Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಪರಿಸ್ಥಿತಿ ಆಧರಿಸಿ ಅನ್​ಲಾಕ್ ನಿರ್ಧಾರ: ಕಂದಾಯ ಸಚಿವ ಆರ್ ಅಶೋಕ್

ಆನ್​ಲಾಕ್ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ನಿರ್ಧರಿಸಲಿದ್ದಾರೆ. ನಮಗೆ ಜನರ ಜೀವ, ಜೀವನ ಎರಡೂ ಮುಖ್ಯವಾಗಿದೆ. ಹಾಗೆಯೇ ಆರ್ಥಿಕತೆ ಕಡೆಗೂ ಗಮನ ಕೊಡಬೇಕಿದೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಕೊವಿಡ್ ಪರಿಸ್ಥಿತಿ ಆಧರಿಸಿ ಅನ್​ಲಾಕ್ ನಿರ್ಧಾರ: ಕಂದಾಯ ಸಚಿವ ಆರ್ ಅಶೋಕ್
ಸಚಿವ ಆರ್. ಅಶೋಕ್
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jun 09, 2021 | 4:48 PM

ಬೆಂಗಳೂರು: ಕರ್ನಾಟಕದ ಕೊವಿಡ್ ಪರಿಸ್ಥಿತಿ ಆಧರಿಸಿ ಅನ್​ಲಾಕ್ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು. ಆನ್​ಲಾಕ್ ಬಗ್ಗೆ ಆಯಾ ಜಿಲ್ಲಾಧಿಕಾರಿಗಳು ನಿರ್ಧರಿಸಲಿದ್ದಾರೆ. ನಮಗೆ ಜನರ ಜೀವ, ಜೀವನ ಎರಡೂ ಮುಖ್ಯವಾಗಿದೆ. ಹಾಗೆಯೇ ಆರ್ಥಿಕತೆ ಕಡೆಗೂ ಗಮನ ಕೊಡಬೇಕಿದೆ ಎಂದು ವಿಧಾನಸೌಧದಲ್ಲಿ ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.

ಲಸಿಕೆಗಾಗಿ ಸರ್ಕಾರಕ್ಕೆ ₹ 100 ಕೋಟಿ ಬಗ್ಗೆ ಕಾಂಗ್ರೆಸ್‌ ನಾಯಕರು ಹೇಳುತ್ತಿದ್ದಾರೆ. ಆದರೆ ಕಾಂಗ್ರೆಸ್‌ನವರು ಯಾವುದೇ ಹಣವನ್ನು ಕೊಟ್ಟಿಲ್ಲ. ಸರ್ಕಾರದ ಹಣ ಹೇಗೆ ಖರ್ಚು ಮಾಡಬೇಕೆಂದು ನಮಗೆ ಗೊತ್ತಿದೆ. ಈ ಬಗ್ಗೆ ಮುಖ್ಯಮಂತ್ರಿ, ಹಣಕಾಸು ಇಲಾಖೆ ಮತ್ತು ಮುಖ್ಯ ಕಾರ್ಯದರ್ಶಿ ನಿರ್ಧಾರ ಮಾಡುತ್ತಾರೆ.

ಈ ಬಗ್ಗೆ ಕಾಂಗ್ರೆಸ್‌ನವರು ನಿರ್ಧಾರ ಮಾಡಲು ಬರುವುದಿಲ್ಲ. ಕಾಂಗ್ರೆಸ್‌ನವರು ಹಣ ಕೊಟ್ಟ ನಂತರ ಬೇಕಿದ್ದರೆ ಮಾತನಾಡಲಿ. ಅವರು ಹಣ ಕೊಟ್ಟು ಲಸಿಕೆ ಕೇಳಿದರೆ, ಎಷ್ಟು ಲಸಿಕೆ ಕೇಳಿದರೆ ಅಷ್ಟನ್ನೂ ಕೊಡುತ್ತೇವೆ. ಉಚಿತವಾಗಿ ಲಸಿಕೆ ಕೊಡುತ್ತಿರುವುದು ಕೇಂದ್ರ ಸರ್ಕಾರ. ಉಚಿತ ಲಸಿಕೆಯ ಕ್ರೆಡಿಟ್ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

ವಿಧಾನಸೌಧದಲ್ಲಿ ಇಂದು ನಡೆದ ಸಭೆಯಲ್ಲಿ ಲಾಕ್​ಡೌನ್​ ಸಡಿಲಿಕೆ ಬಗ್ಗೆ ಚರ್ಚೆ ನಡೆಸಲಾಗಿದೆ. ಎಷ್ಟು ಹಂತಗಳಲ್ಲಿ ಅನ್​ಲಾಕ್​ ಮಾಡಬೇಕೆಂದು ಚರ್ಚಿಸಿದ್ದೇವೆ. ಇದೇ ವಿಷಯವಾಗಿ ನಿನ್ನೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೊತೆಗೂ ನಾನು, ಗೃಹ ಸಚಿವ ಬಸವರಾಜ ಬೊಮ್ಮಾಯಿ ಮತ್ತು ಆರೋಗ್ಯ ಸಚಿವ ಸುಧಾಕರ್​ ಸುದೀರ್ಘವಾಗಿ ಚರ್ಚಿಸಿದ್ದೆವು ಎಂದು ಹೇಳಿದರು.

ಪಾರ್ಕ್​ಗಳನ್ನು ಬೆಳಿಗ್ಗೆ 5ರಿಂದ 8ರವರೆಗೆ ತೆರೆಯಲು, ಬಾರ್​ಗಳ ಸಮಯ ವಿಸ್ತರಿಸುವ ಬಗ್ಗೆ ಈಗಾಗಲೇ ಚರ್ಚಿಸಲಾಗಿದೆ. ಅನ್​ಲಾಕ್​ ಬಗ್ಗೆ ನಾಳೆ ಮುಖ್ಯಮಂತ್ರಿ ಯಡಿಯೂರಪ್ಪ ಸಭೆ ನಡೆಸಲಿದ್ದಾರೆ. ನಂತರ ಸ್ಪಷ್ಟ ಚಿತ್ರಣ ದೊರೆಯಲಿದೆ. ಅನ್​ಲಾಕ್​ ಹೇಗೆ ಮಾಡಬೇಕು? ಯಾವ ರೀತಿಯ ಕ್ರಮಗಳನ್ನು ತೆಗೆದುಕೊಳ್ಳಬೇಕು? ಎಷ್ಟು ಹಂತಗಳಲ್ಲಿ ಅನ್​ಲಾಕ್ ಮಾಡಬೇಕು ಎಂಬ ಬಗ್ಗೆ ಚರ್ಚೆ ನಡೆಯುತ್ತಿದೆ ಎಂದು ತಿಳಿಸಿದರು.

ಹಲವು ಜಿಲ್ಲೆಗಳಲ್ಲಿ ಕೊವಿಡ್ ಸೋಂಕಿತರಿಗಾಗಿ ಮೀಸಲಿಟ್ಟಿದ್ದ ಬೆಡ್​ಗಳು ಖಾಲಿ ಉಳಿದಿವೆ. ಇವುಗಳ ಬಗ್ಗೆ ಸೂಕ್ತ ತೀರ್ಮಾಣ ತೆಗೆದುಕೊಳ್ಳುವ ನಿರ್ಧಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ. ಬೆಂಗಳೂರಿನಲ್ಲಿ ಈಗ 6,064 ಬೆಡ್ ಖಾಲಿಯಿವೆ. ಈ ಬೆಡ್‌ಗಳನ್ನು ಇತರೆ ಕಾಯಿಲೆಗಳ ರೋಗಿಗಳಿಗೆ ಬಳಕೆ ಮಾಡಲು ನಿರ್ಧರಿಸಿದ್ದೇವೆ. ಸರ್ಕಾರಿ ಆಸ್ಪತ್ರೆಗಳಲ್ಲಿರುವ ಬೆಡ್​ಗಳು ಮತ್ತು ಖಾಸಗಿ ಆಸ್ಪತ್ರೆಗಳ ಶೇ 20ರಷ್ಟು ಬೆಡ್​ಗಳನ್ನು ಕೊವಿಡ್ ಸೋಂಕಿತರ ಚಿಕಿತ್ಸೆಗೆ ಉಳಿಸಿಕೊಳ್ಳುತ್ತೇವೆ. ಐಸಿಯು ಹೊರತುಪಡಿಸಿ ಉಳಿದ ಬೆಡ್​ಗಳನ್ನು ಖಾಸಗಿಯವರಿಗೆ ಬಿಟ್ಟುಕೊಡುತ್ತೇವೆ ಎಂದರು.

(Karnataka Unlock Discussion Revenue Minister R Ashok Informs about the Unlock Plan of State Govt)

ಇದನ್ನೂ ಓದಿ: CM on Lockdown Relaxation : ಶೇ.5ಕ್ಕಿಂತ ಪಾಸಿಟಿವಿಟಿ ರೇಟ್ ಬರೋ ಜಿಲ್ಲೆಗಳಲ್ಲಿ ಅನ್​ಲಾಕ್..?

ಇದನ್ನೂ ಓದಿ: Karnataka Unlock: ಜೂನ್ 14ರ ನಂತರ ಅನ್​ಲಾಕ್​ಗೆ ಇವತ್ತೇ ಮುಹೂರ್ತ ಫಿಕ್ಸ್? ತಜ್ಞರ ಜೊತೆ ಮಹತ್ವದ ಮೀಟಿಂಗ್

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​