AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ 84 ಲಕ್ಷಕ್ಕೂ ಹೆಚ್ಚು ASDDO ಮತದಾರರು ಪತ್ತೆ

Karnataka Electoral Roll Revision: ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ ಪ್ರಗತಿಯಲ್ಲಿದೆ. ಮುಖ್ಯ ಚುನಾವಣಾಧಿಕಾರಿ ವಿ. ಅನ್ಬುಕುಮಾರ್ ಅವರು, ಶೇ.76.99ರಷ್ಟು ಅರ್ಜಿಗಳ ಡಿಜಿಟಲೀಕರಣ ಆಗಿದ್ದು, 84 ಲಕ್ಷಕ್ಕೂ ಹೆಚ್ಚು ASDDO (ಗೈರಾದ, ಸ್ಥಳಾಂತರ, ಮೃತ, ನಕಲಿ) ಮತದಾರರನ್ನು ಪತ್ತೆ ಹಚ್ಚಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಮತದಾರರ ಪಟ್ಟಿ ಪರಿಷ್ಕರಣೆ: ರಾಜ್ಯದಲ್ಲಿ 84 ಲಕ್ಷಕ್ಕೂ ಹೆಚ್ಚು ASDDO ಮತದಾರರು ಪತ್ತೆ
ವಿ.ಅನ್ಬುಕುಮಾರ್ Image Credit source: tv9 kannada
ಗಂಗಾಧರ​ ಬ. ಸಾಬೋಜಿ
|

Updated on:Jul 29, 2026 | 5:08 PM

Share

ಮುಖ್ಯಾಂಶಗಳು

  • ರಾಜ್ಯದಲ್ಲಿ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ
  • ರಾಜ್ಯದಲ್ಲಿ ಶೇ.76.99ರಷ್ಟು ಎನ್ಯುಮರೇಷನ್ ಅರ್ಜಿಗಳ ಡಿಜಿಟಲೀಕರಣ
  • 5,54,32,314 ಎನ್ಯುಮರೇಷನ್ ಅರ್ಜಿಗಳ ವಿತರಣೆ

ಬೆಂಗಳೂರು, ಜುಲೈ 29: ‘ರಾಜ್ಯದಲ್ಲಿ ಇದುವರೆಗೆ ವಿತರಿಸಲಾದ ಒಟ್ಟು 5,54,32,314 ಎನ್ಯುಮರೇಷನ್ ಅರ್ಜಿಗಳ ಪೈಕಿ 4,26,75,861 ಫಾರಂಗಳು ಡಿಜಿಟಲೀಕರಣಗೊಂಡಿದ್ದು, ಶೇ. 76.99 ರಷ್ಟು ಪ್ರಗತಿ ಸಾಧಿಸಲಾಗಿದೆ. ಇನ್ನು ಪರಿಶೀಲನೆ ವೇಳೆ ರಾಜ್ಯಾದ್ಯಂತ ಗೈರಾದ, ಸ್ಥಳಾಂತರಗೊಂಡ, ಮೃತಪಟ್ಟ, ನಕಲಿ ಮತ್ತು ಇತರೆ ವರ್ಗಕ್ಕೆ (ASDDO) ಸೇರಿದ ಒಟ್ಟು 84,31,612 ಮತದಾರರು ಪತ್ತೆಯಾಗಿದ್ದಾರೆ’ ಎಂದು ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ (v anbukumar)​​​ ಹೇಳಿದ್ದಾರೆ.

ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್ ಹೇಳಿದ್ದಿಷ್ಟು 

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ವಿ.ಅನ್ಬುಕುಮಾರ್, ‘84,31,612 ಮತದಾರರಲ್ಲಿ 11,61,231 ಮತದಾರರು ನಾಪತ್ತೆಯಾಗಿದ್ದರೆ, 51,74,968 ಮತದಾರರು ಶಾಶ್ವತವಾಗಿ ಸ್ಥಳಾಂತರಗೊಂಡಿದ್ದಾರೆ. ಹಾಗೆಯೇ 14,99,799 ಮತದಾರರು ಮೃತಪಟ್ಟಿದ್ದು, 5,62,572 ಜನರು ಎರಡು ಕಡೆ ಮತದಾನದ ಹಕ್ಕು ಹೊಂದಿರುವುದು ಕಂಡುಬಂದಿದೆ. ಇದರ ಜೊತೆಗೆ 33,042 ಇತರೆ ಮತದಾರರನ್ನೂ ಗುರುತಿಸಲಾಗಿದೆ’ ಎಂದರು.

ಎಸ್‌ಡಿಡಿಒ ಪ್ರಕ್ರಿಯೆ ಹೇಗೆ?

ಎಸ್‌ಡಿಡಿಒನಲ್ಲಿ ಮತದಾರರು ಸಂಖ್ಯೆ ಹೆಚ್ಚಿರುವ ವಿಚಾರವಾಗಿ ಮಾತನಾಡಿದ ಅವರು, ‘ಪ್ರತಿಯೊಂದಕ್ಕೆ ಸ್ಥಳ ಮಹಾಜರ್ ಮಾಡಿರುತ್ತಾರೆ. ಮರಣ ಪ್ರಮಾಣಪತ್ರ ತೆಗೆದುಕೊಂಡು ಅಪ್ಲೋಡ್​ ಮಾಡಿತ್ತಾರೆ. ಗೈರುಹಾಜರು, ಸ್ಥಳಾಂತರಗೊಂಡ ಅಂದರೆ ಮತದಾರರ ವಿಳಾಸದಲ್ಲಿ ಅವರಿಲ್ಲ ಎನ್ನುವ ಅರ್ಥ. ಅವರು ಶಿಫ್ಟ್ ಆಗಿರಬಹುದು ಅಥವಾ ಗೈರುಹಾಜರು ಅಂತ ಪರಿಗಣನೆ ಆಗುತ್ತೆ. ದೇಶದ ಎಲ್ಲಿಯೂ ವೋಟರ್​ಗಾಗಿ ಅರ್ಜಿ ಸಲ್ಲಿಸಿಲ್ಲ ಎಂದ್ದಾದರೆ, ಅಂತವರು ಆನ್​​ಲೈನ್​​ ಮೂಲಕ ಅಥವಾ ಫಾರ್ಮ್ 6 ಅಲ್ಲಿ ಸಲ್ಲಿಸಬಹುದು’ ಎಂದು ಅವರು ಮಾಹಿತಿ ನೀಡಿದರು.

ಎನ್ಯುಮರೇಷನ್ ಫಾರಂ ಬಿಎಲ್‌ಒಗಳಿಗೆ ಹಸ್ತಾಂತರಿಸುವಂತೆ ಅನ್ಬುಕುಮಾರ್ ಮನವಿ

ರಾಜ್ಯಾದ್ಯಂತ ಇನ್ನೂ 43,24,847 ಫಾರಂಗಳನ್ನು ಸಾರ್ವಜನಿಕರು ವಾಪಸ್ ಮಾಡುವುದು ಬಾಕಿ ಇದ್ದು, ಎನ್ಯುಮರೇಷನ್ ಫಾರಂಗಳನ್ನು ತಮ್ಮ ಬಳಿಯೇ ಇಟ್ಟುಕೊಳ್ಳದೆ ಆದಷ್ಟು ಬೇಗ ಬಿಎಲ್‌ಒಗಳಿಗೆ ಹಸ್ತಾಂತರಿಸುವಂತೆ ಅನ್ಬುಕುಮಾರ್ ಮನವಿ ಮಾಡಿದರು. ಫಾರಂಗಳನ್ನು ವಾಪಸ್ ನೀಡಿದರೆ ಮಾತ್ರ ಡ್ರಾಫ್ಟ್ ರೋಲ್‌ನಲ್ಲಿ ಹೆಸರು ಸೇರ್ಪಡೆಯಾಗಲಿದೆ. ಮನೆಗೆ ಮತದಾರರು ಲಭ್ಯವಿಲ್ಲದಿದ್ದರೂ ಅವರ ಕುಟುಂಬದ ಸದಸ್ಯರು ಸಹಿ ಮಾಡಿ ನೀಡಬಹುದು ಹಾಗೂ 2002ರ ಮಾಹಿತಿ ಇಲ್ಲ ಎಂಬ ಕಾರಣಕ್ಕೆ ಫಾರಂಗಳನ್ನು ಇಟ್ಟುಕೊಳ್ಳಬಾರದು. ಆಯಾ ಎನ್ಯುಮರೇಷನ್ ಫಾರಂ ಸಲ್ಲಿಸಲು ಆಗಸ್ಟ್ 8 ಕೊನೆಯ ದಿನವಾಗಿದೆ. ಅಲ್ಲದೆ, 2026ರ ಅಕ್ಟೋಬರ್ 1 ಕ್ಕೆ 18 ವರ್ಷ ತುಂಬುವ ಹೊಸ ಅರ್ಹ ಮತದಾರರು ಫಾರ್ಮ್-6 ಮೂಲಕ ಅರ್ಜಿ ಸಲ್ಲಿಸಬೇಕೆಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ: ಅವಧಿ ವಿಸ್ತರಣೆ ಕೋರಿದ್ದ PIL ಇತ್ಯರ್ಥಗೊಳಿಸಿದ ಹೈಕೋರ್ಟ್

‘ಇನ್ನು ಬೃಹತ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯಲ್ಲಿ ಒಟ್ಟು 1,03,88,363 ಮತದಾರರಿದ್ದು, ಈ ಪೈಕಿ 39,38,202 ಎಸ್‌ಡಿಡಿಒ ಮತದಾರರು ಪತ್ತೆಯಾಗಿದ್ದಾರೆ. ಇನ್ನು 16,57,582 ಫಾರಂಗಳು ಡಿಜಿಟಲೀಕರಣಗೊಳ್ಳಲು ಬಾಕಿ ಇವೆ. ಎಸ್‌ಡಿಡಿಒ ಪ್ರಮಾಣ ಹೆಚ್ಚಿರುವ ಪ್ರದೇಶಗಳಲ್ಲಿ ರಾಜಕೀಯ ಪಕ್ಷಗಳಿಗೆ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ವಿ.ಅನ್ಬುಕುಮಾರ್​​​ ಹೇಳಿದ್ದಾರೆ.

ವರದಿ: ಅರುಣ್ ಕುಮಾರ್​

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 5:07 pm, Wed, 29 July 26

Follow Us
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಹರೀಶ್ ರಾಜ್​ಗೆ ರೊಮ್ಯಾಂಟಿಕ್ ಸ್ಟಾರ್ ಬಿರುದು; ಹೊಸ ಸಿನಿಮಾ ಕುರಿತು ಮಾತು
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಕಾವೇರಿ ನೀರು ಹಂಚಿಕೆ ವಿವಾದ: ಸಚಿವ ರಾಮಲಿಂಗಾ ರೆಡ್ಡಿ ತುರ್ತು ಸಭೆ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ಗುರು ಪೂರ್ಣಿಮೆ 2026: ಸಾಯಿಬಾಬಾ ದರ್ಶನಕ್ಕೆ ಭಕ್ತ ಸಾಗರ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ದೆಹಲಿಗೆ ತೆರಳಿದ ಜಮೀರ್​; ರಾಹುಲ್ ಗಾಂಧಿ ಭೇಟಿ ಸಾಧ್ಯತೆ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ನೀರು ಬಿಡುವಂತೆ ಆದೇಶಿಸಿದ್ದು ಸರಿಯಲ್ಲ: ದರ್ಶನ ಪುಟ್ಟಣಯ್ಯ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ಖಂಡಿಸಿ ಅನ್ನದಾತರ ಆಕ್ರೋಶ
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!
ಮಾದಪ್ಪನ ಹುಂಡಿಯಲ್ಲಿ ಕೋಟಿ ಕೋಟಿ ಕಾಣಿಕೆ ಸಂಗ್ರಹ!