AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ಕರ್ನಾಟಕದಲ್ಲಿ ಜುಲೈ 5 ರಿಂದ ಅನ್​ಲಾಕ್​ 3.0 ಜಾರಿ ಸಾಧ್ಯತೆ; ಯಾವುದಕ್ಕೆಲ್ಲಾ ರಿಲೀಫ್?

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದ ಪಾಸಿಟಿವ್ ರೇಟ್ ಶೇ.1.97ರಷ್ಟಿದ್ದು, ರಾಜಧಾನಿ ಬೆಂಗಳೂರು ಪಾಸಿಟಿವ್ ರೇಟ್ ಶೇ.1.27ರಷ್ಟಿದೆ.

Karnataka Unlock: ಕರ್ನಾಟಕದಲ್ಲಿ ಜುಲೈ 5 ರಿಂದ ಅನ್​ಲಾಕ್​ 3.0 ಜಾರಿ ಸಾಧ್ಯತೆ; ಯಾವುದಕ್ಕೆಲ್ಲಾ ರಿಲೀಫ್?
ಮಾಲ್
TV9 Web
| Edited By: |

Updated on:Jun 29, 2021 | 9:33 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ಜುಲೈ 5 ರಿಂದ ಅನ್​ಲಾಕ್​ 3.O ಜಾರಿಯಾಗುವ ಸಾಧ್ಯತೆಯಿದೆ. ಇದರಲ್ಲಿ ರಾಜ್ಯ ಸರ್ಕಾರ ಥಿಯೇಟರ್, ಮಾಲ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗೆ ರಿಲೀಫ್ ನೀಡುವ ಸಾಧ್ಯತೆ ಹೆಚ್ಚಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದ ಸರ್ಕಾರ, ಕಳೆದ ವಾರ ಅನ್​ಲಾಕ್​ 2.O ಜಾರಿಗೆ ತಂದಿತ್ತು.

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದ ಪಾಸಿಟಿವ್ ರೇಟ್ ಶೇ.1.97ರಷ್ಟಿದ್ದು, ರಾಜಧಾನಿ ಬೆಂಗಳೂರು ಪಾಸಿಟಿವ್ ರೇಟ್ ಶೇ.1.27ರಷ್ಟಿದೆ. ಹೀಗಾಗಿ ಕಳೆದ ಎರಡೂವರೆ ತಿಂಗಳಿಂದ ಬಂದ್ ಆಗಿದ್ದ ಮಾಲ್, ಥಿಯೇಟರ್, ಪಬ್, ಬಾರ್, ಕ್ಲಬ್, ಸ್ವಿಮ್ಮಿಂಗ್ ಪೂಲ್​ಗಳಿಗೆ ಅನುಮತಿ ಕೊಡುವ ಸಾಧ್ಯತೆಯಿದೆ.

ಬೆಳಗ್ಗೆಯಿಂದ ಸಂಜೆವರೆಗೂ ಮಾಲ್ ತೆರೆಯಲು ಅನುಮತಿ ಸಿಗುವ ಸಾಧ್ಯತೆಯಿದ್ದು, ಶೇ.50 ರಷ್ಟು ಗ್ರಾಹಕರಿಗೆ ಅವಕಾಶ ನೀಡಬಹುದು. 5 ವರ್ಷದೊಳಗಿನ ಮಕ್ಕಳಿಗೆ ಮಾಲ್​ನೊಳಗೆ ನಿರ್ಬಂಧ ಹೇರುವ ಸಾಧ್ಯತೆಯಿದೆ. ಪಬ್ ಗಳಿಗೆ ಬಹುತೇಕ ರಿಲೀಫ್ ಸಿಗುವ ಸಾಧ್ಯತೆಯಿದ್ದು, ಡ್ಯಾನ್ಸ್ ಫ್ಲೋರ್​ಗಳಿಗೆ ನಿರ್ಬಂಧ ಹೇರುವ ಮೂಲಕ ಪಬ್​ಗೆ ಅವಕಾಶ ನೀಡಬಹುದು. ಬಾರ್​ಗಳಲ್ಲಿ ಟೇಬಲ್ ಸರ್ವಿಸ್​ಗೆ ಅವಕಾಶ ನೀಡಬಹುದು. ಸದ್ಯ ಬಾರ್​ನಲ್ಲಿ ಪಾರ್ಸಲ್​ಗೆ ಮಾತ್ರ ಅವಕಾಶವಿದೆ. ಜುಲೈ 5 ರಿಂದ ಬಾರ್​ನಲ್ಲಿ ಕೂತು ಕುಡಿಯಲು ಅವಕಾಶ ಕೊಡಬಹುದು.

ಕ್ಲಬ್, ಕ್ಲಬ್ ಹೌಸ್​ಗಳಿಗೂ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ಥಿಯೇಟರ್​ಗಳಿಗೆ ಜುಲೈ 5 ರಿಂದ ರಿಲೀಫ್ ಸಿಗುವುದು ಸ್ವಲ್ಪ ಅನುಮಾನವಿದೆ. ಒಂದೇ ಜಾಗದಲ್ಲಿ ಹೆಚ್ಚು ಸಮಯ ಇರುವ ಕಾರಣ ಜುಲೈ 5 ರ ನಂತರವೂ ಥಿಯೇಟರ್​ಗೆ ಅನುಮತಿ ಸಿಗುವುದು ಅನುಮಾನವಿದೆ.

ಜುಲೈ 5ರ ನಂತರ ನೈಟ್ ಕರ್ಫ್ಯೂ ಮುಂದುವರಿಯಬಹುದು. ಸದ್ಯ ನೈಟ್ ಕರ್ಫ್ಯೂ ಸಂಜೆ 6 ಗಂಟೆಯಿಂದ ಜಾರಿಯಲ್ಲಿದೆ. ಆದರೆ ಜುಲೈ 5ರಿಂದ ಸಂಜೆ 7 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಯಿದೆ. ವಿಕೇಂಡ್ ಕರ್ಫ್ಯೂ ಯಥಾಸ್ಥಿತಿ ಮುಂದುವರಿಯುತ್ತದೆ.

ಇದನ್ನೂ ಓದಿ

Petrol Price Today: ಒಂದು ದಿನದ ವಿರಾಮದ ಬಳಿಕ ಮತ್ತೆ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ದರ!

ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟ ಬೆನ್ನಲ್ಲೇ ಶುರುವಾಯ್ತು ಸಚಿವರಗಳ ಮಧ್ಯ ಸಮರ

(Unlock 3.0 is likely to take effect from July 5 in Karnataka)

Published On - 9:29 am, Tue, 29 June 21

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ