AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock 3.0: ಸೋಮವಾರದಿಂದಲೇ ಮೆಟ್ರೊ, ಬಸ್​ಗಳಲ್ಲಿ ಶೇಕಡಾ 100ರಷ್ಟು ಪ್ರಯಾಣಿಕರು ಸಂಚರಿಸಲು ಅನುಮತಿ

ಅನ್​ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

Karnataka Unlock 3.0: ಸೋಮವಾರದಿಂದಲೇ ಮೆಟ್ರೊ, ಬಸ್​ಗಳಲ್ಲಿ ಶೇಕಡಾ 100ರಷ್ಟು ಪ್ರಯಾಣಿಕರು ಸಂಚರಿಸಲು ಅನುಮತಿ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 03, 2021 | 7:32 PM

Share

ಬೆಂಗಳೂರು: ಕೊನೆಗೂ ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಗಳಾದ ಬಸ್ ಮತ್ತು ಮೆಟ್ರೊ ರೈಲುಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶೇಕಡಾ 100ರಷ್ಟು ಪ್ರಯಾಣಿಕರು ಪ್ರಯಾಣ ಬೆಳೆಸುವ ಸಮಯ ಬಂದಿದೆ. ಸೋಮವಾರದಿಂದಲೇ (ಜುಲೈ 5) ರಾಜ್ಯಾದ್ಯಂತ ಬಸ್​ ಮತ್ತು ಮೆಟ್ರೊಗಳ ಸಂಪೂರ್ಣ ಸೇವೆಯನ್ನು ಸಾರ್ವಜನಿಕರು ಪಡೆಯಬಹುದಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಅನ್​ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದೆ.

ರಾಜ್ಯಾದ್ಯಂತ ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಹಾಗೂ ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ. ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ ಹಾಗೂ ಬಾರ್​ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್​ಗಳು ತೆರೆಯಲು ಅವಕಾಶ ನೀಡಲಾಗಿಲ್ಲ.

ಕೊರೊನಾ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಕೂಡ ಕಡಿಮೆ ಆಗಿದೆ. ಕೊವಿಡ್-19 ಎರಡನೇ ಅಲೆ ಆತಂಕ ಕಡಿಮೆಯಾಗುತ್ತಿರುವಂತೆ ಲಾಕ್​ಡೌನ್ ನಿಯಮಾವಳಿಗಳನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಜೂನ್ 14ರಂದು ಮೊದಲ ಅನ್​ಲಾಕ್ ಘೋಷಿಸಲಾಗಿತ್ತು. ಆ ಬಳಿಕ, ಜೂನ್ 21ರಂದು ಮತ್ತೊಂದು ಹಂತದ ಲಾಕ್​ಡೌನ್ ಸಡಿಲಿಕೆ ಮಾಡಲಾಗಿತ್ತು. ಇಂದು (ಜುಲೈ 3) ಮೂರನೇ ಹಂತದ ಅನ್​ಲಾಕ್ ಘೋಷಿಸಲಾಗಿದೆ. ಜುಲೈ 5 ಅಂದರೆ ಸೋಮವಾರದಿಂದ ಈ ನಿಯಮಾವಳಿಗಳು ಜಾರಿಗೆ ಬರಲಿದೆ.

(Karnataka Unlock 100 percent passengers allowed in public transport by July 5th)

Published On - 7:29 pm, Sat, 3 July 21

Follow Us
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
ಹುಬ್ಬಳ್ಳಿಯಲ್ಲಿ ಮತ್ತೊಂದು ಲವ್ ಜಿಹಾದ್: ಯುವತಿಯನ್ನ ಮತಾಂತರಕ್ಕೆ ಯತ್ನ
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
Video:ಭಾರತವು ಅಮೆರಿಕದ ಆದೇಶವನ್ನು ಪಾಲಿಸುವುದಿಲ್ಲ: ಸೈಯದ್ ಅಕ್ಬರುದ್ದೀನ್
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ
ಕುವೈತ್‌ನ ಪ್ರಮುಖ ತೈಲ ಸಂಸ್ಕರಣಾಗಾರದ ಮೇಲೆ ಇರಾನ್‌ ಡ್ರೋನ್ ದಾಳಿ