AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock​: ಸ್ಮಾರ್ಟ್​ಕಾರ್ಡ್​ ಇದ್ದವರಿಗೆ ಮೆಟ್ರೋದಲ್ಲಿ ಅವಕಾಶ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ ಸಂಚಾರ ವಿರಳ

Bengaluru Unlock: ಸರಿಸುಮಾರು 2 ತಿಂಗಳ ನಂತರ ಮೆಟ್ರೋ ಸಂಚಾರವೂ ಶುರುವಾಗುತ್ತಿದ್ದು, ಮೆಟ್ರೋದಲ್ಲಿ ಸಂಚರಿಸುವುದಕ್ಕೂ ಒಂದಷ್ಟು ನಿಯಮಾವಳಿಗಳನ್ನು ಪಾಲಿಸಬೇಕಿದೆ. ಅವುಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ಈ ವರದಿಯಲ್ಲಿದೆ.

Karnataka Unlock​: ಸ್ಮಾರ್ಟ್​ಕಾರ್ಡ್​ ಇದ್ದವರಿಗೆ ಮೆಟ್ರೋದಲ್ಲಿ ಅವಕಾಶ, ಕೆಎಸ್​ಆರ್​ಟಿಸಿ, ಬಿಎಂಟಿಸಿ ಬಸ್​ ಸಂಚಾರ ವಿರಳ
ಕೆಎಸ್​ಆರ್​ಟಿಸಿ ಬಸ್​ (ಸಾಂದರ್ಭಿಕ ಚಿತ್ರ)
TV9 Web
| Updated By: Skanda

Updated on:Jun 21, 2021 | 8:38 AM

Share

ಬೆಂಗಳೂರು: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಕರ್ನಾಟಕದಲ್ಲಿ ಹೇರಲಾಗಿದ್ದ ಲಾಕ್​ಡೌನ್​ ಹಂತಹಂತವಾಗಿ ಸಡಿಲಿಕೆಯಾಗುತ್ತಿದೆ. ಇಂದಿನಿಂದ ರಾಜ್ಯದ ಹಲವೆಡೆ ಬಸ್​ ಸಂಚಾರ ಆರಂಭವಾಗುತ್ತಿದ್ದು, ಲಾಕ್​ಡೌನ್ ಸಡಿಲಿಕೆಯ ಮೊದಲ ದಿನವೇ ಜನರು ಬಸ್​ಗಾಗಿ ಮುಗಿಬಿದ್ದ ಘಟನೆಗಳೂ ವರದಿಯಾಗಿವೆ. ಇತ್ತ ರಾಜಧಾನಿ ಬೆಂಗಳೂರಿನಲ್ಲಿ ಎರಡು ಸಾವಿರ ಬಿಎಂಟಿಸಿ ಬಸ್​ಗಳನ್ನು ರಸ್ತೆಗಿಳಿಸುವುದಾಗಿ ಹೇಳಿಕೆ ಹೊರಬಿದ್ದಿತ್ತಾದರೂ ಸದ್ಯ ಬೆರಳೆಣಿಕೆಯಷ್ಟು ಬಸ್​ ಮಾತ್ರ ಸಂಚಾರ ಆರಂಭಿಸಿದ್ದು, ಬಿಎಂಟಿಸಿ ಇರಲಿದೆ ಎಂದು ನಂಬಿಕೊಂಡು ಬಂದ ಪ್ರಯಾಣಿಕರು ಪರದಾಡುವಂತಾಗಿದೆ. ಸರಿಸುಮಾರು 2 ತಿಂಗಳ ನಂತರ ಮೆಟ್ರೋ ಸಂಚಾರವೂ ಶುರುವಾಗುತ್ತಿದ್ದು, ಮೆಟ್ರೋದಲ್ಲಿ ಸಂಚರಿಸುವುದಕ್ಕೂ ಒಂದಷ್ಟು ನಿಯಮಾವಳಿಗಳನ್ನು ಪಾಲಿಸಬೇಕಿದೆ. ಅವುಗಳ ಬಗ್ಗೆ ಸಂಕ್ಷಿಪ್ತ ಮಾಹಿತಿ ಈ ವರದಿಯಲ್ಲಿದೆ.

ಮೆಟ್ರೋ ಸಂಚಾರ: ಸುಮಾರು 2 ತಿಂಗಳ ನಂತರ ಆರಂಭವಾಗುತ್ತಿರುವ ಮೆಟ್ರೋ ಇಂದಿನಿಂದ ಬೆಳಗ್ಗೆ 7ರಿಂದ 11ಗಂಟೆವರೆಗೆ ಹಾಗೂ ಮಧ್ಯಾಹ್ನ 3ರಿಂದ ಸಂಜೆ 6 ಗಂಟೆಯವರೆಗೆ ಪ್ರತಿ 5ನಿಮಿಷಕ್ಕೆ ಒಂದರಂತೆ ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಸಂಚಾರ ನಡೆಸಲಿದೆ. ಆದರೆ, ಸ್ಮಾರ್ಟ್​ಕಾರ್ಡ್​ ಇದ್ದವರಿಗೆ ಮಾತ್ರ ಮೆಟ್ರೋ ಸಂಚಾರಕ್ಕೆ ಅವಕಾಶ ನೀಡಲಾಗಿದ್ದು, ನಿಲ್ದಾಣಗಳಲ್ಲಿ ಸ್ಮಾರ್ಟ್​ಕಾರ್ಡ್ ರೀಚಾರ್ಜ್​ ಮಾಡಿಕೊಂಡು ಪಯಣಿಸಬಹುದಾಗಿದೆ. ಮೆಟ್ರೋ ನಿಲ್ದಾಣದಲ್ಲಿ ದೇಹದ ಉಷ್ಣಾಂಶ ತಪಾಸಣೆ ಕಡ್ಡಾಯವಾಗಿರಲಿದ್ದು, ಹ್ಯಾಂಡ್​ ಸ್ಯಾನಿಟೈಸ್ ಮಾಡಿಕೊಳ್ಳಬೇಕಿದೆ. ಮುಖಗವಸು ಧರಿಸಿದವರಿಗೆ ಮಾತ್ರ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಹಾಗೂ ಎಲ್ಲಾ ಸಂದರ್ಭದಲ್ಲೂ ದೈಹಿಕ ಅಂತರ ಪಾಲಿಸಲೇಬೇಕು. ಹಳದಿ ಬಣ್ಣದ ಪಟ್ಟಿಯಲ್ಲಿ ಮಾತ್ರ ಕುಳಿತು ಅಥವಾ ನಿಂತು ಪ್ರಯಾಣ ಮಾಡಬೇಕಿದ್ದು, ವಾರಾಂತ್ಯದ ಕರ್ಫ್ಯೂ ನಿಮಿತ್ತ ಶನಿವಾರ, ಭಾನುವಾರ ಮೆಟ್ರೋ ಸಂಚಾರ ಇರುವುದಿಲ್ಲ.

ಬಿಎಂಟಿಸಿ ಬಸ್ ಸಂಚಾರ: ಅನ್​ಲಾಕ್​ ಹಿನ್ನೆಲೆ ಇಂದಿನಿಂದ ಸುಮಾರು ಎರಡು ಸಾವಿರ ಬಸ್​ಗಳು ಬೆಂಗಳೂರು ನಗರದಲ್ಲಿ ರಸ್ತೆಗಿಳಿಯಲಿವೆ ಎಂದು ಬಿಎಂಟಿಸಿ ತಿಳಿಸಿತ್ತು. ಆದರೆ, ಮುಂಜಾನೆಯಿಂದ ಇಲ್ಲಿಯ ತನಕ ಕೇವಲ ಬೆರಳೆಣಿಕೆ ಬಸ್​ಗಳು ಸಂಚಾರ ನಡೆಸುತ್ತಿದ್ದು, ಬಿಎಂಟಿಸಿ ಮಾತು ನಂಬಿಕೊಂಡು ಬಸ್​ ಹತ್ತಲು ಬಂದವರು ಪರದಾಡುತ್ತಿದ್ದಾರೆ. ಮೆಜೆಸ್ಟಿಕ್​ ಬಸ್​ಸ್ಟ್ಯಾಂಡ್​ಗೆ ಬಸ್​ಗಳು ಬಾರದ ಹಿನ್ನೆಲೆಯಲ್ಲಿ ಜನರು ಬೇರೆ ದಾರಿಯಿಲ್ಲದೇ ಆಟೋ ಹಿಡಿದು ತಾವು ತಲುಪಬೇಕಾದ ಜಾಗದತ್ತ ಮುಖ ಮಾಡುತ್ತಿದ್ದಾರೆ. ಬಿಎಂಟಿಸಿ ಸಿಬ್ಬಂದಿಗಳಿಗೆ ಥರ್ಮಲ್ ಸ್ಕ್ರೀನಿಂಗ್​ ಹಾಗೂ ಆಕ್ಸಿಜನ್​ ಟೆಸ್ಟ್ ಮಾಡಲಾಗುತ್ತಿದ್ದು, ಪರೀಕ್ಷೆಯ ನಂತರವಷ್ಟೇ ಕರ್ತವ್ಯಕ್ಕೆ ಹಾಜರಾಗಲು ಅವಕಾಶ ನೀಡಲಾಗುತ್ತಿದೆ.

ಕೆಎಸ್​ಆರ್​ಟಿಸಿ ಬಸ್ ಸಂಚಾರ: ಮೈಸೂರು, ದಕ್ಷಿಣ ಕನ್ನಡ ಜಿಲ್ಲೆ ಹೊರತುಪಡಿಸಿ ಮಿಕ್ಕೆಲ್ಲಾ ಕಡೆಗಳಲ್ಲೂ ಕೆಎಸ್​ಆರ್​ಟಿಸಿ ಬಸ್​ ಸಂಚರಿಸಲು ರಾಜ್ಯ ಸರ್ಕಾರ ಅನುವು ಮಾಡಿಕೊಟ್ಟಿದೆ. ಅದರನ್ವಯ ತುಮಕೂರು, ಬೆಳಗಾವಿ, ವಿಜಯಪುರ, ಕಲಬುರಗಿ, ಶಿವಮೊಗ್ಗ, ದಾವಣಗೆರೆ, ಕೊಪ್ಪಳ ಹೀಗೆ ಕೆಲವು ಜಿಲ್ಲೆಗಳಲ್ಲಿ ಬೆಳಗ್ಗೆಯಿಂದಲೇ ಬಸ್ ಸಂಚಾರ ಆರಂಭವಾಗಿದೆ. ಆದರೆ, ಚಿಕ್ಕಮಗಳೂರು, ನೆಲಮಂಗಲ ಸೇರಿದಂತೆ ಕೆಲವೆಡೆ ಪ್ರಯಾಣಿಕರು ಬಸ್​ ನಿಲ್ದಾಣಗಳಿಗೆ ಆಗಮಿಸಿದ್ದರೂ ಬಸ್​ ಬಾರದ ಹಿನ್ನೆಲೆ ಗೊಂದಲ ಉಂಟಾಗಿದೆ. ಕೆಲವು ಕಡೆಗಳಲ್ಲಿ ಜನ ಬಸ್​ಗಾಗಿ ಮುಗಿಬಿದ್ದು ದೈಹಿಕ ಅಂತರ, ಕೊರೊನಾ ನಿಯಮಾವಳಿಗಳನ್ನೆಲ್ಲಾ ಗಾಳಿಗೆ ತೂರಿರುವ ಘಟನೆಯೂ ನಡೆದಿದೆ. ಬಸ್​, ಚಾಲಕರು ಹಾಗೂ ನಿರ್ವಾಹಕರಿಗೆ ಕೊರೊನಾ ನೆಗೆಟಿವ್​ ರಿಪೋರ್ಟ್​ ತೋರಿಸಲು ಹೇಳಿ ಕರ್ತವ್ಯಕ್ಕೆ ಅವಕಾಶ ನೀಡಲಾಗುತ್ತಿದ್ದು, ಅನೇಕ ದಿನಗಳ ನಂತರ ಬಸ್​ ಆರಂಭವಾಗುತ್ತಿರುವುದರಿಂದ ಸಿಬ್ಬಂದಿ ಬಸ್​ಗೆ ಪೂಜೆ ಸಲ್ಲಿಸಿ, ಅಲಂಕಾರ ಮಾಡಿರುವ ದೃಶ್ಯಗಳೂ ಕಂಡುಬಂದಿವೆ.

ಇದನ್ನೂ ಓದಿ: Karnataka Unlock: 2ನೇ ಹಂತದ ಅನ್​ಲಾಕ್: ಸೋಮವಾರದಿಂದಲೇ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್, ಶರತ್ತುಗಳು ಅನ್ವಯ 

ಜೂನ್ 21 ರಿಂದ ಅನ್​ಲಾಕ್ 2.O ಜಾರಿಗೆ ಗ್ರಿನ್ ಸಿಗ್ನಲ್ ನೀಡಿದ ತಾಂತ್ರಿಕ ಸಲಹಾ ಸಮಿತಿ: ಏನಿರುತ್ತೆ, ಏನಿರುವುದಿಲ್ಲ? ಇಲ್ಲಿದೆ ವಿವರ

Published On - 8:33 am, Mon, 21 June 21

ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಇಬ್ಬರು ದಿಗ್ಗಜರ ಬೌಲಿಂಗ್ ಶೈಲಿಯನ್ನು ನಕಲು ಮಾಡಿದ ಕಿಶನ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
ಯಶ್ ಅಭಿಮಾನಿಗಳಿಗೆ ತುಂಬಾ ಇಷ್ಟ ಆಯ್ತು ‘ರಾಮಾಯಣ’ ಸಿನಿಮಾ ಮೊದಲ ಗ್ಲಿಂಪ್ಸ್
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
‘ರಾಮಾಯಣ’ ಗ್ಲಿಂಪ್ಸ್ ನೋಡಿದ ಅಭಿಮಾನಿಗಳು ಹೇಳಿದ್ದೇನು? ವಿಡಿಯೋ ನೋಡಿ
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಎಕ್ಸ್​ಟ್ರಾ ಕಾಫಿ ಕಪ್​ಗಾಗಿ ಗಲಾಟೆ: ಹೋಟೆಲ್‌ ಸಿಬ್ಬಂದಿ ಮೇಲೆ ಹಲ್ಲೆ!
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸುಖಾಸುಮ್ಮನೆ ಹೇಳಿಕೆ ನೀಡುವ ರಾಜಕಾರಣಿಗೆ ಯದುವೀರ್ ಮಾದರಿ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಸ್ವಯಂ ನಿವೃತ್ತಿ ಬಗ್ಗೆ ಎಎಸ್​ಪಿ ನಾರಾಯಣ ಭರಮನಿ ಮೊದಲ ಪ್ರತಿಕ್ರಿಯೆ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಕೋವಿಡ್ ಲಸಿಕೆ ಪಡೆದವರಲ್ಲಿ ಹೃದಯಾಘಾತ ಅಪಾಯ ಕಡಿಮೆ: ಡಾ. ಮೋಹಿತ್ ಗುಪ್ತಾ
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂಪುಟ ಸಭೆಯನ್ನು ಬೇರೆ ಬೇರೆ ಸ್ಥಳಗಳಲ್ಲಿ ನಡೆಸುವುದು ದುಂದು ವೆಚ್ಚವಲ್ಲವೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಸಂವೇದನೆಯಿಲ್ಲದ, ಸೂಕ್ಷ್ಮತೆ ಗೊತ್ತಿರದ ಸಿಬ್ಬಂದಿಯಿಂದ ಸಮೀಕ್ಷೆ ಬೇಕಿತ್ತೇ?
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ
ಎಲ್ಲ ಮಂತ್ರಿಗಳು ಒಂದೇ ವಾಕ್ಯವನ್ನು ಪುನರಾವರ್ತಿಸುತ್ತಿದ್ದಾರೆ