ಯಶವಂತಪುರ – ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲುಗಳ ಸಂಚಾರ ಅವಧಿ ವಿಸ್ತರಣೆ
ನೈಋತ್ಯ ರೈಲ್ವೆ ಯಶವಂತಪುರ-ವಿಜಯಪುರ ಎಕ್ಸ್ಪ್ರೆಸ್ ರೈಲುಗಳ ಸಂಚಾರವನ್ನು ಡಿಸೆಂಬರ್ 31 ರವರೆಗೆ ವಿಸ್ತರಿಸಿದೆ. ವಂದೇ ಭಾರತ್ ರೈಲು ಘಟಪ್ರಭಾ ಮತ್ತು ರಾಯಬಾಗ್ನಲ್ಲಿ ನಿಲುಗಡೆ ಹೊಂದಲಿದೆ. ದಾನಾಪುರ-ಬೆಂಗಳೂರು ವಿಶೇಷ ರೈಲುಗಳ ಸೇವೆಯನ್ನೂ ವಿಸ್ತರಿಸಲಾಗಿದೆ. ಬೀರೂರು ಮತ್ತು ರಾಮಗಿರಿ ನಿಲ್ದಾಣಗಳಲ್ಲಿ ಕೆಲವು ರೈಲುಗಳ ತಾತ್ಕಾಲಿಕ ನಿಲುಗಡೆ ವಿಸ್ತರಿಸಲಾಗಿದೆ. ಪ್ರಯಾಣಿಕರ ಅನುಕೂಲಕ್ಕಾಗಿ ಈ ಬದಲಾವಣೆಗಳನ್ನು ಮಾಡಲಾಗಿದೆ.
ವಿಜಯಪುರ ರೈಲು ನಿಲ್ದಾಣ
ವಿವೇಕ ಬಿರಾದಾರ
Updated on:
Jul 01, 2025 | 3:44 PM
ಹುಬ್ಬಳ್ಳಿ, ಜುಲೈ 01: ಪ್ರಯಾಣಿಕರ ಅನುಕೂಲಕ್ಕಾಗಿ, ಯಶವಂತಪುರ (Yeshwanthpur) ಮತ್ತು ವಿಜಯಪುರ (Vijayapura) ನಿಲ್ದಾಣಗಳ ನಡುವೆ ಸಂಚರಿಸುವ ವಿಶೇಷ ಎಕ್ಸ್ಪ್ರೆಸ್ ರೈಲುಗಳ (Express Train) (ಸಂಖ್ಯೆ 06545/06546) ಸಂಚಾರದ ಅವಧಿಯನ್ನು ವಿಸ್ತರಿಸಲು ನೈಋತ್ಯ ರೈಲ್ವೆಯು ನಿರ್ಧರಿಸಿದೆ. ಈ ಹಿಂದೆ ಜೂನ್ 30 ರವರೆಗೆ ಮಾತ್ರ ಸಂಚರಿಸಲಿದೆ ಎಂದು ತಿಳಿಸಲಾಗಿದ್ದ ರೈಲು ಸಂಖ್ಯೆ 06545 ಯಶವಂತಪುರ ವಿಜಯಪುರ ಎಕ್ಸ್ಪ್ರೆಸ್ ವಿಶೇಷ ರೈಲು, ಈಗ ಜುಲೈ 1 ರಿಂದ ಡಿಸೆಂಬರ್ 31 ರವರೆಗೆ ಸಂಚಾರ ಮುಂದುವರಿಸಲಿದೆ.
ಅದೇ ರೀತಿ, ಜುಲೈ 1 ರವರೆಗೆ ಓಡಾಟ ನಡೆಸುವುದಾಗಿ ಈ ಹಿಂದೆ ಸೂಚಿಸಲಾಗಿದ್ದ ರೈಲು ಸಂಖ್ಯೆ 06546 ವಿಜಯಪುರ – ಯಶವಂತಪುರ ಎಕ್ಸ್ಪ್ರೆಸ್ ವಿಶೇಷ ರೈಲು, ಈಗ 2025 ರ ಜುಲೈ 2 ರಿಂದ 2026 ರ ಜನವರಿ 1 ರವರೆಗೆ ವಿಸ್ತರಿಸಲ್ಪಟ್ಟಿದೆ.
ಇದನ್ನೂ ಓದಿ
ಧಾರವಾಡ ಟು ಬೆಂಗಳೂರು ವಂದೇ ಭಾರತ್ ರೈಲಿನಲ್ಲಿ ಬೆಂಕಿ
ಪಿಂಕ್ ಲೈನ್ ಮೆಟ್ರೋ: ಮಹತ್ವದ ಅಪ್ಡೇಟ್ ಕೊಟ್ಟ ಬಿಎಂಆರ್ಸಿಎಲ್
ಕಾಜಿಪೇಟೆ ರೈಲು ಉತ್ಪಾದನಾ ಘಟಕದಲ್ಲಿ MEMU ರೈಲುಗಳ ತಯಾರಿ
ರಷ್ಯಾದಲ್ಲಿ ರೈಲು ಹಾದುಹೋಗುತ್ತಿದ್ದಂತೆ ಕುಸಿದ ಸೇತುವೆ
ವಂದೇ ಭಾರತ್ ಘಟಪ್ರಭಾ, ರಾಯಬಾಗ್ದಲ್ಲೂ ನಿಲುಗಡೆ
ಪ್ರಯಾಣಿಕರ ಅನುಕೂಲಕ್ಕಾಗಿ, ಘಟಪ್ರಭಾ ಮತ್ತು ರಾಯಬಾಗ್ ನಿಲ್ದಾಣಗಳಲ್ಲಿ ಈ ಕೆಳಗಿನ ರೈಲುಗಳ ಪ್ರಾಯೋಗಿಕ ನಿಲುಗಡೆಗಳನ್ನು ಮುಂದುವರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ಈ ನಿಲುಗಡೆಗಳು ಜುಲೈ 01 ರಿಂದ ಈಗಿರುವ ಸಮಯಗಳೊಂದಿಗೆ ಜಾರಿಯಲ್ಲಿರುತ್ತವೆ.
ರೈಲು ಸಂಖ್ಯೆ 20669/20670 ಎಸ್ಎಸ್ಎಸ್ ಹುಬ್ಬಳ್ಳಿ – ಪುಣೆ – ಎಸ್ಎಸ್ಎಸ್ ಹುಬ್ಬಳ್ಳಿ ವಂದೇ ಭಾರತ್ ಎಕ್ಸ್ಪ್ರೆಸ್ ಘಟಪ್ರಭಾ ನಿಲ್ದಾಣದಲ್ಲಿ ನಿಲುಗಡೆ ಮುಂದುವರಿಸಲಿದೆ.
ರೈಲು ಸಂಖ್ಯೆ 16541/16542 ಯಶವಂತಪುರ – ಪಂಢರಪುರ – ಯಶವಂತಪುರ ವೀಕ್ಲಿ ಎಕ್ಸ್ಪ್ರೆಸ್ ಘಟಪ್ರಭಾ ಮತ್ತು ರಾಯಬಾಗ್ ನಿಲ್ದಾಣಗಳಲ್ಲಿ ನಿಲುಗಡೆ ಮುಂದುವರಿಸಲಿದೆ.
Kindly note:
I. Continuation of Experimental Stoppage of Trains at Ghataprabha and Raybag Stations
II. Extension of Periodicity of Yesvantpur – Vijayapura –Yesvantpur Express Special
III. Continuation of Express Special trains Between Danapur and Bengaluru
I. ಘಟಪ್ರಭಾ ಮತ್ತು… pic.twitter.com/7p8rhEZU1F
ದಾನಾಪುರ – ಬೆಂಗಳೂರು ನಡುವೆ ವಿಶೇಷ ರೈಲುಗಳ ಸಂಚಾರ ವಿಸ್ತರಣೆ
ಪ್ರಯಾಣಿಕರ ಹೆಚ್ಚುವರಿ ಬೇಡಿಕೆ ಪೂರೈಸಲು ನೈರುತ್ಯ ರೈಲ್ವೆಯು ದಾನಾಪುರ ಮತ್ತು ಬೆಂಗಳೂರು ನಡುವೆ ಸಂಚರಿಸುವ ವಿಶೇಷ ರೈಲುಗಳ ಅವಧಿಯನ್ನು ವಿಸ್ತರಿಸಿ ಅಧಿಸೂಚನೆ ಹೊರಡಿಸಿದೆ.
ರೈಲು ಸಂಖ್ಯೆ 03251: ದಾನಾಪುರ – ಎಸ್ಎಂವಿಟಿ ಬೆಂಗಳೂರು ದಿ-ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಈ ಹಿಂದೆ ಜೂನ್ 29 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಜೂನ್ 30 ರಿಂದ ಜುಲೈ 28ರವರೆಗೆ ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 03252 ಎಸ್ಎಂವಿಟಿ ಬೆಂಗಳೂರು- ದಾನಾಪುರ ದಿ-ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ಜುಲೈ 01 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನ್ನು ಜುಲೈ 02 ರಿಂದ ಜುಲೈ 30 ರವರೆಗೆ ವಿಸ್ತರಿಸಲಾಗಿದೆ. ಈ ಎರಡೂ ರೈಲುಗಳು ವಿಸ್ತೃತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ಒಟ್ಟು 9 ಟ್ರಿಪ್ಗಳಲ್ಲಿ ಚಲಿಸಲಿವೆ.
ರೈಲು ಸಂಖ್ಯೆ 03259 ದಾನಾಪುರ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲು ಜೂನ್ 24 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನ್ನು ಜುಲೈ 01 ರಿಂದ ಜುಲೈ 29 ರವರೆಗೆ ವಿಸ್ತರಿಸಲಾಗಿದೆ.
ರೈಲು ಸಂಖ್ಯೆ 03260 ಎಸ್ಎಂವಿಟಿ ಬೆಂಗಳೂರು- ದಾನಾಪುರ ಸಾಪ್ತಾಹಿಕ ವಿಶೇಷ ಎಕ್ಸ್ಪ್ರೆಸ್ ರೈಲನ್ನು ಜೂನ್ 26 ರವರೆಗೆ ಸಂಚರಿಸಲು ಸೂಚಿಸಲಾಗಿತ್ತು. ಈಗ ಇದನ್ನು ಜುಲೈ 03 ರಿಂದ ಜುಲೈ 31 ರವರೆಗೆ ವಿಸ್ತರಿಸಲಾಗಿದೆ. ಈ ಎರಡೂ ರೈಲುಗಳು ವಿಸ್ತೃತ ಅವಧಿಯಲ್ಲಿ ಪ್ರತಿ ದಿಕ್ಕಿನಲ್ಲಿ ಒಟ್ಟು 5 ಟ್ರಿಪ್ಗಳಲ್ಲಿ ಸಂಚರಿಸಲಿದೆ.
ಬೀರೂರು, ರಾಮಗಿರಿ ನಿಲ್ದಾಣಗಳಲ್ಲಿ ರೈಲು ತಾತ್ಕಾಲಿಕ ನಿಲುಗಡೆ ವಿಸ್ತರಣೆ
ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ಬೀರೂರು ಮತ್ತು ರಾಮಗಿರಿ ನಿಲ್ದಾಣಗಳಲ್ಲಿ ಈ ಕೆಳಗಿನ ರೈಲು ಸೇವೆಗಳ ತಾತ್ಕಾಲಿಕ ನಿಲುಗಡೆಯನ್ನು ಜುಲೈ 1 ರಿಂದ ಡಿಸೆಂಬರ್ 31ರವರೆಗೆ ಆರು ತಿಂಗಳ ಅವಧಿಗೆ ವಿಸ್ತರಿಸಿದೆ.
ಬೀರೂರು ನಿಲ್ದಾಣದಲ್ಲಿ: ರೈಲು ಸಂಖ್ಯೆ 16587/16588 ಯಶವಂತಪುರ-ಬಿಕಾನೇರ್-ಯಶವಂತಪುರ ದ್ವಿ-ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲಿನ ನಿಲುಗಡೆಯು ವಿಸ್ತರಿಸಿದ ಅವಧಿಯಲ್ಲಿ ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ಮುಂದುವರಿಯುತ್ತದೆ.
ರಾಮಗಿರಿ ನಿಲ್ದಾಣದಲ್ಲಿ: ಕೆಳಗಿನ ರೈಲುಗಳು ಪ್ರಾಯೋಗಿಕ ಆಧಾರದ ಮೇಲೆ, ಅಸ್ತಿತ್ವದಲ್ಲಿರುವ ಸಮಯದ ಪ್ರಕಾರ ರಾಮಗಿರಿ ನಿಲ್ದಾಣದಲ್ಲಿ ನಿಲುಗಡೆಯಾಗುತ್ತವೆ.
ರೈಲು ಸಂಖ್ಯೆ 17325/17326 ಬೆಳಗಾವಿ- ಮೈಸೂರು – ಬೆಳಗಾವಿ ವಿಶ್ವಮಾನವ ದೈನಂದಿನ ಎಕ್ಸ್ಪ್ರೆಸ್.
ರೈಲು ಸಂಖ್ಯೆ 17391/17392 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ ಬೆಂಗಳೂರು ದೈನಂದಿನ ರೈಲು.
ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿಕ್ಲಿಕ್ ಮಾಡಿ
ವಿವೇಕ ಬಿರಾದಾರ
ಮೂಲತಃ ಧಾರವಾಡ ಜಿಲ್ಲೆಯ ಹುಬ್ಬಳ್ಳಿಯವ. ಪ್ರಸ್ತುತ ಬೆಂಗಳೂರಿನಲ್ಲಿ ವಾಸಿಸುತ್ತಿದ್ದೇನೆ. ಕಳೆದ ಮೂರು ವರ್ಷಗಳಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಚಲಿತ ವಿದ್ಯಮಾನ, ರಾಜಕೀಯ, ಅಪರಾಧ ಬರವಣಿಗೆಯ ಬಗ್ಗೆ ಹೆಚ್ಚಿನ ಆಸಕ್ತಿ ಹೊಂದಿದ್ದೇನೆ.