Sign In

By signing in or creating an account, you agree with Associated Broadcasting Company's Terms & Conditions and Privacy Policy.

Karnataka Unlock: 6 ರಿಂದ 1 ಗಂಟೆಯವರೆಗೆ ಅಂಗಡಿ ತೆರೆಯಲು ಇನ್ನೂ 4 ಜಿಲ್ಲೆಗಳಲ್ಲಿ ಅನುಮತಿ ನೀಡಿದ ಸರ್ಕಾರ

ಈ ಜಿಲ್ಲೆಗಳಲ್ಲಿ ಎಸಿ ಶಾಪ್, ಎಸಿ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಎಸಿ ಮಾಲ್‌ಗಳನ್ನು ಹೊರತುಪಡಿಸಿ ಸಂಜೆ 5 ಗಂಟೆಯವರೆಗೆ ಎಲ್ಲಾ‌ ಅಂಗಡಿ ತೆರೆಯಲು ಸರ್ಕಾರ ಅನುಮತಿ ನೀಡಿದೆ.

Karnataka Unlock: 6 ರಿಂದ 1 ಗಂಟೆಯವರೆಗೆ ಅಂಗಡಿ ತೆರೆಯಲು ಇನ್ನೂ 4 ಜಿಲ್ಲೆಗಳಲ್ಲಿ ಅನುಮತಿ ನೀಡಿದ ಸರ್ಕಾರ
ಪ್ರಾತಿನಿಧಿಕ ಚಿತ್ರ
Follow us
TV9 Web
| Updated By: guruganesh bhat

Updated on:Jun 24, 2021 | 8:37 PM

ಬೆಂಗಳೂರು: ರಾಜ್ಯದ ಇನ್ನೂ ನಾಲ್ಕು ಜಿಲ್ಲೆಗಳಲ್ಲಿ ಎಲ್ಲಾ‌ ಅಂಗಡಿಗಳನ್ನು ತೆರೆಯಲು ಅನುಮತಿ ನೀಡಿ ರಾಜ್ಯ ಸರ್ಕಾರ ಆದೇಶಿಸಿದೆ. ದಕ್ಷಿಣ ಕನ್ನಡ, ಚಾಮರಾಜನಗರ, ಹಾಸನ,‌ ದಾವಣಗೆರೆ ಜಿಲ್ಲೆಗಳಲ್ಲಿ ಎಸಿ ಶಾಪ್, ಎಸಿ ಶಾಪಿಂಗ್ ಕಾಂಪ್ಲೆಕ್ಸ್ ಮತ್ತು ಎಸಿ ಮಾಲ್‌ಗಳನ್ನು ಹೊರತುಪಡಿಸಿ 6 ರಿಂದ 1 ಗಂಟೆಯವರೆಗೆ ಎಲ್ಲಾ ಅಂಗಡಿ ತೆರೆಯಲು ಎಲ್ಲಾ‌ ಅಂಗಡಿ ತೆರೆಯಲು ಸರ್ಕಾರ ಅನುಮತಿ ನೀಡಿದೆ.

ನಿನ್ನೆಯಷ್ಟೇ ( ಜೂನ್ 21)  ಅನ್‌ಲಾಕ್ 2.0 ಜಿಲ್ಲೆಗಳ ಪಟ್ಟಿಗೆ ಮತ್ತೆ 6 ಜಿಲ್ಲೆಗಳನ್ನು ಸೇರ್ಪಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಪ್ರಕಟಿಸಿತ್ತು. ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಬಳ್ಳಾರಿ, ಚಿತ್ರದುರ್ಗ, ವಿಜಯಪುರ ಜಿಲ್ಲೆಗಳಲ್ಲೂ ಲಾಕ್​ಡೌನ್ ವಿನಾಯಿತಿ ನೀಡಲಾಗಿತ್ತು. 2ನೇ ಹಂತದ ಕರ್ನಾಟಕ ಅನ್​ಲಾಕ್ ಭಾಗವಾಗಿ ಪಾಸಿಟಿವಿಟಿ ರೇಟ್ ಆಧಾರದ ಮೇಲೆ ಕೆಲವು ಜಿಲ್ಲೆಗಳಲ್ಲಿ ಮಾತ್ರ ನಿರ್ಬಂಧ ಸಡಿಲಿಸಿ ಬೆಳಗ್ಗೆಯಿಂದ ಸಂಜೆ 5ರವರೆಗೆ ಎಲ್ಲ ಅಂಗಡಿ ಮುಂಗಟ್ಟು ತೆರೆಯಲು ಅವಕಾಶ ನೀಡಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಜೂನ್ 19ರಂದು ಘೋಷಿಸಿದ್ದರು. ಇಂದು  ಈ ಪಟ್ಟಿಗೆ ಇನ್ನೂ 4 ಜಿಲ್ಲೆಗಳನ್ನು ಸೇರಿಸಲಾಗಿದೆ.

ಈ ಮೊದಲು ಅನ್​ಲಾಕ್ ಪ್ರಕಿಯೆಗೆ ಚಾಲನೆ ನೀಡಿದ್ದ ಸಿಎಂ ಯಡಿಯೂರಪ್ಪ ಉತ್ತರ ಕನ್ನಡ, ಬೆಳಗಾವಿ, ಮಂಡ್ಯ, ಕೊಪ್ಪಳ, ಚಿಕ್ಕಬಳ್ಳಾಪುರ, ತುಮಕೂರು, ಕೋಲಾರ, ಬೆಂಗಳೂರು ನಗರ ಜಿಲ್ಲೆ, ಗದಗ, ರಾಯಚೂರು, ಬಾಗಲಕೋಟೆ, ಕಲಬುರಗಿ, ಹಾವೇರಿ, ರಾಮನಗರ, ಯಾದಗಿರಿ ಹಾಗೂ ಬೀದರ್ ಜಿಲ್ಲೆಗಳಿಗೆ ಮಾತ್ರ ಈ ಸಡಿಲಿಕೆ ಅನ್ವಯವಾಗಲಿದೆ ಎಂದು ತಿಳಿಸಿದ್ದರು.

ಎಸಿ ಬಳಸದೇ ಹೋಟೆಲ್‌ಗಳನ್ನೂ ತೆರೆಯಲು ಅವಕಾಶವಿದೆ. ಬಸ್, ಮೆಟ್ರೋಗಳಲ್ಲಿ ಶೇ.50ರಷ್ಟು ಪ್ರಯಾಣಿಕರಿಗೆ ಅವಕಾಶ ನೀಡಲಾಗುತ್ತದೆ. ಜಿಮ್‌ಗಳಲ್ಲಿ ಶೇ.50ರಷ್ಟು ಜನರಿಗೆ ಅವಕಾಶವಿದೆ. ಹೊರಾಂಗಣ ಚಿತ್ರೀಕರಣಕ್ಕೆ ಅವಕಾಶ ನೀಡಲಾಗಿದೆ. ವೀಕ್ಷಕರಿಲ್ಲದೇ ಹೊರಾಂಗಣ ಕ್ರೀಡೆಗೆ ಅನುಮತಿ ನೀಡಲಾಗಿದೆ.

ಕೆಎಸ್​ಆರ್​ಟಿಸಿ ಪ್ರಯಾಣಿಕರಿಗೆ ಶುಭ ಸುದ್ದಿ: ಏಪ್ರಿಲ್ ತಿಂಗಳ ಬಸ್ ಪಾಸ್ ಅವಧಿ ವಿಸ್ತರಣೆ ಸುಮಾರು 2 ತಿಂಗಳ ನಂತರ ಇಂದಿನಿಂದ ಬಸ್ ಸಂಚಾರ ಆರಂಭವಾಗಿರುವ ಹಿನ್ನೆಲೆಯಲ್ಲಿ ಕೆಎಸ್‌ಆರ್‌ಟಿಸಿ ಏಪ್ರಿಲ್‌ ತಿಂಗಳ ಪಾಸ್ ಅವಧಿಯನ್ನು ವಿಸ್ತರಿಸಿದೆ. ಇಷ್ಟು ದಿನಗಳ ಕಾಲ ಲಾಕ್‌ಡೌನ್‌ ಇದ್ದ ಕಾರಣ ಬಸ್​ಗಳು ಸಂಚರಿಸಲಿರಲಿಲ್ಲ. ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಪಾಸ್‌ಗಳಿಗೆ ಮಾತ್ರ ಈ ವಿಸ್ತರಣೆ ಅನ್ವಯವಾಗಲಿದ್ದು, ಈ ಅವಧಿಯ ಹಳೆ ಪಾಸ್‌ ತೋರಿಸಿ 18 ದಿನಗಳ ಸರ್ಕಾರಿ ಬಸ್‌ಗಳಲ್ಲಿ ಸಂಚರಿಸಬಹುದಾಗಿದೆ.

ಏಪ್ರಿಲ್ 8ರಿಂದ ಏಪ್ರಿಲ್27ರವರೆಗಿನ ಅವಧಿಯ ಪಾಸ್ ಹೊಂದಿದವರು ಪಾಸ್ ಕೌಂಟರ್​ಗಳಿಗೆ ಭೇಟಿ ನೀಡಿ ಸೀಲ್ ಮತ್ತು ಮೊಹರು ಹಾಕಿಸಿಕೊಳ್ಳಬೇಕು. ಆನಂತರ ಹಳೆಯ ಪಾಸ್ ಬಳಸಿಯೇ ಬಸ್​ಗಳಲ್ಲಿ ಉಚಿತವಾಗಿ ಪ್ರಯಾಣಿಸಬಹುದು ಎಂದು ಕೆಎಸ್​ಆರ್​ಟಿಸಿ ತಿಳಿಸಿದೆ.

ಇದನ್ನೂ ಓದಿ: Karnataka Unlock: 2ನೇ ಹಂತದ ಅನ್​ಲಾಕ್: ಸೋಮವಾರದಿಂದಲೇ ಸರ್ಕಾರಿ ಬಸ್ ಓಡಾಟ ಆರಂಭ, ಎಲ್ಲಾ ಅಂಗಡಿ ಓಪನ್, ಶರತ್ತುಗಳು ಅನ್ವಯ

Nikhil Kumarswamy: ಕುಮಾರಸ್ವಾಮಿ ಕುಟುಂಬದಿಂದ ಸಿಹಿ ಸುದ್ದಿ; ಶೀಘ್ರವೇ ತಂದೆ ಆಗಲಿದ್ದಾರೆ ನಿಖಿಲ್​ ​

(Karnataka unlock state government permits 4 more districts to open the shop till 5pm)

Published On - 4:58 pm, Tue, 22 June 21

ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ