AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯ ಸರ್ಕಾರಕ್ಕೆ ಸಾರಿಗೆ ಸಿಬ್ಬಂದಿಯಿಂದ ಡೆಡ್​ಲೈನ್​; ಸೋಮವಾರದಿಂದ ಜೈಲ್ ಭರೋ ಚಳವಳಿ: ಕೋಡಿಹಳ್ಳಿ ಚಂದ್ರಶೇಖರ್

ಸಾರಿಗೆ ನೌಕರರ ಸಮಸ್ಯೆಗಳ‌ ಬಗ್ಗೆ ರಾಜ್ಯಪಾಲರಿಗೆ ಮನವಿ ಪತ್ರ ಕೊಡುತ್ತೇವೆ. ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು. ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಆಶಿಸಿದ್ದಾರೆ.

ರಾಜ್ಯ ಸರ್ಕಾರಕ್ಕೆ ಸಾರಿಗೆ ಸಿಬ್ಬಂದಿಯಿಂದ ಡೆಡ್​ಲೈನ್​; ಸೋಮವಾರದಿಂದ ಜೈಲ್ ಭರೋ ಚಳವಳಿ: ಕೋಡಿಹಳ್ಳಿ ಚಂದ್ರಶೇಖರ್
ಕೋಡಿಹಳ್ಳಿ ಚಂದ್ರಶೇಖರ್
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Apr 17, 2021 | 4:40 PM

Share

ಬೆಂಗಳೂರು: ಸತತವಾಗಿ 11 ದಿನಗಳಿಂದ ಮುಷ್ಕರದಲ್ಲಿ ನಿರತರಾಗಿರುವ ರಾಜ್ಯ ಸಾರಿಗೆ ಸಿಬ್ಬಂದಿ ಸರ್ಕಾರಕ್ಕೆ ಡೆಡ್​ಲೈನ್ ನೀಡಿದ್ದಾರೆ. ಈ ಬಗ್ಗೆ ಸಾರಿಗೆ ನೌಕರರ ಕೂಟದ ಗೌರವಾಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸುದ್ದಿಗೋಷ್ಠಿ ನಡೆಸಿದ್ದು, ಮುಷ್ಕರ ನಿರತ ಸಾರಿಗೆ ಸಿಬ್ಬಂದಿಯಿಂದ ಸೋಮವಾರದ ನಂತರ ಜೈಲ್ ಭರೋ ಚಳವಳಿ ಆರಂಭವಾಗಲಿದೆ. ಸೋಮವಾರದ ನಂತರ ಮುಷ್ಕರ ಮತ್ತಷ್ಟು ತೀವ್ರಗೊಳ್ಳುತ್ತೆ. 1 ಲಕ್ಷಕ್ಕೂ ಹೆಚ್ಚು ಜನರು ಜೈಲಿಗೆ ಹೋಗಲು ಸಿದ್ಧರಿದ್ದಾರೆ ಎಂದು ಎಚ್ಚರಿಸಿದ್ದಾರೆ.

ಸಾರಿಗೆ ನೌಕರರ ಸಮಸ್ಯೆಗಳ‌ ಬಗ್ಗೆ ರಾಜ್ಯಪಾಲರಿಗೆ ಮನವಿ ಪತ್ರ ಕೊಡುತ್ತೇವೆ. ರಾಜ್ಯಪಾಲರು ಮಧ್ಯ ಪ್ರವೇಶ ಮಾಡಬೇಕು. ಸರ್ಕಾರಕ್ಕೆ ಬುದ್ದಿ ಹೇಳಬೇಕು ಎಂದು ಅವರು ಆಶಿಸಿದ್ದಾರೆ.

ರಾಜ್ಯ ಸರ್ಕಾರವು ಸಾರಿಗೆ ಕೆಲಸಗಾರರ ಬಗ್ಗೆ ತಿರಸ್ಕಾರ ಭಾವನೆ ತೋರಿಸುತ್ತಿದೆ. ನೌಕರರ ಮನೆ ಮುಂದೆ ಹೋಗಿ ಅವರನ್ನ ಮಾನಸಿಕವಾಗಿ ಘಾಸಿಗೊಳಿಸುತ್ತಿದೆ. ಇದರಿಂದ ನೌಕರರು ಆತ್ಮಹತ್ಯೆ ಮಾಡಿಕೊಳ್ಳುವುದು ಹೆಚ್ಚಾಗಿದೆ. ಸಮಸ್ಯೆ ಬಗ್ಗೆ ಮುಕ್ತ ಮಾತುಕತೆ ಮಾಡಿ ಬಗೆಹರಿಸಬೇಕು. ಆದ್ರೆ ಸರ್ಕಾರ ದೌರ್ಜನ್ಯದ ಮಾರ್ಗ ಅನುಸರಿಸುತ್ತಿದೆ. ಹಲವಾರು ನೌಕರರನ್ನ ಕಾರಣ ಕೊಡದೇ ಅರೆಸ್ಟ್ ಮಾಡಿ, ಭಯೋತ್ಪಾದಕರನ್ನಾಗಿ ನೋಡಲಾಗುತ್ತಿದೆ ಎಂದು ಕೋಡಿಹಳ್ಳಿ ಚಂದ್ರಶೇಖರ್ ಆಕ್ರೋಶ ಹೊರಹಾಕಿದರು.

ಬಾಗಲಕೋಟೆ ಜಮಖಂಡಿಯಲ್ಲಿ ಸರ್ಕಾರಿ ಬಸ್ ಚಾಲಕನಿಗೆ ಕಲ್ಲಿನಿಂದ ಹಲ್ಲೆ ಅರೋಪ ಪ್ರಸ್ತಾಪಿಸಿದ ಕೋಡಿಹಳ್ಳಿ ಚಂದ್ರಶೇಖರ್, ಘಟನೆಗೆ ವಿಷಾದ ವ್ಯಕ್ತಪಡಿಸಿದರು. ಈ ರೀತಿ ಘಟನೆ ನಡೆಯಬಾರದಿತ್ತು. ನಮ್ಮವರು ಶಾಂತ ರೀತಿಯಲ್ಲಿ ಧರಣಿ ಮಾಡ್ತಿದ್ದಾರೆ. ಸರ್ಕಾರದಿಂದ ಕುಟುಂಬಕ್ಕೆ ಪರಿಹಾರ ನೀಡುವಂತೆ ಅವರು ಒತ್ತಾಯ ಮಾಡಿದರು.

(Karnataka transport employees union president kodihalli chandrashekar press meet details)

Published On - 3:37 pm, Sat, 17 April 21

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ