AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶವಂತಪುರ – ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ

ನೈಋತ್ಯ ರೈಲ್ವೆ ಯಶವಂತಪುರ-ವಿಜಯಪುರ ಎಕ್ಸ್‌ಪ್ರೆಸ್ ರೈಲುಗಳ ಸಂಚಾರವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ. ವಂದೇ ಭಾರತ್ ರೈಲು ಘಟಪ್ರಭಾ ಮತ್ತು ರಾಯಬಾಗ್‌ನಲ್ಲಿ ನಿಲುಗಡೆ ಹೊಂದಲಿದೆ. ದಾನಾಪುರ-ಬೆಂಗಳೂರು ವಿಶೇಷ ರೈಲುಗಳ ಸೇವೆಯನ್ನೂ ವಿಸ್ತರಿಸಲಾಗಿದೆ. ಬೀರೂರು ಮತ್ತು ರಾಮಗಿರಿ ನಿಲ್ದಾಣಗಳಲ್ಲಿ ಕೆಲವು ರೈಲುಗಳ ತಾತ್ಕಾಲಿಕ ನಿಲುಗಡೆ ವಿಸ್ತರಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ಬದಲಾವಣೆಗಳನ್ನು ಮಾಡಲಾಗಿದೆ.

ಯಶವಂತಪುರ - ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
ವಿಜಯಪುರ ರೈಲು ನಿಲ್ದಾಣ
ವಿವೇಕ ಬಿರಾದಾರ
|

Updated on: Jul 01, 2025 | 3:44 PM

Share

ಹುಬ್ಬಳ್ಳಿ, ಜುಲೈ 01: ಪ್ರಯಾಣಿಕರ ಅನುಕೂಲಕ್ಕಾಗಿ, ಯಶವಂತಪುರ (Yeshwanthpur) ಮತ್ತು ವಿಜಯಪುರ (Vijayapura) ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ (Express Train) (ಸಂಖ್ಯೆ 06545/06546) ಸಂಚಾರದ ಅವಧಿಯನ್ನು ವಿಸ್ತರಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ಈ ಹಿಂದೆ ಜೂನ್ 30 ರವರೆಗೆ ಮಾತ್ರ ಸಂಚರಿಸಲಿದೆ ಎಂದು ತಿಳಿಸಲಾಗಿದ್ದ ರೈಲು ಸಂಖ್ಯೆ 06545 ಯಶವಂತಪುರ ವಿಜಯಪುರ ಎಕ್ಸ್‌ಪ್ರೆಸ್ ವಿಶೇಷ ರೈಲು, ಈಗ ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಸಂಚಾರ ಮುಂದುವರಿಸಲಿದೆ.

ಅದೇ ರೀತಿ, ಜುಲೈ 1 ರವರೆಗೆ ಓಡಾಟ ನಡೆಸುವುದಾಗಿ ಈ ಹಿಂದೆ ಸೂಚಿಸಲಾಗಿದ್ದ ರೈಲು ಸಂಖ್ಯೆ 06546 ವಿಜಯಪುರ – ಯಶವಂತಪುರ ಎಕ್ಸ್‌ಪ್ರೆಸ್ ವಿಶೇಷ ರೈಲು, ಈಗ 2025 ರ ಜುಲೈ 2 ರಿಂದ 2026 ರ ಜನವರಿ 1 ರವರೆಗೆ ವಿಸ್ತರಿಸಲ್ಪಟ್ಟಿದೆ.

ಇದನ್ನೂ ಓದಿ
Image
ಧಾರವಾಡ ಟು ಬೆಂಗಳೂರು ವಂದೇ ಭಾರತ್​ ರೈಲಿನಲ್ಲಿ ಬೆಂಕಿ
Image
ಪಿಂಕ್ ಲೈನ್ ಮೆಟ್ರೋ: ಮಹತ್ವದ ಅಪ್​​ಡೇಟ್ ಕೊಟ್ಟ ಬಿಎಂಆರ್​ಸಿಎಲ್
Image
ಕಾಜಿಪೇಟೆ ರೈಲು ಉತ್ಪಾದನಾ ಘಟಕದಲ್ಲಿ MEMU ರೈಲುಗಳ ತಯಾರಿ
Image
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ

ವಂದೇ ಭಾರತ್​ ಘಟಪ್ರಭಾ, ರಾಯಬಾಗ್​ದಲ್ಲೂ ನಿಲುಗಡೆ

ಪ್ರಯಾಣಿಕರ ಅನುಕೂಲಕ್ಕಾಗಿ, ಘಟಪ್ರಭಾ ಮತ್ತು ರಾಯಬಾಗ್ ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳ ಪ್ರಾಯೋಗಿಕ ನಿಲುಗಡೆಗಳನ್ನು ಮುಂದುವರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಈ ನಿಲುಗಡೆಗಳು ಜುಲೈ 01 ರಿಂದ ಈಗಿರುವ ಸಮಯಗಳೊಂದಿಗೆ ಜಾರಿಯಲ್ಲಿರುತ್ತವೆ.

  • ರೈಲು ಸಂಖ್ಯೆ 20669/20670 ಎಸ್ಎಸ್ಎಸ್ ಹುಬ್ಬಳ್ಳಿ – ಪುಣೆ – ಎಸ್ಎಸ್‌ಎಸ್ ಹುಬ್ಬಳ್ಳಿ ವಂದೇ ಭಾರತ್ ಎಕ್ಸ್‌ಪ್ರೆಸ್ ಘಟಪ್ರಭಾ ನಿಲ್ದಾಣದಲ್ಲಿ ನಿಲುಗಡೆ ಮುಂದುವರಿಸಲಿದೆ.
  • ರೈಲು ಸಂಖ್ಯೆ 16541/16542 ಯಶವಂತಪುರ – ಪಂಢರಪುರ – ಯಶವಂತಪುರ ವೀಕ್ಲಿ ಎಕ್ಸ್‌ಪ್ರೆಸ್ ಘಟಪ್ರಭಾ ಮತ್ತು ರಾಯಬಾಗ್ ನಿಲ್ದಾಣಗಳಲ್ಲಿ ನಿಲುಗಡೆ ಮುಂದುವರಿಸಲಿದೆ.

ದಾನಾಪುರ – ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ ವಿಸ್ತರಣೆ

ಪ್ರಯಾಣಿಕರ ಹೆಚ್ಚುವರಿ ಬೇಡಿಕೆ ಪೂರೈಸಲು ನೈರುತ್ಯ ರೈಲ್ವೆಯು ದಾನಾಪುರ ಮತ್ತು ಬೆಂಗಳೂರು ನಡುವೆ ಸಂಚರಿಸುವ ವಿಶೇಷ ರೈಲುಗಳ ಅವಧಿಯನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.

  • ರೈಲು ಸಂಖ್ಯೆ 03251: ದಾನಾಪುರ – ಎಸ್‌ಎಂವಿಟಿ ಬೆಂಗಳೂರು ದಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಈ ಹಿಂದೆ ಜೂನ್ 29 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಜೂನ್​ 30 ರಿಂದ ಜುಲೈ 28ರವರೆಗೆ ವಿಸ್ತರಿಸಲಾಗಿದೆ.
  • ರೈಲು ಸಂಖ್ಯೆ 03252 ಎಸ್‌ಎಂವಿಟಿ ಬೆಂಗಳೂರು- ದಾನಾಪುರ ದಿ-ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ಜುಲೈ 01 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನ್ನು ಜುಲೈ 02 ರಿಂದ ಜುಲೈ 30 ರವರೆಗೆ ವಿಸ್ತರಿಸಲಾಗಿದೆ. ಈ ಎರಡೂ ರೈಲುಗಳು ವಿಸ್ತೃತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ಒಟ್ಟು 9 ಟ್ರಿಪ್‌ಗಳಲ್ಲಿ ಚಲಿಸಲಿವೆ.
  • ರೈಲು ಸಂಖ್ಯೆ 03259 ದಾನಾಪುರ – ಎಸ್‌ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು ಜೂನ್ 24 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನ್ನು ಜುಲೈ 01 ರಿಂದ ಜುಲೈ 29 ರವರೆಗೆ ವಿಸ್ತರಿಸಲಾಗಿದೆ.
  • ರೈಲು ಸಂಖ್ಯೆ 03260 ಎಸ್‌ಎಂವಿಟಿ ಬೆಂಗಳೂರು- ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲನ್ನು ಜೂನ್ 26 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನ್ನು ಜುಲೈ 03 ರಿಂದ ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಈ ಎರಡೂ ರೈಲುಗಳು ವಿಸ್ತೃತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ಒಟ್ಟು 5 ಟ್ರಿಪ್‌ಗಳಲ್ಲಿ ಸಂಚರಿಸಲಿದೆ.

ಇದನ್ನೂ ಓದಿ: ತಿರುಪತಿಗೆ ತೆರಳುವ ಭಕ್ತರಿಗೆ ಗುಡ್​ ನ್ಯೂಸ್​: ಕರ್ನಾಟಕದಿಂದ ನೂತನ ರೈಲು, ಇಲ್ಲಿದೆ ಮಾಹಿತಿ

ಬೀರೂರು, ರಾಮಗಿರಿ ನಿಲ್ದಾಣಗಳಲ್ಲಿ ರೈಲು ತಾತ್ಕಾಲಿಕ ನಿಲುಗಡೆ ವಿಸ್ತರಣೆ

ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ಬೀರೂರು ಮತ್ತು ರಾಮಗಿರಿ ನಿಲ್ದಾಣಗಳಲ್ಲಿ ಈ ಕೆಳಗಿನ ರೈಲು ಸೇವೆಗಳ ತಾತ್ಕಾಲಿಕ ನಿಲುಗಡೆಯನ್ನು ಜುಲೈ 1 ರಿಂದ ಡಿಸೆಂಬರ್ 31ರವರೆಗೆ ಆರು ತಿಂಗಳ ಅವಧಿಗೆ ವಿಸ್ತರಿಸಿದೆ.

  • ಬೀರೂರು ನಿಲ್ದಾಣದಲ್ಲಿ: ರೈಲು ಸಂಖ್ಯೆ 16587/16588 ಯಶವಂತಪುರ-ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್‌ಪ್ರೆಸ್ ರೈಲಿನ ನಿಲುಗಡೆಯು ವಿಸ್ತರಿಸಿದ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ಮುಂದುವರಿಯುತ್ತದೆ.
  • ರಾಮಗಿರಿ ನಿಲ್ದಾಣದಲ್ಲಿ: ಕೆಳಗಿನ ರೈಲುಗಳು ಪ್ರಾಯೋಗಿಕ ಆಧಾರದ ಮೇಲೆ, ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ರಾಮಗಿರಿ ನಿಲ್ದಾಣದಲ್ಲಿ ನಿಲುಗಡೆಯಾಗುತ್ತವೆ.
  • ರೈಲು ಸಂಖ್ಯೆ 17325/17326 ಬೆಳಗಾವಿ- ಮೈಸೂರು – ಬೆಳಗಾವಿ ವಿಶ್ವಮಾನವ ದೈನಂದಿನ ಎಕ್ಸ್‌ಪ್ರೆಸ್‌.
  • ರೈಲು ಸಂಖ್ಯೆ 17391/17392 ಕೆಎಸ್‌ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್‌ಆರ್ ಬೆಂಗಳೂರು ದೈನಂದಿನ ರೈಲು.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ