AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock 3.0: ಸೋಮವಾರದಿಂದಲೇ ಮೆಟ್ರೊ, ಬಸ್​ಗಳಲ್ಲಿ ಶೇಕಡಾ 100ರಷ್ಟು ಪ್ರಯಾಣಿಕರು ಸಂಚರಿಸಲು ಅನುಮತಿ

ಅನ್​ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

Karnataka Unlock 3.0: ಸೋಮವಾರದಿಂದಲೇ ಮೆಟ್ರೊ, ಬಸ್​ಗಳಲ್ಲಿ ಶೇಕಡಾ 100ರಷ್ಟು ಪ್ರಯಾಣಿಕರು ಸಂಚರಿಸಲು ಅನುಮತಿ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
TV9 Web
| Updated By: guruganesh bhat|

Updated on:Jul 03, 2021 | 7:32 PM

Share

ಬೆಂಗಳೂರು: ಕೊನೆಗೂ ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಗಳಾದ ಬಸ್ ಮತ್ತು ಮೆಟ್ರೊ ರೈಲುಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶೇಕಡಾ 100ರಷ್ಟು ಪ್ರಯಾಣಿಕರು ಪ್ರಯಾಣ ಬೆಳೆಸುವ ಸಮಯ ಬಂದಿದೆ. ಸೋಮವಾರದಿಂದಲೇ (ಜುಲೈ 5) ರಾಜ್ಯಾದ್ಯಂತ ಬಸ್​ ಮತ್ತು ಮೆಟ್ರೊಗಳ ಸಂಪೂರ್ಣ ಸೇವೆಯನ್ನು ಸಾರ್ವಜನಿಕರು ಪಡೆಯಬಹುದಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಅನ್​ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದೆ.

ರಾಜ್ಯಾದ್ಯಂತ ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಹಾಗೂ ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ. ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ ಹಾಗೂ ಬಾರ್​ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್​ಗಳು ತೆರೆಯಲು ಅವಕಾಶ ನೀಡಲಾಗಿಲ್ಲ.

ಕೊರೊನಾ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಕೂಡ ಕಡಿಮೆ ಆಗಿದೆ. ಕೊವಿಡ್-19 ಎರಡನೇ ಅಲೆ ಆತಂಕ ಕಡಿಮೆಯಾಗುತ್ತಿರುವಂತೆ ಲಾಕ್​ಡೌನ್ ನಿಯಮಾವಳಿಗಳನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಜೂನ್ 14ರಂದು ಮೊದಲ ಅನ್​ಲಾಕ್ ಘೋಷಿಸಲಾಗಿತ್ತು. ಆ ಬಳಿಕ, ಜೂನ್ 21ರಂದು ಮತ್ತೊಂದು ಹಂತದ ಲಾಕ್​ಡೌನ್ ಸಡಿಲಿಕೆ ಮಾಡಲಾಗಿತ್ತು. ಇಂದು (ಜುಲೈ 3) ಮೂರನೇ ಹಂತದ ಅನ್​ಲಾಕ್ ಘೋಷಿಸಲಾಗಿದೆ. ಜುಲೈ 5 ಅಂದರೆ ಸೋಮವಾರದಿಂದ ಈ ನಿಯಮಾವಳಿಗಳು ಜಾರಿಗೆ ಬರಲಿದೆ.

(Karnataka Unlock 100 percent passengers allowed in public transport by July 5th)

Published On - 7:29 pm, Sat, 3 July 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ