AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: ರಾಜ್ಯದ ಇನ್ನೂ 6 ಜಿಲ್ಲೆಗಳು ಅನ್​ಲಾಕ್; ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ

ಇತ್ತೀಚಿಗೆ 16 ಜಿಲ್ಲೆಗಳಲ್ಲಿ ಘೋಷಣೆಯಾಗಿದ್ದ ಅನ್​ಲಾಕ್ ಪ್ರಕ್ರಿಯೆಗೆ ಇನ್ನೂ 6 ಜಿಲ್ಲೆಗಳನ್ನು ಸೇರಿಸಲಾಗಿದೆ. ಅವು ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ.

Karnataka Unlock: ರಾಜ್ಯದ ಇನ್ನೂ 6 ಜಿಲ್ಲೆಗಳು ಅನ್​ಲಾಕ್; ಯಾವ ಜಿಲ್ಲೆಗಳು ಎಂಬ ಮಾಹಿತಿ ಇಲ್ಲಿದೆ
ಲಾಕ್​ಡೌನ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Jun 21, 2021 | 4:01 PM

Share

ಬೆಂಗಳೂರು: ಅನ್‌ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಮತ್ತೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶಿಸಿದೆ. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿದೆ. 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೂನ್ 19ರಂದು ಘೋಷಿಸಿದ್ದರು.

ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ ಎಂದು ತಿಳಿಸಲಾಗಿತ್ತು. ಇದೀಗ ಈ ಜಿಲ್ಲೆಗಳ ಸಾಲಿಗೆ ಹೊಸದಾಗಿ ಇನ್ನೂ 6 ಜಿಲ್ಲೆಗಳನ್ನು ಸೇರಿಸಲಾಗಿದೆ.

ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶವಿದೆ. ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ. ಜಿಮ್‌ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ ಸುಮಾರು 2 ತಿಂಗಳ ನಂತರ ಇಂದಿನಿಂದ ಬಸ್ ಸಂಚಾರ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಏಪ್ರಿಲ್‌ ತಿಂಗಳ ಪಾಸ್ ಅವಧಿಯನ್ನು ವಿಸ್ತರಿಸಿದೆ. ಇಷ್ಟು ದಿನಗಳ ಕಾಲ ಲಾಕ್‌ಡೌನ್‌ ಇದ್ದ ಕಾರಣ ಬಸ್​ಗಳು ಸಂಚರಿಸಲಿರಲಿಲ್ಲ. ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಪಾಸ್‌ಗಳಿಗೆ ಮಾತ್ರ ಈ ವಿಸ್ತರಣೆ ಅನ್ವಯವಾಗಲಿದ್ದು, ಈ ಅವಧಿಯ ಹಳೆ ಪಾಸ್‌ ತೋರಿಸಿ 18 ದಿನಗಳ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಬಹುದಾಗಿದೆ.

ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಅವಧಿಯ ಪಾಸ್ ಹೊಂದಿದವರು ಪಾಸ್ ಕೌಂಟರ್​ಗಳಿಗೆ ಭೇಟಿ ನೀಡಿ ಸೀಲ್ ಮತ್ತು ಮೊಹರು ಹಾಕಿಸಿಕೊಳ್ಳಬೇಕು. ಆನಂತರ ಹಳೆಯ ಪಾಸ್ ಬಳಸಿಯೇ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ:  ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ

ಸಿಬಿಎಸ್​ಇ, ಐಸಿಎಸ್​ಇ ಆಡಳಿತ ಮಂಡಳಿಗಳಿಗೆ ಮೌಲ್ಯಮಾಪನ ಸೂತ್ರ ಅಂತಿಮಗೊಳಿಸಲು ಸುಪ್ರೀಂಕೋರ್ಟ್ ಸೂಚನೆ

(Karnataka Unlock 6 more districts of the state unlocked Here is information on which districts)

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ