
ಬೆಂಗಳೂರು, ಆಗಸ್ಟ್ 04: ವಿವಿಧ ಬೇಡಿಕೆಗಳನ್ನು ಆಗ್ರಹಿಸಿ ಸಾರಿಗೆ ಇಲಾಖೆ ನೌಕರರು ಮಂಗಳವಾರ (ಆ.05) ದಂದು ಬೆಳಗ್ಗೆ 6 ಗಂಟೆಯಿಂದಲೇ ಮುಷ್ಕರ (Transport Employees Strike) ನಡೆಸುತ್ತಾರೆ ಎಂದು ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿ ಅಧ್ಯಕ್ಷ ಅನಂತ ಸುಬ್ಬರಾವ್ ಹೇಳಿದ್ದಾರೆ. ಆದರೆ ಮತ್ತೊಂದಡೆ, ಮುಷ್ಕರವನ್ನು ಒಂದು ದಿನದ ಮಟ್ಟಿಗೆ ಮುಂದೂಡುವಂತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿಗೆ ಹೈಕೋರ್ಟ್ ಸೂಚನೆ ನೀಡಿದೆ. ಒಂದು ವೇಳೆ ಸಾರಿಗೆ ನೌಕರರು ನಾಳೆ ಮುಷ್ಕರ ನಡೆಸಿದರೇ, ಬಸ್ ಸಂಚಾರ ಸಂಪೂರ್ಣ ಸ್ಥಗಿತವಾಗಲಿದೆ. ಇದರಿಂದ ಪ್ರಯಾಣಿಕರಿಗೆ ಸಾಕಷ್ಟು ತೊಂದರೆಯಾಗಲಿದೆ. ಅದರಲ್ಲೂ, ಮಹಿಳಾ ಪ್ರಯಾಣಿಕರು ಅತಿ ಹೆಚ್ಚು ಪರದಾಡುತ್ತಾರೆ.
ಹೌದು, ಶಕ್ತಿ ಯೋಜನೆ ಜಾರಿಯಾದ ಬಳಿಕ ನಾಲ್ಕೂ ನಿಗಮದ (KSRTC, NWKRTC, KKRTC, BMTC) ಬಸ್ಗಳಲ್ಲಿ ಮಹಿಳಾ ಪ್ರಯಾಣಿಕರ ಸಂಖ್ಯೆ ಹೆಚ್ಚಾಗಿದೆ. ನಾಲ್ಕೂ ನಿಗಮಗಳಲ್ಲಿ 2025ರ ಜುಲೈ 14ರವರೆಗೆ 500 ಕೋಟಿ ಮಹಿಳೆಯರು ಸಂಚಾರ ಮಾಡಿದ್ದಾರೆ. ಒಂದು ವೇಳೆ ಮಂಗಳವಾರ ಮುಷ್ಕರದಿಂದ ಬಸ್ ಸಂಚಾರ ಸ್ಥಗಿತಗೊಂಡರೇ ಈ ಮಹಿಳಾ ಪ್ರಯಾಣಿಕರಿಗೆ ಪ್ರಯಾಣ ಮಾಡಲು ಸಾಧ್ಯವಾಗುವುದಿಲ್ಲ. ಮಹಿಳಾ ಉದ್ಯೋಗಿಗಳು, ಶಾಲಾ-ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿನಿಯರಿಗೆ ಮತ್ತು ಪುಣ್ಯಕ್ಷೇತ್ರಗಳಿಗೆ ತೆರಳಬೇಕು ಅಂತ ಯೋಚಿಸಿರುವ ಮಹಿಳಾ ಯಾತ್ರಿಕರಿಗೆ ಬಸ್ ಸಂಚಾರ ಸ್ಥಗಿತದ ಬಿಸಿ ಮುಟ್ಟಲಿದೆ. ಮಹಿಳಾ ಪ್ರಯಾಣಿಕರು ಸಾಕಷ್ಟು ಪರದಾಡುವ ಸಾಧ್ಯತೆ ಇದೆ.
ನಾಲ್ಕೂ ನಿಗಮಗಳಲ್ಲಿ 2025ರ ಜುಲೈ 14ರವರೆಗೆ 500 ಕೋಟಿ ಮಹಿಳೆಯರು ಸಂಚಾರ ಮಾಡಿದ್ದಾರೆ. ನಾಲ್ಕೂ ನಿಗಮಗಳಲ್ಲಿ ಪ್ರತಿದಿನ ಅಂದಾಜು 80 ಲಕ್ಷಕ್ಕೂ ಹೆಚ್ಚಿನ ಮಹಿಳಾ ಪ್ರಯಾಣಿಕರು ಶಕ್ತಿ ಯೋಜನೆಯಡಿ ಉಚಿತ ಟಿಕೆಟ್ ಪಡೆದು ಪ್ರಯಾಣಿಸಿದ್ದಾರೆ.
ಬಿಎಂಟಿಸಿಯಲ್ಲಿ 157.33 ಕೋಟಿ, ಕೆಎಸ್ಆರ್ಟಿಸಿಯಲ್ಲಿ 151 ಕೋಟಿ, ಎನ್ಡಬ್ಲೂಕೆಆರ್ಟಿಸಿಯಲ್ಲಿ 117 ಕೋಟಿ ಮತ್ತು ಕೆಕೆಆರ್ಟಿಸಿಯಲ್ಲಿ 72 ಕೋಟಿ ಮಹಿಳೆಯರು ಜುಲೈ 14ರವರೆಗೆ ಸಂಚಾರ ಮಾಡಿದ್ದಾರೆ. ಮಹಿಳಾ ಪ್ರಯಾಣಿಕರ ಸಂಖ್ಯೆ ಈಗ ಏರಿಕೆಯಾಗಿರುವ ಸಾಧ್ಯತೆಯೂ ಇದೆ. ಇಷ್ಟು ಮಂದಿ ಮಹಿಳಾ ಪ್ರಯಾಣಿಕರು ನಾಲ್ಕೂ ನಿಗಮಗಳಲ್ಲಿ ಸಂಚರಿಸಿದ್ದು, ಮುಷ್ಕರಿಂದ ಬಸ್ ಸಂಚಾರ ಸ್ಥಗಿತಗೊಂಡರೇ ಇವರು ಪರದಾಡಲಿದ್ದಾರೆ.
ಇದನ್ನೂ ಓದಿ: ಸಿಎಂ ಸಂಧಾನ ಸಭೆ ವಿಫಲ: ಸಾರಿಗೆ ಮುಷ್ಕರ ಫಿಕ್ಸ್, ನಾಳೆ ಸಾರಿಗೆ ಬಸ್ಗಳು ರಸ್ತೆಗೆ ಇಳಿಯಲ್ಲ
ಒಟ್ಟು ನಾಲ್ಕು ನಿಗಮದ ಬಸ್ಸುಗಳ ಸಂಖ್ಯೆ- 24,154, ನಾಲ್ಕು ನಿಗಮದ- ಸಿಬ್ಬಂದಿಗಳ ಸಂಖ್ಯೆ- 1,02,527, ನಾಲ್ಕು ನಿಗಮದ ಸಾರಿಗೆ ಆದಾಯ- 37 ಕೋಟಿ ರೂ. ಮತ್ತು ಪ್ರತಿದಿನ ನಾಲ್ಕು ನಿಗಮದ ಬಸ್ಸುಗಳಲ್ಲಿ ಸಂಚಾರ ಮಾಡುವ ಪ್ರಯಾಣಿಕರ ಒಟ್ಟು ಸಂಖ್ಯೆ- 1 ಕೋಟಿ 17 ಲಕ್ಷ.
Published On - 7:56 pm, Mon, 4 August 25