Sign In

By signing in or creating an account, you agree with Associated Broadcasting Company's Terms & Conditions and Privacy Policy.

Bus Strike: ಸಾರಿಗೆ ಸಿಬ್ಬಂದಿ ನೌಕರರು ಹಠಮಾರಿತನದಿಂದ ಹೊರಬರಬೇಕು: ಸಚಿವ ಲಕ್ಷ್ಮಣ ಸವದಿ

ಬೇರೆ ರಾಜ್ಯಗಳಲ್ಲಿ ಕೊರೊನಾ ನೆಪವೊಡ್ಡಿ ಸಂಬಳ ಕಡಿತ ಮಾಡಲಾಗಿದೆ. ಆದರೆ ನಾವು ಸಾರಿಗೆ ನೌಕರರ ಸಂಬಳವನ್ನು ಕಡಿತ ಮಾಡಿಲ್ಲ. ಸೌರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ; ಸಾರಿಗೆ ಸಚಿವ ಲಕ್ಷ್ಮಣ ಸವದಿ

Bus Strike: ಸಾರಿಗೆ ಸಿಬ್ಬಂದಿ ನೌಕರರು  ಹಠಮಾರಿತನದಿಂದ ಹೊರಬರಬೇಕು: ಸಚಿವ ಲಕ್ಷ್ಮಣ ಸವದಿ
ಸಾರಿಗೆ ಸಚಿವ ಲಕ್ಷ್ಮಣ ಸವದಿ
Follow us
guruganesh bhat
|

Updated on:Apr 06, 2021 | 4:50 PM

ಬೀದರ್: ಕೊರೊನಾ ಸಮಯದಲ್ಲಿ ಪ್ರತಿಭಟನೆ ಮಾಡುವುದು ಸರಿಯಲ್ಲ. ಸಾರಿಗೆ ನೌಕರರು ನಾಳಿನ ಮುಷ್ಕರವನ್ನು ಕೈಬಿಡಬೇಕು. ಪ್ರತಿಭಟನೆ ಮಾಡಿದರೆ ಕಟ್ಟುನಿಟ್ಟಿನ ಕ್ರಮಕೈಗೊಳ್ಳುತ್ತೇವೆ. ಮಧ್ಯಮ ವರ್ಗ ಮತ್ತು ಬಡವರು ಹಠಮಾರಿತನದಿಂದ ಹೊರಬರಬೇಕು ಎಂದು ಬೀದರ್ ಜಿಲ್ಲೆ ಬಸವಕಲ್ಯಾಣದಲ್ಲಿ ಸಾರಿಗೆ ಸಚಿವ ಲಕ್ಷ್ಮಣ ಸವದಿ ಹೇಳಿದರು.

ಕೊರೊನಾದಿಂದ ಸಾರಿಗೆ ಇಲಾಖೆಗೆ ₹ 3,200 ಕೋಟಿ ನಷ್ಟವಾಗಿದೆ. ಕೊರೊನಾಗೂ ಮುಂಚೆ ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ದಿನಕ್ಕೆ 1 ಕೋಟಿ ಜನ ಪ್ರಯಾಣಿಸ್ತಿದ್ದರು. ಆದರೆ ಈಗ ದಿನಕ್ಕೆ 60 ಲಕ್ಷ ಜನರಷ್ಟೇ ಪ್ರಯಾಣಿಸುತ್ತಿದ್ದಾರೆ. ಈಗ ಬರುವ ಆದಾಯ ಸಂಬಳ, ಇಂಧನಕ್ಕೂ ಸಾಕಾಗುತ್ತಿಲ್ಲ. ಹಣದ ಕೊರತೆ ನೀಗಿಸಲು ಸರ್ಕಾರದಿಂದ ಹಣ ಪಡೆದಿದ್ದೇವೆ. ₹ 1,962 ಕೋಟಿ ಪಡೆದು ನೌಕರರಿಗೆ ಸಂಬಳ ಕೊಡಲಾಗಿದೆ. ಬೇರೆ ರಾಜ್ಯಗಳಲ್ಲಿ ಕೊರೊನಾ ನೆಪವೊಡ್ಡಿ ಸಂಬಳ ಕಡಿತ ಮಾಡಲಾಗಿದೆ. ಆದರೆ ನಾವು ಸಾರಿಗೆ ನೌಕರರ ಸಂಬಳವನ್ನು ಕಡಿತ ಮಾಡಿಲ್ಲ. ಸೌರಿಗೆ ನೌಕರರ 8 ಬೇಡಿಕೆಗಳನ್ನು ಈಡೇರಿಸಿದ್ದೇವೆ. ಸಂಬಳ ಪರಿಷ್ಕರಣೆಯ ಒಂದು ಬೇಡಿಕೆ ಮಾತ್ರ ಬಾಕಿ ಇದೆ. ಇದನ್ನು ಈಡೇರಿಸಿದರೆ ₹ 1 ಸಾವಿರ ಕೋಟಿ ಹೊರೆಯಾಗುತ್ತದೆ. ಆದರೂ ಕೂಡ ಸಿಎಂ ಯಡಿಯೂರಪ್ಪ ಜತೆ ಚರ್ಚಿಸಿ ಸಂಬಳ ಹೆಚ್ಚಿಸುತ್ತೇವೆ. ಚುನಾವಣಾ ನಿತಿ ಸಂಹಿತೆ ಇರುವ ಕಾರಣ ಮೇ 2ರ ವೇಳೆಗೆ ಸಂಬಳ ಹೆಚ್ಚಿಸಲು ಅನುಮತಿ ದೊರೆಯಬಹುದು ಎಂದು ಹೇಳಿದರು.

ನಾಳೆಯ ಬಂದ್​ನ ಬಿಸಿ ಇಂದಿನಿಂದಲೇ ಜನಸಾಮಾನ್ಯರಿಗೆ ತಟ್ಟತೊಡಗಿದೆ. ಬೆಂಗಳೂರಿನ ನೆಲಮಂಗಲದಲ್ಲಿ ಬಸ್‌ಗಳು‌ ಇಲ್ಲದೆ ಪ್ರಯಾಣಿಕರು ಪರದಾಟ ಪಡುತ್ತಿದ್ದಾರೆ. ಕೆಲ ಮಾರ್ಗದಲ್ಲಿ 2ನೇ ಪಾಳಿಯ ಬಸ್‌ ಸೇವೆಯಲ್ಲಿ ವ್ಯತ್ಯಯವಾಗಿದೆ. ಯಶವಂತಪುರ ಘಟಕ 8ರಲ್ಲಿ ಬಸ್​ಗಳು ನಿಂತಲ್ಲೇ ನಿಂತಿವೆ. ಯಶವಂತಪುರ ಘಟಕ 8ರಲ್ಲಿ ಒಟ್ಟು 177 ಬಸ್​ಗಳಿದ್ದು, ಜನರಲ್ ಶಿಫ್ಟ್​ನಲ್ಲಿ 60 ಹೊರಟಿವೆ.ಆದರೆ ರಾತ್ರಿ ಪಾಳಿಯಲ್ಲಿ 79 ಹೋಗಬೇಕಿದ್ದು, ಈವರೆಗೆ ಕೇವಲ 2 ಬಸ್ ಗಳು ಮಾತ್ರ ಹೋಗಿವೆ. ಜತೆಗೆ 77 ಬಸ್​ಗಳು ಡಿಪೋದಲ್ಲಿಯೇ ಇವೆ. ಬೆಂಗಳೂರಿನ ಇನ್ನೂ ಹಲವು ಮಾರ್ಗಗಳಲ್ಲಿ ಬಸ್ ಸಂಚಾರ ವ್ಯತ್ಯಯವಾಗುತ್ತಿದೆ.

ಇದನ್ನೂ ಓದಿ: ನಾಳೆಯ ಮುಷ್ಕರದಲ್ಲಿ ಏನೇ ನಡೆದರೂ ಕೋಡಿಹಳ್ಳಿ ಚಂದ್ರಶೇಖರ ಹೊಣೆ; ಬಿಎಂಟಿಸಿ ಎಂಡಿ ಶಿಖಾಗೆ ದೂರು

Bus Strike: ರಾಜ್ಯದಲ್ಲಿ ಅಭಿವೃದ್ಧಿ ಕಾರ್ಯಗಳಿಗಿಂತ ಸಂಬಳಕ್ಕೆ ಸಾಕಷ್ಟು ಹಣ ಖರ್ಚಾಗುತ್ತಿದೆ: ಕಂದಾಯ ಸಚಿವ ಆರ್.ಅಶೋಕ್

Published On - 4:40 pm, Tue, 6 April 21

ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಉಪೇಂದ್ರ ಊಟ ಮಾಡೋದು ಬಹಳ ವಿಚಿತ್ರ; ಅಚ್ಚರಿಯ ವಿಷಯ ಹೇಳಿದ ಶಿವಣ್ಣ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಕ್ಯಾಪ್ಟನ್ ಕೂಲ್ ಧೋನಿಗೆ ಬಿಸಿಸಿಐನಿಂದ ವಿಶೇಷ ಗೌರವ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಸಿಎಸ್​​ಕೆ ಬೌಲರ್​ಗಳ ಎದುರು ಅಬ್ಬರಿಸಿ ಬೊಬ್ಬಿರಿದ ನಿತೀಶ್ ರಾಣಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು