AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ಸಾರಿಗೆ ಸಿಬ್ಬಂದಿ ನೌಕರರು ಹಠಮಾರಿತನದಿಂದ ಹೊರಬರಬೇಕು: ಸಚಿವ ಲಕ್ಷ್ಮಣ ಸವದಿ

ಬೇರೆ ರಾಜ್ಯಗಳಲ್ಲಿ ಕೊರೊನಾ ನೆಪವೊಡ್ಡಿ ಸಂಬಳ ಕಡಿತ ಮಾಡಲಾಗಿದೆ. ಆದರೆ ನಾವು ಸಾರಿಗೆ ನೌಕರರ ಸಂಬಳವನ್ನು ಕಡಿತ ಮಾಡಿಲ್ಲ. ಸೌರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ; ಸಾರಿಗೆ ಸಚಿವ ಲಕ್ಷ್ಮಣ ಸವದಿ

Bus Strike: ಸಾರಿಗೆ ಸಿಬ್ಬಂದಿ ನೌಕರರು  ಹಠಮಾರಿತನದಿಂದ ಹೊರಬರಬೇಕು: ಸಚಿವ ಲಕ್ಷ್ಮಣ ಸವದಿ
ಸಾರಿಗೆ ಸಚಿವ ಲಕ್ಷ್ಮಣ ಸವದಿ
guruganesh bhat
|

Updated on:Apr 06, 2021 | 4:50 PM

Share

ಬೀದರ್: ಕೊರೊನಾ ಸಮಯದಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಸಾರಿಗೆ ನೌಕರರು ನಾಳಿನ ಮುಷ್ಕರವನ್ನು ಕೈಬಿಡಬೇಕು. ಪ್ರತಿಭಟನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಮಧ್ಯಮ ವರ್ಗ ಮತ್ತು ಬಡವರು ಹಠಮಾರಿತನದಿಂದ ಹೊರಬರಬೇಕು ಎಂದು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಕೊರೊನಾದಿಂದ ಸಾರಿಗೆ ಇಲಾಖೆಗೆ ₹ 3,200 ಕೋಟಿ ನಷ್ಟವಾಗಿದೆ. ಕೊರೊನಾಗೂ ಮುಂಚೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ದಿನಕ್ಕೆ 1 ಕೋಟಿ ಜನ ಪ್ರಯಾಣಿಸ್ತಿದ್ದರು. ಆದರೆ ಈಗ ದಿನಕ್ಕೆ 60 ಲಕ್ಷ ಜನರಷ್ಟೇ ಪ್ರಯಾಣಿಸುತ್ತಿದ್ದಾರೆ. ಈಗ ಬರುವ ಆದಾಯ ಸಂಬಳ, ಇಂಧನಕ್ಕೂ ಸಾಕಾಗುತ್ತಿಲ್ಲ. ಹಣದ ಕೊರತೆ ನೀಗಿಸಲು ಸರ್ಕಾರದಿಂದ ಹಣ ಪಡೆದಿದ್ದೇವೆ. ₹ 1,962 ಕೋಟಿ ಪಡೆದು ನೌಕರರಿಗೆ ಸಂಬಳ ಕೊಡಲಾಗಿದೆ. ಬೇರೆ ರಾಜ್ಯಗಳಲ್ಲಿ ಕೊರೊನಾ ನೆಪವೊಡ್ಡಿ ಸಂಬಳ ಕಡಿತ ಮಾಡಲಾಗಿದೆ. ಆದರೆ ನಾವು ಸಾರಿಗೆ ನೌಕರರ ಸಂಬಳವನ್ನು ಕಡಿತ ಮಾಡಿಲ್ಲ. ಸೌರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸಂಬಳ ಪರಿಷ್ಕರಣೆಯ ಒಂದು ಬೇಡಿಕೆ ಮಾತ್ರ ಬಾಕಿ ಇದೆ. ಇದನ್ನು ಈಡೇರಿಸಿದರೆ ₹ 1 ಸಾವಿರ ಕೋಟಿ ಹೊರೆಯಾಗುತ್ತದೆ. ಆದರೂ ಕೂಡ ಸಿಎಂ ಯಡಿಯೂರಪ್ಪ ಜತೆ ಚರ್ಚಿಸಿ ಸಂಬಳ ಹೆಚ್ಚಿಸುತ್ತೇವೆ. ಚುನಾವಣಾ ನಿತಿ ಸಂಹಿತೆ ಇರುವ ಕಾರಣ ಮೇ 2ರ ವೇಳೆಗೆ ಸಂಬಳ ಹೆಚ್ಚಿಸಲು ಅನುಮತಿ ದೊರೆಯಬಹುದು ಎಂದು ಹೇಳಿದರು.

ನಾಳೆಯ ಬಂದ್​ನ ಬಿಸಿ ಇಂದಿನಿಂದಲೇ ಜನಸಾಮಾನ್ಯರಿಗೆ ತಟ್ಟತೊಡಗಿದೆ. ಬೆಂಗಳೂರಿನ ನೆಲಮಂಗಲದಲ್ಲಿ ಬಸ್‌ಗಳು‌ ಇಲ್ಲದೆ ಪ್ರಯಾಣಿಕರು ಪರದಾಟ ಪಡುತ್ತಿದ್ದಾರೆ. ಕೆಲ ಮಾರ್ಗದಲ್ಲಿ 2ನೇ ಪಾಳಿಯ ಬಸ್‌ ಸೇವೆಯಲ್ಲಿ ವ್ಯತ್ಯಯವಾಗಿದೆ. ಯಶವಂತಪುರ ಘಟಕ 8ರಲ್ಲಿ ಬಸ್​ಗಳು ನಿಂತಲ್ಲೇ ನಿಂತಿವೆ. ಯಶವಂತಪುರ ಘಟಕ 8ರಲ್ಲಿ ಒಟ್ಟು 177 ಬಸ್​ಗಳಿದ್ದು, ಜನರಲ್ ಶಿಫ್ಟ್​ನಲ್ಲಿ 60 ಹೊರಟಿವೆ.ಆದರೆ ರಾತ್ರಿ ಪಾಳಿಯಲ್ಲಿ 79 ಹೋಗಬೇಕಿದ್ದು, ಈವರೆಗೆ ಕೇವಲ 2 ಬಸ್ ಗಳು ಮಾತ್ರ ಹೋಗಿವೆ. ಜತೆಗೆ 77 ಬಸ್​ಗಳು ಡಿಪೋದಲ್ಲಿಯೇ ಇವೆ. ಬೆಂಗಳೂರಿನ ಇನ್ನೂ ಹಲವು ಮಾರ್ಗಗಳಲ್ಲಿ ಬಸ್ ಸಂಚಾರ ವ್ಯತ್ಯಯವಾಗುತ್ತಿದೆ.

ಇದನ್ನೂ ಓದಿ: ನಾಳೆಯ ಮುಷ್ಕರದಲ್ಲಿ ಏನೇ ನಡೆದರೂ ಕೋಡಿಹಳ್ಳಿ ಚಂದ್ರಶೇಖರ ಹೊಣೆ; ಬಿಎಂಟಿಸಿ ಎಂಡಿ ಶಿಖಾಗೆ ದೂರು

Bus Strike: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಸಾಕಷ್ಟು ಹಣ ಖರ್ಚಾಗುತ್ತಿದೆ: ಕಂದಾಯ ಸಚಿವ ಆರ್.ಅಶೋಕ್

Published On - 4:40 pm, Tue, 6 April 21

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ