Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: 3ನೇ ಹಂತದ ಅನ್​ಲಾಕ್; ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ, ಷರತ್ತುಗಳು ಅನ್ವಯ

ಅನ್​ಲಾಕ್ 3.O ನಲ್ಲಿ ನೈಟ್ ಕರ್ಫ್ಯೂ ಜಾರಿಗೆ ಬಂದಲ್ಲಿ ಮಾಲ್​ಗಳ ತೆರವು ಸಮಯದಲ್ಲಿ ಕೆಲವೊಂದು ಬದಲಾವಣೆಯಾಗಲಿದೆ. ಅದರಂತೆ ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೂ ಮಾಲ್​ಗಳು ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ.

Karnataka Unlock: 3ನೇ ಹಂತದ ಅನ್​ಲಾಕ್; ಸೋಮವಾರದಿಂದಲೇ ಮಾಲ್ ಓಪನ್ ಸಾಧ್ಯತೆ, ಷರತ್ತುಗಳು ಅನ್ವಯ
ಮಾಲ್
Follow us
TV9 Web
| Updated By: preethi shettigar

Updated on:Jul 03, 2021 | 11:48 AM

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಬರುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಹಂತ ಹಂತವಾಗಿ ಅನ್​ಲಾಕ್​ ಪ್ರಕ್ರಿಯೆ ಪ್ರಾರಂಭಿಸಿದೆ. ತಜ್ಞರ ಸಲಹೆಗೆ ಅನುಸಾರವಾಗಿ ಈಗಾಗಲೇ ಅನ್​ಲಾಕ್​ 2.0 ಆರಂಭವಾಗಿದ್ದು, ಇದೀಗ ಜುಲೈ 5 ರಿಂದ ಅನ್​ಲಾಕ್​ 3.O ಜಾರಿಯಾಗಲಿದೆ. ಇದರಲ್ಲಿ ರಾಜ್ಯ ಸರ್ಕಾರ ಮಾಲ್​ಗೆ ರಿಲೀಫ್​ ನೀಡಲು ನಿರ್ಧರಿಸಿದೆ. ಇನ್ನು ಥಿಯೇಟರ್, ಪಬ್, ಕ್ಲಬ್, ಬಾರ್, ಸ್ವಿಮ್ಮಿಂಗ್ ಪೂಲ್​ಗಳಿಗೂ ರಿಲೀಫ್ ನೀಡುವ ಸಾಧ್ಯತೆ ಇದೆ.

ಅನ್​ಲಾಕ್ 3.O ನಲ್ಲಿ ನೈಟ್ ಕರ್ಫ್ಯೂ ಜಾರಿಗೆ ಬಂದಲ್ಲಿ ಮಾಲ್​ಗಳ ತೆರವು ಸಮಯದಲ್ಲಿ ಕೆಲವೊಂದು ಬದಲಾವಣೆಯಾಗಲಿದೆ. ಅದರಂತೆ ಬೆಳಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆವರೆಗೂ ಮಾಲ್​ಗಳು ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ. ಸಾಮಾನ್ಯವಾಗಿ 10 ಗಂಟೆಗೆ ಓಪನ್ ಆಗುತ್ತಿದ್ದ ಮಾಲ್​ಗಳು. ನೈಟ್ ಕರ್ಫ್ಯೂ ಜಾರಿಗೆ ಬಂದರೆ, ಬೆಳಗ್ಗೆ ಬೇಗನೆ ಓಪನ್ ಮಾಡಲು ಯೋಜನೆ ರೂಪಿಸಲಾಗಿದೆ.

ಕೊರೊನಾ ಪಾಸಿಟಿವ್ ರೇಟ್ ಕಡಿಮೆ ಇದ್ದಲ್ಲಿ ಅನ್​ಲಾಕ್​ 3.O ಜಾರಿಗೆ ತರಲು ತಜ್ಞರು ಸಲಹೆ ನೀಡಿದ್ದಾರೆ. ಅದರಂತೆ ರಾಜ್ಯದ ಪಾಸಿಟಿವ್ ರೇಟ್ ಗಮನದಲ್ಲಿರಿಸಿಕೊಂಡು ಮಾಲ್​ ಓಪನ್​ಗೆ ಮುಂದಾಗಿದೆ. ಇನ್ನು ಕಳೆದ ಎರಡೂವರೆ ತಿಂಗಳಿಂದ ಬಂದ್ ಆಗಿದ್ದ ಥಿಯೇಟರ್, ಪಬ್, ಬಾರ್, ಕ್ಲಬ್, ಸ್ವಿಮ್ಮಿಂಗ್ ಪೂಲ್​ಗಳಿಗೆ ಅನುಮತಿ ಕೊಡುವ ಸಾಧ್ಯತೆಯಿದೆ.

ಬಾರ್​ಗಳಿಗೂ ಕೊಂಚ ರಿಲೀಫ್ ಸಿಗುವ ಸಾಧ್ಯತೆ ಹೋಟೆಲ್​ಗಳಿಗೆ ಸಿಕ್ಕ ವಿನಾಯಿತಿಯಂತೆ,ಬಾರ್​ಗೂ ವಿನಾಯಿತಿ ಸಿಗುವ ಸಾಧ್ಯತೆ ಇದೆ. ಶೇ.50% ರಷ್ಟು ಗ್ರಾಹಕರಿಗೆ ಬಾರ್​ನಲ್ಲಿ ಕೂತು ಕುಡಿಯಲು ಅವಕಾಶ ನೀಡುವ ಸಾಧ್ಯತೆ ಇದ್ದು, ಸಾಮಾಜಿಕ ಅಂತರ ಕಾಪಾಡಿಕೊಂಡು ಬಾರ್​ನಲ್ಲಿ ಟೇಬಲ್ ಸರ್ವಿಸ್ ಆರಂಭಿಸಲು ಚಿಂತನೆ ನಡೆಸಲಾಗಿದೆ.

ಕ್ಲಬ್, ಕ್ಲಬ್ ಹೌಸ್​ಗಳಿಗೂ ಅವಕಾಶ ನೀಡುವ ಸಾಧ್ಯತೆ. ಆದರೆ ಪಾರ್ಟಿ, ಹೆಚ್ಚು ಜನ ಸೇರುವ ಕಾರ್ಯಕ್ರಮಗಳನ್ನು ಮಾಡುವಂತಿಲ್ಲ. ಅನ್​ಲಾಕ್ 3.O ನಲ್ಲಿ ದೇವಸ್ಥಾನಗಳು ರಿಲೀಫ್ ಸಿಗುವ ಸಾಧ್ಯತೆ ಇದ್ದು, ವಿಶೇಷ ಆಚರಣೆ, ಪ್ರಸಾದ ವಿತರಣೆ, ಗುಂಪು ಸೇರುವುದು ಸೇರಿದಂತೆ ಇನ್ನಿತರ ನಿರ್ಬಂಧ ಹೇರುವ ಮೂಲಕ ದೇವಸ್ಥಾನಗಳನ್ನ ಓಪನ್ ಮಾಡಲು ಅವಕಾಶ ನೀಡುವ ಸಾಧ್ಯತೆ ಇದೆ.

ಆದರೆ ಅನ್​ಲಾಕ್‌ 3.O ನಲ್ಲಿ ಥಿಯೇಟರ್​ಗಳಿಗೆ ರಿಲೀಫ್ ಸಿಗುವುದು ಅನುಮಾನವಾಗಿದೆ. ಸಧ್ಯಕ್ಕೆ ಥಿಯೇಟರ್​ಗಳನ್ನು ಓಪನ್ ಮಾಡದಿರಲು ಕೆಲ ಅಧಿಕಾರಿಗಳು ಸಲಹೆ ನೀಡಿದ್ದಾರೆ. ಹೀಗಾಗಿ ಜುಲೈ 15 ವರೆಗೂ ಥಿಯೇಟರ್​ಗಳು ಓಪನ್ ಆಗುವುದು ಬಹುತೇಕ ಅನುಮಾನವಾಗಿದೆ.

ಜುಲೈ 5ರ ನಂತರ ನೈಟ್ ಕರ್ಫ್ಯೂ ಮುಂದುವರಿಯಬಹುದು. ಸದ್ಯ ನೈಟ್ ಕರ್ಫ್ಯೂ ಸಂಜೆ 6 ಗಂಟೆಯಿಂದ ಜಾರಿಯಲ್ಲಿದೆ. ಆದರೆ ಜುಲೈ 5ರಿಂದ ಸಂಜೆ 7 ಗಂಟೆಯಿಂದ ನೈಟ್ ಕರ್ಫ್ಯೂ ಜಾರಿಯಾಗುವ ಸಾಧ್ಯತೆಯಿದೆ. ವಿಕೇಂಡ್ ಕರ್ಫ್ಯೂ ಯಥಾಸ್ಥಿತಿ ಮುಂದುವರಿಯುತ್ತದೆ.

ಇದನ್ನೂ ಓದಿ:

ಅನ್‌ಲಾಕ್ 2.Oನಲ್ಲಿ ಕೊರೊನಾ ರೂಲ್ಸ್ ಕಂಪ್ಲೀಟ್‌ ಬ್ರೇಕ್‌.. ಕೊರೊನಾ ಮರೆತು ನಿರ್ಲಕ್ಷ್ಯದಲ್ಲಿರುವ ಜನ

ಕೇರಳದಿಂದ ಕರ್ನಾಟಕ ಪ್ರವೇಶಿಸುವವರಿಗೆ 72 ಗಂಟೆಗಳ ಒಳಗಿನ ನೆಗೆಟಿವ್ ರಿಪೋರ್ಟ್ ಕಡ್ಡಾಯ; ದಕ್ಷಿಣ ಕನ್ನಡ ಅನ್​ಲಾಕ್ ಕೆಟಗೆರಿ 1ರ ಪಟ್ಟಿಗೆ ಸೇರ್ಪಡೆ

Published On - 9:31 am, Fri, 2 July 21

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ
ಬಿವಿ ಕಾರಂತರು ನಾಯಿ ತಿಥಿಗೆ ಹೋದ ಕತೆ, ರಂಗಾಯಣ ರಘು ಅನುಕರಣೆ ನೋಡಿ