಮ್ಮೆ ಶೇ 50ರ ರಿಯಾಯಿತಿ ನೀಡಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಸೆಪ್ಟೆಂಬರ್ 9ರ ವರೆಗೆ ರಿಯಾಯಿತಿ ದರದಲ್ಲಿ ಡಂಡ ಪಾವತಿಸಲು ಅವಕಾಶವಿದೆ ಎಂದು ಸಾರಿಗೆ ಇಲಾಖೆ ತಿಳಿಸಿದೆ. ಈ ಹಿಂದೆಯೂ 2 ಬಾರಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಸರ್ಕಾರ ಅವಕಾಶ ನೀಡಿತ್ತು. ನಂತರ ರಾಜ್ಯ ವಿಧಾನಸಭೆ ಘೋಷಣೆಯಾಗಿದ್ದು, ರಿಯಾಯಿತಿ ದರದ ದಂಡ ಪಾವತಿ ಅವಕಾಶ ಸ್ಥಗಿತಗೊಂಡಿತ್ತು.

ಹೈಕೋರ್ಟ್ ನ್ಯಾಯಾಧೀಶರು ಮತ್ತು ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷರ ನೇತೃತ್ವದಲ್ಲಿ ಜೂನ್ 14ರಂದು ನಡೆದ ಸಭೆಯ ನಡವಳಿಗಳಲ್ಲಿ ಪೂಲೀಸ್‌ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಪ್ರಕರಣಗಳಿಗೆ ದಂಡದ ಮೊತ್ತಕ್ಕೆ ರಿಯಾಯಿತಿ ನೀಡಲು ಕ್ರಮಕೈಗೊಳ್ಳುವಂತೆ ಕೋರಲಾಗಿತ್ತು. ಅದರಂತೆ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡುವ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: Bengaluru Traffic: ಸಂಚಾರಿ ನಿಯಮ ಉಲ್ಲಂಘಿಸಿದವರ ವಿರುದ್ಧ ದೂರು ನೀಡಲು ಬಂದಿದೆ ಹೊಸ ಆ್ಯಪ್​; ಇಲ್ಲಿದೆ ಅದರ ವಿಶೇಷತೆ

ಈ ಹಿಂದೆ ಜನವರಿ – ಫೆಬ್ರವರಿ ತಿಂಗಳಲ್ಲಿ 15 ದಿನಗಳ ಕಾಲ ಶೇ 50ರ ರಿಯಾಯಿತಿಯೊಂದಿಗೆ ದಂಡ ಪಾವತಿಸಲು ಅವಕಾಶ ನೀಡಲಾಗಿತ್ತು. ನಂತರ ಮಾರ್ಚ್​ 4ರಿಂದ 15 ದಿನಗಳ ಕಾಲಾವಕಾಶ ನೀಡಿತ್ತು. ಆಗಲೂ 11-02-2023ರ ಒಳಗಾಗಿ ಅನ್ವಯವಾಗುವ ಪ್ರಕರಣಗಳಿಗೆ ಮಾತ್ರ ಒಂದು ಬಾರಿಯ ಕ್ರಮವಾಗಿ ರಿಯಾಯಿತಿ ದರದಲ್ಲಿ ದಂಡ ಪಾವತಿಗೆ ಅವಕಾಶ ನೀಡಲಾಗಿತ್ತು ಎಂಬುದು ಗಮನಾರ್ಹ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 3:01 pm, Wed, 5 July 23

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು