ನಿವೃತ್ತಿ ಅಂಚಿನಲ್ಲಿದ್ದರೂ ಸ್ವಇಚ್ಛೆಯಿಂದ ಕರ್ತವ್ಯಕ್ಕೆ ಹಾಜರು! ಮುಷ್ಕರದ ಮಧ್ಯೆ ಕರ್ತವ್ಯ ನಿಷ್ಠೆ ಮೆರೆದ ಇಬ್ಬರಿಗೆ ಸನ್ಮಾನ

ನಿವೃತ್ತಿ ಅಂಚಿನಲ್ಲಿರುವ ಹಾಗೂ ಅಪಘಾತಕ್ಕೀಡಾಗಿ ಹುದ್ದೆ ಬದಲಾವಣೆ ಮಾಡಿಕೊಂಡಿದ್ದ ಇಬ್ಬರು ಸಿಬ್ಬಂದಿ ಹೊಸಪೇಟೆ ಸಾರಿಗೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ಡಿ ಮೂರಮಟ್ಟಿ, ಉಮಾದೇವಿ ಸ್ವಇಚ್ಛೆಯಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ.

ನಿವೃತ್ತಿ ಅಂಚಿನಲ್ಲಿದ್ದರೂ ಸ್ವಇಚ್ಛೆಯಿಂದ ಕರ್ತವ್ಯಕ್ಕೆ ಹಾಜರು! ಮುಷ್ಕರದ ಮಧ್ಯೆ ಕರ್ತವ್ಯ ನಿಷ್ಠೆ ಮೆರೆದ ಇಬ್ಬರಿಗೆ ಸನ್ಮಾನ
ಕೆಲಸಕ್ಕೆ ಹಾಜರಾದ ಸಿಬ್ಬಂದಿಗೆ ಸನ್ಮಾನ
Follow us
|

Updated on:Apr 08, 2021 | 12:40 PM

ಬಳ್ಳಾರಿ: ವೇತನ ಹೆಚ್ಚಳ ಆಗ್ರಹಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಹಿನ್ನೆಲೆಯಲ್ಲಿ ಕರ್ತವ್ಯ ನಿಷ್ಠೆ ತೋರಿದ ಇಬ್ಬರು ಸಾರಿಗೆ ಸಿಬ್ಬಂದಿಗೆ ಸನ್ಮಾನ ಮಾಡಲಾಗಿದೆ. ನಿವೃತ್ತಿ ಅಂಚಿನಲ್ಲಿರುವ ಹಾಗೂ ಅಪಘಾತಕ್ಕೀಡಾಗಿ ಹುದ್ದೆ ಬದಲಾವಣೆ ಮಾಡಿಕೊಂಡಿದ್ದ ಇಬ್ಬರು ಸಿಬ್ಬಂದಿ ಹೊಸಪೇಟೆ ಸಾರಿಗೆ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಎಸ್ ಡಿ ಮೂರಮಟ್ಟಿ, ಉಮಾದೇವಿ ಸ್ವಇಚ್ಛೆಯಿಂದ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಹೀಗಾಗಿ ಕರ್ತವ್ಯ ನಿಷ್ಠೆ ತೋರಿದ ಇಬ್ಬರು ಸಾರಿಗೆ ನೌಕರರಿಗೆ ಹೊಸಪೇಟೆ ಸಾರಿಗೆ ವಿಭಾಗದ ನಿಯಂತ್ರಣಾಧಿಕಾರಿ ಜಿ.ಸೀನಯ್ಯ ಸನ್ಮಾನ ಮಾಡಿದ್ದಾರೆ. ಇನ್ನು ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕಲು ಕೆಎಸ್​ಆರ್​ಟಿಸಿ ಹೊಸ ಪ್ಲ್ಯಾನ್ ಮಾಡಿದ್ದು ಸಸ್ಪೆಂಡ್ ಆಗಿದ್ದ ಸಿಬ್ಬಂದಿಗೆ ಕರ್ತವ್ಯಕ್ಕೆ ಬರಲು ಸೂಚನೆ ನೀಡಿದೆ.

ಆರನೇ ವೇತನ ಆಯೋಗದ ಶಿಫಾರಸು ಜಾರಿಗೆ ಆಗ್ರಹಿಸಿ ಸಾರಿಗೆ ನೌಕರರು ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇನ್ನು ಸಾರಿಗೆ ನೌಕರರ ಮುಷ್ಕರ ಹತ್ತಿಕ್ಕಲು ಹೊಸ ಪ್ಲ್ಯಾನ್ ಮಾಡಲಾಗಿದ್ದು ಸಸ್ಪೆಂಡ್ ಆಗಿದ್ದ ಸಿಬ್ಬಂದಿಗೆ ಕರ್ತವ್ಯಕ್ಕೆ ಬರಲು ಸೂಚನೆ ನೀಡಲಾಗಿದೆ. ಸಾರಿಗೆ ಇಲಾಖೆ ಸಸ್ಪೆಂಡ್ ಆಗಿದ್ದ ಸಿಬ್ಬಂದಿಗೆ ಕೆಲಸ ನೀಡುವ ಆಮಿಷವೊಡ್ಡಿ ಮತ್ತೆ ಕೆಲಸಕ್ಕೆ ಹಾಜರಾಗುವಂತೆ ಒತ್ತಾಯಿಸಿದೆ. ಇನ್ನು ಏಪ್ರಿಲ್ 7ರಂದು ಸಂಚಾರವಾದ ಎರಡು ಕೆಎಸ್​ಆರ್​ಟಿಸಿ ಬಸ್​ಗಳನ್ನು ಸಸ್ಪೆಂಡ್ ಆಗಿದ್ದ ಚಾಲಕರಿಂದಲೇ ಓಡಿಸಲಾಗಿತ್ತು.

ಇನ್ನು ಸಾರಿಗೆ ಮುಷ್ಕರದ ನಡುವೆ ಕೆಲವು ಸಾರಿಗೆ ನೌಕರರು ಕೆಲಸಕ್ಕೆ ಹಾಜರಾಗಿದ್ದಾರೆ. ಬೆಂಗಳೂರಿನಲ್ಲಿ ಕೆಲ ಬಿಎಂಟಿಸಿ ಬಸ್ ಸಂಚಾರ ಕೈಗೊಂಡಿದ್ದು ಇದಕ್ಕೆ ಪೊಲೀಸ್ ಕಾವಲಿಗೆ ನಿಂತಿದೆ. ಸಾರಿಗೆ ನೌಕರರ ಮುಷ್ಕರ ಬಂಬಲಿಸದೆ ಕೆಲಸಕ್ಕೆ ಕೆಲ ನೌಕರರು ಹಾಜರಾಗಿದ್ದಾರೆ. ಬಸ್‌ಗಳಿಗೆ ಎಸ್ಕಾರ್ಟ್ ಭದ್ರತೆ ನೀಡಿದ ಸಾರಿಗೆ ಇಲಾಖೆ.

ಕೆಲಸಕ್ಕೆ ಹಾಜರಾದ ಸಿಬ್ಬಂದಿಗೆ ಹೂ ನೀಡಿ ಸ್ವಾಗತ ಮುಷ್ಕರದ ನಡುವೆಯೂ ಕೆಲಸಕ್ಕೆ ಬಂದ ಚಾಲಕ ಮತ್ತು ನಿರ್ವಾಹಕರಿಗೆ ವಿಭಾಗೀಯ ನಿಯಂತ್ರಣ ಅಧಿಕಾರಿ ಗುಲಾಬಿ ಹೂ ನೀಡಿ ಕೆಲಸಕ್ಕೆ ಕಳಸಿದ ಪ್ರಸಂಗ ಕೊಪ್ಪಳದಲ್ಲಿ ನಡೆದಿದೆ. ವಿಭಾಗೀಯ ನಿಯಂತ್ರಣ ಅಧಿಕಾರಿ.ಎ.ಎಚ್.ಮುಲ್ಲಾ ಚಾಲಕ ನಿರ್ವಾಹಕರಿಗೆ ಗುಲಾಬಿ ಹೂ ನೀಡಿದ್ದು ಕೊಪ್ಪಳದಿಂದ ರಾಯಚೂರಿಗೆ ಬಸ್ ಸಂಚಾರ ಆರಂಭವಾಗಿದೆ. ಇಲ್ಲಿಯವರೆಗೂ ಜಿಲ್ಲೆಯಲ್ಲಿ 3 ಬಸ್​ಗಳು ಸಂಚಾರ ನಡೆಸಿವೆ.

Karnataka transport strike employees return

ಕೆಲಸಕ್ಕೆ ಹಾಜರಾದ ಸಿಬ್ಬಂದಿಗೆ ಹೂ ನೀಡಿ ಸ್ವಾಗತ

ಇದನ್ನೂ ಓದಿ: Karnataka Bus Strike Live: ಎರಡನೇ ದಿನಕ್ಕೆ ಕಾಲಿಟ್ಟ ಸಾರಿಗೆ ನೌಕರರ ಮುಷ್ಕರ, ಪೊಲೀಸರ ಭದ್ರತೆಯೊಂದಿಗೆ ಕೆಲ ಬಸ್​ ಸಂಚಾರ

Published On - 12:40 pm, Thu, 8 April 21

ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಹೊಸ ಹಾನರ್ ಸ್ಮಾರ್ಟ್​ಫೋನ್​ನಲ್ಲಿದೆ 108 ಮೆಗಾಪಿಕ್ಸೆಲ್ ಸಖತ್ ಎಐ ಕ್ಯಾಮೆರಾ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ SIT ರಚಿಸಿ: ಸಿಎಂಗೆ ಮನವಿ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ಕಾಡಿಗೆ ಹೋಗುವ ದಾರಿ ಗೊತ್ತು ಅಂತ ಅರಣ್ಯ ಸಿಬ್ಬಂದಿ ಮೇಲೆ ತಿರುಗಿ ಬಿದ್ದ ಆನೆ
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
‘ಉಪೇಂದ್ರ’ ಸಿನಿಮಾ ನೋಡಿ ಉಪ್ಪಿ ಭಾವುಕ; ಏನು ಹೇಳಿದ್ರು?
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಅಭಿಮಾನಿಗಳ ಜೊತೆ ‘ಉಪೇಂದ್ರ’ ಸಿನಿಮಾ ನೋಡಿದ ರಿಯಲ್ ಸ್ಟಾರ್  
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ