AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಕ್ಫ್ ವಿವಾದ: ಕರ್ನಾಟಕದಾದ್ಯಂತ ಇಂದು ಬಿಜೆಪಿ ಪ್ರತಿಭಟನೆ, ಉಪಚುನಾವಣೆ ಹೊತ್ತಲ್ಲೇ ಸಂಗ್ರಾಮ

ವಕ್ಫ್ ವಿವಾದವನ್ನು ಗಂಭೀರವಾಗಿ ಪರಿಗಣಿಸಿರುವ ಪ್ರತಿಪಕ್ಷ ಬಿಜೆಪಿ ಉಪಚುನಾವಣೆ ಹೊತ್ತಲ್ಲೇ ಸರ್ಕಾರದ ವಿರುದ್ಧ ಪ್ರತಿಭಟನೆ ತೀವ್ರಗೊಳಿಸುತ್ತಿದೆ. ಇಂದು ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಜೆಪಿಯ ಈ ಕ್ರಮವನ್ನು ಖಂಡಿಸಿದ್ದಾರೆ. ಇದೇ ವೇಳೆ, ಮಾಜಿ ಸಿಎಂ ಬಸವರಾಜ ಬೊಮ್ಮಾಯಿವರದ್ದೆನ್ನಲಾದ ವಕ್ಫ್ ಸಂಬಂಧಿತ ವಿಡಿಯೋ ಒಂದು ಕೂಡ ಸದ್ದು ಮಾಡುತ್ತಿದೆ.

ವಕ್ಫ್ ವಿವಾದ: ಕರ್ನಾಟಕದಾದ್ಯಂತ ಇಂದು ಬಿಜೆಪಿ ಪ್ರತಿಭಟನೆ, ಉಪಚುನಾವಣೆ ಹೊತ್ತಲ್ಲೇ ಸಂಗ್ರಾಮ
ವಕ್ಫ್ ವಿವಾದ: ಕರ್ನಾಟಕದಾದ್ಯಂತ ಇಂದು ಬಿಜೆಪಿ ಪ್ರತಿಭಟನೆ
ಪ್ರಸನ್ನ ಗಾಂವ್ಕರ್​
| Edited By: |

Updated on: Nov 04, 2024 | 7:07 AM

Share

ಬೆಂಗಳೂರು, ನವೆಂಬರ್ 4: ವಕ್ಫ್ ಬೋರ್ಡ್ ಜಮೀನು ವಿವಾದವನ್ನೇ ಬಿಜೆಪಿ ಅಸ್ತ್ರವಾಗಿಸಿಕೊಂಡಿದೆ. ಉಪಚುನಾವಣೆ ಹೊತ್ತಲ್ಲೇ ಸರ್ಕಾರದ ವಿರುದ್ಧ ಮುಗಿಬೀಳಲು ಬಿಜೆಪಿ ಸಜ್ಜಾಗಿದೆ. ಇಂದು ರಾಜ್ಯಾದ್ಯಂತ ವಕ್ಫ್​​ ಬೋರ್ಡ್​ ವಿರುದ್ಧ ಬಿಜೆಪಿ ರಣಕಹಳೆ ಮೊಳಗಿಸಲಿದೆ. ಬಳ್ಳಾರಿಯಲ್ಲಿ ಬೆಳಗ್ಗೆ 11 ಗಂಟೆಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ನೇತೃತ್ವದಲ್ಲಿ ಧರಣಿ ನಡೆಯಲಿದ್ದು, ವಕ್ಫ್​ ಬೋರ್ಡ್ ಮತ್ತು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಲಿದ್ದಾರೆ.

ಬಿಜೆಪಿ ಧರಣಿಗೆ ಸಿಎಂ ಸಿದ್ದರಾಮಯ್ಯ ಕೆಂಡಾಮಂಡಲ

ವಕ್ಫ್​​ ಬೋರ್ಡ್ ಜಮೀನು ವಿವಾದವನ್ನು ಖಂಡಿಸಿ ಬಿಜೆಪಿ ನಾಯಕರು ಧರಣಿ ನಡೆಸಲು ಸಜ್ಜಾಗಿದ್ದರೆ, ಬಿಜೆಪಿ ಪ್ರತಿಭಟನೆಗೆ ಸಿಎಂ ಸಿದ್ದರಾಮಯ್ಯ ಆಕ್ರೋಶ ಹೊರಹಾಕಿದ್ದಾರೆ. ಗ್ಯಾರಂಟಿಗಳನ್ನು ನಿಲ್ಲಿಸುವಂತೆ ಮಾಡ್ಬೇಕು ಎಂಬುದು ಬಿಜೆಪಿ ಹುನ್ನಾರ. ನೋಟಿಸ್ ಹಿಂಪಡೆಯುವಂತೆ ಸೂಚಿಸಿದ ಮೇಲೂ, ಬಿಜೆಪಿ ಯಾವ ಕಾರಣಕ್ಕಾಗಿ ಪ್ರತಿಭಟನೆ ನಡೆಸುತ್ತಿದೆ? ರಾಜಕೀಯ ಲಾಭ ಪಡೆಯುವುದು ಬಿಜೆಪಿಯ ಹುಟ್ಟು ಗುಣವಾಗಿದೆ ಎಂದು ಮಾಧ್ಯಮ ಪ್ರಕಟಣೆ ಹೊರಡಿಸಿ ಕಿಡಿಕಾರಿದ್ದಾರೆ.

ರಾಜ್ಯದಲ್ಲಿ ವಕ್ಫ್ ವಿವಾದ ಕಿಚ್ಚು ಜೋರಾಗಿರುವ ಹೊತ್ತಲ್ಲೇ ಚಿತ್ರದುರ್ಗದ ಮಾದಾರ ಚೆನ್ನಯ್ಯ ಸ್ವಾಮೀಜಿ ಕೂಡ ಕಣ ಪ್ರವೇಶಿಸಿದ್ದಾರೆ. ವಕ್ಫ್​ ಆಸ್ತಿ ಗದ್ದಲದಿಂದ ರೈತರು, ಸಾರ್ವಜನಿಕರು ಆತಂಕಗೊಂಡಿದ್ದಾರೆ. ವಕ್ಫ್​ ವಿಚಾರದಲ್ಲಿ ರಾಜ್ಯ ಸರ್ಕಾರ ಸೂಕ್ತ ಕಾನೂನು ಜಾರಿಗೆ ತರಬೇಕು. ಸಾರ್ವಜನಿಕ ಆಸ್ತಿ ಮೇಲೆ ವಕ್ಫ್ ಬೋರ್ಡ್​ನ ಹಿಡಿತವನ್ನು ತಡೆಯಬೇಕು ಎಂದಿದ್ದಾರೆ.

ವಕ್ಫ್​ಗೆ ಬೆಂಬಲ: ಬೊಮ್ಮಾಯಿ ವಿಡಿಯೋ ಬಹಿರಂಗ

ಕಾಂಗ್ರೆಸ್ ವಿರುದ್ಧ ವಕ್ಫ್​ ವಿವಾದ ಧಗ ಧಗಿಸುತ್ತಿರುವಾಗಲೇ ಬಿಜೆಪಿಯತ್ತ ಹೊಸಬಾಂಬ್ ಸ್ಫೋಟ ಆಗಿದೆ. ವಕ್ಫ್ ಬೆಂಬಲವಾಗಿ ಬಸವರಾಜ ಬೊಮ್ಮಾಯಿ ಮಾತನಾಡಿರುವ ವಿಡಿಯೋವೊಂದನ್ನ ಸಚಿವ ಪ್ರಿಯಾಂಕ್ ಖರ್ಗೆ ಪೋಸ್ಟ್ ಮಾಡಿ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

ಬೊಮ್ಮಾಯಿ ವಿಡಿಯೋದಲ್ಲೇನಿದೆ?

ಈ ವಿಡಿಯೋದಲ್ಲಿ ಅಂದು ಮುಖ್ಯಮಂತ್ರಿಯಾಗಿದ್ದ ಬಸವರಾಜ ಬೊಮ್ಮಾಯಿ, ವಕ್ಫ್‌ಗೆ ಸೇರಿದ 2000 ಎಕರೆ ಆಸ್ತಿ ಖಾಸಗಿಯವರ ವಶದಲ್ಲಿದೆ. ಮರಳಿ ಪಡೆಯುವವರೆಗೂ ಸುಮ್ಮನೆ ಕೂರಬಾರದು ಎಂದು ಹೇಳಿದ್ದರು. ಇದನ್ನೇ ಪ್ರತ್ಯಸ್ತ್ರ ಮಾಡಿಕೊಂಡ ಕಾಂಗ್ರೆಸ್‌ ಪಡೆ ಬಿಜೆಪಿಗೆ ತಿವಿದಿದೆ.

ಅದ್ಯಾವಾಗ ಬೊಮ್ಮಾಯಿ ಮಾತನಾಡಿರುವ ವಿಡಿಯೋ ಪೋಸ್ಟ್ ಆಯ್ತೋ, ಕಾಂಗ್ರೆಸ್ ನಾಯಕರೆಲ್ಲಾ ಬೊಮ್ಮಾಯಿ ವಿರುದ್ಧ ಮುಗಿಬಿದ್ದಿದ್ದಾರೆ..

ಯಾವುದೇ ವಕ್ಫ್​ ಮೀಟಿಂಗ್ ಮಾಡಿಲ್ಲ: ಬೊಮ್ಮಾಯಿ

ಸಚಿವ ಪ್ರಿಯಾಂಕ್ ಖರ್ಗೆ ಸಿಡಿಸಿರೋ ವಿಡಿಯೋ ಬಗ್ಗೆ ಸ್ಪಷ್ಟನೆ ನೀಡಿದ ಸಂಸದ ಬೊಮ್ಮಾಯಿ, ನಾನು ವಕ್ಫ್ ಕಟ್ಟಡ ಉದ್ಘಾಟನೆ ಸಮಾರಂಭದಲ್ಲಿ ಮಾತನಾಡಿದ್ದೆ. ಆದರೆ ವಕ್ಫ್ ಮೀಟಿಂಗ್ ಮಾಡಿಲ್ಲ, ರೈತರಿಗೂ ನಾನು ನೋಟಿಸ್ ಕೊಟ್ಟಿಲ್ಲ ಎಂದಿದ್ದಾರೆ.

ಇದನ್ನೂ ಓದಿ: ವಕ್ಫ್ ವಿವಾದ: ಸಿಎಂ ಕೇವಲ ನೋಟಿಸ್ ವಾಪಸ್ ಪಡೆದರೆ ಸಮಸ್ಯೆ ಬಗೆಹರಿಯಲ್ಲ ಎಂದ ತೇಜಸ್ವಿ ಸೂರ್ಯ

ಈಗಾಗಲೇ ನೋಟಿಸ್ ಹಿಂಡಪೆಯಲು, ಪಹಣಿಯಲ್ಲಿ ವಕ್ಫ್ ಹೆಸರು ತೆಗೆಯಲು ಸಿಎಂ ಸಿದ್ದರಾಮಯ್ಯ ಖಡಕ್ ಆದೇಶ ಮಾಡಿದ್ದಾರೆ. ಆದರೆ, ವಕ್ಫ್ ವಿವಾದವನ್ನೇ ಕೈಗೆತ್ತಿಕೊಂಡು ಬೃಹತ್ ಹೋರಾಟಕ್ಕೆ ಬಿಜೆಪಿ ಸಜ್ಜಾಗಿದೆ. ಈ ಕದನ ಇನ್ಯಾವ ಮಟ್ಟಕ್ಕೆ ಹೋಗಿ ತಲುಪುತ್ತದೆಯೋ ಕಾದುನೋಡಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Follow Us
Prasanna Gaonkar
Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ