AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಹನ ಮಾಲೀಕರ ಗಮನಕ್ಕೆ: ಇನ್ಮುಂದೆ ಗಾಡಿ ಎಫ್ಸಿಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್

ಬೆಂಗಳೂರಿನಲ್ಲಿ ಕೆಲ ಆರ್ಟಿಓ ಅಧಿಕಾರಿಗಳು ವಾಹನಗಳನ್ನು ತಪಾಸಣೆ ಮಾಡದೆಯೇ ಎಫ್ಸಿ ನೀಡುತ್ತಿದ್ದು, ಈ ಸಂಬಂಧ ಟಿವಿ9 ಸುದ್ದಿ ಬಿತ್ತರಿಸಿತ್ತು. ಈ ಹಿನ್ನೆಲೆ ಎಚ್ಚೆತ್ತುಕೊಂಡ ಕರ್ನಾಟಕ ಸಾರಿಗೆ ಇಲಾಖೆ ಖಡಕ್ ರೂಲ್ಸ್ ಜಾರಿ ಮಾಡಿದೆ. ಬೆಂಗಳೂರಿನ 11 ಆರ್ಟಿಓ ಸೇರಿದಂತೆ ರಾಜ್ಯದ 66 ಆರ್ಟಿಓಗಳಲ್ಲೂ ಹೊಸ ರೂಲ್ಸ್ ಜಾರಿ‌ಯಾಗಿದೆ. ಹೊಸ ರೂಲ್ಸ್ ಏನು ಎನ್ನುವುದು ಈ ಕೆಳಗಿನಂತಿದೆ.

ವಾಹನ ಮಾಲೀಕರ ಗಮನಕ್ಕೆ: ಇನ್ಮುಂದೆ  ಗಾಡಿ ಎಫ್ಸಿಗೆ ಸಾರಿಗೆ ಇಲಾಖೆಯಿಂದ ಹೊಸ ರೂಲ್ಸ್
Vehicle Fc
ಕಿರಣ್​ ಸೂರ್ಯ
| Edited By: |

Updated on: Mar 11, 2026 | 10:22 PM

Share

ಬೆಂಗಳೂರು, (ಮಾರ್ಚ್ 11): ಬೆಂಗಳೂರಿನ ಆರ್‌ಟಿಒ ಕಚೇರಿಗಳಲ್ಲಿ ಹೊರರಾಜ್ಯದ ವಾಹನಗಳಿಗೆ ಯಾವುದೇ ತಪಾಸಣೆ ಮಾಡದೇ ಅಕ್ರಮವಾಗಿ ಅರ್ಹತಾ ಪತ್ರ (fitness certificate) ನೀಡಲಾಗುತ್ತಿದೆ. ಆರ್ಟಿಓ ಅಧಿಕಾರಿಗಳು ವಾಹನಗಳು ತಪಾಸಣೆ ಮಾಡದೆ,ಕೆಲ ವಾಹನಗಳು ರಾಜ್ಯಕ್ಕೆ ‌ಬಾರದಿದ್ದರೂ ಅಂತಹ ವಾಹನಗಳಿಗೆ ಅನಧಿಕೃತವಾಗಿ ಎಫ್ಸಿ ನೀಡಲಾಗುತ್ತಿದ್ದು, ಈ ಬಗ್ಗೆ ನಿಮ್ಮ ಟಿವಿ9, ಆರ್​​ಟಿಓಗಳ ಕರ್ಮಕಾಂಡದ ಬಗ್ಗೆ ಸುದ್ದಿ ಮಾಡಿತ್ತು. ಇದರ ಬೆನ್ನಲ್ಲೇ ಇದೀಗ ಎಚ್ಚೆತ್ತುಕೊಂಡ ರಾಜ್ಯ ಸಾರಿಗೆ ಇಲಾಖೆ, ಎಫ್ಸಿ ಮಾಡಲು ಕಠಿಣ ರೂಲ್ಸ್ ಜಾರಿಗೆ ತಂದಿದ್ದು, ಇನ್ಮುಂದೆ ಎಫ್ಸಿ ಮಾಡಬೇಕು ಅಂದರೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿದೆ.

ಎಫ್ಸಿಗೆ ಹೊಸ ರೂಲ್ಸ್​​​ ಏನು?

ಎಫ್ಸಿ ಮಾಡಬೇಕು ಅಂದರೆ ಜಿಯೋ ಫೆನ್ಸಿಂಗ್ ಕಡ್ಡಾಯಗೊಳಿಸಿದೆ.  ವಾಹನಗಳ 6 ಜಿಪಿಎಸ್ ಫೋಟೋ, ಜಿಪಿಎಸ್ ವಿಥ್ ಲೊಕೇಷನ್ ನಲ್ಲೇ ಎಫ್ಸಿ ಮಾಡಬೇಕು. ಎಲ್ಲಾ ಮಾಹಿತಿಯನ್ನು ಅಪ್ಲಿಕೇಷನ್ ನಲ್ಲಿ ಅಪ್ಲೋಡ್ ಮಾಡುವುದು ಕಡ್ಡಾಯಗೊಳಿಸಲಾಗಿದೆ. ಈ ಹಿಂದೆ ಫೋಟೋ ಅಪ್ಲೋಡ್ ಮಾಡುವಂತಿರಲಿಲ್ಲ. ಇದೀಗ ಅದನ್ನು ಕಡ್ಡಾಯಗೊಳಿಸಿದ್ದು, ಈ ಮೂಲಕ ಆರ್​​ಟಿಓಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲಾಗಿದೆ.

ಇದನ್ನೂ ನೋಡಿ: ಆರ್​​ಟಿಓ ಅಧಿಕಾರಿಗಳ ಮತ್ತೊಂದು ಕಳ್ಳಾಟ ಬಯಲು

ಕೇರಳ, ಮಹಾರಾಷ್ಟ್ರ, ಗುಜರಾತ್ ರಾಜ್ಯದ ವಾಹನಗಳನ್ನು ತಪಾಸಣೆ ಮಾಡದೆ,10,022 ವಾಹನಗಳಿಗೆ ಕೋರಮಂಗಲ ಆರ್ಟಿಓ ಕಚೇರಿಯ ಮೋಟಾರು ವಾಹನ ನಿರೀಕ್ಷಕರು ಎಫ್ಸಿ ನೀಡಿದ್ದ ಬಗ್ಗೆ, ಕಳೆದ ತಿಂಗಳು ಫೆಬ್ರವರಿ 13ರಂದು ಟಿವಿ9 ಕನ್ನಡ ಪ್ರಸಾರ ಮಾಡಿತ್ತು‌‌.ಇತ್ತ ಗುಜರಾತ್ ನ 41 ವಾಹನಗಳಿಗೆ ಅನಧಿಕೃತವಾಗಿ ಎಫ್ಸಿ ನೀಡಿದ ಬಗ್ಗೆಯೂ ಟಿವಿ9 ಕನ್ನಡ ಜನವರಿ- 20 ರಂದು ಸುದ್ದಿ ಪ್ರಸಾರ ಮಾಡಿತ್ತು. ಈ ಹಿನ್ನೆಲೆ ನಿಸಾರ್ ಅಹಮದ್ ನನ್ನ ಸಾರಿಗೆ ಇಲಾಖೆ ಆಯುಕ್ತರು ಸಸ್ಪೆಂಡ್ ಮಾಡಿದ್ದರು. ಬಳಿಕ ಅಲರ್ಟ್ ಆಗಿರುವ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳಿಗೆ ಖಡಕ್ ರೂಲ್ಸ್ ಜಾರಿ ಮಾಡಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ಹೊಸ ರಾಜಕೀಯ ಪಕ್ಷದ ಬಗ್ಗೆ ವಿವರ ಹಂಚಿಕೊಂಡ ನಟ ಚೇತನ್ ಅಹಿಂಸ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ನೀಟ್ ಪರೀಕ್ಷೆಗೆ ಬಂದ ವಿದ್ಯಾರ್ಥಿಗಳ ಚೈನ್, ಮೂಗುತಿಗೆ ಕತ್ತರಿ
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಅಖಂಡ ಶ್ರೀನಿವಾಸಮೂರ್ತಿ ಘರ್ ವಾಪ್ಸಿ: ಯಾವ ಕ್ಷೇತ್ರದ ಟಿಕೆಟ್ ಆಕಾಂಕ್ಷಿ?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಹರಿಪ್ರಸಾದ್​​​ಗೆ ಖರ್ಗೆ ಕೊಟ್ಟ ಸಲಹೆಗಳೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಗಿಲ್ಲಿ ನಟನ ಮೊದಲ ಸಿನಿಮಾಕ್ಕೆ ಕಾವೂನೇ ನಾಯಕಿ: ಗಿಲ್ಲಿ ಹೇಳಿದ್ದೇನು?
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಕರ್ನಾಟಕ ಕಾಂಗ್ರೆಸ್ ಅಧ್ಯಕ್ಷರಾಗಿ ಬಿಕೆ ಹರಿಪ್ರಸಾದ್​​​ಗೆ ಪಟ್ಟಾಭಿಷೇಕ
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಈ ಜನ್ಮದಲ್ಲಿ ಚುನಾವಣೆಗೆ ನಿಲ್ಲಬಾರದು ಹಾಗೇ ಮಾಡ್ತೀವಿ:ಅಶೋಕ್
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಹುಲಿಗೆಮ್ಮ ದೇವಾಲಯದ ಹುಂಡಿ ಎಣಿಕೆ: 1 ಕೋಟಿಗೂ ಅಧಿಕ ದೇಣಿಗೆ ಸಂಗ್ರಹ!
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
ಪರಪ್ಪನ ಅಗ್ರಹಾರ ಜೈಲಿನಲ್ಲಿ ಯೋಗ ದಿನಾಚರಣೆ; ದರ್ಶನ್, ಪವಿತ್ರಾ ಗೌಡ ಭಾಗಿ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ
Namma Metro: ಬೆಂಗಳೂರಿನ ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಅಗ್ನಿ ಅವಘಡ