AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇನ್ನು ಎದುರಾಗದು: ಕೋವಿಡ್​ ಸೋಂಕಿತರ ಪ್ರಾಣ ಉಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ

ಪ್ರತಿದಿನದ ಪೂರೈಕೆ ಆಯಾ ದಿನಕ್ಕೆ ಸರಿಯಾಗಿ ಲಭ್ಯವಾಗುತ್ತಿದೆ ಮತ್ತು ಮಂಗಳವಾರದಂದು ಭಾರತ ಸರ್ಕಾರವು ರಿಲಯನ್ಸ್ ಫೌಂಡೇಶನ್ ಮೂಲಕ ಪೂರೈಸಿರುವ 114 ಮೆಟ್ರಿಕ್ ಟನ್ ಈಗಾಗಲೇ ತಲುಪಿದ್ದು ಅದನ್ನು ಎಲ್ಲರಿಗೂ ವಿತರಿಸಲಾಗುತ್ತಿದೆ. ಇನ್ನು ಹೆಚ್ಚುವರಿ 112 ಮೆಟ್ರಿಕ್ ಟನ್ ಮಂಗಳವಾರ ಮಧ್ಯರಾತ್ರಿ ಆಗಮಿಸಲಿದೆ.

ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇನ್ನು ಎದುರಾಗದು: ಕೋವಿಡ್​ ಸೋಂಕಿತರ ಪ್ರಾಣ ಉಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ
ಆಕ್ಸಿಜನ್ ಸಿಲಿಂಡರ್​ಗಳು
ಅರುಣ್​ ಕುಮಾರ್​ ಬೆಳ್ಳಿ
ಅರುಣ್​ ಕುಮಾರ್​ ಬೆಳ್ಳಿ| Edited By: |

Updated on: May 25, 2021 | 7:17 PM

Share

ರಾಜ್ಯದ ಜನತೆಗೆ ಗೊತ್ತಿರುವ ಹಾಗೆ ಪ್ರಸಕ್ತ ಕೊವಿಡ್​ ಸಂಕಷ್ಟದ ಪರಿಸ್ಥಿತಿಯಲ್ಲಿ ಹೆಚ್ಚು ಕಡಿಮೆ ಎಲ್ಲ ಜಿಲ್ಲೆಗಳಲ್ಲಿ ಆಕ್ಸಿಜನ್ ಪೂರೈಕೆಯ ತೀವ್ರ ಸಮಸ್ಯೆ ಎದುರಾಯಿತು. ಅನೇಕ ಸೋಂಕಿತರು ಸಮಯಕ್ಕೆ ಸರಿಯಾಗಿ ಆಮ್ಲಜನಕ ಸಿಗದ ಕಾರಣ ಪ್ರಾಣ ಕಳೆದುಕೊಂಡರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸದರಿ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಭೆಯೊಂದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರಧಾನಿಗೆ ನಮಗೆ ಮೊದಲು ಆಕ್ಸಿಜನ್ ಪೂರೈಕೆ ಮಾಡುವ ವ್ಯವಸ್ಥೆ ಮಾಡಿ ಎಂದು ಖಾರವಾಗೇ ಹೇಳಿದ್ದರು. ಅವರ ಹತಾಷೆಯನ್ನು ಪ್ರಧಾನಿ ಮೋದಿ ಅರ್ಥ ಮಾಡಿಕೊಂಡು ಅದನ್ನು ಪೂರೈಸುವ ಭರವಸೆ ನೀಡಿದರು. ಏತನ್ಮಧ್ಯೆ ರಾಜ್ಯದಲ್ಲಿ ಲಭ್ಯವಿರುವ ಮೂಲಗಳಿಂದ ಆಕ್ಸಿಜನ್ ತಯಾರಿಕೆ ಹಾಗೂ ಪೂರೈಕೆಯನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರ ಕೆಲ ಕ್ರಮಗಳನ್ನು ತೆಗೆದುಕೊಂಡಿತು. ಅದರ ವಿವರವನ್ನು ಆಕ್ಸಿಜನ್ ನೋಡಲ್ ಅಧಿಕಾರಿ ಮನೀಶ್ ಮೌದ್ಗೀಲ್ ನೀಡಿದ್ದಾರೆ.

-ಪ್ರಾಕ್ಸ್ಏರ್ ಮತ್ತು ಏರ್ ವಾಟರ್ ಆಕ್ಸಿಜನ ಘಟಕಗಳನ್ನು ಟ್ರಿಪ್ ಮಾಡಲಾಗಿ ಶೇಕಡಾ 20 ರಷ್ಟು ಕೊರತೆಯನ್ನು ನಿರೀಕ್ಷಿಸಲಾಗಿತ್ತು.

-ಪ್ರಸಕ್ತ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಆಮ್ಲಜನಕ ಉತ್ಪಾದಿಸುವ ಸಂಸ್ಥೆಗಳೊಂದಿಗೆ ಸಮನ್ವಯತೆಯನ್ನು ಸಾಧಿಸಿ, ಉತ್ಪಾದನೆಯನ್ನು ಹೆಚ್ಚಿಸುವುದನ್ನು ಖಾತ್ರಿಪಡಿಸಿಕೊಳ್ಳಲಾಯಿತು. ಬೇರೆ ಪ್ಲಾಂಟ್​ಗಳಲ್ಲೂ ಆಮ್ಲಜನಕ ಉತ್ಪಾದನೆಗೆ ಒತ್ತು ನೀಡಲಾಯಿತು.

-ಭಾರತ ಸರ್ಕಾರವು ಮೇ 20 ರಿಂದ 22ರವರೆಗೆ ಕರ್ನಾಟಕಕ್ಕೆ ವಿಶೇಷ ಹಂಚಿಕೆಯನ್ನು ಒದಗಿಸಿದೆ. 68 ಮೆಟ್ರಿಕ್ ಟನ್ ಮತ್ತು 107 ಮೆಟ್ರಿಕ್ ಟನ್ ಆಕ್ಸಿಜನ್ ಕರ್ನಾಟಕ್ಕೆ ಲಭ್ಯವಾಗಿದ್ದು ಅದನ್ನು ಬಫರ್ (ಮೀಸಲು ದಾಸ್ತಾನು) ಸೃಷ್ಟಿಸಲು ವಿನಿಯೋಗಿಸಲಾಗಿದೆ.

-ಎಲ್ಲಾ ಜಿಲ್ಲೆಗಳಲ್ಲೂ ಒಂದೊಂದು ಬಗೆಯ ಬಫರ್​ಗಳನ್ನು ಸೃಷ್ಟಿಸಲಾಯಿತು ಮತ್ತು 110 ಮೆಟ್ರಿಕ್ ಟನ್ ಆಕ್ಸಿಜನ್ ಲಭ್ಯವಾಗುವ ಸ್ಥಿತಿ ನಿರ್ಮಾಣಗೊಂಡಿತು.

-ಪ್ರಾಕ್ಸ್ಏರ್ ಸಂಸ್ಥೆಯು ಮೇ 24ರಂದು 150 ಮೆಟ್ರಿಕ್ ಟನ್​ಗಳಷ್ಟು ಹೆಚ್ಚುವರಿ ಆಮ್ಲಜನಕವನ್ನು ಹೊರಭಾಗದಿಂದ ಖರೀದಿ ಮಾಡಿತು.

-ಮೇ 26ರಂದು ಉತ್ಪಾದನೆ ಮಾಮೂಲು ಸ್ಥಿತಿಗೆ ವಾಪಸ್ಸಾಗುವ ನಿರೀಕ್ಷೆಯಿದೆ. ಪ್ರತಿದಿನದ ಪೂರೈಕೆ ಆಯಾ ದಿನಕ್ಕೆ ಸರಿಯಾಗಿ ಲಭ್ಯವಾಗುತ್ತಿದೆ ಮತ್ತು ಮಂಗಳವಾರದಂದು ಭಾರತ ಸರ್ಕಾರವು ರಿಲಯನ್ಸ್ ಫೌಂಡೇಶನ್ ಮೂಲಕ ಪೂರೈಸಿರುವ 114 ಮೆಟ್ರಿಕ್ ಟನ್ ಈಗಾಗಲೇ ತಲುಪಿದ್ದು ಅದನ್ನು ಎಲ್ಲರಿಗೂ ವಿತರಿಸಲಾಗುತ್ತಿದೆ. ಇನ್ನು ಹೆಚ್ಚುವರಿ 112 ಮೆಟ್ರಿಕ್ ಟನ್ ಮಂಗಳವಾರ ಮಧ್ಯರಾತ್ರಿ ಆಗಮಿಸಲಿದೆ.

-ಎಲ್ಲ ಜಿಲ್ಲೆಗಳು ಮತ್ತು ರಾಜ್ಯ ಹೆಡ್​ಕ್ವಾರ್ಟರ್​ಗಳೊಂದಿಗೆ ನಿರಂತರ ಸಂಪರ್ಕ ಜಾರಿಯಲ್ಲಿದ್ದು ಆಮ್ಲಜನಕ ಲಭ್ಯತೆಯನ್ನು ಸತತವಾಗಿ ಮಾನಿಟರ್ ಮಾಡಲಾಗುತ್ತಿದೆ.

-ಈ ವ್ಯವಸ್ಥೆಯು ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದೆ ಮತ್ತು 25ನೇ ಮೇ ಹೊತ್ತಿಗೆ ಸ್ಥಿತಿ ಮಾಮೂಲುಗೊಳ್ಳಲಿದೆ, ಎಂದು ಮನೀಶ್ ತಿಳಿಸಿದ್ದಾರೆ

– ಇದರ ಹೊರತಾಗಿ ರಾಜ್ಯ ಮತ್ತು ಹೊರರಾಜ್ಯದ ಸಂಸ್ಥೆಗಳಿಂದ ಆಕ್ಸಿಜನ್ ಹಂಚಿಕೆ 1015 ಮೆಟ್ರಿಕ್ ಟನ್​ಗಳಿಂದ 1200 ಮೆಟ್ರಿಕ್ ಟನ್​ಗಳಿಗೆ ಹೆಚ್ಚಿಸಲಾಗುತ್ತಿದೆ.

ಇದನ್ನೂ ಓದಿ: Oxygen Shortage | ಕರ್ನಾಟಕದಲ್ಲಿ ಅಮೂಲ್ಯ ಆಕ್ಸಿಜನ್​ಗಾಗಿ ಹಾಹಾಕಾರ.. ಜೀವವಾಯು ಇಲ್ಲದೆ ಉಸಿರು ಚೆಲ್ಲುತ್ತಿರುವ ಸೋಂಕಿತರು

Follow Us
Arun Belly
Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು