AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock 3.0: ಸೋಮವಾರದಿಂದಲೇ ಮೆಟ್ರೊ, ಬಸ್​ಗಳಲ್ಲಿ ಶೇಕಡಾ 100ರಷ್ಟು ಪ್ರಯಾಣಿಕರು ಸಂಚರಿಸಲು ಅನುಮತಿ

ಅನ್​ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ.

Karnataka Unlock 3.0: ಸೋಮವಾರದಿಂದಲೇ ಮೆಟ್ರೊ, ಬಸ್​ಗಳಲ್ಲಿ ಶೇಕಡಾ 100ರಷ್ಟು ಪ್ರಯಾಣಿಕರು ಸಂಚರಿಸಲು ಅನುಮತಿ
ಬೆಂಗಳೂರು ಮೆಟ್ರೋ (ಸಂಗ್ರಹ ಚಿತ್ರ)
TV9 Web
| Edited By: |

Updated on:Jul 03, 2021 | 7:32 PM

Share

ಬೆಂಗಳೂರು: ಕೊನೆಗೂ ರಾಜ್ಯದಲ್ಲಿ ಸಾರ್ವಜನಿಕ ಸಾರಿಗೆಗಳಾದ ಬಸ್ ಮತ್ತು ಮೆಟ್ರೊ ರೈಲುಗಳಲ್ಲಿ ಸಾಮಾಜಿಕ ಅಂತರ ಕಾಪಾಡಿಕೊಂಡು ಶೇಕಡಾ 100ರಷ್ಟು ಪ್ರಯಾಣಿಕರು ಪ್ರಯಾಣ ಬೆಳೆಸುವ ಸಮಯ ಬಂದಿದೆ. ಸೋಮವಾರದಿಂದಲೇ (ಜುಲೈ 5) ರಾಜ್ಯಾದ್ಯಂತ ಬಸ್​ ಮತ್ತು ಮೆಟ್ರೊಗಳ ಸಂಪೂರ್ಣ ಸೇವೆಯನ್ನು ಸಾರ್ವಜನಿಕರು ಪಡೆಯಬಹುದಾಗಿದ್ದು, ದೈಹಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಘೋಷಿಸಿದ್ದಾರೆ. ಅನ್​ಲಾಕ್ 3.0ದ ಪ್ರಯುಕ್ತ ಈ ವಿನಾಯಿತಿ ನೀಡಲಾಗಿದೆ.

ರಾಜ್ಯಾದ್ಯಂತ ಪ್ರತಿದಿನ ಸಂಜೆ 9ರಿಂದ ಬೆಳಗ್ಗೆ 5ರವರೆಗೆ ಕರ್ಫ್ಯೂ ಹಾಗೂ ರಾಜ್ಯಾದ್ಯಂತ ವೀಕೆಂಡ್‌ ಕರ್ಫ್ಯೂ ಜಾರಿಯಲ್ಲಿ ಇರುವುದಿಲ್ಲ. ಧಾರ್ಮಿಕ, ರಾಜಕೀಯ ಇತರ ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಪಬ್​ಗಳು ಕಾರ್ಯನಿರ್ವಹಿಸಲು ಅವಕಾಶ ಇಲ್ಲ ಹಾಗೂ ಬಾರ್​ಗಳು ಕಾರ್ಯ ನಿರ್ವಹಿಸಲು ಅವಕಾಶ ನೀಡಲಾಗಿದೆ. ಸಿನಿಮಾ ಹಾಲ್​ಗಳು ತೆರೆಯಲು ಅವಕಾಶ ನೀಡಲಾಗಿಲ್ಲ.

ಕೊರೊನಾ ಎರಡನೇ ಅಲೆ ಗಣನೀಯ ಪ್ರಮಾಣದಲ್ಲಿ ಇಳಿಕೆ ಕಂಡಿದೆ. ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಕೊರೊನಾ ಸೋಂಕಿತರ ಪ್ರಮಾಣ ಇಳಿಕೆಯಾಗಿದೆ. ಪಾಸಿಟಿವಿಟಿ ದರ ಕೂಡ ಕಡಿಮೆ ಆಗಿದೆ. ಕೊವಿಡ್-19 ಎರಡನೇ ಅಲೆ ಆತಂಕ ಕಡಿಮೆಯಾಗುತ್ತಿರುವಂತೆ ಲಾಕ್​ಡೌನ್ ನಿಯಮಾವಳಿಗಳನ್ನು ಹಂತಹಂತವಾಗಿ ಸಡಿಲಿಕೆ ಮಾಡಲಾಗುತ್ತಿದೆ. ಜೂನ್ 14ರಂದು ಮೊದಲ ಅನ್​ಲಾಕ್ ಘೋಷಿಸಲಾಗಿತ್ತು. ಆ ಬಳಿಕ, ಜೂನ್ 21ರಂದು ಮತ್ತೊಂದು ಹಂತದ ಲಾಕ್​ಡೌನ್ ಸಡಿಲಿಕೆ ಮಾಡಲಾಗಿತ್ತು. ಇಂದು (ಜುಲೈ 3) ಮೂರನೇ ಹಂತದ ಅನ್​ಲಾಕ್ ಘೋಷಿಸಲಾಗಿದೆ. ಜುಲೈ 5 ಅಂದರೆ ಸೋಮವಾರದಿಂದ ಈ ನಿಯಮಾವಳಿಗಳು ಜಾರಿಗೆ ಬರಲಿದೆ.

(Karnataka Unlock 100 percent passengers allowed in public transport by July 5th)

Published On - 7:29 pm, Sat, 3 July 21

Follow Us
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ