AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ಕರ್ನಾಟಕದಲ್ಲಿ ಜುಲೈ 5 ರಿಂದ ಅನ್​ಲಾಕ್​ 3.0 ಜಾರಿ ಸಾಧ್ಯತೆ; ಯಾವುದಕ್ಕೆಲ್ಲಾ ರಿಲೀಫ್?

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದ ಪಾಸಿಟಿವ್ ರೇಟ್ ಶೇ.1.97ರಷ್ಟಿದ್ದು, ರಾಜಧಾನಿ ಬೆಂಗಳೂರು ಪಾಸಿಟಿವ್ ರೇಟ್ ಶೇ.1.27ರಷ್ಟಿದೆ.

Karnataka Unlock: ಕರ್ನಾಟಕದಲ್ಲಿ ಜುಲೈ 5 ರಿಂದ ಅನ್​ಲಾಕ್​ 3.0 ಜಾರಿ ಸಾಧ್ಯತೆ; ಯಾವುದಕ್ಕೆಲ್ಲಾ ರಿಲೀಫ್?
ಮಾಲ್
TV9 Web
| Edited By: |

Updated on:Jun 29, 2021 | 9:33 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ಜುಲೈ 5 ರಿಂದ ಅನ್​ಲಾಕ್​ 3.O ಜಾರಿಯಾಗುವ ಸಾಧ್ಯತೆಯಿದೆ. ಇದರಲ್ಲಿ ರಾಜ್ಯ ಸರ್ಕಾರ ಥಿಯೇಟರ್, ಮಾಲ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗೆ ರಿಲೀಫ್ ನೀಡುವ ಸಾಧ್ಯತೆ ಹೆಚ್ಚಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದ ಸರ್ಕಾರ, ಕಳೆದ ವಾರ ಅನ್​ಲಾಕ್​ 2.O ಜಾರಿಗೆ ತಂದಿತ್ತು.

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದ ಪಾಸಿಟಿವ್ ರೇಟ್ ಶೇ.1.97ರಷ್ಟಿದ್ದು, ರಾಜಧಾನಿ ಬೆಂಗಳೂರು ಪಾಸಿಟಿವ್ ರೇಟ್ ಶೇ.1.27ರಷ್ಟಿದೆ. ಹೀಗಾಗಿ ಕಳೆದ ಎರಡೂವರೆ ತಿಂಗಳಿಂದ ಬಂದ್ ಆಗಿದ್ದ ಮಾಲ್, ಥಿಯೇಟರ್, ಪಬ್, ಬಾರ್, ಕ್ಲಬ್, ಸ್ವಿಮ್ಮಿಂಗ್ ಪೂಲ್​ಗಳಿಗೆ ಅನುಮತಿ ಕೊಡುವ ಸಾಧ್ಯತೆಯಿದೆ.

ಬೆಳಗ್ಗೆಯಿಂದ ಸಂಜೆವರೆಗೂ ಮಾಲ್ ತೆರೆಯಲು ಅನುಮತಿ ಸಿಗುವ ಸಾಧ್ಯತೆಯಿದ್ದು, ಶೇ.50 ರಷ್ಟು ಗ್ರಾಹಕರಿಗೆ ಅವಕಾಶ ನೀಡಬಹುದು. 5 ವರ್ಷದೊಳಗಿನ ಮಕ್ಕಳಿಗೆ ಮಾಲ್​ನೊಳಗೆ ನಿರ್ಬಂಧ ಹೇರುವ ಸಾಧ್ಯತೆಯಿದೆ. ಪಬ್ ಗಳಿಗೆ ಬಹುತೇಕ ರಿಲೀಫ್ ಸಿಗುವ ಸಾಧ್ಯತೆಯಿದ್ದು, ಡ್ಯಾನ್ಸ್ ಫ್ಲೋರ್​ಗಳಿಗೆ ನಿರ್ಬಂಧ ಹೇರುವ ಮೂಲಕ ಪಬ್​ಗೆ ಅವಕಾಶ ನೀಡಬಹುದು. ಬಾರ್​ಗಳಲ್ಲಿ ಟೇಬಲ್ ಸರ್ವಿಸ್​ಗೆ ಅವಕಾಶ ನೀಡಬಹುದು. ಸದ್ಯ ಬಾರ್​ನಲ್ಲಿ ಪಾರ್ಸಲ್​ಗೆ ಮಾತ್ರ ಅವಕಾಶವಿದೆ. ಜುಲೈ 5 ರಿಂದ ಬಾರ್​ನಲ್ಲಿ ಕೂತು ಕುಡಿಯಲು ಅವಕಾಶ ಕೊಡಬಹುದು.

ಕ್ಲಬ್, ಕ್ಲಬ್ ಹೌಸ್​ಗಳಿಗೂ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ಥಿಯೇಟರ್​ಗಳಿಗೆ ಜುಲೈ 5 ರಿಂದ ರಿಲೀಫ್ ಸಿಗುವುದು ಸ್ವಲ್ಪ ಅನುಮಾನವಿದೆ. ಒಂದೇ ಜಾಗದಲ್ಲಿ ಹೆಚ್ಚು ಸಮಯ ಇರುವ ಕಾರಣ ಜುಲೈ 5 ರ ನಂತರವೂ ಥಿಯೇಟರ್​ಗೆ ಅನುಮತಿ ಸಿಗುವುದು ಅನುಮಾನವಿದೆ.

ಜುಲೈ 5ರ ನಂತರ ನೈಟ್ ಕರ್ಫ್ಯೂ ಮುಂದುವರಿಯಬಹುದು. ಸದ್ಯ ನೈಟ್ ಕರ್ಫ್ಯೂ ಸಂಜೆ 6 ಗಂಟೆಯಿಂದ ಜಾರಿಯಲ್ಲಿದೆ. ಆದರೆ ಜುಲೈ 5ರಿಂದ ಸಂಜೆ 7 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಯಿದೆ. ವಿಕೇಂಡ್ ಕರ್ಫ್ಯೂ ಯಥಾಸ್ಥಿತಿ ಮುಂದುವರಿಯುತ್ತದೆ.

ಇದನ್ನೂ ಓದಿ

Petrol Price Today: ಒಂದು ದಿನದ ವಿರಾಮದ ಬಳಿಕ ಮತ್ತೆ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ದರ!

ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟ ಬೆನ್ನಲ್ಲೇ ಶುರುವಾಯ್ತು ಸಚಿವರಗಳ ಮಧ್ಯ ಸಮರ

(Unlock 3.0 is likely to take effect from July 5 in Karnataka)

Published On - 9:29 am, Tue, 29 June 21

Follow Us
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು