AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ಕರ್ನಾಟಕದಲ್ಲಿ ಜುಲೈ 5 ರಿಂದ ಅನ್​ಲಾಕ್​ 3.0 ಜಾರಿ ಸಾಧ್ಯತೆ; ಯಾವುದಕ್ಕೆಲ್ಲಾ ರಿಲೀಫ್?

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದ ಪಾಸಿಟಿವ್ ರೇಟ್ ಶೇ.1.97ರಷ್ಟಿದ್ದು, ರಾಜಧಾನಿ ಬೆಂಗಳೂರು ಪಾಸಿಟಿವ್ ರೇಟ್ ಶೇ.1.27ರಷ್ಟಿದೆ.

Karnataka Unlock: ಕರ್ನಾಟಕದಲ್ಲಿ ಜುಲೈ 5 ರಿಂದ ಅನ್​ಲಾಕ್​ 3.0 ಜಾರಿ ಸಾಧ್ಯತೆ; ಯಾವುದಕ್ಕೆಲ್ಲಾ ರಿಲೀಫ್?
ಮಾಲ್
TV9 Web
| Edited By: |

Updated on:Jun 29, 2021 | 9:33 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ಜುಲೈ 5 ರಿಂದ ಅನ್​ಲಾಕ್​ 3.O ಜಾರಿಯಾಗುವ ಸಾಧ್ಯತೆಯಿದೆ. ಇದರಲ್ಲಿ ರಾಜ್ಯ ಸರ್ಕಾರ ಥಿಯೇಟರ್, ಮಾಲ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗೆ ರಿಲೀಫ್ ನೀಡುವ ಸಾಧ್ಯತೆ ಹೆಚ್ಚಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದ ಸರ್ಕಾರ, ಕಳೆದ ವಾರ ಅನ್​ಲಾಕ್​ 2.O ಜಾರಿಗೆ ತಂದಿತ್ತು.

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ರಾಜ್ಯದ ಪಾಸಿಟಿವ್ ರೇಟ್ ಶೇ.1.97ರಷ್ಟಿದ್ದು, ರಾಜಧಾನಿ ಬೆಂಗಳೂರು ಪಾಸಿಟಿವ್ ರೇಟ್ ಶೇ.1.27ರಷ್ಟಿದೆ. ಹೀಗಾಗಿ ಕಳೆದ ಎರಡೂವರೆ ತಿಂಗಳಿಂದ ಬಂದ್ ಆಗಿದ್ದ ಮಾಲ್, ಥಿಯೇಟರ್, ಪಬ್, ಬಾರ್, ಕ್ಲಬ್, ಸ್ವಿಮ್ಮಿಂಗ್ ಪೂಲ್​ಗಳಿಗೆ ಅನುಮತಿ ಕೊಡುವ ಸಾಧ್ಯತೆಯಿದೆ.

ಬೆಳಗ್ಗೆಯಿಂದ ಸಂಜೆವರೆಗೂ ಮಾಲ್ ತೆರೆಯಲು ಅನುಮತಿ ಸಿಗುವ ಸಾಧ್ಯತೆಯಿದ್ದು, ಶೇ.50 ರಷ್ಟು ಗ್ರಾಹಕರಿಗೆ ಅವಕಾಶ ನೀಡಬಹುದು. 5 ವರ್ಷದೊಳಗಿನ ಮಕ್ಕಳಿಗೆ ಮಾಲ್​ನೊಳಗೆ ನಿರ್ಬಂಧ ಹೇರುವ ಸಾಧ್ಯತೆಯಿದೆ. ಪಬ್ ಗಳಿಗೆ ಬಹುತೇಕ ರಿಲೀಫ್ ಸಿಗುವ ಸಾಧ್ಯತೆಯಿದ್ದು, ಡ್ಯಾನ್ಸ್ ಫ್ಲೋರ್​ಗಳಿಗೆ ನಿರ್ಬಂಧ ಹೇರುವ ಮೂಲಕ ಪಬ್​ಗೆ ಅವಕಾಶ ನೀಡಬಹುದು. ಬಾರ್​ಗಳಲ್ಲಿ ಟೇಬಲ್ ಸರ್ವಿಸ್​ಗೆ ಅವಕಾಶ ನೀಡಬಹುದು. ಸದ್ಯ ಬಾರ್​ನಲ್ಲಿ ಪಾರ್ಸಲ್​ಗೆ ಮಾತ್ರ ಅವಕಾಶವಿದೆ. ಜುಲೈ 5 ರಿಂದ ಬಾರ್​ನಲ್ಲಿ ಕೂತು ಕುಡಿಯಲು ಅವಕಾಶ ಕೊಡಬಹುದು.

ಕ್ಲಬ್, ಕ್ಲಬ್ ಹೌಸ್​ಗಳಿಗೂ ಅವಕಾಶ ನೀಡುವ ಸಾಧ್ಯತೆಯಿದೆ. ಆದರೆ ಥಿಯೇಟರ್​ಗಳಿಗೆ ಜುಲೈ 5 ರಿಂದ ರಿಲೀಫ್ ಸಿಗುವುದು ಸ್ವಲ್ಪ ಅನುಮಾನವಿದೆ. ಒಂದೇ ಜಾಗದಲ್ಲಿ ಹೆಚ್ಚು ಸಮಯ ಇರುವ ಕಾರಣ ಜುಲೈ 5 ರ ನಂತರವೂ ಥಿಯೇಟರ್​ಗೆ ಅನುಮತಿ ಸಿಗುವುದು ಅನುಮಾನವಿದೆ.

ಜುಲೈ 5ರ ನಂತರ ನೈಟ್ ಕರ್ಫ್ಯೂ ಮುಂದುವರಿಯಬಹುದು. ಸದ್ಯ ನೈಟ್ ಕರ್ಫ್ಯೂ ಸಂಜೆ 6 ಗಂಟೆಯಿಂದ ಜಾರಿಯಲ್ಲಿದೆ. ಆದರೆ ಜುಲೈ 5ರಿಂದ ಸಂಜೆ 7 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಯಿದೆ. ವಿಕೇಂಡ್ ಕರ್ಫ್ಯೂ ಯಥಾಸ್ಥಿತಿ ಮುಂದುವರಿಯುತ್ತದೆ.

ಇದನ್ನೂ ಓದಿ

Petrol Price Today: ಒಂದು ದಿನದ ವಿರಾಮದ ಬಳಿಕ ಮತ್ತೆ ಏರಿಕೆಯಾದ ಪೆಟ್ರೋಲ್​, ಡೀಸೆಲ್​ ದರ!

ಎಸ್ಎಸ್ಎಲ್​ಸಿ ಪರೀಕ್ಷೆ ದಿನಾಂಕ ಪ್ರಕಟ ಬೆನ್ನಲ್ಲೇ ಶುರುವಾಯ್ತು ಸಚಿವರಗಳ ಮಧ್ಯ ಸಮರ

(Unlock 3.0 is likely to take effect from July 5 in Karnataka)

Published On - 9:29 am, Tue, 29 June 21

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್