AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock 3.0: ಸೋಮವಾರದಿಂದಲೇ ಮೆಟ್ರೊ, ಬಸ್​ಗಳಲ್ಲಿ ಶೇಕಡಾ 100ರಷ್ಟು ಪ್ರಯಾಣಿಕರು ಸಂಚರಿಸಲು ಅನುಮತಿ

ಅನ್​ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

Karnataka Unlock 3.0: ಸೋಮವಾರದಿಂದಲೇ ಮೆಟ್ರೊ, ಬಸ್​ಗಳಲ್ಲಿ ಶೇಕಡಾ 100ರಷ್ಟು ಪ್ರಯಾಣಿಕರು ಸಂಚರಿಸಲು ಅನುಮತಿ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 03, 2021 | 7:32 PM

Share

ಬೆಂಗಳೂರು: ಕೊನೆಗೂ ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಗಳಾದ ಬಸ್ ಮತ್ತು ಮೆಟ್ರೊ ರೈಲುಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶೇಕಡಾ 100ರಷ್ಟು ಪ್ರಯಾಣಿಕರು ಪ್ರಯಾಣ ಬೆಳೆಸುವ ಸಮಯ ಬಂದಿದೆ. ಸೋಮವಾರದಿಂದಲೇ (ಜುಲೈ 5) ರಾಜ್ಯಾದ್ಯಂತ ಬಸ್​ ಮತ್ತು ಮೆಟ್ರೊಗಳ ಸಂಪೂರ್ಣ ಸೇವೆಯನ್ನು ಸಾರ್ವಜನಿಕರು ಪಡೆಯಬಹುದಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಅನ್​ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದೆ.

ರಾಜ್ಯಾದ್ಯಂತ ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಹಾಗೂ ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ. ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ ಹಾಗೂ ಬಾರ್​ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್​ಗಳು ತೆರೆಯಲು ಅವಕಾಶ ನೀಡಲಾಗಿಲ್ಲ.

ಕೊರೊನಾ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಕೂಡ ಕಡಿಮೆ ಆಗಿದೆ. ಕೊವಿಡ್-19 ಎರಡನೇ ಅಲೆ ಆತಂಕ ಕಡಿಮೆಯಾಗುತ್ತಿರುವಂತೆ ಲಾಕ್​ಡೌನ್ ನಿಯಮಾವಳಿಗಳನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಜೂನ್ 14ರಂದು ಮೊದಲ ಅನ್​ಲಾಕ್ ಘೋಷಿಸಲಾಗಿತ್ತು. ಆ ಬಳಿಕ, ಜೂನ್ 21ರಂದು ಮತ್ತೊಂದು ಹಂತದ ಲಾಕ್​ಡೌನ್ ಸಡಿಲಿಕೆ ಮಾಡಲಾಗಿತ್ತು. ಇಂದು (ಜುಲೈ 3) ಮೂರನೇ ಹಂತದ ಅನ್​ಲಾಕ್ ಘೋಷಿಸಲಾಗಿದೆ. ಜುಲೈ 5 ಅಂದರೆ ಸೋಮವಾರದಿಂದ ಈ ನಿಯಮಾವಳಿಗಳು ಜಾರಿಗೆ ಬರಲಿದೆ.

(Karnataka Unlock 100 percent passengers allowed in public transport by July 5th)

Published On - 7:29 pm, Sat, 3 July 21

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ