Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇನ್ನು ಎದುರಾಗದು: ಕೋವಿಡ್​ ಸೋಂಕಿತರ ಪ್ರಾಣ ಉಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ

ಪ್ರತಿದಿನದ ಪೂರೈಕೆ ಆಯಾ ದಿನಕ್ಕೆ ಸರಿಯಾಗಿ ಲಭ್ಯವಾಗುತ್ತಿದೆ ಮತ್ತು ಮಂಗಳವಾರದಂದು ಭಾರತ ಸರ್ಕಾರವು ರಿಲಯನ್ಸ್ ಫೌಂಡೇಶನ್ ಮೂಲಕ ಪೂರೈಸಿರುವ 114 ಮೆಟ್ರಿಕ್ ಟನ್ ಈಗಾಗಲೇ ತಲುಪಿದ್ದು ಅದನ್ನು ಎಲ್ಲರಿಗೂ ವಿತರಿಸಲಾಗುತ್ತಿದೆ. ಇನ್ನು ಹೆಚ್ಚುವರಿ 112 ಮೆಟ್ರಿಕ್ ಟನ್ ಮಂಗಳವಾರ ಮಧ್ಯರಾತ್ರಿ ಆಗಮಿಸಲಿದೆ.

ರಾಜ್ಯದಲ್ಲಿ ಆಕ್ಸಿಜನ್ ಕೊರತೆ ಇನ್ನು ಎದುರಾಗದು: ಕೋವಿಡ್​ ಸೋಂಕಿತರ ಪ್ರಾಣ ಉಳಿಸುವ ನಿಟ್ಟಿನಲ್ಲಿ ಮಹತ್ವದ ಬೆಳವಣಿಗೆ
ಆಕ್ಸಿಜನ್ ಸಿಲಿಂಡರ್​ಗಳು
Follow us
ಅರುಣ್​ ಕುಮಾರ್​ ಬೆಳ್ಳಿ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: May 25, 2021 | 7:17 PM

ರಾಜ್ಯದ ಜನತೆಗೆ ಗೊತ್ತಿರುವ ಹಾಗೆ ಪ್ರಸಕ್ತ ಕೊವಿಡ್​ ಸಂಕಷ್ಟದ ಪರಿಸ್ಥಿತಿಯಲ್ಲಿ ಹೆಚ್ಚು ಕಡಿಮೆ ಎಲ್ಲ ಜಿಲ್ಲೆಗಳಲ್ಲಿ ಆಕ್ಸಿಜನ್ ಪೂರೈಕೆಯ ತೀವ್ರ ಸಮಸ್ಯೆ ಎದುರಾಯಿತು. ಅನೇಕ ಸೋಂಕಿತರು ಸಮಯಕ್ಕೆ ಸರಿಯಾಗಿ ಆಮ್ಲಜನಕ ಸಿಗದ ಕಾರಣ ಪ್ರಾಣ ಕಳೆದುಕೊಂಡರು. ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸದರಿ ವಿಷಯಕ್ಕೆ ಸಂಬಂಧಿಸಿದಂತೆ ನಡೆದ ಸಭೆಯೊಂದರಲ್ಲಿ ಕರ್ನಾಟಕದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಪ್ರಧಾನಿಗೆ ನಮಗೆ ಮೊದಲು ಆಕ್ಸಿಜನ್ ಪೂರೈಕೆ ಮಾಡುವ ವ್ಯವಸ್ಥೆ ಮಾಡಿ ಎಂದು ಖಾರವಾಗೇ ಹೇಳಿದ್ದರು. ಅವರ ಹತಾಷೆಯನ್ನು ಪ್ರಧಾನಿ ಮೋದಿ ಅರ್ಥ ಮಾಡಿಕೊಂಡು ಅದನ್ನು ಪೂರೈಸುವ ಭರವಸೆ ನೀಡಿದರು. ಏತನ್ಮಧ್ಯೆ ರಾಜ್ಯದಲ್ಲಿ ಲಭ್ಯವಿರುವ ಮೂಲಗಳಿಂದ ಆಕ್ಸಿಜನ್ ತಯಾರಿಕೆ ಹಾಗೂ ಪೂರೈಕೆಯನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರ ಕೆಲ ಕ್ರಮಗಳನ್ನು ತೆಗೆದುಕೊಂಡಿತು. ಅದರ ವಿವರವನ್ನು ಆಕ್ಸಿಜನ್ ನೋಡಲ್ ಅಧಿಕಾರಿ ಮನೀಶ್ ಮೌದ್ಗೀಲ್ ನೀಡಿದ್ದಾರೆ.

-ಪ್ರಾಕ್ಸ್ಏರ್ ಮತ್ತು ಏರ್ ವಾಟರ್ ಆಕ್ಸಿಜನ ಘಟಕಗಳನ್ನು ಟ್ರಿಪ್ ಮಾಡಲಾಗಿ ಶೇಕಡಾ 20 ರಷ್ಟು ಕೊರತೆಯನ್ನು ನಿರೀಕ್ಷಿಸಲಾಗಿತ್ತು.

-ಪ್ರಸಕ್ತ ಪರಿಸ್ಥಿತಿಯಲ್ಲಿ ರಾಜ್ಯ ಸರ್ಕಾರವು ಆಮ್ಲಜನಕ ಉತ್ಪಾದಿಸುವ ಸಂಸ್ಥೆಗಳೊಂದಿಗೆ ಸಮನ್ವಯತೆಯನ್ನು ಸಾಧಿಸಿ, ಉತ್ಪಾದನೆಯನ್ನು ಹೆಚ್ಚಿಸುವುದನ್ನು ಖಾತ್ರಿಪಡಿಸಿಕೊಳ್ಳಲಾಯಿತು. ಬೇರೆ ಪ್ಲಾಂಟ್​ಗಳಲ್ಲೂ ಆಮ್ಲಜನಕ ಉತ್ಪಾದನೆಗೆ ಒತ್ತು ನೀಡಲಾಯಿತು.

-ಭಾರತ ಸರ್ಕಾರವು ಮೇ 20 ರಿಂದ 22ರವರೆಗೆ ಕರ್ನಾಟಕಕ್ಕೆ ವಿಶೇಷ ಹಂಚಿಕೆಯನ್ನು ಒದಗಿಸಿದೆ. 68 ಮೆಟ್ರಿಕ್ ಟನ್ ಮತ್ತು 107 ಮೆಟ್ರಿಕ್ ಟನ್ ಆಕ್ಸಿಜನ್ ಕರ್ನಾಟಕ್ಕೆ ಲಭ್ಯವಾಗಿದ್ದು ಅದನ್ನು ಬಫರ್ (ಮೀಸಲು ದಾಸ್ತಾನು) ಸೃಷ್ಟಿಸಲು ವಿನಿಯೋಗಿಸಲಾಗಿದೆ.

-ಎಲ್ಲಾ ಜಿಲ್ಲೆಗಳಲ್ಲೂ ಒಂದೊಂದು ಬಗೆಯ ಬಫರ್​ಗಳನ್ನು ಸೃಷ್ಟಿಸಲಾಯಿತು ಮತ್ತು 110 ಮೆಟ್ರಿಕ್ ಟನ್ ಆಕ್ಸಿಜನ್ ಲಭ್ಯವಾಗುವ ಸ್ಥಿತಿ ನಿರ್ಮಾಣಗೊಂಡಿತು.

-ಪ್ರಾಕ್ಸ್ಏರ್ ಸಂಸ್ಥೆಯು ಮೇ 24ರಂದು 150 ಮೆಟ್ರಿಕ್ ಟನ್​ಗಳಷ್ಟು ಹೆಚ್ಚುವರಿ ಆಮ್ಲಜನಕವನ್ನು ಹೊರಭಾಗದಿಂದ ಖರೀದಿ ಮಾಡಿತು.

-ಮೇ 26ರಂದು ಉತ್ಪಾದನೆ ಮಾಮೂಲು ಸ್ಥಿತಿಗೆ ವಾಪಸ್ಸಾಗುವ ನಿರೀಕ್ಷೆಯಿದೆ. ಪ್ರತಿದಿನದ ಪೂರೈಕೆ ಆಯಾ ದಿನಕ್ಕೆ ಸರಿಯಾಗಿ ಲಭ್ಯವಾಗುತ್ತಿದೆ ಮತ್ತು ಮಂಗಳವಾರದಂದು ಭಾರತ ಸರ್ಕಾರವು ರಿಲಯನ್ಸ್ ಫೌಂಡೇಶನ್ ಮೂಲಕ ಪೂರೈಸಿರುವ 114 ಮೆಟ್ರಿಕ್ ಟನ್ ಈಗಾಗಲೇ ತಲುಪಿದ್ದು ಅದನ್ನು ಎಲ್ಲರಿಗೂ ವಿತರಿಸಲಾಗುತ್ತಿದೆ. ಇನ್ನು ಹೆಚ್ಚುವರಿ 112 ಮೆಟ್ರಿಕ್ ಟನ್ ಮಂಗಳವಾರ ಮಧ್ಯರಾತ್ರಿ ಆಗಮಿಸಲಿದೆ.

-ಎಲ್ಲ ಜಿಲ್ಲೆಗಳು ಮತ್ತು ರಾಜ್ಯ ಹೆಡ್​ಕ್ವಾರ್ಟರ್​ಗಳೊಂದಿಗೆ ನಿರಂತರ ಸಂಪರ್ಕ ಜಾರಿಯಲ್ಲಿದ್ದು ಆಮ್ಲಜನಕ ಲಭ್ಯತೆಯನ್ನು ಸತತವಾಗಿ ಮಾನಿಟರ್ ಮಾಡಲಾಗುತ್ತಿದೆ.

-ಈ ವ್ಯವಸ್ಥೆಯು ಕಾರ್ಯನಿರ್ವಹಿಸುವುದನ್ನು ಮುಂದುವರಿಸಲಿದೆ ಮತ್ತು 25ನೇ ಮೇ ಹೊತ್ತಿಗೆ ಸ್ಥಿತಿ ಮಾಮೂಲುಗೊಳ್ಳಲಿದೆ, ಎಂದು ಮನೀಶ್ ತಿಳಿಸಿದ್ದಾರೆ

– ಇದರ ಹೊರತಾಗಿ ರಾಜ್ಯ ಮತ್ತು ಹೊರರಾಜ್ಯದ ಸಂಸ್ಥೆಗಳಿಂದ ಆಕ್ಸಿಜನ್ ಹಂಚಿಕೆ 1015 ಮೆಟ್ರಿಕ್ ಟನ್​ಗಳಿಂದ 1200 ಮೆಟ್ರಿಕ್ ಟನ್​ಗಳಿಗೆ ಹೆಚ್ಚಿಸಲಾಗುತ್ತಿದೆ.

ಇದನ್ನೂ ಓದಿ: Oxygen Shortage | ಕರ್ನಾಟಕದಲ್ಲಿ ಅಮೂಲ್ಯ ಆಕ್ಸಿಜನ್​ಗಾಗಿ ಹಾಹಾಕಾರ.. ಜೀವವಾಯು ಇಲ್ಲದೆ ಉಸಿರು ಚೆಲ್ಲುತ್ತಿರುವ ಸೋಂಕಿತರು

ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಉತ್ತರ ಕರ್ನಾಟಕದಲ್ಲಿ ನೀರು ಪೋಲಾಗಲು ಬಿಡೋದು ಕ್ರಿಮಿನಲ್ ಅಪರಾಧ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಅಣ್ಣಮ್ಮ ದೇವಾಲಯಕ್ಕೆ ಭೇಟಿ ನೀಡಿದ್ದೇಕೆ ವಿಜಯಲಕ್ಷ್ಮಿ, ಇಲ್ಲಿದೆ ಮಾಹಿತಿ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಗುತ್ತಿಗೆದಾರರು ಈ ಸರ್ಕಾರವನ್ನೂ ಅಧಿಕಾರದಿಂದ ಕೆಳಗಿಳಿಸಲಿದ್ದಾರೆ: ಸೋಮಣ್ಣ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಪುಣ್ಯಸ್ನಾನ ಮಾಡಿ ಸಂಗಮ ತೀರದಲ್ಲೇ ಬಟ್ಟೆ ಬಿಸಾಡಿ ಹೋಗುತ್ತಿರುವ ಜನ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಎಲೆಕೋಸು ಬೆಲೆ ದಿಢೀರ್​​ ಕುಸಿತ: ಕುರಿಗಳನ್ನ ಬಿಟ್ಟು ಬೆಳೆ ನಾಶ ಪಡಿಸಿದ ರೈತ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಸಂಸದರಾಗಿ 50ನೇ ಬಾರಿಗೆ ವಾರಾಣಸಿಗೆ ಪ್ರಧಾನಿ ಮೋದಿ ಭೇಟಿ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಅಂಬೇಡ್ಕರ್ ಎರಡು ಬಾರಿ ಚುನಾವಣೆಯಲ್ಲಿ ಸೋಲುವಂತೆ ಮಾಡಿದ್ದು ನೆಹರೂ: ಕಾರಜೋಳ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಕರಡಿಗಳಲ್ಲಿ ಮಾನವರ ಮೇಲೆ ಹಲ್ಲೆ ಮಾಡುವ ಪ್ರವೃತ್ತಿ, ಕೆಲವೊಮ್ಮೆ ಮಾರಣಾಂತಿಕ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಒಂದೇ ಸ್ಟ್ರಾಟಿಜಿ ಎಲ್ಲ ಪಂದ್ಯಗಳಿಗೆ ನಡೆಯಲ್ಲ, ಬದಲಾಯಿಸಬೇಕು: ಅಭಿಮಾನಿ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ
ಮಂಗಳೂರಿನಲ್ಲಿ ಬೆಳ್ಳಂಬೆಳಗ್ಗೆಯೇ ಮಳೆ ಆರ್ಭಟ